Homeಕರ್ನಾಟಕಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಕಾಯಿದೆ ಮೂಲಕ ರೈತರನ್ನು ನಾಶ ಮಾಡುತ್ತಿದೆ.

- Advertisement -
- Advertisement -

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜಾರಿಗೆ ತರುತ್ತಿರುವ ರೈತ ವಿರೋಧ ಮಸೂದೆಗಳ ವಿರುದ್ದ ಮಂಡ್ಯದಲ್ಲಿ ರಾಜ್ಯ ಮಟ್ಟದ ರೈತ ಸಮಾವೇಶ ನಡೆಯಿತು. ಸಮಾವೇಶವನ್ನು ಕಾಂಗ್ರೆಸ್ ಪಕ್ಷ ಆಯೋಜಿಸಿದ್ದು, ಇತರ ರೈತ ಸಂಘಟನೆಗಳು ಮತ್ತು ರೈತ ಹೋರಾಟಗಾರರು ಸಮಾವೇಶದಲ್ಲಿ ಭಾಗವಹಿಸಿದ್ದರು.

ಸಮಾವೇಶವನ್ನು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉದ್ಘಾಟಿಸಿದರು. ನಂತರ ಮಾತನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, 50 ವರ್ಷಕ್ಕೂ ಹೆಚ್ಚು ಕಾಲ ಕಾಂಗ್ರೆಸ್ ಆಡಳಿತ ನಡೆಸಿದೆ. ನಿರಂತರ ಬದಲಾವಣೆಗಳನ್ನು ಮಾಡಿಕೊಂಡು ಬಂದಿದ್ದೇವೆ. ಸಮಾಜದ – ರೈತರ ಧ್ವನಿ ಆಗಿದ್ದೇವೆ. ರೈತಪರ ಕೆಲಸ ಮಾಡಿದ್ದೇವೆ. ಆದರೆ ಈಗ ಪರಿಸ್ಥಿತಿ ಏನಾಗಿದೆ? ಈಗ ರೈತ ಮಾತನಾಡಬೇಕು, ಅದನ್ನು ನಾವು ಕೇಳಬೇಕು,‌ ನೋವು ಕೇಳಬೇಕು, ಸಲಹೆ ಕೇಳಬೇಕು ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ರಾಜ್ಯ – ಕೇಂದ್ರ ಬಿಜೆಪಿ ಸರ್ಕಾರಗಳ ನೀತಿಗಳಿಂದ ಯಾರಿಗಾದರೂ ಸಮಾಧಾನ ಇದೆಯಾ?
ರೈತರು, ಕಾರ್ಮಿಕರು, ಮಹಿಳೆಯರು, ಯವಕರು, ವಿದ್ಯಾರ್ಥಿಗಳು ಯಾವ ವರ್ಗಕ್ಕೆ ಸಮಾಧಾನವಿದೆ? ಎಂದು ಪ್ರಶ್ನಿಸಿದ ಅವರು, “ಎಲ್ಲರೂ ನೊಂದು ಬೆಂದು ಹೋಗಿದ್ದಾರೆ. ಎಲ್ಲಾ ವರ್ಗ, ಸಮುದಾಯದವರು ಸಂಕಷ್ಟದಲ್ಲಿದ್ದಾರೆ. ಜನರ ಬದುಕನ್ನ ಗಾಣದಲ್ಲಿ ಹಾಕಲಾಗಿದೆ” ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, “ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ರೈತರ ಮೇಲೆ ಆಕ್ರಮಣ‌ ಮಾಡುತ್ತಿವೆ. ನಮ್ಮ ದಿನ ನಿತ್ಯದ ಆಹಾರದ ಮೇಲೆ ಆಕ್ರಮಣ ಮಾಡಿದ್ದಾರೆ. ಜನರ ಜೀವನ, ಜೀವನೋಪಾಯದ ಮೇಲೆ ಪ್ರಹಾರ ಮಾಡಿ, ರೈತರ ಕತ್ತು ಹಿಸುಕುವಂತಹಾ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

