Homeಮುಖಪುಟರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಶುಕ್ರವಾರ ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ‘ಮಾ ನರ್ಮದಾ’ ಆರತಿ ನೆರವೇರಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಧ್ಯಪ್ರದೇಶದ ಪ್ರಸಿದ್ಧ ಶಿವ ದೇವಾಲಯಕ್ಕೆ ಭೇಟಿ ನೀಡಿದಾಗ ಗಡಿಯಾರ ಚಲಿಸುವ ದಿಕ್ಕಿಗೆ (ಪ್ರದಕ್ಷಿಣಾಕಾರಕ್ಕೆ) ವಿರುದ್ಧವಾಗಿ ಆರತಿ ಮಾಡಿದರು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.

ರಾಹುಲ್ ಅವರ 4 ಸೆಕೆಂಡ್‌ಗಳ ಕ್ಲಿಪ್ ಅನ್ನು ಹಂಚಿಕೊಂಡ ಮಾಳವಿಯಾ, “ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಎಂದು ತಿಳಿದಿದ್ದರೆ ಕಾಂಗ್ರೆಸ್ ನಾಯಕ ರಾಹುಲ್‌ ಸಾರ್ವಜನಿಕವಾಗಿ ತನ್ನನ್ನು ತಾನು ಪ್ರದರ್ಶಿಸಿಕೊಳ್ಳುವುದಿಲ್ಲ” ಎಂದಿದ್ದಾರೆ.

“ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಮತ್ತು ಅದಕ್ಕೆ ವೈಜ್ಞಾನಿಕ ಕಾರಣವಿದೆ (ಭೂಮಿಯು ಪ್ರದಕ್ಷಿಣಾಕಾರವಾಗಿ ಅಂದರೆ ಗಡಿಯಾರದ ಮುಳ್ಳುಗಳು ಸುತ್ತುವ ರೀತಿ ಚಲಿಸುತ್ತದೆ) ಎಂದು ‘ಚುನಾವಣೆಯ ಹಿಂದೂ’ವಾಗಿರುವ ರಾಹುಲ್ ಗಾಂಧಿಗೆ ತಿಳಿದಿದ್ದರೆ ಅವರು ತಮ್ಮನ್ನು ತಾವು ಚಮತ್ಕಾರಕ್ಕೆ ಒಳಪಡಿಸಿಕೊಳ್ಳುತ್ತಿರಲಿಲ್ಲ… ಸಾರ್ವಜನಿಕವಾಗಿ ಹೀಗೆ…” ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಾರ್ವಜನಿಕರು ತಿರುಗೇಟು ನೀಡಿದ್ದಾರೆ. “ರಾಹುಲ್ ಗಾಂಧಿಯವರು ನಿಜವಾಗಿಯೂ ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡುತ್ತಿದ್ದಾರೆ. ಮಾಳವಿಯಾ ಅವರಿಗೆ ಇದು ಅಪ್ರದಕ್ಷಿಣಾಕಾರವಾಗಿ ಕಾಣುತ್ತದೆ” ಎಂದಿದ್ದಾರೆ.

“ತನ್ನ ಎಡಭಾಗವು ರಾಹುಲ್ ಅವರಿಗೆ ಬಲಭಾಗವಾಗಿರುತ್ತದೆ ಎಂದು ಅಮಿತ್ ಮಾಳವಿಯಾ ಅವರಿಗೆ ತಿಳಿವಳಿಕೆ ಇದ್ದಿದ್ದರೆ, ಅವರು ಸ್ವಯಂ ಮುಜುಗರವನ್ನು ಎದುರಿಸಬೇಕಾಗಿರಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ನನ್ನ ಮೂರುವರೆ ವರ್ಷದ ಮಗುವಿಗೆ ನಿಮಗಿಂತ ಚೆನ್ನಾಗಿ ತಿಳಿವಳಿಕೆ ಇದೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. “ನಿಮ್ಮ ಖಾತೆಯನ್ನು ಡಿಲೀಟ್‌ ಮಾಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ. ನಿಮಗೆ ಇಷ್ಟೂ ತಿಳಿಯದಿದ್ದರೆ, ಆಡಳಿತದ ಬಗ್ಗೆ ನಿಮಗೇನು ತಿಳಿದಿದೆ?” ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿಯವರ ರೀತಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಆರತಿ ಬೆಳಗುತ್ತಿರುವ ವಿಡಿಯೊವನ್ನು ಅಮಿತ್ ಅವರಿಗೆ ಟ್ಯಾಗ್ ಮಾಡಿ ಪತ್ರಕರ್ತ ಮೊಹಮ್ಮದ್ ಜುಬೇರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈವರೆಗೆ ಅಮಿತ್‌ ಅವರ ವಿಡಿಯೊಗಿಂತ, ಜುಬೇರ್‌ ನೀಡಿರುವ ಪ್ರತಿಕ್ರಿಯೆಯೇ ಹೆಚ್ಚು ರೀಟ್ವೀಟ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯವರ ರೀತಿಯಲ್ಲಿಯೇ ಆರತಿ ಮಾಡುವ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಹಂಚಿಕೊಂಡಿದ್ದಾರೆ. “ಅದನ್ನೇ ನೀವು ಮೋದಿಯವರಿಗೆ ಏಕೆ ಹೇಳಬಾರದು?” ಎಂದು ಪ್ರಶ್ನಿಸಿದ್ದಾರೆ.

