Homeಮುಖಪುಟರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಶುಕ್ರವಾರ ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ‘ಮಾ ನರ್ಮದಾ’ ಆರತಿ ನೆರವೇರಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಧ್ಯಪ್ರದೇಶದ ಪ್ರಸಿದ್ಧ ಶಿವ ದೇವಾಲಯಕ್ಕೆ ಭೇಟಿ ನೀಡಿದಾಗ ಗಡಿಯಾರ ಚಲಿಸುವ ದಿಕ್ಕಿಗೆ (ಪ್ರದಕ್ಷಿಣಾಕಾರಕ್ಕೆ) ವಿರುದ್ಧವಾಗಿ ಆರತಿ ಮಾಡಿದರು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.

ರಾಹುಲ್ ಅವರ 4 ಸೆಕೆಂಡ್‌ಗಳ ಕ್ಲಿಪ್ ಅನ್ನು ಹಂಚಿಕೊಂಡ ಮಾಳವಿಯಾ, “ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಎಂದು ತಿಳಿದಿದ್ದರೆ ಕಾಂಗ್ರೆಸ್ ನಾಯಕ ರಾಹುಲ್‌ ಸಾರ್ವಜನಿಕವಾಗಿ ತನ್ನನ್ನು ತಾನು ಪ್ರದರ್ಶಿಸಿಕೊಳ್ಳುವುದಿಲ್ಲ” ಎಂದಿದ್ದಾರೆ.

“ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಮತ್ತು ಅದಕ್ಕೆ ವೈಜ್ಞಾನಿಕ ಕಾರಣವಿದೆ (ಭೂಮಿಯು ಪ್ರದಕ್ಷಿಣಾಕಾರವಾಗಿ ಅಂದರೆ ಗಡಿಯಾರದ ಮುಳ್ಳುಗಳು ಸುತ್ತುವ ರೀತಿ ಚಲಿಸುತ್ತದೆ) ಎಂದು ‘ಚುನಾವಣೆಯ ಹಿಂದೂ’ವಾಗಿರುವ ರಾಹುಲ್ ಗಾಂಧಿಗೆ ತಿಳಿದಿದ್ದರೆ ಅವರು ತಮ್ಮನ್ನು ತಾವು ಚಮತ್ಕಾರಕ್ಕೆ ಒಳಪಡಿಸಿಕೊಳ್ಳುತ್ತಿರಲಿಲ್ಲ… ಸಾರ್ವಜನಿಕವಾಗಿ ಹೀಗೆ…” ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಾರ್ವಜನಿಕರು ತಿರುಗೇಟು ನೀಡಿದ್ದಾರೆ. “ರಾಹುಲ್ ಗಾಂಧಿಯವರು ನಿಜವಾಗಿಯೂ ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡುತ್ತಿದ್ದಾರೆ. ಮಾಳವಿಯಾ ಅವರಿಗೆ ಇದು ಅಪ್ರದಕ್ಷಿಣಾಕಾರವಾಗಿ ಕಾಣುತ್ತದೆ” ಎಂದಿದ್ದಾರೆ.

“ತನ್ನ ಎಡಭಾಗವು ರಾಹುಲ್ ಅವರಿಗೆ ಬಲಭಾಗವಾಗಿರುತ್ತದೆ ಎಂದು ಅಮಿತ್ ಮಾಳವಿಯಾ ಅವರಿಗೆ ತಿಳಿವಳಿಕೆ ಇದ್ದಿದ್ದರೆ, ಅವರು ಸ್ವಯಂ ಮುಜುಗರವನ್ನು ಎದುರಿಸಬೇಕಾಗಿರಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ನನ್ನ ಮೂರುವರೆ ವರ್ಷದ ಮಗುವಿಗೆ ನಿಮಗಿಂತ ಚೆನ್ನಾಗಿ ತಿಳಿವಳಿಕೆ ಇದೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. “ನಿಮ್ಮ ಖಾತೆಯನ್ನು ಡಿಲೀಟ್‌ ಮಾಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ. ನಿಮಗೆ ಇಷ್ಟೂ ತಿಳಿಯದಿದ್ದರೆ, ಆಡಳಿತದ ಬಗ್ಗೆ ನಿಮಗೇನು ತಿಳಿದಿದೆ?” ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿಯವರ ರೀತಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಆರತಿ ಬೆಳಗುತ್ತಿರುವ ವಿಡಿಯೊವನ್ನು ಅಮಿತ್ ಅವರಿಗೆ ಟ್ಯಾಗ್ ಮಾಡಿ ಪತ್ರಕರ್ತ ಮೊಹಮ್ಮದ್ ಜುಬೇರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈವರೆಗೆ ಅಮಿತ್‌ ಅವರ ವಿಡಿಯೊಗಿಂತ, ಜುಬೇರ್‌ ನೀಡಿರುವ ಪ್ರತಿಕ್ರಿಯೆಯೇ ಹೆಚ್ಚು ರೀಟ್ವೀಟ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯವರ ರೀತಿಯಲ್ಲಿಯೇ ಆರತಿ ಮಾಡುವ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಹಂಚಿಕೊಂಡಿದ್ದಾರೆ. “ಅದನ್ನೇ ನೀವು ಮೋದಿಯವರಿಗೆ ಏಕೆ ಹೇಳಬಾರದು?” ಎಂದು ಪ್ರಶ್ನಿಸಿದ್ದಾರೆ.

