Homeಮುಖಪುಟರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಶುಕ್ರವಾರ ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ‘ಮಾ ನರ್ಮದಾ’ ಆರತಿ ನೆರವೇರಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಧ್ಯಪ್ರದೇಶದ ಪ್ರಸಿದ್ಧ ಶಿವ ದೇವಾಲಯಕ್ಕೆ ಭೇಟಿ ನೀಡಿದಾಗ ಗಡಿಯಾರ ಚಲಿಸುವ ದಿಕ್ಕಿಗೆ (ಪ್ರದಕ್ಷಿಣಾಕಾರಕ್ಕೆ) ವಿರುದ್ಧವಾಗಿ ಆರತಿ ಮಾಡಿದರು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.

ರಾಹುಲ್ ಅವರ 4 ಸೆಕೆಂಡ್‌ಗಳ ಕ್ಲಿಪ್ ಅನ್ನು ಹಂಚಿಕೊಂಡ ಮಾಳವಿಯಾ, “ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಎಂದು ತಿಳಿದಿದ್ದರೆ ಕಾಂಗ್ರೆಸ್ ನಾಯಕ ರಾಹುಲ್‌ ಸಾರ್ವಜನಿಕವಾಗಿ ತನ್ನನ್ನು ತಾನು ಪ್ರದರ್ಶಿಸಿಕೊಳ್ಳುವುದಿಲ್ಲ” ಎಂದಿದ್ದಾರೆ.

“ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಮತ್ತು ಅದಕ್ಕೆ ವೈಜ್ಞಾನಿಕ ಕಾರಣವಿದೆ (ಭೂಮಿಯು ಪ್ರದಕ್ಷಿಣಾಕಾರವಾಗಿ ಅಂದರೆ ಗಡಿಯಾರದ ಮುಳ್ಳುಗಳು ಸುತ್ತುವ ರೀತಿ ಚಲಿಸುತ್ತದೆ) ಎಂದು ‘ಚುನಾವಣೆಯ ಹಿಂದೂ’ವಾಗಿರುವ ರಾಹುಲ್ ಗಾಂಧಿಗೆ ತಿಳಿದಿದ್ದರೆ ಅವರು ತಮ್ಮನ್ನು ತಾವು ಚಮತ್ಕಾರಕ್ಕೆ ಒಳಪಡಿಸಿಕೊಳ್ಳುತ್ತಿರಲಿಲ್ಲ… ಸಾರ್ವಜನಿಕವಾಗಿ ಹೀಗೆ…” ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಾರ್ವಜನಿಕರು ತಿರುಗೇಟು ನೀಡಿದ್ದಾರೆ. “ರಾಹುಲ್ ಗಾಂಧಿಯವರು ನಿಜವಾಗಿಯೂ ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡುತ್ತಿದ್ದಾರೆ. ಮಾಳವಿಯಾ ಅವರಿಗೆ ಇದು ಅಪ್ರದಕ್ಷಿಣಾಕಾರವಾಗಿ ಕಾಣುತ್ತದೆ” ಎಂದಿದ್ದಾರೆ.

“ತನ್ನ ಎಡಭಾಗವು ರಾಹುಲ್ ಅವರಿಗೆ ಬಲಭಾಗವಾಗಿರುತ್ತದೆ ಎಂದು ಅಮಿತ್ ಮಾಳವಿಯಾ ಅವರಿಗೆ ತಿಳಿವಳಿಕೆ ಇದ್ದಿದ್ದರೆ, ಅವರು ಸ್ವಯಂ ಮುಜುಗರವನ್ನು ಎದುರಿಸಬೇಕಾಗಿರಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ನನ್ನ ಮೂರುವರೆ ವರ್ಷದ ಮಗುವಿಗೆ ನಿಮಗಿಂತ ಚೆನ್ನಾಗಿ ತಿಳಿವಳಿಕೆ ಇದೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. “ನಿಮ್ಮ ಖಾತೆಯನ್ನು ಡಿಲೀಟ್‌ ಮಾಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ. ನಿಮಗೆ ಇಷ್ಟೂ ತಿಳಿಯದಿದ್ದರೆ, ಆಡಳಿತದ ಬಗ್ಗೆ ನಿಮಗೇನು ತಿಳಿದಿದೆ?” ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿಯವರ ರೀತಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಆರತಿ ಬೆಳಗುತ್ತಿರುವ ವಿಡಿಯೊವನ್ನು ಅಮಿತ್ ಅವರಿಗೆ ಟ್ಯಾಗ್ ಮಾಡಿ ಪತ್ರಕರ್ತ ಮೊಹಮ್ಮದ್ ಜುಬೇರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈವರೆಗೆ ಅಮಿತ್‌ ಅವರ ವಿಡಿಯೊಗಿಂತ, ಜುಬೇರ್‌ ನೀಡಿರುವ ಪ್ರತಿಕ್ರಿಯೆಯೇ ಹೆಚ್ಚು ರೀಟ್ವೀಟ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯವರ ರೀತಿಯಲ್ಲಿಯೇ ಆರತಿ ಮಾಡುವ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಹಂಚಿಕೊಂಡಿದ್ದಾರೆ. “ಅದನ್ನೇ ನೀವು ಮೋದಿಯವರಿಗೆ ಏಕೆ ಹೇಳಬಾರದು?” ಎಂದು ಪ್ರಶ್ನಿಸಿದ್ದಾರೆ.

