Homeಮುಖಪುಟರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಶುಕ್ರವಾರ ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ‘ಮಾ ನರ್ಮದಾ’ ಆರತಿ ನೆರವೇರಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಧ್ಯಪ್ರದೇಶದ ಪ್ರಸಿದ್ಧ ಶಿವ ದೇವಾಲಯಕ್ಕೆ ಭೇಟಿ ನೀಡಿದಾಗ ಗಡಿಯಾರ ಚಲಿಸುವ ದಿಕ್ಕಿಗೆ (ಪ್ರದಕ್ಷಿಣಾಕಾರಕ್ಕೆ) ವಿರುದ್ಧವಾಗಿ ಆರತಿ ಮಾಡಿದರು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.

ರಾಹುಲ್ ಅವರ 4 ಸೆಕೆಂಡ್‌ಗಳ ಕ್ಲಿಪ್ ಅನ್ನು ಹಂಚಿಕೊಂಡ ಮಾಳವಿಯಾ, “ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಎಂದು ತಿಳಿದಿದ್ದರೆ ಕಾಂಗ್ರೆಸ್ ನಾಯಕ ರಾಹುಲ್‌ ಸಾರ್ವಜನಿಕವಾಗಿ ತನ್ನನ್ನು ತಾನು ಪ್ರದರ್ಶಿಸಿಕೊಳ್ಳುವುದಿಲ್ಲ” ಎಂದಿದ್ದಾರೆ.

“ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಮತ್ತು ಅದಕ್ಕೆ ವೈಜ್ಞಾನಿಕ ಕಾರಣವಿದೆ (ಭೂಮಿಯು ಪ್ರದಕ್ಷಿಣಾಕಾರವಾಗಿ ಅಂದರೆ ಗಡಿಯಾರದ ಮುಳ್ಳುಗಳು ಸುತ್ತುವ ರೀತಿ ಚಲಿಸುತ್ತದೆ) ಎಂದು ‘ಚುನಾವಣೆಯ ಹಿಂದೂ’ವಾಗಿರುವ ರಾಹುಲ್ ಗಾಂಧಿಗೆ ತಿಳಿದಿದ್ದರೆ ಅವರು ತಮ್ಮನ್ನು ತಾವು ಚಮತ್ಕಾರಕ್ಕೆ ಒಳಪಡಿಸಿಕೊಳ್ಳುತ್ತಿರಲಿಲ್ಲ… ಸಾರ್ವಜನಿಕವಾಗಿ ಹೀಗೆ…” ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಾರ್ವಜನಿಕರು ತಿರುಗೇಟು ನೀಡಿದ್ದಾರೆ. “ರಾಹುಲ್ ಗಾಂಧಿಯವರು ನಿಜವಾಗಿಯೂ ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡುತ್ತಿದ್ದಾರೆ. ಮಾಳವಿಯಾ ಅವರಿಗೆ ಇದು ಅಪ್ರದಕ್ಷಿಣಾಕಾರವಾಗಿ ಕಾಣುತ್ತದೆ” ಎಂದಿದ್ದಾರೆ.

“ತನ್ನ ಎಡಭಾಗವು ರಾಹುಲ್ ಅವರಿಗೆ ಬಲಭಾಗವಾಗಿರುತ್ತದೆ ಎಂದು ಅಮಿತ್ ಮಾಳವಿಯಾ ಅವರಿಗೆ ತಿಳಿವಳಿಕೆ ಇದ್ದಿದ್ದರೆ, ಅವರು ಸ್ವಯಂ ಮುಜುಗರವನ್ನು ಎದುರಿಸಬೇಕಾಗಿರಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ನನ್ನ ಮೂರುವರೆ ವರ್ಷದ ಮಗುವಿಗೆ ನಿಮಗಿಂತ ಚೆನ್ನಾಗಿ ತಿಳಿವಳಿಕೆ ಇದೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. “ನಿಮ್ಮ ಖಾತೆಯನ್ನು ಡಿಲೀಟ್‌ ಮಾಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ. ನಿಮಗೆ ಇಷ್ಟೂ ತಿಳಿಯದಿದ್ದರೆ, ಆಡಳಿತದ ಬಗ್ಗೆ ನಿಮಗೇನು ತಿಳಿದಿದೆ?” ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿಯವರ ರೀತಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಆರತಿ ಬೆಳಗುತ್ತಿರುವ ವಿಡಿಯೊವನ್ನು ಅಮಿತ್ ಅವರಿಗೆ ಟ್ಯಾಗ್ ಮಾಡಿ ಪತ್ರಕರ್ತ ಮೊಹಮ್ಮದ್ ಜುಬೇರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈವರೆಗೆ ಅಮಿತ್‌ ಅವರ ವಿಡಿಯೊಗಿಂತ, ಜುಬೇರ್‌ ನೀಡಿರುವ ಪ್ರತಿಕ್ರಿಯೆಯೇ ಹೆಚ್ಚು ರೀಟ್ವೀಟ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯವರ ರೀತಿಯಲ್ಲಿಯೇ ಆರತಿ ಮಾಡುವ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಹಂಚಿಕೊಂಡಿದ್ದಾರೆ. “ಅದನ್ನೇ ನೀವು ಮೋದಿಯವರಿಗೆ ಏಕೆ ಹೇಳಬಾರದು?” ಎಂದು ಪ್ರಶ್ನಿಸಿದ್ದಾರೆ.

