Homeಕರ್ನಾಟಕನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ಶಾಸಕ, ಸಚಿವ ಸೇರಿದಂತೆ ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ, ಆದರೆ ನನ್ನನ್ನು ದೇವಸ್ಥಾನದ ಒಳಗೆ ಸೇರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಾನು ವಿದೇಶ ಸುತ್ತಿ ಬಂದಿದ್ದೇನೆ, ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಉಪಮುಖ್ಯಮಂತ್ರಿಯಾಗಿದ್ದೇನೆ, ಆದರೆ ದಲಿತ ಎಂಬ ಕಾರಣಕ್ಕೆ ನನ್ನನ್ನು ದೇವಸ್ಥಾನದ ಒಳಗಡೆ ಸೇರಿಸುವುದಿಲ್ಲ ಕಾಂಗ್ರೆಸ್ ಶಾಸಕ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌‌ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್‌‌ ಜಯಂತಿಯಲ್ಲಿ ಅವರು ಮಾತನಾಡುತ್ತಿದ್ದರು.

ಕೊರಟಗೆರೆಯ ಪಟ್ಟಣ ಪಂಚಾಯಿತಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹಲವು ದೇಶಗಳನ್ನು ಸುತ್ತಿ ಬಂದಿದ್ದೇನೆ. ಆದರೆ ದಲಿತ ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಸೇರಿಸಲಿಲ್ಲ. ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ. ಆದರೆ ನನ್ನನ್ನು ದೇವಸ್ಥಾನಕ್ಕೆ ಸೇರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ದೇವಸ್ಥಾನಕ್ಕೆ ಹೋದಾಗ ಹೊರಗಡೆಯೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ, ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಪರಮೇಶ್ವರ್‌ ಅವರು ಹೇಳಿದ್ದಾರೆ.

“ದೇವಸ್ಥಾನಕ್ಕೆ ಹೋದಾಗ ‘ಸ್ವಲ್ಪ ಅಲ್ಲೇ ನಿಲ್ಲಿ’ ಎಂದು ಹೇಳಿ ಅಲ್ಲೇ ಮಂಗಳಾರತಿ ತಂದು ಬಿಡುತ್ತಾರೆ. ಮಂಗಳಾರತಿಯನ್ನು ನನ್ನ ಬಳಿಯೆ ತರುತ್ತಾರೆ. ನಾನು ದೇವರ ಬಳಿ ಹೋಗಿ ಮಂಗಳಾರತಿ ತೆಗೆದುಕೊಳ್ಳುವ ಹಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ಇವನು ಒಳಗೆ ಬಂದುಬಿಡುತ್ತಾನೆ ಎಂದು ಮಂಗಳಾರತಿಯನ್ನು ಈಚೆಗೆ ಹಿಡಿದುಕೊಂಡು ಓಡಿ ಬರುತ್ತಾರೆ. ಈ ರೀತಿಯಾಗಿ ಇನ್ನೂ ಸಮಾಜದಲ್ಲಿ ನಡೆಯುತ್ತಿದೆ. ಈ ಪರಿಸ್ಥಿತಿಗೆ ನಾವು ಏನು ಹೇಳಬೇಕು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಜಾತಿಯ ಭೂತ ಸಚಿವ, ಉಪ ಮುಖ್ಯಮಂತ್ರಿಗೆ ಬಿಟ್ಟಿಲ್ಲ ಎಂದರೆ ಇನ್ನು ಸಾಮಾನ್ಯರ ಪಾಡು ಹೇಗಿರಬಹುದು. ಸಮುದಾಯದ ನಾಯಕರು, ಯುವಕರು ಇದನ್ನು ಅರಿತುಕೊಳ್ಳಬೇಕು. ಕೋಮುವಾದಿ ಪಕ್ಷಗಳಿಂದ ದೂರ ಇರಬೇಕು. ಅಂದಹಾಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ್ದು ಯಾವಾಗ, ಎಲ್ಲಿ ಎಂಬ ಮಾಹಿತಿ ಇದ್ದರೆ ಸುದ್ದಿ ಪೂರ್ಣವಾಗುತ್ತಿದ್ದು…

  2. ಅಚ್ಚರಿ ಹುಟ್ಟಿಸುವ ಸಂಗತಿ

    ಈ ಸುದ್ದಿ ನಿಜವೇ ಅಥವಾ ಸುಳ್ಳು ಆಗಿರಬಹುದೇ…

    ನಿಜವಾಗಿರುವ ಸಾಧ್ಯತೆ ಕಡಿಮೆ ಎನ್ನುವುದೇ ನನ್ನ ನಂಬಿಕೆ….

