Homeಕರ್ನಾಟಕನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ಶಾಸಕ, ಸಚಿವ ಸೇರಿದಂತೆ ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ, ಆದರೆ ನನ್ನನ್ನು ದೇವಸ್ಥಾನದ ಒಳಗೆ ಸೇರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಾನು ವಿದೇಶ ಸುತ್ತಿ ಬಂದಿದ್ದೇನೆ, ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಉಪಮುಖ್ಯಮಂತ್ರಿಯಾಗಿದ್ದೇನೆ, ಆದರೆ ದಲಿತ ಎಂಬ ಕಾರಣಕ್ಕೆ ನನ್ನನ್ನು ದೇವಸ್ಥಾನದ ಒಳಗಡೆ ಸೇರಿಸುವುದಿಲ್ಲ ಕಾಂಗ್ರೆಸ್ ಶಾಸಕ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌‌ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್‌‌ ಜಯಂತಿಯಲ್ಲಿ ಅವರು ಮಾತನಾಡುತ್ತಿದ್ದರು.

ಕೊರಟಗೆರೆಯ ಪಟ್ಟಣ ಪಂಚಾಯಿತಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹಲವು ದೇಶಗಳನ್ನು ಸುತ್ತಿ ಬಂದಿದ್ದೇನೆ. ಆದರೆ ದಲಿತ ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಸೇರಿಸಲಿಲ್ಲ. ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ. ಆದರೆ ನನ್ನನ್ನು ದೇವಸ್ಥಾನಕ್ಕೆ ಸೇರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ದೇವಸ್ಥಾನಕ್ಕೆ ಹೋದಾಗ ಹೊರಗಡೆಯೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ, ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಪರಮೇಶ್ವರ್‌ ಅವರು ಹೇಳಿದ್ದಾರೆ.

“ದೇವಸ್ಥಾನಕ್ಕೆ ಹೋದಾಗ ‘ಸ್ವಲ್ಪ ಅಲ್ಲೇ ನಿಲ್ಲಿ’ ಎಂದು ಹೇಳಿ ಅಲ್ಲೇ ಮಂಗಳಾರತಿ ತಂದು ಬಿಡುತ್ತಾರೆ. ಮಂಗಳಾರತಿಯನ್ನು ನನ್ನ ಬಳಿಯೆ ತರುತ್ತಾರೆ. ನಾನು ದೇವರ ಬಳಿ ಹೋಗಿ ಮಂಗಳಾರತಿ ತೆಗೆದುಕೊಳ್ಳುವ ಹಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ಇವನು ಒಳಗೆ ಬಂದುಬಿಡುತ್ತಾನೆ ಎಂದು ಮಂಗಳಾರತಿಯನ್ನು ಈಚೆಗೆ ಹಿಡಿದುಕೊಂಡು ಓಡಿ ಬರುತ್ತಾರೆ. ಈ ರೀತಿಯಾಗಿ ಇನ್ನೂ ಸಮಾಜದಲ್ಲಿ ನಡೆಯುತ್ತಿದೆ. ಈ ಪರಿಸ್ಥಿತಿಗೆ ನಾವು ಏನು ಹೇಳಬೇಕು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಜಾತಿಯ ಭೂತ ಸಚಿವ, ಉಪ ಮುಖ್ಯಮಂತ್ರಿಗೆ ಬಿಟ್ಟಿಲ್ಲ ಎಂದರೆ ಇನ್ನು ಸಾಮಾನ್ಯರ ಪಾಡು ಹೇಗಿರಬಹುದು. ಸಮುದಾಯದ ನಾಯಕರು, ಯುವಕರು ಇದನ್ನು ಅರಿತುಕೊಳ್ಳಬೇಕು. ಕೋಮುವಾದಿ ಪಕ್ಷಗಳಿಂದ ದೂರ ಇರಬೇಕು. ಅಂದಹಾಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ್ದು ಯಾವಾಗ, ಎಲ್ಲಿ ಎಂಬ ಮಾಹಿತಿ ಇದ್ದರೆ ಸುದ್ದಿ ಪೂರ್ಣವಾಗುತ್ತಿದ್ದು…

  2. ಅಚ್ಚರಿ ಹುಟ್ಟಿಸುವ ಸಂಗತಿ

    ಈ ಸುದ್ದಿ ನಿಜವೇ ಅಥವಾ ಸುಳ್ಳು ಆಗಿರಬಹುದೇ…

    ನಿಜವಾಗಿರುವ ಸಾಧ್ಯತೆ ಕಡಿಮೆ ಎನ್ನುವುದೇ ನನ್ನ ನಂಬಿಕೆ….

