Homeಕರ್ನಾಟಕನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ಶಾಸಕ, ಸಚಿವ ಸೇರಿದಂತೆ ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ, ಆದರೆ ನನ್ನನ್ನು ದೇವಸ್ಥಾನದ ಒಳಗೆ ಸೇರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಾನು ವಿದೇಶ ಸುತ್ತಿ ಬಂದಿದ್ದೇನೆ, ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಉಪಮುಖ್ಯಮಂತ್ರಿಯಾಗಿದ್ದೇನೆ, ಆದರೆ ದಲಿತ ಎಂಬ ಕಾರಣಕ್ಕೆ ನನ್ನನ್ನು ದೇವಸ್ಥಾನದ ಒಳಗಡೆ ಸೇರಿಸುವುದಿಲ್ಲ ಕಾಂಗ್ರೆಸ್ ಶಾಸಕ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌‌ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್‌‌ ಜಯಂತಿಯಲ್ಲಿ ಅವರು ಮಾತನಾಡುತ್ತಿದ್ದರು.

ಕೊರಟಗೆರೆಯ ಪಟ್ಟಣ ಪಂಚಾಯಿತಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹಲವು ದೇಶಗಳನ್ನು ಸುತ್ತಿ ಬಂದಿದ್ದೇನೆ. ಆದರೆ ದಲಿತ ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಸೇರಿಸಲಿಲ್ಲ. ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ. ಆದರೆ ನನ್ನನ್ನು ದೇವಸ್ಥಾನಕ್ಕೆ ಸೇರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ದೇವಸ್ಥಾನಕ್ಕೆ ಹೋದಾಗ ಹೊರಗಡೆಯೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ, ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಪರಮೇಶ್ವರ್‌ ಅವರು ಹೇಳಿದ್ದಾರೆ.

“ದೇವಸ್ಥಾನಕ್ಕೆ ಹೋದಾಗ ‘ಸ್ವಲ್ಪ ಅಲ್ಲೇ ನಿಲ್ಲಿ’ ಎಂದು ಹೇಳಿ ಅಲ್ಲೇ ಮಂಗಳಾರತಿ ತಂದು ಬಿಡುತ್ತಾರೆ. ಮಂಗಳಾರತಿಯನ್ನು ನನ್ನ ಬಳಿಯೆ ತರುತ್ತಾರೆ. ನಾನು ದೇವರ ಬಳಿ ಹೋಗಿ ಮಂಗಳಾರತಿ ತೆಗೆದುಕೊಳ್ಳುವ ಹಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ಇವನು ಒಳಗೆ ಬಂದುಬಿಡುತ್ತಾನೆ ಎಂದು ಮಂಗಳಾರತಿಯನ್ನು ಈಚೆಗೆ ಹಿಡಿದುಕೊಂಡು ಓಡಿ ಬರುತ್ತಾರೆ. ಈ ರೀತಿಯಾಗಿ ಇನ್ನೂ ಸಮಾಜದಲ್ಲಿ ನಡೆಯುತ್ತಿದೆ. ಈ ಪರಿಸ್ಥಿತಿಗೆ ನಾವು ಏನು ಹೇಳಬೇಕು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಜಾತಿಯ ಭೂತ ಸಚಿವ, ಉಪ ಮುಖ್ಯಮಂತ್ರಿಗೆ ಬಿಟ್ಟಿಲ್ಲ ಎಂದರೆ ಇನ್ನು ಸಾಮಾನ್ಯರ ಪಾಡು ಹೇಗಿರಬಹುದು. ಸಮುದಾಯದ ನಾಯಕರು, ಯುವಕರು ಇದನ್ನು ಅರಿತುಕೊಳ್ಳಬೇಕು. ಕೋಮುವಾದಿ ಪಕ್ಷಗಳಿಂದ ದೂರ ಇರಬೇಕು. ಅಂದಹಾಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ್ದು ಯಾವಾಗ, ಎಲ್ಲಿ ಎಂಬ ಮಾಹಿತಿ ಇದ್ದರೆ ಸುದ್ದಿ ಪೂರ್ಣವಾಗುತ್ತಿದ್ದು…

  2. ಅಚ್ಚರಿ ಹುಟ್ಟಿಸುವ ಸಂಗತಿ

    ಈ ಸುದ್ದಿ ನಿಜವೇ ಅಥವಾ ಸುಳ್ಳು ಆಗಿರಬಹುದೇ…

    ನಿಜವಾಗಿರುವ ಸಾಧ್ಯತೆ ಕಡಿಮೆ ಎನ್ನುವುದೇ ನನ್ನ ನಂಬಿಕೆ….