  3. ಸರ್ ಒಮ್ಮೆ ಯೋಚಿಸಿ ನಿಮ್ಮಗಳ ಪರಿಸ್ಥಿತಿ ಹೀಗಿರುವಾಗ ಜನ ಸಾಮಾನ್ಯರ ಗತಿ ಏನು…? ಈ ದೇಶಕ್ಕೆ ಸಂವಿಧಾನವಿದ್ದು ಹೀಗಿರುವಾಗ ಬಾಬಾ ಸಾಹೇಬರು ಅಂದು ಅನುಭವಿಸಿದ ನೋವು ಉಹಿಸಿಕೊಂಡರೆ ಭಯವಾಗುತ್ತದೆ.
    ಇವಾಗಾದರು ಈ ಅಸ್ಪೃಶ್ಯತೆಯ ಪಿಡುಗು ತೊಲಗಲಿ ನಿಮ್ಮಂತಹವರು ಇದರ ವಿರುಧ್ದ ಧ್ವನಿ ಎತ್ತಿ ಧ್ವನಿ ಇಲ್ಲದವರಿಗೆ ಧ್ವನಿಯಾದರೆ ಅದೆ ನಮ್ಮ ಬಾಬಾ ಸಾಹೇಬರಿಗೆ ಅರ್ಪಿಸುವ ಕೊಡುಗೆ.

  4. ನಿಮ್ಮಂಥ ತಿಳುವಳಿಕೆ ಇರೋರು ರಾಜಕೀಯ ಶಕ್ತಿ ಇರೋರಿಗೆ ಈ ರೀತಿಯ ಅಪಮಾನ ಮಾಡುತ್ತಾರೆ ಎಂದರೆ ಸಾಮಾನ್ಯ ದಲಿತ ವರ್ಗದ ಜನರು ಬದುಕು ಹೇಗೆ ಇರಬೇಕು ಯೋಚಿಸಿ.

    ತಾವು ಬಲವಂತವಾಗಿ ಮಂದಿರ ಪ್ರವೇಶ ಮಾಡಬೇಕಿತ್ತು ಎಂಬುದು ನನ್ನ ಅನಿಸಿಕೆ.

    ದಲಿತರು ಮಂದಿರಕ್ಕೆ ಹೋದರೆ ಅವಮಾನ /ಅಪಮಾನ ಆಗುತ್ತೆ ಆಂತ ಗೊತ್ತಿದ್ರೆ ಆ ಮಂದಿರಕ್ಕೆ ಯಾಕೆ ನಾವು ಹೋಗ್ಬೇಕು?

  5. ನಿಮ್ಮ ಸಮಾಜ ಬಾಂಧವರು ಇಂತಹ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅಂಧ ಭಕ್ತರಾಗಿದ್ದಾರ

  6. ಸ್ವತಃ ಯಾದಗಿರಿ ಜಿಲ್ಲಾಧಿಕಾರಿ ರಾಗಪ್ರೀಯ ಮೇಡಂ ದಲಿತರಿಗೆ ದೇವಸ್ಥಾನದ ಒಳಗೆ ಪ್ರವೇಶಿಸಲು ಅನುಮತಿ ನೀಡಲು ಆದೇಶ ನೀಡಿದ್ದರು. ಇಂದು ಸಹ ದಲಿತರಿಗೆ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಗಳನ್ನು ಹೊರತುಪಡಿಸಿ ಉಳಿದ ದೇವಾಲಯಗಳಿಗೆ ಅನುಮತಿ ಇಲ್ಲ ಸರ್. ಸ್ವತಃ ಪತ್ರಿಕೋದ್ಯಮದಲ್ಲಿ ಇರುವ ನನಗೆ ದೇವಸ್ಥಾನದ ಪ್ರವೇಶ ಮಾಡಲು ಬಿಡಲಿಲ್ಲ. ಊರಿನವರ ಎದುರು ಹಾಕಿಕೊಂಡು ಬಾಳಲು ಸಾಧ್ಯವಿಲ್ಲ ಎಂದು ದೇವಸ್ಥಾನಗಳಿಗೆ ಹೋಗುವುದು ಬಿಟ್ಟಿದ್ದೇನೆ.

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...