ಇಪ್ಪತ್ತೈದು ವರ್ಷಗಳ ಹಿಂದಿನ ಪ್ರಕರಣವೊಂದರ ಸಂಬಂಧ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಪೊಲೀಸರು ಬಂಧಿಸಿರುವ ಕ್ರಮ ಖಂಡಿಸಿ, ರಾಜ್ಯದ ವಿವಿಧಡೆ ಪತ್ರಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಂಡ್ಯ, ಶಿವಮೊಗ್ಗದಲ್ಲಿ ಪತ್ರಕರ್ತರು ಪ್ರತಿಭಟನೆ ನಡೆಸಿ, ಡಿಸಿ ಕಚೇರಿಗೆ ತೆರಳಿ, ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಅವರನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಮಂಡ್ಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪ್ರತಿಭಟನೆ ನಡೆಸಿ, ದೊಡ್ಡಿಪಾಳ್ಯ ಅವರ ಬಿಡುಗಡೆಗೆ ಆಗ್ರಹಿಸಿತು.
ಇತ್ತ ಶಿವಮೊಗ್ಗದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರೊಟೆಸ್ಟ್ ನಡೆಯಿತು. ದೊಡ್ಡಿಪಾಳ್ಯ ಅವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಡಿಸಿ ಅವರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಕೆ.ವಿ ಶಿವಕುಮಾರ್ ಮಾತನಾಡಿ, ದೊಡ್ಡಿಪಾಳ್ಯ ಅವರನ್ನು ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಅವರು ಇಪ್ಪತ್ತು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಂದು ಹೇಳಿದರು.