Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂಗವಾಗಿ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು 50 ವರ್ಷಗಳ ಮಟ್ಟಿಗೆ ಅದಾನಿ ಸಮೂಹ ಸಂಸ್ಥೆಗೆ ಒಪ್ಪಿಸಲಾಗಿದೆ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ ಎನ್ನಲಾಗಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದೆ, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ ಎಂದು ತಿಳಿಸಲಾಗಿದೆ.

ಅಧಿಕೃತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗಿದೆ. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದ್ದ ಹೆಸರನ್ನು ಆದಾನಿ ಏರ್‌ಪೋರ್ಟ್ಸ್ ಎಂದು ಸೇರಿಸಿ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಫಲಕಗಳನ್ನು ಬದಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ.

ನೆಟ್ಟಿಗರು ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಹಲವು ಮಂದಿ ಸರ್ಕಾರದ ಕ್ರಮ ಮತ್ತು ನಾಡಿನ ಜನತೆಯನ್ನು ಟೀಕಿಸಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

PC: screenshot@Abdul Muneer

“ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ ಇಂದು ಅಧಿಕೃತವಾಗಿ ನರೇಂದ್ರ ಮೋದಿ ಆಪ್ತ, ಗುಜರಾತ್ ಉದ್ಯಮಿ ಅದಾನಿಗೆ ಹಸ್ತಾಂತರಗೊಂಡಿದೆ. ಹಸ್ತಾಂತರ ಪ್ರಕ್ರಿಯೆ ಸಂದರ್ಭ ಸಾಂಕೇತಿಕ ಚಾವಿ ವಿತರಣೆ ಕಾರ್ಯಕ್ರಮದಲ್ಲಿ ಎಲ್ಲರ ಮುಖದಲ್ಲೂ ಸಂಭ್ರಮ ಮನೆ ಮಾಡಿತ್ತು. ಇನ್ನು ಇದು “ಮಂಗಳೂರು ಅದಾನಿ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ”. ನೀವಿನ್ನು ಕೋಟಿ ಚೆನ್ನಯ್ಯ, ರಾಣಿ ಅಬ್ಬಕ್ಕ, ಕುದ್ಮಲ್ ರಂಗರಾವ್, ದೇಯಿ ಬೈದೆತಿ…. ಯಾರ ಹೆಸರಿಗಾಗಿ ಹೋರಾಟ ನಡೆಸಿದರೂ, ಯಾರ ಹೆಸರಿಟ್ಟರೂ ಅಷ್ಟೆ, ಅದಿನ್ನು ಮಾರ್ವಾಡಿ ಅದಾನಿಯ ಏರ್ ಪೋರ್ಟ್. ಅದೂ ಭರ್ತಿ ಐವತ್ತು ವರ್ಷ. ಇಂತಹ ಗುಲಾಮಿ ಸ್ಥಿತಿಯ ವಿರುದ್ದ ಧ್ವನಿ ಎತ್ತಲಾರದ ತುಳುನಾಡಿ ಜನತೆಗೆ ನಾಚಿಕೆಯಾಗಬೇಕು” ಎಂದು ಅಬ್ದುಲ್ ಮುನೀರ್ ಪೋಸ್ಟ್ ಮಾಡಿದ್ದಾರೆ‌.

ಇನ್ನೊಬ್ಬ ಫೇಸ್‌ಬುಕ್ ಬಳಕೆದಾರ ಜಗನ್ನಾಥ ರಾಮಸ್ವಾಮಿ, ತಮ್ಮ ಗೋಡೆಯ ಮೇಲೆ ’ಮಂಗಳೂರು ವಿಮಾನ ನಿಲ್ದಾಣವನ್ನು ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಆದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ’ ಎಂದು ವ್ಯಂಗ್ಯವಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

PC:screenshot@Jagannatha Ramaswamy

“ಮಂಗಳೂರಿನ ವಿಮಾನ ನಿಲ್ದಾಣವನ್ನು ಆದಾನಿ ಕೈಗೆ ಒಪ್ಪಿಸಿದ್ದು ಓಳ್ಳೆಯದು ಆಯಿತು, ಇಲ್ಲದೆ ಇದಿದ್ರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರು ಒಬ್ಬೊಬ್ಬರು ಒಂದೊಂದು ಏರೋಪ್ಲೇನ್ ತೆಗೆದುಕೊಂಡು ಬಿಡುವಷ್ಟು ಭ್ರಷ್ಟಾಚಾರ ಮಾಡಿ ಬಿಡ್ತಿದ್ದರು, ಸದ್ಯ ಕೇಂದ್ರ ಸರ್ಕಾರ ಆ ಭ್ರಷ್ಟ ನೌಕರರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ರಕ್ಷಿಸಿ ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಅದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ !!” ಎಂದಿದ್ದಾರೆ.

ಇನ್ನು ಹಲವು ಮಂದಿ ತಮ್ಮ ಟ್ವಿಟರ್‌, ಫೇಸ್‌ಬುಕ್‌ ಗೊಡೆಗಳಲ್ಲಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಹೊತೆಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ನಂತರ ಆದಾನಿ ಸಂಸ್ಥೆ ಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ. ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿದ್ದವು.

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...