Homeಮುಖಪುಟರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

- Advertisement -
- Advertisement -

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ ಕೋಯೆಲ್ ಮಲ್ಲಿಕ್ ಅವರನ್ನು ನಾಮನಿರ್ದೇಶನ ಮಾಡಿದೆ.

ಮಾರ್ಚ್ 16ರಂದು ಮತದಾನ ನಡೆಯಲಿದೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ, ಘೋಷಿಸಲಾದ ಐದು ಸ್ಥಾನಗಳಲ್ಲಿ ನಾಲ್ಕರಲ್ಲಿ ಟಿಎಂಸಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಅಭ್ಯರ್ಥಿಗಳು ಸುಲಭವಾಗಿ ಸಂಸತ್ತಿನ ಮೇಲ್ಮನೆ ಪ್ರವೇಶಿಸುವ ನಿರೀಕ್ಷೆಯಿದೆ.

ಮೇನಕಾ ಗುರುಸ್ವಾಮಿ ಮತ್ತು ಅವರ ಸಂಗಾತಿ ಅರುಂಧತಿ ಕಾಟ್ಜು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 377ರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಖ್ಯಾತಿ ಪಡೆದವರು. 2018ರಲ್ಲಿ, ಸರ್ವೋಚ್ಚ ನ್ಯಾಯಾಲಯವು ಈ ಸೆಕ್ಷನ್ ಅನ್ನು ರದ್ದುಗೊಳಿಸಿತು ಮತ್ತು ‘ಸಮ್ಮತಿಯುಳ್ಳ ವಯಸ್ಕರ ನಡುವಿನ ಸಲಿಂಗ ಸಂಬಂಧ’ವನ್ನು ಅಪರಾಧವಲ್ಲ ಎಂದು ಘೋಷಿಸಿತು.

2024ರಲ್ಲಿ ನಡೆದ ಕೋಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲರ ತಂಡದಲ್ಲಿ ಮೇನಕಾ ಒಬ್ಬರಾಗಿದ್ದರು.

ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ಕಪಿಲ್ ಸಿಬಲ್ ಅವರ ನೇತೃತ್ವದ 21 ವಕೀಲರ ತಂಡದಲ್ಲಿ ಮೇನಕಾ ಅವರು ಪ್ರಮುಖ ಸದಸ್ಯರಾಗಿದ್ದರು.

ಸಂತ್ರಸ್ತೆಯ ಗುರುತನ್ನು ರಕ್ಷಿಸುವ ವಿಚಾರದಲ್ಲಿ ಇವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು. ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು ಮತ್ತು ವಿಳಂಬಕ್ಕೆ ಕಾರಣವಾದ ಅಂಶಗಳ (ಉದಾಹರಣೆಗೆ ಪ್ರವಾಹ) ಬಗ್ಗೆ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಕಳೆದ ಜನವರಿಯಲ್ಲಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಾರಿ ನಿರ್ದೇಶನಾಲಯದ (ಇಡಿ) ನಡುವಿನ ಸಂಘರ್ಷದ ಸಂದರ್ಭದಲ್ಲಿಯೂ ಟಿಎಂಸಿ ಪರವಾಗಿ ಮೇನಕಾ ವಾದ ಮಂಡಿಸಿದ್ದರು.

ಸಂಸತ್ತು ಪ್ರವೇಶಿಸಲು ಅಣಿಯಾದ ಎಲ್‌ಜಿಬಿಟಿಕ್ಯೂ+ ಸಮುದಾಯದ ಮೊದಲ ಸದಸ್ಯೆ

ಮೇನಕಾ ಭಾರತದ ರಾಜಕೀಯ ಮತ್ತು ಕಾನೂನು ಇತಿಹಾಸದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ. ಇವರು ರಾಜ್ಯಸಭೆಗೆ ಆಯ್ಕೆಯಾದಲ್ಲಿ, ಭಾರತದ ಸಂಸತ್ತನ್ನು ಪ್ರವೇಶಿಸಲಿರುವ ಮುಕ್ತ ಎಲ್‌ಜಿಬಿಟಿಕ್ಯೂ+ ಸಮುದಾಯದ (Openly LGBTQ+) ಮೊಟ್ಟಮೊದಲ ಸದಸ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಇದು ಭಾರತೀಯ ರಾಜಕೀಯದಲ್ಲಿ ಆ ಸಮುದಾಯಕ್ಕೆ ದೊರೆಯಲಿರುವ ಅತಿದೊಡ್ಡ ಸಾಂವಿಧಾನಿಕ ಮಾನ್ಯತೆಯಾಗಿದೆ.

