Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂಗವಾಗಿ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು 50 ವರ್ಷಗಳ ಮಟ್ಟಿಗೆ ಅದಾನಿ ಸಮೂಹ ಸಂಸ್ಥೆಗೆ ಒಪ್ಪಿಸಲಾಗಿದೆ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ ಎನ್ನಲಾಗಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದೆ, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ ಎಂದು ತಿಳಿಸಲಾಗಿದೆ.

ಅಧಿಕೃತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗಿದೆ. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದ್ದ ಹೆಸರನ್ನು ಆದಾನಿ ಏರ್‌ಪೋರ್ಟ್ಸ್ ಎಂದು ಸೇರಿಸಿ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಫಲಕಗಳನ್ನು ಬದಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ.

ನೆಟ್ಟಿಗರು ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಹಲವು ಮಂದಿ ಸರ್ಕಾರದ ಕ್ರಮ ಮತ್ತು ನಾಡಿನ ಜನತೆಯನ್ನು ಟೀಕಿಸಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

PC: screenshot@Abdul Muneer

“ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ ಇಂದು ಅಧಿಕೃತವಾಗಿ ನರೇಂದ್ರ ಮೋದಿ ಆಪ್ತ, ಗುಜರಾತ್ ಉದ್ಯಮಿ ಅದಾನಿಗೆ ಹಸ್ತಾಂತರಗೊಂಡಿದೆ. ಹಸ್ತಾಂತರ ಪ್ರಕ್ರಿಯೆ ಸಂದರ್ಭ ಸಾಂಕೇತಿಕ ಚಾವಿ ವಿತರಣೆ ಕಾರ್ಯಕ್ರಮದಲ್ಲಿ ಎಲ್ಲರ ಮುಖದಲ್ಲೂ ಸಂಭ್ರಮ ಮನೆ ಮಾಡಿತ್ತು. ಇನ್ನು ಇದು “ಮಂಗಳೂರು ಅದಾನಿ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ”. ನೀವಿನ್ನು ಕೋಟಿ ಚೆನ್ನಯ್ಯ, ರಾಣಿ ಅಬ್ಬಕ್ಕ, ಕುದ್ಮಲ್ ರಂಗರಾವ್, ದೇಯಿ ಬೈದೆತಿ…. ಯಾರ ಹೆಸರಿಗಾಗಿ ಹೋರಾಟ ನಡೆಸಿದರೂ, ಯಾರ ಹೆಸರಿಟ್ಟರೂ ಅಷ್ಟೆ, ಅದಿನ್ನು ಮಾರ್ವಾಡಿ ಅದಾನಿಯ ಏರ್ ಪೋರ್ಟ್. ಅದೂ ಭರ್ತಿ ಐವತ್ತು ವರ್ಷ. ಇಂತಹ ಗುಲಾಮಿ ಸ್ಥಿತಿಯ ವಿರುದ್ದ ಧ್ವನಿ ಎತ್ತಲಾರದ ತುಳುನಾಡಿ ಜನತೆಗೆ ನಾಚಿಕೆಯಾಗಬೇಕು” ಎಂದು ಅಬ್ದುಲ್ ಮುನೀರ್ ಪೋಸ್ಟ್ ಮಾಡಿದ್ದಾರೆ‌.

ಇನ್ನೊಬ್ಬ ಫೇಸ್‌ಬುಕ್ ಬಳಕೆದಾರ ಜಗನ್ನಾಥ ರಾಮಸ್ವಾಮಿ, ತಮ್ಮ ಗೋಡೆಯ ಮೇಲೆ ’ಮಂಗಳೂರು ವಿಮಾನ ನಿಲ್ದಾಣವನ್ನು ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಆದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ’ ಎಂದು ವ್ಯಂಗ್ಯವಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

PC:screenshot@Jagannatha Ramaswamy

“ಮಂಗಳೂರಿನ ವಿಮಾನ ನಿಲ್ದಾಣವನ್ನು ಆದಾನಿ ಕೈಗೆ ಒಪ್ಪಿಸಿದ್ದು ಓಳ್ಳೆಯದು ಆಯಿತು, ಇಲ್ಲದೆ ಇದಿದ್ರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರು ಒಬ್ಬೊಬ್ಬರು ಒಂದೊಂದು ಏರೋಪ್ಲೇನ್ ತೆಗೆದುಕೊಂಡು ಬಿಡುವಷ್ಟು ಭ್ರಷ್ಟಾಚಾರ ಮಾಡಿ ಬಿಡ್ತಿದ್ದರು, ಸದ್ಯ ಕೇಂದ್ರ ಸರ್ಕಾರ ಆ ಭ್ರಷ್ಟ ನೌಕರರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ರಕ್ಷಿಸಿ ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಅದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ !!” ಎಂದಿದ್ದಾರೆ.

ಇನ್ನು ಹಲವು ಮಂದಿ ತಮ್ಮ ಟ್ವಿಟರ್‌, ಫೇಸ್‌ಬುಕ್‌ ಗೊಡೆಗಳಲ್ಲಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಹೊತೆಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ನಂತರ ಆದಾನಿ ಸಂಸ್ಥೆ ಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ. ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿದ್ದವು.

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...