ಭೂಮಿ ಗಡಿಯಾರದ ರೀತಿ ಸುತ್ತುತ್ತದೆ ಎಂದು ಅಮಿತ್ ಮಾಡಿರುವ ಪ್ರತಿಪಾದನೆಯನ್ನು ಅನೇಕರು ಸರಿಪಡಿಸಿದ್ದಾರೆ. ಉತ್ತರ ಧ್ರುವ ನಕ್ಷತ್ರವಾದ ಪೊಲಾರಿಸ್‌ನಿಂದ ನೋಡಿದಾಗ ಭೂಮಿಯು ಅಪ್ರದಕ್ಷಿಣಾಕಾರವಾಗಿ ತಿರುಗುತ್ತದೆ ಎಂದು ತಿಳಿಸಿದ್ದಾರೆ.

“ಅಮಿತ್ ಅವರಿಗೆ ಸಾಮಾನ್ಯ ವಿಜ್ಞಾನದ ಅರಿವೂ ಇಲ್ಲ. ಇವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರೂ ಚುನಾವಣೆ ಹಿಂದೂ” ಎಂದಿದ್ದಾರೆ. ಜೊತೆಗೆ ಮೋದಿಯವರು ತೊಟ್ಟಿಲು ತೂಗುವ ರೀತಿಯಲ್ಲಿ ಆರತಿ ಬೆಳಗುತ್ತಿರುವ ವಿಡಿಯೊ ವೈರಲ್ ಆಗುತ್ತಿದೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ತಲೆಕೆಳಗಾದ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರಿಂದ ಟೀಕೆಗೆ ಗುರಿಯಾಗಿದ್ದಾರೆ. ಯೂತ್ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪ್ರತಿಕ್ರಿಯಿಸಿ, 2014ರ ಹಿಂದೆ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ಸ್ಮೃತಿಯವರು ಮಾಡಿದ್ದ ಹೋರಾಟದ ಫೋಟೋವನ್ನು ಟ್ಯಾಗ್ ಮಾಡಿದ್ದಾರೆ.

“ರಾಹುಲ್‌‌ ಪ್ರದಕ್ಷಿಣಾಕಾರವಾಗಿ ಆರತಿ ಮಾಡುತ್ತಿದ್ದಾರೆ. ನೀವು ಇನ್ನೊಂದು ಕಡೆಯಿಂದ ನೋಡುತ್ತಿದ್ದೀರಿ. ಪ್ರತಿ ದೇವಸ್ಥಾನದಲ್ಲಿಯೂ ಇದೇ ರೀತಿ ಆರತಿ ಮಾಡಲಾಗುತ್ತದೆ. ರಾಹುಲ್‌ ಮಾಡುವ ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ನಿಲ್ಲಿಸಿ ಮತ್ತು ನಿಮ್ಮ ಮೇಲಧಿಕಾರಿಗಳಿಂದ ಹೊಸ ಉದ್ಯೋಗ ವಿವರಣೆಯನ್ನು ಪಡೆಯಿರಿ. ಅವರನ್ನು ಸದಾ ಟ್ರೋಲ್ ಮಾಡುವುದಕ್ಕೆ ಬೇಸರವಿಲ್ಲವೇ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...