Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂಗವಾಗಿ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು 50 ವರ್ಷಗಳ ಮಟ್ಟಿಗೆ ಅದಾನಿ ಸಮೂಹ ಸಂಸ್ಥೆಗೆ ಒಪ್ಪಿಸಲಾಗಿದೆ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ ಎನ್ನಲಾಗಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದೆ, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ ಎಂದು ತಿಳಿಸಲಾಗಿದೆ.

ಅಧಿಕೃತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗಿದೆ. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದ್ದ ಹೆಸರನ್ನು ಆದಾನಿ ಏರ್‌ಪೋರ್ಟ್ಸ್ ಎಂದು ಸೇರಿಸಿ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಫಲಕಗಳನ್ನು ಬದಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ.

ನೆಟ್ಟಿಗರು ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಹಲವು ಮಂದಿ ಸರ್ಕಾರದ ಕ್ರಮ ಮತ್ತು ನಾಡಿನ ಜನತೆಯನ್ನು ಟೀಕಿಸಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

PC: screenshot@Abdul Muneer

“ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ ಇಂದು ಅಧಿಕೃತವಾಗಿ ನರೇಂದ್ರ ಮೋದಿ ಆಪ್ತ, ಗುಜರಾತ್ ಉದ್ಯಮಿ ಅದಾನಿಗೆ ಹಸ್ತಾಂತರಗೊಂಡಿದೆ. ಹಸ್ತಾಂತರ ಪ್ರಕ್ರಿಯೆ ಸಂದರ್ಭ ಸಾಂಕೇತಿಕ ಚಾವಿ ವಿತರಣೆ ಕಾರ್ಯಕ್ರಮದಲ್ಲಿ ಎಲ್ಲರ ಮುಖದಲ್ಲೂ ಸಂಭ್ರಮ ಮನೆ ಮಾಡಿತ್ತು. ಇನ್ನು ಇದು “ಮಂಗಳೂರು ಅದಾನಿ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ”. ನೀವಿನ್ನು ಕೋಟಿ ಚೆನ್ನಯ್ಯ, ರಾಣಿ ಅಬ್ಬಕ್ಕ, ಕುದ್ಮಲ್ ರಂಗರಾವ್, ದೇಯಿ ಬೈದೆತಿ…. ಯಾರ ಹೆಸರಿಗಾಗಿ ಹೋರಾಟ ನಡೆಸಿದರೂ, ಯಾರ ಹೆಸರಿಟ್ಟರೂ ಅಷ್ಟೆ, ಅದಿನ್ನು ಮಾರ್ವಾಡಿ ಅದಾನಿಯ ಏರ್ ಪೋರ್ಟ್. ಅದೂ ಭರ್ತಿ ಐವತ್ತು ವರ್ಷ. ಇಂತಹ ಗುಲಾಮಿ ಸ್ಥಿತಿಯ ವಿರುದ್ದ ಧ್ವನಿ ಎತ್ತಲಾರದ ತುಳುನಾಡಿ ಜನತೆಗೆ ನಾಚಿಕೆಯಾಗಬೇಕು” ಎಂದು ಅಬ್ದುಲ್ ಮುನೀರ್ ಪೋಸ್ಟ್ ಮಾಡಿದ್ದಾರೆ‌.

ಇನ್ನೊಬ್ಬ ಫೇಸ್‌ಬುಕ್ ಬಳಕೆದಾರ ಜಗನ್ನಾಥ ರಾಮಸ್ವಾಮಿ, ತಮ್ಮ ಗೋಡೆಯ ಮೇಲೆ ’ಮಂಗಳೂರು ವಿಮಾನ ನಿಲ್ದಾಣವನ್ನು ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಆದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ’ ಎಂದು ವ್ಯಂಗ್ಯವಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

PC:screenshot@Jagannatha Ramaswamy

“ಮಂಗಳೂರಿನ ವಿಮಾನ ನಿಲ್ದಾಣವನ್ನು ಆದಾನಿ ಕೈಗೆ ಒಪ್ಪಿಸಿದ್ದು ಓಳ್ಳೆಯದು ಆಯಿತು, ಇಲ್ಲದೆ ಇದಿದ್ರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರು ಒಬ್ಬೊಬ್ಬರು ಒಂದೊಂದು ಏರೋಪ್ಲೇನ್ ತೆಗೆದುಕೊಂಡು ಬಿಡುವಷ್ಟು ಭ್ರಷ್ಟಾಚಾರ ಮಾಡಿ ಬಿಡ್ತಿದ್ದರು, ಸದ್ಯ ಕೇಂದ್ರ ಸರ್ಕಾರ ಆ ಭ್ರಷ್ಟ ನೌಕರರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ರಕ್ಷಿಸಿ ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಅದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ !!” ಎಂದಿದ್ದಾರೆ.

ಇನ್ನು ಹಲವು ಮಂದಿ ತಮ್ಮ ಟ್ವಿಟರ್‌, ಫೇಸ್‌ಬುಕ್‌ ಗೊಡೆಗಳಲ್ಲಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಹೊತೆಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ನಂತರ ಆದಾನಿ ಸಂಸ್ಥೆ ಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ. ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿದ್ದವು.

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...