Homeಕರ್ನಾಟಕನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ಶಾಸಕ, ಸಚಿವ ಸೇರಿದಂತೆ ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ, ಆದರೆ ನನ್ನನ್ನು ದೇವಸ್ಥಾನದ ಒಳಗೆ ಸೇರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಾನು ವಿದೇಶ ಸುತ್ತಿ ಬಂದಿದ್ದೇನೆ, ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಉಪಮುಖ್ಯಮಂತ್ರಿಯಾಗಿದ್ದೇನೆ, ಆದರೆ ದಲಿತ ಎಂಬ ಕಾರಣಕ್ಕೆ ನನ್ನನ್ನು ದೇವಸ್ಥಾನದ ಒಳಗಡೆ ಸೇರಿಸುವುದಿಲ್ಲ ಕಾಂಗ್ರೆಸ್ ಶಾಸಕ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌‌ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್‌‌ ಜಯಂತಿಯಲ್ಲಿ ಅವರು ಮಾತನಾಡುತ್ತಿದ್ದರು.

ಕೊರಟಗೆರೆಯ ಪಟ್ಟಣ ಪಂಚಾಯಿತಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹಲವು ದೇಶಗಳನ್ನು ಸುತ್ತಿ ಬಂದಿದ್ದೇನೆ. ಆದರೆ ದಲಿತ ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಸೇರಿಸಲಿಲ್ಲ. ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ. ಆದರೆ ನನ್ನನ್ನು ದೇವಸ್ಥಾನಕ್ಕೆ ಸೇರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ದೇವಸ್ಥಾನಕ್ಕೆ ಹೋದಾಗ ಹೊರಗಡೆಯೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ, ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಪರಮೇಶ್ವರ್‌ ಅವರು ಹೇಳಿದ್ದಾರೆ.

“ದೇವಸ್ಥಾನಕ್ಕೆ ಹೋದಾಗ ‘ಸ್ವಲ್ಪ ಅಲ್ಲೇ ನಿಲ್ಲಿ’ ಎಂದು ಹೇಳಿ ಅಲ್ಲೇ ಮಂಗಳಾರತಿ ತಂದು ಬಿಡುತ್ತಾರೆ. ಮಂಗಳಾರತಿಯನ್ನು ನನ್ನ ಬಳಿಯೆ ತರುತ್ತಾರೆ. ನಾನು ದೇವರ ಬಳಿ ಹೋಗಿ ಮಂಗಳಾರತಿ ತೆಗೆದುಕೊಳ್ಳುವ ಹಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ಇವನು ಒಳಗೆ ಬಂದುಬಿಡುತ್ತಾನೆ ಎಂದು ಮಂಗಳಾರತಿಯನ್ನು ಈಚೆಗೆ ಹಿಡಿದುಕೊಂಡು ಓಡಿ ಬರುತ್ತಾರೆ. ಈ ರೀತಿಯಾಗಿ ಇನ್ನೂ ಸಮಾಜದಲ್ಲಿ ನಡೆಯುತ್ತಿದೆ. ಈ ಪರಿಸ್ಥಿತಿಗೆ ನಾವು ಏನು ಹೇಳಬೇಕು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಜಾತಿಯ ಭೂತ ಸಚಿವ, ಉಪ ಮುಖ್ಯಮಂತ್ರಿಗೆ ಬಿಟ್ಟಿಲ್ಲ ಎಂದರೆ ಇನ್ನು ಸಾಮಾನ್ಯರ ಪಾಡು ಹೇಗಿರಬಹುದು. ಸಮುದಾಯದ ನಾಯಕರು, ಯುವಕರು ಇದನ್ನು ಅರಿತುಕೊಳ್ಳಬೇಕು. ಕೋಮುವಾದಿ ಪಕ್ಷಗಳಿಂದ ದೂರ ಇರಬೇಕು. ಅಂದಹಾಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ್ದು ಯಾವಾಗ, ಎಲ್ಲಿ ಎಂಬ ಮಾಹಿತಿ ಇದ್ದರೆ ಸುದ್ದಿ ಪೂರ್ಣವಾಗುತ್ತಿದ್ದು…

  2. ಅಚ್ಚರಿ ಹುಟ್ಟಿಸುವ ಸಂಗತಿ

    ಈ ಸುದ್ದಿ ನಿಜವೇ ಅಥವಾ ಸುಳ್ಳು ಆಗಿರಬಹುದೇ…

    ನಿಜವಾಗಿರುವ ಸಾಧ್ಯತೆ ಕಡಿಮೆ ಎನ್ನುವುದೇ ನನ್ನ ನಂಬಿಕೆ….