“2014 ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದಾಗ ಅವರು ಮೊದಲು ಆಕ್ರಮಣ ಮಾಡಿದ್ದೇ ರೈತರ ಮೇಲೆ. ಈ ತಿದ್ದುಪಡಿ ಕಾಯ್ದೆಗಳು ಅನುಷ್ಠಾನಕ್ಕೆ ಬಂದರೆ ರೈತರಿಗೆ ಮರಣ ಶಾಸನವಾಗಲಿವೆ. ಎಪಿಎಂಸಿ ತೆಗೆದು ಬಿಟ್ಟರೆ ಸಣ್ಣ ಕೃಷಿಕರು ಬೆಳೆಯನ್ನು ಯಾರಿಗೆ ಮಾರಾಟ ಮಾಡಬೇಕು? ಅವರಿಗೆ ಬೆಂಬಲ ಬೆಲೆಯ ಭರವಸೆ ಇದೆಯೇ. ನರೇಂದ್ರ ಮೋದಿ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ರದ್ದು ಮಾಡಿ ಕೆಲವೇ ಕೆಲವು ಕೈಗಾರಿಕೋದ್ಯಮಿಗಳಿಗೆ ಅನುಕೂಲ ಆಗುವಂತೆ ಕೆಲಸ ಮಾಡುತ್ತಿದೆ. ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಕಬ್ಬು ಬೆಳೆಗಾರರ ಬೆಂಬಲ ಬೆಲೆ ಹೆಚ್ಚಿಸಿತು. ಆದರೆ ಈಗಿನ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ನಂತರ ಮಾತನಾಡಿದ ನ್ಯಾಯಪಥ ಪತ್ರಿಕೆಯ ಸಂಪಾದಕ, ಹೋರಾಟಗಾರ ಡಾ.ವಾಸು ಹೆಚ್‌.ವಿ, “ಪ್ರಸ್ತುತ ನಡೆಯುತ್ತಿರುವ ಹೋರಾಟ ಕಾಂಗ್ರೇಸ್ ಮತ್ತು ಬಿಜೆಪಿಯದ್ದು ಅಲ್ಲ, ಈ ಹೋರಾಟ ಬಿಜೆಪಿ ಮತ್ತು ಭಾರತೀಯರ ನಡುವಿನ ಹೋರಾಟ. ಇದರಲ್ಲಿ ದೇಶದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಇರಬೇಕಿರುವುದರಿಂದ ನಾವು ಪಕ್ಷಾತೀತವಾಗಿ ಸಮಾವೇಶಕ್ಕೆ ಬಂದಿದ್ದೇವೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ರೈತರ ಭೂಮಿ ವಿಘಟಿತವಾಗುತ್ತಾ ಹೋಗುತ್ತಿರುವ ಈ ಕಾಲದಲ್ಲಿ ಮೋದಿ ಹಾಗೂ ಯಡಿಯೂರಪ್ಪ ಸರ್ಕಾರ ರೈತರ ಪರವಾಗಿ ನಿಲ್ಲುವುದನ್ನು ಬಿಟ್ಟು ಗುಜರಾತಿನ ತಮ್ಮ ಆಪ್ತ ವ್ಯಾಪಾರಿಗಳಿಗೆ ಪರಭಾರೆ ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಕೃಷಿ ತಜ್ಞ ಡಾ. ಪ್ರಕಾಶ್ ಕಮ್ಮರಡಿ ಮಾತನಾಡಿ, “ಕೇಂದ್ರ ಸರ್ಕಾರ ಸಂಪೂರ್ಣ ರಾಜ್ಯ ಸರ್ಕಾರದ ಅಧಿಕಾರವಿರುವ ಎಪಿಎಂಸಿಯ ಕಾಯ್ದೆಯನ್ನು ಯಾವುದೇ ಚರ್ಚೆಯಿಲ್ಲದೆ ಸುಗ್ರಿವಾಜ್ಞೆ ತಂದಿದೆ” ಎಂದು ಕಿಡಿ ಕಾರಿದರು.

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷರಾದ ವೀರಸಂಗಯ್ಯ ಮಾತನಾಡಿ, “ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಕಾಯಿದೆ ಮೂಲಕ ರೈತರನ್ನು ನಾಶ ಮಾಡುತ್ತಿದೆ. ಈ ಕಾಯಿದೆಯಿಂದ ಸಣ್ಣ ರೈತರು ನಾಶವಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...