Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂಗವಾಗಿ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು 50 ವರ್ಷಗಳ ಮಟ್ಟಿಗೆ ಅದಾನಿ ಸಮೂಹ ಸಂಸ್ಥೆಗೆ ಒಪ್ಪಿಸಲಾಗಿದೆ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ ಎನ್ನಲಾಗಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದೆ, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ ಎಂದು ತಿಳಿಸಲಾಗಿದೆ.

ಅಧಿಕೃತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗಿದೆ. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದ್ದ ಹೆಸರನ್ನು ಆದಾನಿ ಏರ್‌ಪೋರ್ಟ್ಸ್ ಎಂದು ಸೇರಿಸಿ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಫಲಕಗಳನ್ನು ಬದಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ.

ನೆಟ್ಟಿಗರು ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಹಲವು ಮಂದಿ ಸರ್ಕಾರದ ಕ್ರಮ ಮತ್ತು ನಾಡಿನ ಜನತೆಯನ್ನು ಟೀಕಿಸಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

PC: screenshot@Abdul Muneer

“ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ ಇಂದು ಅಧಿಕೃತವಾಗಿ ನರೇಂದ್ರ ಮೋದಿ ಆಪ್ತ, ಗುಜರಾತ್ ಉದ್ಯಮಿ ಅದಾನಿಗೆ ಹಸ್ತಾಂತರಗೊಂಡಿದೆ. ಹಸ್ತಾಂತರ ಪ್ರಕ್ರಿಯೆ ಸಂದರ್ಭ ಸಾಂಕೇತಿಕ ಚಾವಿ ವಿತರಣೆ ಕಾರ್ಯಕ್ರಮದಲ್ಲಿ ಎಲ್ಲರ ಮುಖದಲ್ಲೂ ಸಂಭ್ರಮ ಮನೆ ಮಾಡಿತ್ತು. ಇನ್ನು ಇದು “ಮಂಗಳೂರು ಅದಾನಿ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ”. ನೀವಿನ್ನು ಕೋಟಿ ಚೆನ್ನಯ್ಯ, ರಾಣಿ ಅಬ್ಬಕ್ಕ, ಕುದ್ಮಲ್ ರಂಗರಾವ್, ದೇಯಿ ಬೈದೆತಿ…. ಯಾರ ಹೆಸರಿಗಾಗಿ ಹೋರಾಟ ನಡೆಸಿದರೂ, ಯಾರ ಹೆಸರಿಟ್ಟರೂ ಅಷ್ಟೆ, ಅದಿನ್ನು ಮಾರ್ವಾಡಿ ಅದಾನಿಯ ಏರ್ ಪೋರ್ಟ್. ಅದೂ ಭರ್ತಿ ಐವತ್ತು ವರ್ಷ. ಇಂತಹ ಗುಲಾಮಿ ಸ್ಥಿತಿಯ ವಿರುದ್ದ ಧ್ವನಿ ಎತ್ತಲಾರದ ತುಳುನಾಡಿ ಜನತೆಗೆ ನಾಚಿಕೆಯಾಗಬೇಕು” ಎಂದು ಅಬ್ದುಲ್ ಮುನೀರ್ ಪೋಸ್ಟ್ ಮಾಡಿದ್ದಾರೆ‌.

ಇನ್ನೊಬ್ಬ ಫೇಸ್‌ಬುಕ್ ಬಳಕೆದಾರ ಜಗನ್ನಾಥ ರಾಮಸ್ವಾಮಿ, ತಮ್ಮ ಗೋಡೆಯ ಮೇಲೆ ’ಮಂಗಳೂರು ವಿಮಾನ ನಿಲ್ದಾಣವನ್ನು ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಆದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ’ ಎಂದು ವ್ಯಂಗ್ಯವಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

PC:screenshot@Jagannatha Ramaswamy

“ಮಂಗಳೂರಿನ ವಿಮಾನ ನಿಲ್ದಾಣವನ್ನು ಆದಾನಿ ಕೈಗೆ ಒಪ್ಪಿಸಿದ್ದು ಓಳ್ಳೆಯದು ಆಯಿತು, ಇಲ್ಲದೆ ಇದಿದ್ರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರು ಒಬ್ಬೊಬ್ಬರು ಒಂದೊಂದು ಏರೋಪ್ಲೇನ್ ತೆಗೆದುಕೊಂಡು ಬಿಡುವಷ್ಟು ಭ್ರಷ್ಟಾಚಾರ ಮಾಡಿ ಬಿಡ್ತಿದ್ದರು, ಸದ್ಯ ಕೇಂದ್ರ ಸರ್ಕಾರ ಆ ಭ್ರಷ್ಟ ನೌಕರರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ರಕ್ಷಿಸಿ ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಅದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ !!” ಎಂದಿದ್ದಾರೆ.

ಇನ್ನು ಹಲವು ಮಂದಿ ತಮ್ಮ ಟ್ವಿಟರ್‌, ಫೇಸ್‌ಬುಕ್‌ ಗೊಡೆಗಳಲ್ಲಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಹೊತೆಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ನಂತರ ಆದಾನಿ ಸಂಸ್ಥೆ ಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ. ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿದ್ದವು.

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...