Homeಕರ್ನಾಟಕನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ಶಾಸಕ, ಸಚಿವ ಸೇರಿದಂತೆ ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ, ಆದರೆ ನನ್ನನ್ನು ದೇವಸ್ಥಾನದ ಒಳಗೆ ಸೇರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಾನು ವಿದೇಶ ಸುತ್ತಿ ಬಂದಿದ್ದೇನೆ, ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಉಪಮುಖ್ಯಮಂತ್ರಿಯಾಗಿದ್ದೇನೆ, ಆದರೆ ದಲಿತ ಎಂಬ ಕಾರಣಕ್ಕೆ ನನ್ನನ್ನು ದೇವಸ್ಥಾನದ ಒಳಗಡೆ ಸೇರಿಸುವುದಿಲ್ಲ ಕಾಂಗ್ರೆಸ್ ಶಾಸಕ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌‌ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್‌‌ ಜಯಂತಿಯಲ್ಲಿ ಅವರು ಮಾತನಾಡುತ್ತಿದ್ದರು.

ಕೊರಟಗೆರೆಯ ಪಟ್ಟಣ ಪಂಚಾಯಿತಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹಲವು ದೇಶಗಳನ್ನು ಸುತ್ತಿ ಬಂದಿದ್ದೇನೆ. ಆದರೆ ದಲಿತ ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಸೇರಿಸಲಿಲ್ಲ. ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ. ಆದರೆ ನನ್ನನ್ನು ದೇವಸ್ಥಾನಕ್ಕೆ ಸೇರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ದೇವಸ್ಥಾನಕ್ಕೆ ಹೋದಾಗ ಹೊರಗಡೆಯೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ, ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಪರಮೇಶ್ವರ್‌ ಅವರು ಹೇಳಿದ್ದಾರೆ.

“ದೇವಸ್ಥಾನಕ್ಕೆ ಹೋದಾಗ ‘ಸ್ವಲ್ಪ ಅಲ್ಲೇ ನಿಲ್ಲಿ’ ಎಂದು ಹೇಳಿ ಅಲ್ಲೇ ಮಂಗಳಾರತಿ ತಂದು ಬಿಡುತ್ತಾರೆ. ಮಂಗಳಾರತಿಯನ್ನು ನನ್ನ ಬಳಿಯೆ ತರುತ್ತಾರೆ. ನಾನು ದೇವರ ಬಳಿ ಹೋಗಿ ಮಂಗಳಾರತಿ ತೆಗೆದುಕೊಳ್ಳುವ ಹಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ಇವನು ಒಳಗೆ ಬಂದುಬಿಡುತ್ತಾನೆ ಎಂದು ಮಂಗಳಾರತಿಯನ್ನು ಈಚೆಗೆ ಹಿಡಿದುಕೊಂಡು ಓಡಿ ಬರುತ್ತಾರೆ. ಈ ರೀತಿಯಾಗಿ ಇನ್ನೂ ಸಮಾಜದಲ್ಲಿ ನಡೆಯುತ್ತಿದೆ. ಈ ಪರಿಸ್ಥಿತಿಗೆ ನಾವು ಏನು ಹೇಳಬೇಕು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಜಾತಿಯ ಭೂತ ಸಚಿವ, ಉಪ ಮುಖ್ಯಮಂತ್ರಿಗೆ ಬಿಟ್ಟಿಲ್ಲ ಎಂದರೆ ಇನ್ನು ಸಾಮಾನ್ಯರ ಪಾಡು ಹೇಗಿರಬಹುದು. ಸಮುದಾಯದ ನಾಯಕರು, ಯುವಕರು ಇದನ್ನು ಅರಿತುಕೊಳ್ಳಬೇಕು. ಕೋಮುವಾದಿ ಪಕ್ಷಗಳಿಂದ ದೂರ ಇರಬೇಕು. ಅಂದಹಾಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ್ದು ಯಾವಾಗ, ಎಲ್ಲಿ ಎಂಬ ಮಾಹಿತಿ ಇದ್ದರೆ ಸುದ್ದಿ ಪೂರ್ಣವಾಗುತ್ತಿದ್ದು…

  2. ಅಚ್ಚರಿ ಹುಟ್ಟಿಸುವ ಸಂಗತಿ

    ಈ ಸುದ್ದಿ ನಿಜವೇ ಅಥವಾ ಸುಳ್ಳು ಆಗಿರಬಹುದೇ…

    ನಿಜವಾಗಿರುವ ಸಾಧ್ಯತೆ ಕಡಿಮೆ ಎನ್ನುವುದೇ ನನ್ನ ನಂಬಿಕೆ….

