Homeಮುಖಪುಟರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಶುಕ್ರವಾರ ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ‘ಮಾ ನರ್ಮದಾ’ ಆರತಿ ನೆರವೇರಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಧ್ಯಪ್ರದೇಶದ ಪ್ರಸಿದ್ಧ ಶಿವ ದೇವಾಲಯಕ್ಕೆ ಭೇಟಿ ನೀಡಿದಾಗ ಗಡಿಯಾರ ಚಲಿಸುವ ದಿಕ್ಕಿಗೆ (ಪ್ರದಕ್ಷಿಣಾಕಾರಕ್ಕೆ) ವಿರುದ್ಧವಾಗಿ ಆರತಿ ಮಾಡಿದರು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.

ರಾಹುಲ್ ಅವರ 4 ಸೆಕೆಂಡ್‌ಗಳ ಕ್ಲಿಪ್ ಅನ್ನು ಹಂಚಿಕೊಂಡ ಮಾಳವಿಯಾ, “ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಎಂದು ತಿಳಿದಿದ್ದರೆ ಕಾಂಗ್ರೆಸ್ ನಾಯಕ ರಾಹುಲ್‌ ಸಾರ್ವಜನಿಕವಾಗಿ ತನ್ನನ್ನು ತಾನು ಪ್ರದರ್ಶಿಸಿಕೊಳ್ಳುವುದಿಲ್ಲ” ಎಂದಿದ್ದಾರೆ.

“ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಮತ್ತು ಅದಕ್ಕೆ ವೈಜ್ಞಾನಿಕ ಕಾರಣವಿದೆ (ಭೂಮಿಯು ಪ್ರದಕ್ಷಿಣಾಕಾರವಾಗಿ ಅಂದರೆ ಗಡಿಯಾರದ ಮುಳ್ಳುಗಳು ಸುತ್ತುವ ರೀತಿ ಚಲಿಸುತ್ತದೆ) ಎಂದು ‘ಚುನಾವಣೆಯ ಹಿಂದೂ’ವಾಗಿರುವ ರಾಹುಲ್ ಗಾಂಧಿಗೆ ತಿಳಿದಿದ್ದರೆ ಅವರು ತಮ್ಮನ್ನು ತಾವು ಚಮತ್ಕಾರಕ್ಕೆ ಒಳಪಡಿಸಿಕೊಳ್ಳುತ್ತಿರಲಿಲ್ಲ… ಸಾರ್ವಜನಿಕವಾಗಿ ಹೀಗೆ…” ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಾರ್ವಜನಿಕರು ತಿರುಗೇಟು ನೀಡಿದ್ದಾರೆ. “ರಾಹುಲ್ ಗಾಂಧಿಯವರು ನಿಜವಾಗಿಯೂ ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡುತ್ತಿದ್ದಾರೆ. ಮಾಳವಿಯಾ ಅವರಿಗೆ ಇದು ಅಪ್ರದಕ್ಷಿಣಾಕಾರವಾಗಿ ಕಾಣುತ್ತದೆ” ಎಂದಿದ್ದಾರೆ.

“ತನ್ನ ಎಡಭಾಗವು ರಾಹುಲ್ ಅವರಿಗೆ ಬಲಭಾಗವಾಗಿರುತ್ತದೆ ಎಂದು ಅಮಿತ್ ಮಾಳವಿಯಾ ಅವರಿಗೆ ತಿಳಿವಳಿಕೆ ಇದ್ದಿದ್ದರೆ, ಅವರು ಸ್ವಯಂ ಮುಜುಗರವನ್ನು ಎದುರಿಸಬೇಕಾಗಿರಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ನನ್ನ ಮೂರುವರೆ ವರ್ಷದ ಮಗುವಿಗೆ ನಿಮಗಿಂತ ಚೆನ್ನಾಗಿ ತಿಳಿವಳಿಕೆ ಇದೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. “ನಿಮ್ಮ ಖಾತೆಯನ್ನು ಡಿಲೀಟ್‌ ಮಾಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ. ನಿಮಗೆ ಇಷ್ಟೂ ತಿಳಿಯದಿದ್ದರೆ, ಆಡಳಿತದ ಬಗ್ಗೆ ನಿಮಗೇನು ತಿಳಿದಿದೆ?” ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿಯವರ ರೀತಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಆರತಿ ಬೆಳಗುತ್ತಿರುವ ವಿಡಿಯೊವನ್ನು ಅಮಿತ್ ಅವರಿಗೆ ಟ್ಯಾಗ್ ಮಾಡಿ ಪತ್ರಕರ್ತ ಮೊಹಮ್ಮದ್ ಜುಬೇರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈವರೆಗೆ ಅಮಿತ್‌ ಅವರ ವಿಡಿಯೊಗಿಂತ, ಜುಬೇರ್‌ ನೀಡಿರುವ ಪ್ರತಿಕ್ರಿಯೆಯೇ ಹೆಚ್ಚು ರೀಟ್ವೀಟ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯವರ ರೀತಿಯಲ್ಲಿಯೇ ಆರತಿ ಮಾಡುವ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಹಂಚಿಕೊಂಡಿದ್ದಾರೆ. “ಅದನ್ನೇ ನೀವು ಮೋದಿಯವರಿಗೆ ಏಕೆ ಹೇಳಬಾರದು?” ಎಂದು ಪ್ರಶ್ನಿಸಿದ್ದಾರೆ.

