Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂಗವಾಗಿ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು 50 ವರ್ಷಗಳ ಮಟ್ಟಿಗೆ ಅದಾನಿ ಸಮೂಹ ಸಂಸ್ಥೆಗೆ ಒಪ್ಪಿಸಲಾಗಿದೆ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ ಎನ್ನಲಾಗಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದೆ, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ ಎಂದು ತಿಳಿಸಲಾಗಿದೆ.

ಅಧಿಕೃತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗಿದೆ. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದ್ದ ಹೆಸರನ್ನು ಆದಾನಿ ಏರ್‌ಪೋರ್ಟ್ಸ್ ಎಂದು ಸೇರಿಸಿ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಫಲಕಗಳನ್ನು ಬದಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ.

ನೆಟ್ಟಿಗರು ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಹಲವು ಮಂದಿ ಸರ್ಕಾರದ ಕ್ರಮ ಮತ್ತು ನಾಡಿನ ಜನತೆಯನ್ನು ಟೀಕಿಸಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

PC: screenshot@Abdul Muneer

“ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ ಇಂದು ಅಧಿಕೃತವಾಗಿ ನರೇಂದ್ರ ಮೋದಿ ಆಪ್ತ, ಗುಜರಾತ್ ಉದ್ಯಮಿ ಅದಾನಿಗೆ ಹಸ್ತಾಂತರಗೊಂಡಿದೆ. ಹಸ್ತಾಂತರ ಪ್ರಕ್ರಿಯೆ ಸಂದರ್ಭ ಸಾಂಕೇತಿಕ ಚಾವಿ ವಿತರಣೆ ಕಾರ್ಯಕ್ರಮದಲ್ಲಿ ಎಲ್ಲರ ಮುಖದಲ್ಲೂ ಸಂಭ್ರಮ ಮನೆ ಮಾಡಿತ್ತು. ಇನ್ನು ಇದು “ಮಂಗಳೂರು ಅದಾನಿ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ”. ನೀವಿನ್ನು ಕೋಟಿ ಚೆನ್ನಯ್ಯ, ರಾಣಿ ಅಬ್ಬಕ್ಕ, ಕುದ್ಮಲ್ ರಂಗರಾವ್, ದೇಯಿ ಬೈದೆತಿ…. ಯಾರ ಹೆಸರಿಗಾಗಿ ಹೋರಾಟ ನಡೆಸಿದರೂ, ಯಾರ ಹೆಸರಿಟ್ಟರೂ ಅಷ್ಟೆ, ಅದಿನ್ನು ಮಾರ್ವಾಡಿ ಅದಾನಿಯ ಏರ್ ಪೋರ್ಟ್. ಅದೂ ಭರ್ತಿ ಐವತ್ತು ವರ್ಷ. ಇಂತಹ ಗುಲಾಮಿ ಸ್ಥಿತಿಯ ವಿರುದ್ದ ಧ್ವನಿ ಎತ್ತಲಾರದ ತುಳುನಾಡಿ ಜನತೆಗೆ ನಾಚಿಕೆಯಾಗಬೇಕು” ಎಂದು ಅಬ್ದುಲ್ ಮುನೀರ್ ಪೋಸ್ಟ್ ಮಾಡಿದ್ದಾರೆ‌.

ಇನ್ನೊಬ್ಬ ಫೇಸ್‌ಬುಕ್ ಬಳಕೆದಾರ ಜಗನ್ನಾಥ ರಾಮಸ್ವಾಮಿ, ತಮ್ಮ ಗೋಡೆಯ ಮೇಲೆ ’ಮಂಗಳೂರು ವಿಮಾನ ನಿಲ್ದಾಣವನ್ನು ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಆದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ’ ಎಂದು ವ್ಯಂಗ್ಯವಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

PC:screenshot@Jagannatha Ramaswamy

“ಮಂಗಳೂರಿನ ವಿಮಾನ ನಿಲ್ದಾಣವನ್ನು ಆದಾನಿ ಕೈಗೆ ಒಪ್ಪಿಸಿದ್ದು ಓಳ್ಳೆಯದು ಆಯಿತು, ಇಲ್ಲದೆ ಇದಿದ್ರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರು ಒಬ್ಬೊಬ್ಬರು ಒಂದೊಂದು ಏರೋಪ್ಲೇನ್ ತೆಗೆದುಕೊಂಡು ಬಿಡುವಷ್ಟು ಭ್ರಷ್ಟಾಚಾರ ಮಾಡಿ ಬಿಡ್ತಿದ್ದರು, ಸದ್ಯ ಕೇಂದ್ರ ಸರ್ಕಾರ ಆ ಭ್ರಷ್ಟ ನೌಕರರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ರಕ್ಷಿಸಿ ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಅದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ !!” ಎಂದಿದ್ದಾರೆ.

ಇನ್ನು ಹಲವು ಮಂದಿ ತಮ್ಮ ಟ್ವಿಟರ್‌, ಫೇಸ್‌ಬುಕ್‌ ಗೊಡೆಗಳಲ್ಲಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಹೊತೆಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ನಂತರ ಆದಾನಿ ಸಂಸ್ಥೆ ಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ. ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿದ್ದವು.

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...