ಭೂಮಿ ಗಡಿಯಾರದ ರೀತಿ ಸುತ್ತುತ್ತದೆ ಎಂದು ಅಮಿತ್ ಮಾಡಿರುವ ಪ್ರತಿಪಾದನೆಯನ್ನು ಅನೇಕರು ಸರಿಪಡಿಸಿದ್ದಾರೆ. ಉತ್ತರ ಧ್ರುವ ನಕ್ಷತ್ರವಾದ ಪೊಲಾರಿಸ್‌ನಿಂದ ನೋಡಿದಾಗ ಭೂಮಿಯು ಅಪ್ರದಕ್ಷಿಣಾಕಾರವಾಗಿ ತಿರುಗುತ್ತದೆ ಎಂದು ತಿಳಿಸಿದ್ದಾರೆ.

“ಅಮಿತ್ ಅವರಿಗೆ ಸಾಮಾನ್ಯ ವಿಜ್ಞಾನದ ಅರಿವೂ ಇಲ್ಲ. ಇವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರೂ ಚುನಾವಣೆ ಹಿಂದೂ” ಎಂದಿದ್ದಾರೆ. ಜೊತೆಗೆ ಮೋದಿಯವರು ತೊಟ್ಟಿಲು ತೂಗುವ ರೀತಿಯಲ್ಲಿ ಆರತಿ ಬೆಳಗುತ್ತಿರುವ ವಿಡಿಯೊ ವೈರಲ್ ಆಗುತ್ತಿದೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ತಲೆಕೆಳಗಾದ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರಿಂದ ಟೀಕೆಗೆ ಗುರಿಯಾಗಿದ್ದಾರೆ. ಯೂತ್ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪ್ರತಿಕ್ರಿಯಿಸಿ, 2014ರ ಹಿಂದೆ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ಸ್ಮೃತಿಯವರು ಮಾಡಿದ್ದ ಹೋರಾಟದ ಫೋಟೋವನ್ನು ಟ್ಯಾಗ್ ಮಾಡಿದ್ದಾರೆ.

“ರಾಹುಲ್‌‌ ಪ್ರದಕ್ಷಿಣಾಕಾರವಾಗಿ ಆರತಿ ಮಾಡುತ್ತಿದ್ದಾರೆ. ನೀವು ಇನ್ನೊಂದು ಕಡೆಯಿಂದ ನೋಡುತ್ತಿದ್ದೀರಿ. ಪ್ರತಿ ದೇವಸ್ಥಾನದಲ್ಲಿಯೂ ಇದೇ ರೀತಿ ಆರತಿ ಮಾಡಲಾಗುತ್ತದೆ. ರಾಹುಲ್‌ ಮಾಡುವ ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ನಿಲ್ಲಿಸಿ ಮತ್ತು ನಿಮ್ಮ ಮೇಲಧಿಕಾರಿಗಳಿಂದ ಹೊಸ ಉದ್ಯೋಗ ವಿವರಣೆಯನ್ನು ಪಡೆಯಿರಿ. ಅವರನ್ನು ಸದಾ ಟ್ರೋಲ್ ಮಾಡುವುದಕ್ಕೆ ಬೇಸರವಿಲ್ಲವೇ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...