  3. ಸರ್ ಒಮ್ಮೆ ಯೋಚಿಸಿ ನಿಮ್ಮಗಳ ಪರಿಸ್ಥಿತಿ ಹೀಗಿರುವಾಗ ಜನ ಸಾಮಾನ್ಯರ ಗತಿ ಏನು…? ಈ ದೇಶಕ್ಕೆ ಸಂವಿಧಾನವಿದ್ದು ಹೀಗಿರುವಾಗ ಬಾಬಾ ಸಾಹೇಬರು ಅಂದು ಅನುಭವಿಸಿದ ನೋವು ಉಹಿಸಿಕೊಂಡರೆ ಭಯವಾಗುತ್ತದೆ.
    ಇವಾಗಾದರು ಈ ಅಸ್ಪೃಶ್ಯತೆಯ ಪಿಡುಗು ತೊಲಗಲಿ ನಿಮ್ಮಂತಹವರು ಇದರ ವಿರುಧ್ದ ಧ್ವನಿ ಎತ್ತಿ ಧ್ವನಿ ಇಲ್ಲದವರಿಗೆ ಧ್ವನಿಯಾದರೆ ಅದೆ ನಮ್ಮ ಬಾಬಾ ಸಾಹೇಬರಿಗೆ ಅರ್ಪಿಸುವ ಕೊಡುಗೆ.

  4. ನಿಮ್ಮಂಥ ತಿಳುವಳಿಕೆ ಇರೋರು ರಾಜಕೀಯ ಶಕ್ತಿ ಇರೋರಿಗೆ ಈ ರೀತಿಯ ಅಪಮಾನ ಮಾಡುತ್ತಾರೆ ಎಂದರೆ ಸಾಮಾನ್ಯ ದಲಿತ ವರ್ಗದ ಜನರು ಬದುಕು ಹೇಗೆ ಇರಬೇಕು ಯೋಚಿಸಿ.

    ತಾವು ಬಲವಂತವಾಗಿ ಮಂದಿರ ಪ್ರವೇಶ ಮಾಡಬೇಕಿತ್ತು ಎಂಬುದು ನನ್ನ ಅನಿಸಿಕೆ.

    ದಲಿತರು ಮಂದಿರಕ್ಕೆ ಹೋದರೆ ಅವಮಾನ /ಅಪಮಾನ ಆಗುತ್ತೆ ಆಂತ ಗೊತ್ತಿದ್ರೆ ಆ ಮಂದಿರಕ್ಕೆ ಯಾಕೆ ನಾವು ಹೋಗ್ಬೇಕು?

  5. ನಿಮ್ಮ ಸಮಾಜ ಬಾಂಧವರು ಇಂತಹ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅಂಧ ಭಕ್ತರಾಗಿದ್ದಾರ

  6. ಸ್ವತಃ ಯಾದಗಿರಿ ಜಿಲ್ಲಾಧಿಕಾರಿ ರಾಗಪ್ರೀಯ ಮೇಡಂ ದಲಿತರಿಗೆ ದೇವಸ್ಥಾನದ ಒಳಗೆ ಪ್ರವೇಶಿಸಲು ಅನುಮತಿ ನೀಡಲು ಆದೇಶ ನೀಡಿದ್ದರು. ಇಂದು ಸಹ ದಲಿತರಿಗೆ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಗಳನ್ನು ಹೊರತುಪಡಿಸಿ ಉಳಿದ ದೇವಾಲಯಗಳಿಗೆ ಅನುಮತಿ ಇಲ್ಲ ಸರ್. ಸ್ವತಃ ಪತ್ರಿಕೋದ್ಯಮದಲ್ಲಿ ಇರುವ ನನಗೆ ದೇವಸ್ಥಾನದ ಪ್ರವೇಶ ಮಾಡಲು ಬಿಡಲಿಲ್ಲ. ಊರಿನವರ ಎದುರು ಹಾಕಿಕೊಂಡು ಬಾಳಲು ಸಾಧ್ಯವಿಲ್ಲ ಎಂದು ದೇವಸ್ಥಾನಗಳಿಗೆ ಹೋಗುವುದು ಬಿಟ್ಟಿದ್ದೇನೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....