  3. ಸರ್ ಒಮ್ಮೆ ಯೋಚಿಸಿ ನಿಮ್ಮಗಳ ಪರಿಸ್ಥಿತಿ ಹೀಗಿರುವಾಗ ಜನ ಸಾಮಾನ್ಯರ ಗತಿ ಏನು…? ಈ ದೇಶಕ್ಕೆ ಸಂವಿಧಾನವಿದ್ದು ಹೀಗಿರುವಾಗ ಬಾಬಾ ಸಾಹೇಬರು ಅಂದು ಅನುಭವಿಸಿದ ನೋವು ಉಹಿಸಿಕೊಂಡರೆ ಭಯವಾಗುತ್ತದೆ.
    ಇವಾಗಾದರು ಈ ಅಸ್ಪೃಶ್ಯತೆಯ ಪಿಡುಗು ತೊಲಗಲಿ ನಿಮ್ಮಂತಹವರು ಇದರ ವಿರುಧ್ದ ಧ್ವನಿ ಎತ್ತಿ ಧ್ವನಿ ಇಲ್ಲದವರಿಗೆ ಧ್ವನಿಯಾದರೆ ಅದೆ ನಮ್ಮ ಬಾಬಾ ಸಾಹೇಬರಿಗೆ ಅರ್ಪಿಸುವ ಕೊಡುಗೆ.

  4. ನಿಮ್ಮಂಥ ತಿಳುವಳಿಕೆ ಇರೋರು ರಾಜಕೀಯ ಶಕ್ತಿ ಇರೋರಿಗೆ ಈ ರೀತಿಯ ಅಪಮಾನ ಮಾಡುತ್ತಾರೆ ಎಂದರೆ ಸಾಮಾನ್ಯ ದಲಿತ ವರ್ಗದ ಜನರು ಬದುಕು ಹೇಗೆ ಇರಬೇಕು ಯೋಚಿಸಿ.

    ತಾವು ಬಲವಂತವಾಗಿ ಮಂದಿರ ಪ್ರವೇಶ ಮಾಡಬೇಕಿತ್ತು ಎಂಬುದು ನನ್ನ ಅನಿಸಿಕೆ.

    ದಲಿತರು ಮಂದಿರಕ್ಕೆ ಹೋದರೆ ಅವಮಾನ /ಅಪಮಾನ ಆಗುತ್ತೆ ಆಂತ ಗೊತ್ತಿದ್ರೆ ಆ ಮಂದಿರಕ್ಕೆ ಯಾಕೆ ನಾವು ಹೋಗ್ಬೇಕು?

  5. ನಿಮ್ಮ ಸಮಾಜ ಬಾಂಧವರು ಇಂತಹ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅಂಧ ಭಕ್ತರಾಗಿದ್ದಾರ

  6. ಸ್ವತಃ ಯಾದಗಿರಿ ಜಿಲ್ಲಾಧಿಕಾರಿ ರಾಗಪ್ರೀಯ ಮೇಡಂ ದಲಿತರಿಗೆ ದೇವಸ್ಥಾನದ ಒಳಗೆ ಪ್ರವೇಶಿಸಲು ಅನುಮತಿ ನೀಡಲು ಆದೇಶ ನೀಡಿದ್ದರು. ಇಂದು ಸಹ ದಲಿತರಿಗೆ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಗಳನ್ನು ಹೊರತುಪಡಿಸಿ ಉಳಿದ ದೇವಾಲಯಗಳಿಗೆ ಅನುಮತಿ ಇಲ್ಲ ಸರ್. ಸ್ವತಃ ಪತ್ರಿಕೋದ್ಯಮದಲ್ಲಿ ಇರುವ ನನಗೆ ದೇವಸ್ಥಾನದ ಪ್ರವೇಶ ಮಾಡಲು ಬಿಡಲಿಲ್ಲ. ಊರಿನವರ ಎದುರು ಹಾಕಿಕೊಂಡು ಬಾಳಲು ಸಾಧ್ಯವಿಲ್ಲ ಎಂದು ದೇವಸ್ಥಾನಗಳಿಗೆ ಹೋಗುವುದು ಬಿಟ್ಟಿದ್ದೇನೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...