Homeಮುಖಪುಟರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಶುಕ್ರವಾರ ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ‘ಮಾ ನರ್ಮದಾ’ ಆರತಿ ನೆರವೇರಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಧ್ಯಪ್ರದೇಶದ ಪ್ರಸಿದ್ಧ ಶಿವ ದೇವಾಲಯಕ್ಕೆ ಭೇಟಿ ನೀಡಿದಾಗ ಗಡಿಯಾರ ಚಲಿಸುವ ದಿಕ್ಕಿಗೆ (ಪ್ರದಕ್ಷಿಣಾಕಾರಕ್ಕೆ) ವಿರುದ್ಧವಾಗಿ ಆರತಿ ಮಾಡಿದರು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.

ರಾಹುಲ್ ಅವರ 4 ಸೆಕೆಂಡ್‌ಗಳ ಕ್ಲಿಪ್ ಅನ್ನು ಹಂಚಿಕೊಂಡ ಮಾಳವಿಯಾ, “ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಎಂದು ತಿಳಿದಿದ್ದರೆ ಕಾಂಗ್ರೆಸ್ ನಾಯಕ ರಾಹುಲ್‌ ಸಾರ್ವಜನಿಕವಾಗಿ ತನ್ನನ್ನು ತಾನು ಪ್ರದರ್ಶಿಸಿಕೊಳ್ಳುವುದಿಲ್ಲ” ಎಂದಿದ್ದಾರೆ.

“ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಮತ್ತು ಅದಕ್ಕೆ ವೈಜ್ಞಾನಿಕ ಕಾರಣವಿದೆ (ಭೂಮಿಯು ಪ್ರದಕ್ಷಿಣಾಕಾರವಾಗಿ ಅಂದರೆ ಗಡಿಯಾರದ ಮುಳ್ಳುಗಳು ಸುತ್ತುವ ರೀತಿ ಚಲಿಸುತ್ತದೆ) ಎಂದು ‘ಚುನಾವಣೆಯ ಹಿಂದೂ’ವಾಗಿರುವ ರಾಹುಲ್ ಗಾಂಧಿಗೆ ತಿಳಿದಿದ್ದರೆ ಅವರು ತಮ್ಮನ್ನು ತಾವು ಚಮತ್ಕಾರಕ್ಕೆ ಒಳಪಡಿಸಿಕೊಳ್ಳುತ್ತಿರಲಿಲ್ಲ… ಸಾರ್ವಜನಿಕವಾಗಿ ಹೀಗೆ…” ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಾರ್ವಜನಿಕರು ತಿರುಗೇಟು ನೀಡಿದ್ದಾರೆ. “ರಾಹುಲ್ ಗಾಂಧಿಯವರು ನಿಜವಾಗಿಯೂ ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡುತ್ತಿದ್ದಾರೆ. ಮಾಳವಿಯಾ ಅವರಿಗೆ ಇದು ಅಪ್ರದಕ್ಷಿಣಾಕಾರವಾಗಿ ಕಾಣುತ್ತದೆ” ಎಂದಿದ್ದಾರೆ.

“ತನ್ನ ಎಡಭಾಗವು ರಾಹುಲ್ ಅವರಿಗೆ ಬಲಭಾಗವಾಗಿರುತ್ತದೆ ಎಂದು ಅಮಿತ್ ಮಾಳವಿಯಾ ಅವರಿಗೆ ತಿಳಿವಳಿಕೆ ಇದ್ದಿದ್ದರೆ, ಅವರು ಸ್ವಯಂ ಮುಜುಗರವನ್ನು ಎದುರಿಸಬೇಕಾಗಿರಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ನನ್ನ ಮೂರುವರೆ ವರ್ಷದ ಮಗುವಿಗೆ ನಿಮಗಿಂತ ಚೆನ್ನಾಗಿ ತಿಳಿವಳಿಕೆ ಇದೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. “ನಿಮ್ಮ ಖಾತೆಯನ್ನು ಡಿಲೀಟ್‌ ಮಾಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ. ನಿಮಗೆ ಇಷ್ಟೂ ತಿಳಿಯದಿದ್ದರೆ, ಆಡಳಿತದ ಬಗ್ಗೆ ನಿಮಗೇನು ತಿಳಿದಿದೆ?” ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿಯವರ ರೀತಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಆರತಿ ಬೆಳಗುತ್ತಿರುವ ವಿಡಿಯೊವನ್ನು ಅಮಿತ್ ಅವರಿಗೆ ಟ್ಯಾಗ್ ಮಾಡಿ ಪತ್ರಕರ್ತ ಮೊಹಮ್ಮದ್ ಜುಬೇರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈವರೆಗೆ ಅಮಿತ್‌ ಅವರ ವಿಡಿಯೊಗಿಂತ, ಜುಬೇರ್‌ ನೀಡಿರುವ ಪ್ರತಿಕ್ರಿಯೆಯೇ ಹೆಚ್ಚು ರೀಟ್ವೀಟ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯವರ ರೀತಿಯಲ್ಲಿಯೇ ಆರತಿ ಮಾಡುವ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಹಂಚಿಕೊಂಡಿದ್ದಾರೆ. “ಅದನ್ನೇ ನೀವು ಮೋದಿಯವರಿಗೆ ಏಕೆ ಹೇಳಬಾರದು?” ಎಂದು ಪ್ರಶ್ನಿಸಿದ್ದಾರೆ.