  3. ಸರ್ ಒಮ್ಮೆ ಯೋಚಿಸಿ ನಿಮ್ಮಗಳ ಪರಿಸ್ಥಿತಿ ಹೀಗಿರುವಾಗ ಜನ ಸಾಮಾನ್ಯರ ಗತಿ ಏನು…? ಈ ದೇಶಕ್ಕೆ ಸಂವಿಧಾನವಿದ್ದು ಹೀಗಿರುವಾಗ ಬಾಬಾ ಸಾಹೇಬರು ಅಂದು ಅನುಭವಿಸಿದ ನೋವು ಉಹಿಸಿಕೊಂಡರೆ ಭಯವಾಗುತ್ತದೆ.
    ಇವಾಗಾದರು ಈ ಅಸ್ಪೃಶ್ಯತೆಯ ಪಿಡುಗು ತೊಲಗಲಿ ನಿಮ್ಮಂತಹವರು ಇದರ ವಿರುಧ್ದ ಧ್ವನಿ ಎತ್ತಿ ಧ್ವನಿ ಇಲ್ಲದವರಿಗೆ ಧ್ವನಿಯಾದರೆ ಅದೆ ನಮ್ಮ ಬಾಬಾ ಸಾಹೇಬರಿಗೆ ಅರ್ಪಿಸುವ ಕೊಡುಗೆ.

  4. ನಿಮ್ಮಂಥ ತಿಳುವಳಿಕೆ ಇರೋರು ರಾಜಕೀಯ ಶಕ್ತಿ ಇರೋರಿಗೆ ಈ ರೀತಿಯ ಅಪಮಾನ ಮಾಡುತ್ತಾರೆ ಎಂದರೆ ಸಾಮಾನ್ಯ ದಲಿತ ವರ್ಗದ ಜನರು ಬದುಕು ಹೇಗೆ ಇರಬೇಕು ಯೋಚಿಸಿ.

    ತಾವು ಬಲವಂತವಾಗಿ ಮಂದಿರ ಪ್ರವೇಶ ಮಾಡಬೇಕಿತ್ತು ಎಂಬುದು ನನ್ನ ಅನಿಸಿಕೆ.

    ದಲಿತರು ಮಂದಿರಕ್ಕೆ ಹೋದರೆ ಅವಮಾನ /ಅಪಮಾನ ಆಗುತ್ತೆ ಆಂತ ಗೊತ್ತಿದ್ರೆ ಆ ಮಂದಿರಕ್ಕೆ ಯಾಕೆ ನಾವು ಹೋಗ್ಬೇಕು?

  5. ನಿಮ್ಮ ಸಮಾಜ ಬಾಂಧವರು ಇಂತಹ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅಂಧ ಭಕ್ತರಾಗಿದ್ದಾರ

  6. ಸ್ವತಃ ಯಾದಗಿರಿ ಜಿಲ್ಲಾಧಿಕಾರಿ ರಾಗಪ್ರೀಯ ಮೇಡಂ ದಲಿತರಿಗೆ ದೇವಸ್ಥಾನದ ಒಳಗೆ ಪ್ರವೇಶಿಸಲು ಅನುಮತಿ ನೀಡಲು ಆದೇಶ ನೀಡಿದ್ದರು. ಇಂದು ಸಹ ದಲಿತರಿಗೆ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಗಳನ್ನು ಹೊರತುಪಡಿಸಿ ಉಳಿದ ದೇವಾಲಯಗಳಿಗೆ ಅನುಮತಿ ಇಲ್ಲ ಸರ್. ಸ್ವತಃ ಪತ್ರಿಕೋದ್ಯಮದಲ್ಲಿ ಇರುವ ನನಗೆ ದೇವಸ್ಥಾನದ ಪ್ರವೇಶ ಮಾಡಲು ಬಿಡಲಿಲ್ಲ. ಊರಿನವರ ಎದುರು ಹಾಕಿಕೊಂಡು ಬಾಳಲು ಸಾಧ್ಯವಿಲ್ಲ ಎಂದು ದೇವಸ್ಥಾನಗಳಿಗೆ ಹೋಗುವುದು ಬಿಟ್ಟಿದ್ದೇನೆ.

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...