ಕೇವಲ ವಕೀಲೆಯಾಗಿ ಮಾತ್ರವಲ್ಲದೆ, ತಳಮಟ್ಟದಲ್ಲಿ ಎಲ್‌ಜಿಬಿಟಿಕ್ಯೂ+ ಸಮುದಾಯದ ಜನರ ಹಕ್ಕುಗಳಿಗಾಗಿ ಅವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಐಪಿಸಿ ಸೆಕ್ಷನ್ 377 ರದ್ದತಿಯು ಈ ಸಮುದಾಯಕ್ಕೆ ಬದುಕುವ ಹಕ್ಕನ್ನು ನೀಡಿದ ಪ್ರಮುಖ ವಿಷಯವಾಗಿದೆ.

ಟಿಎಂಸಿ ಮೇನಕಾ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮೂಲಕ, ಭಾರತೀಯ ಸಂಸತ್ತಿನಲ್ಲಿ ವೈವಿಧ್ಯತೆ ಮತ್ತು ಸಮಾನತೆಗೆ ಹೊಸ ದಾರಿ ಮಾಡಿಕೊಟ್ಟಿದೆ.

ಮೇನಕಾ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರೋಡ್ಸ್ ಸ್ಕಾಲರ್ ಆಗಿದ್ದು, ಕಾನೂನು ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜ್ಞಾನ ಹೊಂದಿದ್ದಾರೆ.

ರಾಜೀವ್ ಕುಮಾರ್

ರಾಜೀವ್ ಕುಮಾರ್ ಅವರು 2023ರ ಡಿಸೆಂಬರ್‌ನಿಂದ 2025ರ ಜನವರಿವರೆಗೆ ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಸೇವೆ ಸಲ್ಲಿಸಿದ್ದರು. ಆದರೆ, 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ಅವರನ್ನು ಹುದ್ದೆಯಿಂದ ತೆಗೆದುಹಾಕಿದ್ದರಿಂದ, ಆ ವರ್ಷದ ನಾಲ್ಕು ತಿಂಗಳುಗಳ ಕಾಲ ಅವರು ಈ ಹುದ್ದೆಯಲ್ಲಿ ಇರಲಿಲ್ಲ.

2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು ರಾಜೀವ್ ಕುಮಾರ್ ಅವರನ್ನು ವರ್ಗಾವಣೆ ಮಾಡಿತ್ತು. ಚುನಾವಣೆ ಮುಗಿದ ನಂತರ ಜೂನ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ಅವರನ್ನು ಮತ್ತೆ ಡಿಜಿಪಿ ಹುದ್ದೆಗೆ ನೇಮಿಸಿತ್ತು.

ಇತ್ತೀಚೆಗಷ್ಟೇ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದಾರೆ ಮತ್ತು ಈಗ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ.

ಬಾಬುಲ್ ಸುಪ್ರಿಯೋ

ಬಾಬುಲ್ ಸುಪ್ರಿಯೋ ಪ್ರಸ್ತುತ ಪಶ್ಚಿಮ ಬಂಗಾಳದ ಮಾಹಿತಿ ತಂತ್ರಜ್ಞಾನ ಮತ್ತು ಸಾರ್ವಜನಿಕ ಉದ್ದಿಮೆಗಳ ರಾಜ್ಯ ಸಚಿವರಾಗಿದ್ದಾರೆ. 2021ರಲ್ಲಿ ಬಿಜೆಪಿ ತೊರೆದ ನಂತರ, ಇವರು 2022ರಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕರಾದರು. ಈ ಹಿಂದೆ ಅಸನ್ಸೋಲ್‌ನ ಸಂಸದರಾಗಿದ್ದ ಸುಪ್ರಿಯೋ, 2014 ರಿಂದ 2021 ರ ನಡುವೆ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ಅಸನ್ಸೋಲ್ ಕ್ಷೇತ್ರದಿಂದ ಜಯಗಳಿಸಿದ್ದರು. ಕೇಂದ್ರ ಸಚಿವ ಸಂಪುಟದಲ್ಲಿ ಪರಿಸರ, ಅರಣ್ಯ ಮತ್ತು ಅನಿಲ ಖಾತೆಗಳ ರಾಜ್ಯ ಸಚಿವರಾಗಿ ಕೆಲಸ ಮಾಡಿದ್ದರು.