ಭೂಮಿ ಗಡಿಯಾರದ ರೀತಿ ಸುತ್ತುತ್ತದೆ ಎಂದು ಅಮಿತ್ ಮಾಡಿರುವ ಪ್ರತಿಪಾದನೆಯನ್ನು ಅನೇಕರು ಸರಿಪಡಿಸಿದ್ದಾರೆ. ಉತ್ತರ ಧ್ರುವ ನಕ್ಷತ್ರವಾದ ಪೊಲಾರಿಸ್‌ನಿಂದ ನೋಡಿದಾಗ ಭೂಮಿಯು ಅಪ್ರದಕ್ಷಿಣಾಕಾರವಾಗಿ ತಿರುಗುತ್ತದೆ ಎಂದು ತಿಳಿಸಿದ್ದಾರೆ.

“ಅಮಿತ್ ಅವರಿಗೆ ಸಾಮಾನ್ಯ ವಿಜ್ಞಾನದ ಅರಿವೂ ಇಲ್ಲ. ಇವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರೂ ಚುನಾವಣೆ ಹಿಂದೂ” ಎಂದಿದ್ದಾರೆ. ಜೊತೆಗೆ ಮೋದಿಯವರು ತೊಟ್ಟಿಲು ತೂಗುವ ರೀತಿಯಲ್ಲಿ ಆರತಿ ಬೆಳಗುತ್ತಿರುವ ವಿಡಿಯೊ ವೈರಲ್ ಆಗುತ್ತಿದೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ತಲೆಕೆಳಗಾದ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರಿಂದ ಟೀಕೆಗೆ ಗುರಿಯಾಗಿದ್ದಾರೆ. ಯೂತ್ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪ್ರತಿಕ್ರಿಯಿಸಿ, 2014ರ ಹಿಂದೆ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ಸ್ಮೃತಿಯವರು ಮಾಡಿದ್ದ ಹೋರಾಟದ ಫೋಟೋವನ್ನು ಟ್ಯಾಗ್ ಮಾಡಿದ್ದಾರೆ.

“ರಾಹುಲ್‌‌ ಪ್ರದಕ್ಷಿಣಾಕಾರವಾಗಿ ಆರತಿ ಮಾಡುತ್ತಿದ್ದಾರೆ. ನೀವು ಇನ್ನೊಂದು ಕಡೆಯಿಂದ ನೋಡುತ್ತಿದ್ದೀರಿ. ಪ್ರತಿ ದೇವಸ್ಥಾನದಲ್ಲಿಯೂ ಇದೇ ರೀತಿ ಆರತಿ ಮಾಡಲಾಗುತ್ತದೆ. ರಾಹುಲ್‌ ಮಾಡುವ ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ನಿಲ್ಲಿಸಿ ಮತ್ತು ನಿಮ್ಮ ಮೇಲಧಿಕಾರಿಗಳಿಂದ ಹೊಸ ಉದ್ಯೋಗ ವಿವರಣೆಯನ್ನು ಪಡೆಯಿರಿ. ಅವರನ್ನು ಸದಾ ಟ್ರೋಲ್ ಮಾಡುವುದಕ್ಕೆ ಬೇಸರವಿಲ್ಲವೇ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....