ಭೂಮಿ ಗಡಿಯಾರದ ರೀತಿ ಸುತ್ತುತ್ತದೆ ಎಂದು ಅಮಿತ್ ಮಾಡಿರುವ ಪ್ರತಿಪಾದನೆಯನ್ನು ಅನೇಕರು ಸರಿಪಡಿಸಿದ್ದಾರೆ. ಉತ್ತರ ಧ್ರುವ ನಕ್ಷತ್ರವಾದ ಪೊಲಾರಿಸ್‌ನಿಂದ ನೋಡಿದಾಗ ಭೂಮಿಯು ಅಪ್ರದಕ್ಷಿಣಾಕಾರವಾಗಿ ತಿರುಗುತ್ತದೆ ಎಂದು ತಿಳಿಸಿದ್ದಾರೆ.

“ಅಮಿತ್ ಅವರಿಗೆ ಸಾಮಾನ್ಯ ವಿಜ್ಞಾನದ ಅರಿವೂ ಇಲ್ಲ. ಇವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರೂ ಚುನಾವಣೆ ಹಿಂದೂ” ಎಂದಿದ್ದಾರೆ. ಜೊತೆಗೆ ಮೋದಿಯವರು ತೊಟ್ಟಿಲು ತೂಗುವ ರೀತಿಯಲ್ಲಿ ಆರತಿ ಬೆಳಗುತ್ತಿರುವ ವಿಡಿಯೊ ವೈರಲ್ ಆಗುತ್ತಿದೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ತಲೆಕೆಳಗಾದ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರಿಂದ ಟೀಕೆಗೆ ಗುರಿಯಾಗಿದ್ದಾರೆ. ಯೂತ್ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪ್ರತಿಕ್ರಿಯಿಸಿ, 2014ರ ಹಿಂದೆ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ಸ್ಮೃತಿಯವರು ಮಾಡಿದ್ದ ಹೋರಾಟದ ಫೋಟೋವನ್ನು ಟ್ಯಾಗ್ ಮಾಡಿದ್ದಾರೆ.

“ರಾಹುಲ್‌‌ ಪ್ರದಕ್ಷಿಣಾಕಾರವಾಗಿ ಆರತಿ ಮಾಡುತ್ತಿದ್ದಾರೆ. ನೀವು ಇನ್ನೊಂದು ಕಡೆಯಿಂದ ನೋಡುತ್ತಿದ್ದೀರಿ. ಪ್ರತಿ ದೇವಸ್ಥಾನದಲ್ಲಿಯೂ ಇದೇ ರೀತಿ ಆರತಿ ಮಾಡಲಾಗುತ್ತದೆ. ರಾಹುಲ್‌ ಮಾಡುವ ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ನಿಲ್ಲಿಸಿ ಮತ್ತು ನಿಮ್ಮ ಮೇಲಧಿಕಾರಿಗಳಿಂದ ಹೊಸ ಉದ್ಯೋಗ ವಿವರಣೆಯನ್ನು ಪಡೆಯಿರಿ. ಅವರನ್ನು ಸದಾ ಟ್ರೋಲ್ ಮಾಡುವುದಕ್ಕೆ ಬೇಸರವಿಲ್ಲವೇ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...