2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರ ಕೇಂದ್ರ ಸಚಿವ ಸಂಪುಟ ಪುನಾರಚನೆಯಾದಾಗ ಸಚಿವ ಸ್ಥಾನದಿಂದ ಕೈಬಿಟ್ಟಿದ್ದರಿಂದ ಅತೃಪ್ತರಾಗಿ ಅವರು ತೃಣಮೂಲ ಕಾಂಗ್ರೆಸ್ ಸೇರಿದರು. 2022ರ ಉಪಚುನಾವಣೆಯಲ್ಲಿ ಕೋಲ್ಕತ್ತಾದ ಬಾಲಿಗುಂಜ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದರು. ರಾಜ್ಯಸಭೆಗೆ ನಾಮನಿರ್ದೇಶನ ಮಾಡುವುದರ ಮೂಲಕ ಮಮತಾ ಬ್ಯಾನರ್ಜಿ ಅವರು ಸುಪ್ರಿಯೋ ಅವರಿಗೆ ರಾಷ್ಟ್ರೀಯ ಮಟ್ಟದ ಜವಾಬ್ದಾರಿ ನೀಡಲು ಮುಂದಾಗಿದ್ದಾರೆ.

ಕೋಯೆಲ್ ಮಲ್ಲಿಕ್

ಇನ್ನು ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ಬಂಗಾಳಿ ಚಿತ್ರರಂಗದ ಖ್ಯಾತ ಹಿರಿಯ ನಟ ರಂಜಿತ್ ಮಲ್ಲಿಕ್ ಮತ್ತು ದೀಪಾ ಮಲ್ಲಿಕ್ ಅವರ ಪುತ್ರಿ. ಇವರು ಕೋಲ್ಕತ್ತಾದ ಮಲ್ಲಿಕ್ ಬಾರಿ ಕುಟುಂಬಕ್ಕೆ ಸೇರಿದವರಾಗಿದ್ದಾರೆ.

2003 ರಲ್ಲಿ ‘ನಾಟರ್ ಗುರು’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಇವರು, ಕಳೆದ ಎರಡು ದಶಕಗಳಲ್ಲಿ 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಬಂಗಾಳಿ ಮಾತ್ರವಲ್ಲದೆ ಒಡಿಯಾ ಚಿತ್ರಗಳಲ್ಲೂ ಕೆಲಸ ಮಾಡಿದ್ದಾರೆ.

‘ಬಂಧನ್’, ‘ಪಾಗ್ಲು’, ‘ಹೆಂಲಾಕ್ ಸೊಸೈಟಿ’, ‘ರಂಗ್‌ಬಾಜ್’ ಮತ್ತು ‘ಮಿಟಿನ್ ಮಾಶಿ’ ಸರಣಿಯ ಚಿತ್ರಗಳು ಇವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟಿವೆ.

ಇವರ ಅಭಿನಯಕ್ಕಾಗಿ ಬಿ.ಎಫ್.ಜೆ.ಎ ಅತ್ಯುತ್ತಮ ನಟಿ ಪ್ರಶಸ್ತಿ, ಫಿಲ್ಮ್‌ಫೇರ್ ಅವಾರ್ಡ್ಸ್ ಬಾಂಗ್ಲಾ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಗೌರವಾನ್ವಿತ ‘ಮಹಾನಾಯಕ ಸಮ್ಮಾನ್’ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಕೋಲ್ಕತ್ತಾದ ಗೋಖಲೆ ಸ್ಮಾರಕ ಬಾಲಕಿಯರ ಕಾಲೇಜಿನಿಂದ ಕೋಯೆಲ್ ಮನೋವಿಜ್ಞಾನದಲ್ಲಿ ಬಿ.ಎಸ್ಸಿ ಪದವಿ ಪಡೆದಿದ್ದಾರೆ. ಇದುವರೆಗೂ ಸಕ್ರಿಯ ರಾಜಕಾರಣದಿಂದ ದೂರವಿದ್ದ ಕೋಯೆಲ್ ಮಲ್ಲಿಕ್ ಅವರು, ಇದೀಗ ಟಿಎಂಸಿಯಿಂದ ರಾಜ್ಯಸಭೆಗೆ ಪ್ರವೇಶಿಸುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....