Homeಕರ್ನಾಟಕಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿರುವ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ. ಮಹಿಳೆಯರನ್ನು ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ನಾಲೆಗೆ ಎಸೆದಿದ್ದು, ನಾಲೆಯಲ್ಲಿ ತೇಲಿ ಬಂದಿವೆ. ಇಂತಹ ಭಯಾನಕ ಕೊಲೆಗಳನ್ನು ಕಂಡು ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ.

ಪಾಂಡವಪುರ ಟೌನ್ ಪೊಲೀಸ್ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೃತದೇಹಗಳು ಪತ್ತೆಯಾಇದ್ದು, ಮಹಿಳೆಯರ ಗುರುತು ಇನ್ನು ಪತ್ತೆಯಾಗಿಲ್ಲ. ಹೊಟ್ಟೆ ಭಾಗದಿಂದ ಕೆಳಗೆ ಕತ್ತರಿಸಿದ ದೇಹದ ಭಾಗವನ್ನು ಚೀಲದಲ್ಲಿ ಕಟ್ಟಿ ನಾಲೆಗೆ ಎಸೆಯಲಾಗಿದೆ. ಎಲ್ಲಿಯೋ ಕೊಲೆ ಮಾಡಿ, ಮೃತದೇಹಗಳನ್ನು ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಅರೆ ಕೆರೆ ಗ್ರಾಮದ ಬಳಿಯ ಚಿಕ್ಕದೇವರಾಜ ನಾಲೆಯಲ್ಲಿ‌ 40 ರಿಂದ 45 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ತೇಲಿ ಬಂದು ರೈತನ ಜಮೀನಿನಲ್ಲಿ ಸಿಕ್ಕಿದೆ. ಮತ್ತೊಂದು ಪಾಂಡವಪುರ ತಾಲೂಕಿನ ಬೇಬಿ ಕೆರೆ- ಕೆ.ಬೆಟ್ಟಹಳ್ಳಿ ಮಾರ್ಗ ಮಧ್ಯೆ ಇರುವ ಬೇಬಿ ಕೆರೆಯ ನಾಲೆಯಲ್ಲಿ 30 ರಿಂದ 35 ವರ್ಷದ ಮಹಿಳೆಯ ಶವ ದೊರೆತಿದೆ.

ನಾಲೆಗಳಲ್ಲಿ ಪತ್ತೆಯಾದ ಎರಡೂ ಶವಗಳನ್ನು ಅರ್ಧಭಾಗವನ್ನಾಗಿ ಕತ್ತರಿಸಿ ಚೀಲದಲ್ಲಿ ಹಾಕಿ ಎರಡು ಕಾಲುಗಳನ್ನು ಕಟ್ಟಿ ನೀರಿಗೆ ಎಸೆದಿದ್ದಾರೆ. ಪೊಲೀಸರು ಪ್ಲಾಸ್ಟಿಕ್ ಚೀಲದಿಂದ ದೇಹದ ಭಾಗಗಳನ್ನು ವಶಪಡಿಸಿಕೊಂಡು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣದಲ್ಲಿ ಹತ್ಯೆಯಾಗಿರುವ ಇಬ್ಬರು ಮಹಿಳೆಯ ಬಗ್ಗೆ ಮಾಹಿತಿ ಕಲೆ ಹಾಕಿ‌ ಈ ಪ್ರಕರಣ ಕಂಡುಹಿಡಿಯಲು ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.

ನಿನ್ನೆಯಷ್ಟೆ ದಲಿತ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕಾಗಿ 17 ವರ್ಷದ ಬಾಲಕಿಯನ್ನು ಆಕೆಯ ತಂದೆಯೆ ಕತ್ತು ಹಿಸುಕಿ ಕೊಂದಿರುವ ಹೀನಾಯ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಿಂದ ವರದಿಯಾಗಿದೆ. ಮಗಳನ್ನು ಕೊಂದ ಬಂತರ ಆರೋಪಿ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.


ಇದನ್ನೂ ಓದಿ: ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...