  3. ಸರ್ ಒಮ್ಮೆ ಯೋಚಿಸಿ ನಿಮ್ಮಗಳ ಪರಿಸ್ಥಿತಿ ಹೀಗಿರುವಾಗ ಜನ ಸಾಮಾನ್ಯರ ಗತಿ ಏನು…? ಈ ದೇಶಕ್ಕೆ ಸಂವಿಧಾನವಿದ್ದು ಹೀಗಿರುವಾಗ ಬಾಬಾ ಸಾಹೇಬರು ಅಂದು ಅನುಭವಿಸಿದ ನೋವು ಉಹಿಸಿಕೊಂಡರೆ ಭಯವಾಗುತ್ತದೆ.
    ಇವಾಗಾದರು ಈ ಅಸ್ಪೃಶ್ಯತೆಯ ಪಿಡುಗು ತೊಲಗಲಿ ನಿಮ್ಮಂತಹವರು ಇದರ ವಿರುಧ್ದ ಧ್ವನಿ ಎತ್ತಿ ಧ್ವನಿ ಇಲ್ಲದವರಿಗೆ ಧ್ವನಿಯಾದರೆ ಅದೆ ನಮ್ಮ ಬಾಬಾ ಸಾಹೇಬರಿಗೆ ಅರ್ಪಿಸುವ ಕೊಡುಗೆ.

  4. ನಿಮ್ಮಂಥ ತಿಳುವಳಿಕೆ ಇರೋರು ರಾಜಕೀಯ ಶಕ್ತಿ ಇರೋರಿಗೆ ಈ ರೀತಿಯ ಅಪಮಾನ ಮಾಡುತ್ತಾರೆ ಎಂದರೆ ಸಾಮಾನ್ಯ ದಲಿತ ವರ್ಗದ ಜನರು ಬದುಕು ಹೇಗೆ ಇರಬೇಕು ಯೋಚಿಸಿ.

    ತಾವು ಬಲವಂತವಾಗಿ ಮಂದಿರ ಪ್ರವೇಶ ಮಾಡಬೇಕಿತ್ತು ಎಂಬುದು ನನ್ನ ಅನಿಸಿಕೆ.

    ದಲಿತರು ಮಂದಿರಕ್ಕೆ ಹೋದರೆ ಅವಮಾನ /ಅಪಮಾನ ಆಗುತ್ತೆ ಆಂತ ಗೊತ್ತಿದ್ರೆ ಆ ಮಂದಿರಕ್ಕೆ ಯಾಕೆ ನಾವು ಹೋಗ್ಬೇಕು?

  5. ನಿಮ್ಮ ಸಮಾಜ ಬಾಂಧವರು ಇಂತಹ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅಂಧ ಭಕ್ತರಾಗಿದ್ದಾರ

  6. ಸ್ವತಃ ಯಾದಗಿರಿ ಜಿಲ್ಲಾಧಿಕಾರಿ ರಾಗಪ್ರೀಯ ಮೇಡಂ ದಲಿತರಿಗೆ ದೇವಸ್ಥಾನದ ಒಳಗೆ ಪ್ರವೇಶಿಸಲು ಅನುಮತಿ ನೀಡಲು ಆದೇಶ ನೀಡಿದ್ದರು. ಇಂದು ಸಹ ದಲಿತರಿಗೆ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಗಳನ್ನು ಹೊರತುಪಡಿಸಿ ಉಳಿದ ದೇವಾಲಯಗಳಿಗೆ ಅನುಮತಿ ಇಲ್ಲ ಸರ್. ಸ್ವತಃ ಪತ್ರಿಕೋದ್ಯಮದಲ್ಲಿ ಇರುವ ನನಗೆ ದೇವಸ್ಥಾನದ ಪ್ರವೇಶ ಮಾಡಲು ಬಿಡಲಿಲ್ಲ. ಊರಿನವರ ಎದುರು ಹಾಕಿಕೊಂಡು ಬಾಳಲು ಸಾಧ್ಯವಿಲ್ಲ ಎಂದು ದೇವಸ್ಥಾನಗಳಿಗೆ ಹೋಗುವುದು ಬಿಟ್ಟಿದ್ದೇನೆ.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...