ಭೂಮಿ ಗಡಿಯಾರದ ರೀತಿ ಸುತ್ತುತ್ತದೆ ಎಂದು ಅಮಿತ್ ಮಾಡಿರುವ ಪ್ರತಿಪಾದನೆಯನ್ನು ಅನೇಕರು ಸರಿಪಡಿಸಿದ್ದಾರೆ. ಉತ್ತರ ಧ್ರುವ ನಕ್ಷತ್ರವಾದ ಪೊಲಾರಿಸ್‌ನಿಂದ ನೋಡಿದಾಗ ಭೂಮಿಯು ಅಪ್ರದಕ್ಷಿಣಾಕಾರವಾಗಿ ತಿರುಗುತ್ತದೆ ಎಂದು ತಿಳಿಸಿದ್ದಾರೆ.

“ಅಮಿತ್ ಅವರಿಗೆ ಸಾಮಾನ್ಯ ವಿಜ್ಞಾನದ ಅರಿವೂ ಇಲ್ಲ. ಇವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರೂ ಚುನಾವಣೆ ಹಿಂದೂ” ಎಂದಿದ್ದಾರೆ. ಜೊತೆಗೆ ಮೋದಿಯವರು ತೊಟ್ಟಿಲು ತೂಗುವ ರೀತಿಯಲ್ಲಿ ಆರತಿ ಬೆಳಗುತ್ತಿರುವ ವಿಡಿಯೊ ವೈರಲ್ ಆಗುತ್ತಿದೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ತಲೆಕೆಳಗಾದ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರಿಂದ ಟೀಕೆಗೆ ಗುರಿಯಾಗಿದ್ದಾರೆ. ಯೂತ್ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪ್ರತಿಕ್ರಿಯಿಸಿ, 2014ರ ಹಿಂದೆ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ಸ್ಮೃತಿಯವರು ಮಾಡಿದ್ದ ಹೋರಾಟದ ಫೋಟೋವನ್ನು ಟ್ಯಾಗ್ ಮಾಡಿದ್ದಾರೆ.

“ರಾಹುಲ್‌‌ ಪ್ರದಕ್ಷಿಣಾಕಾರವಾಗಿ ಆರತಿ ಮಾಡುತ್ತಿದ್ದಾರೆ. ನೀವು ಇನ್ನೊಂದು ಕಡೆಯಿಂದ ನೋಡುತ್ತಿದ್ದೀರಿ. ಪ್ರತಿ ದೇವಸ್ಥಾನದಲ್ಲಿಯೂ ಇದೇ ರೀತಿ ಆರತಿ ಮಾಡಲಾಗುತ್ತದೆ. ರಾಹುಲ್‌ ಮಾಡುವ ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ನಿಲ್ಲಿಸಿ ಮತ್ತು ನಿಮ್ಮ ಮೇಲಧಿಕಾರಿಗಳಿಂದ ಹೊಸ ಉದ್ಯೋಗ ವಿವರಣೆಯನ್ನು ಪಡೆಯಿರಿ. ಅವರನ್ನು ಸದಾ ಟ್ರೋಲ್ ಮಾಡುವುದಕ್ಕೆ ಬೇಸರವಿಲ್ಲವೇ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...