ಭೂಮಿ ಗಡಿಯಾರದ ರೀತಿ ಸುತ್ತುತ್ತದೆ ಎಂದು ಅಮಿತ್ ಮಾಡಿರುವ ಪ್ರತಿಪಾದನೆಯನ್ನು ಅನೇಕರು ಸರಿಪಡಿಸಿದ್ದಾರೆ. ಉತ್ತರ ಧ್ರುವ ನಕ್ಷತ್ರವಾದ ಪೊಲಾರಿಸ್‌ನಿಂದ ನೋಡಿದಾಗ ಭೂಮಿಯು ಅಪ್ರದಕ್ಷಿಣಾಕಾರವಾಗಿ ತಿರುಗುತ್ತದೆ ಎಂದು ತಿಳಿಸಿದ್ದಾರೆ.

“ಅಮಿತ್ ಅವರಿಗೆ ಸಾಮಾನ್ಯ ವಿಜ್ಞಾನದ ಅರಿವೂ ಇಲ್ಲ. ಇವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರೂ ಚುನಾವಣೆ ಹಿಂದೂ” ಎಂದಿದ್ದಾರೆ. ಜೊತೆಗೆ ಮೋದಿಯವರು ತೊಟ್ಟಿಲು ತೂಗುವ ರೀತಿಯಲ್ಲಿ ಆರತಿ ಬೆಳಗುತ್ತಿರುವ ವಿಡಿಯೊ ವೈರಲ್ ಆಗುತ್ತಿದೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ತಲೆಕೆಳಗಾದ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರಿಂದ ಟೀಕೆಗೆ ಗುರಿಯಾಗಿದ್ದಾರೆ. ಯೂತ್ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪ್ರತಿಕ್ರಿಯಿಸಿ, 2014ರ ಹಿಂದೆ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ಸ್ಮೃತಿಯವರು ಮಾಡಿದ್ದ ಹೋರಾಟದ ಫೋಟೋವನ್ನು ಟ್ಯಾಗ್ ಮಾಡಿದ್ದಾರೆ.

“ರಾಹುಲ್‌‌ ಪ್ರದಕ್ಷಿಣಾಕಾರವಾಗಿ ಆರತಿ ಮಾಡುತ್ತಿದ್ದಾರೆ. ನೀವು ಇನ್ನೊಂದು ಕಡೆಯಿಂದ ನೋಡುತ್ತಿದ್ದೀರಿ. ಪ್ರತಿ ದೇವಸ್ಥಾನದಲ್ಲಿಯೂ ಇದೇ ರೀತಿ ಆರತಿ ಮಾಡಲಾಗುತ್ತದೆ. ರಾಹುಲ್‌ ಮಾಡುವ ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ನಿಲ್ಲಿಸಿ ಮತ್ತು ನಿಮ್ಮ ಮೇಲಧಿಕಾರಿಗಳಿಂದ ಹೊಸ ಉದ್ಯೋಗ ವಿವರಣೆಯನ್ನು ಪಡೆಯಿರಿ. ಅವರನ್ನು ಸದಾ ಟ್ರೋಲ್ ಮಾಡುವುದಕ್ಕೆ ಬೇಸರವಿಲ್ಲವೇ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...