Homeಕರ್ನಾಟಕಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿರುವ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ. ಮಹಿಳೆಯರನ್ನು ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ನಾಲೆಗೆ ಎಸೆದಿದ್ದು, ನಾಲೆಯಲ್ಲಿ ತೇಲಿ ಬಂದಿವೆ. ಇಂತಹ ಭಯಾನಕ ಕೊಲೆಗಳನ್ನು ಕಂಡು ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ.

ಪಾಂಡವಪುರ ಟೌನ್ ಪೊಲೀಸ್ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೃತದೇಹಗಳು ಪತ್ತೆಯಾಇದ್ದು, ಮಹಿಳೆಯರ ಗುರುತು ಇನ್ನು ಪತ್ತೆಯಾಗಿಲ್ಲ. ಹೊಟ್ಟೆ ಭಾಗದಿಂದ ಕೆಳಗೆ ಕತ್ತರಿಸಿದ ದೇಹದ ಭಾಗವನ್ನು ಚೀಲದಲ್ಲಿ ಕಟ್ಟಿ ನಾಲೆಗೆ ಎಸೆಯಲಾಗಿದೆ. ಎಲ್ಲಿಯೋ ಕೊಲೆ ಮಾಡಿ, ಮೃತದೇಹಗಳನ್ನು ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಅರೆ ಕೆರೆ ಗ್ರಾಮದ ಬಳಿಯ ಚಿಕ್ಕದೇವರಾಜ ನಾಲೆಯಲ್ಲಿ‌ 40 ರಿಂದ 45 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ತೇಲಿ ಬಂದು ರೈತನ ಜಮೀನಿನಲ್ಲಿ ಸಿಕ್ಕಿದೆ. ಮತ್ತೊಂದು ಪಾಂಡವಪುರ ತಾಲೂಕಿನ ಬೇಬಿ ಕೆರೆ- ಕೆ.ಬೆಟ್ಟಹಳ್ಳಿ ಮಾರ್ಗ ಮಧ್ಯೆ ಇರುವ ಬೇಬಿ ಕೆರೆಯ ನಾಲೆಯಲ್ಲಿ 30 ರಿಂದ 35 ವರ್ಷದ ಮಹಿಳೆಯ ಶವ ದೊರೆತಿದೆ.

ನಾಲೆಗಳಲ್ಲಿ ಪತ್ತೆಯಾದ ಎರಡೂ ಶವಗಳನ್ನು ಅರ್ಧಭಾಗವನ್ನಾಗಿ ಕತ್ತರಿಸಿ ಚೀಲದಲ್ಲಿ ಹಾಕಿ ಎರಡು ಕಾಲುಗಳನ್ನು ಕಟ್ಟಿ ನೀರಿಗೆ ಎಸೆದಿದ್ದಾರೆ. ಪೊಲೀಸರು ಪ್ಲಾಸ್ಟಿಕ್ ಚೀಲದಿಂದ ದೇಹದ ಭಾಗಗಳನ್ನು ವಶಪಡಿಸಿಕೊಂಡು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣದಲ್ಲಿ ಹತ್ಯೆಯಾಗಿರುವ ಇಬ್ಬರು ಮಹಿಳೆಯ ಬಗ್ಗೆ ಮಾಹಿತಿ ಕಲೆ ಹಾಕಿ‌ ಈ ಪ್ರಕರಣ ಕಂಡುಹಿಡಿಯಲು ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.

ನಿನ್ನೆಯಷ್ಟೆ ದಲಿತ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕಾಗಿ 17 ವರ್ಷದ ಬಾಲಕಿಯನ್ನು ಆಕೆಯ ತಂದೆಯೆ ಕತ್ತು ಹಿಸುಕಿ ಕೊಂದಿರುವ ಹೀನಾಯ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಿಂದ ವರದಿಯಾಗಿದೆ. ಮಗಳನ್ನು ಕೊಂದ ಬಂತರ ಆರೋಪಿ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.


ಇದನ್ನೂ ಓದಿ: ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...