Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂಗವಾಗಿ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು 50 ವರ್ಷಗಳ ಮಟ್ಟಿಗೆ ಅದಾನಿ ಸಮೂಹ ಸಂಸ್ಥೆಗೆ ಒಪ್ಪಿಸಲಾಗಿದೆ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ ಎನ್ನಲಾಗಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದೆ, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ ಎಂದು ತಿಳಿಸಲಾಗಿದೆ.

ಅಧಿಕೃತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗಿದೆ. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದ್ದ ಹೆಸರನ್ನು ಆದಾನಿ ಏರ್‌ಪೋರ್ಟ್ಸ್ ಎಂದು ಸೇರಿಸಿ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಫಲಕಗಳನ್ನು ಬದಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ.

ನೆಟ್ಟಿಗರು ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಹಲವು ಮಂದಿ ಸರ್ಕಾರದ ಕ್ರಮ ಮತ್ತು ನಾಡಿನ ಜನತೆಯನ್ನು ಟೀಕಿಸಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

PC: screenshot@Abdul Muneer

“ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ ಇಂದು ಅಧಿಕೃತವಾಗಿ ನರೇಂದ್ರ ಮೋದಿ ಆಪ್ತ, ಗುಜರಾತ್ ಉದ್ಯಮಿ ಅದಾನಿಗೆ ಹಸ್ತಾಂತರಗೊಂಡಿದೆ. ಹಸ್ತಾಂತರ ಪ್ರಕ್ರಿಯೆ ಸಂದರ್ಭ ಸಾಂಕೇತಿಕ ಚಾವಿ ವಿತರಣೆ ಕಾರ್ಯಕ್ರಮದಲ್ಲಿ ಎಲ್ಲರ ಮುಖದಲ್ಲೂ ಸಂಭ್ರಮ ಮನೆ ಮಾಡಿತ್ತು. ಇನ್ನು ಇದು “ಮಂಗಳೂರು ಅದಾನಿ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ”. ನೀವಿನ್ನು ಕೋಟಿ ಚೆನ್ನಯ್ಯ, ರಾಣಿ ಅಬ್ಬಕ್ಕ, ಕುದ್ಮಲ್ ರಂಗರಾವ್, ದೇಯಿ ಬೈದೆತಿ…. ಯಾರ ಹೆಸರಿಗಾಗಿ ಹೋರಾಟ ನಡೆಸಿದರೂ, ಯಾರ ಹೆಸರಿಟ್ಟರೂ ಅಷ್ಟೆ, ಅದಿನ್ನು ಮಾರ್ವಾಡಿ ಅದಾನಿಯ ಏರ್ ಪೋರ್ಟ್. ಅದೂ ಭರ್ತಿ ಐವತ್ತು ವರ್ಷ. ಇಂತಹ ಗುಲಾಮಿ ಸ್ಥಿತಿಯ ವಿರುದ್ದ ಧ್ವನಿ ಎತ್ತಲಾರದ ತುಳುನಾಡಿ ಜನತೆಗೆ ನಾಚಿಕೆಯಾಗಬೇಕು” ಎಂದು ಅಬ್ದುಲ್ ಮುನೀರ್ ಪೋಸ್ಟ್ ಮಾಡಿದ್ದಾರೆ‌.

ಇನ್ನೊಬ್ಬ ಫೇಸ್‌ಬುಕ್ ಬಳಕೆದಾರ ಜಗನ್ನಾಥ ರಾಮಸ್ವಾಮಿ, ತಮ್ಮ ಗೋಡೆಯ ಮೇಲೆ ’ಮಂಗಳೂರು ವಿಮಾನ ನಿಲ್ದಾಣವನ್ನು ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಆದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ’ ಎಂದು ವ್ಯಂಗ್ಯವಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

PC:screenshot@Jagannatha Ramaswamy

“ಮಂಗಳೂರಿನ ವಿಮಾನ ನಿಲ್ದಾಣವನ್ನು ಆದಾನಿ ಕೈಗೆ ಒಪ್ಪಿಸಿದ್ದು ಓಳ್ಳೆಯದು ಆಯಿತು, ಇಲ್ಲದೆ ಇದಿದ್ರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರು ಒಬ್ಬೊಬ್ಬರು ಒಂದೊಂದು ಏರೋಪ್ಲೇನ್ ತೆಗೆದುಕೊಂಡು ಬಿಡುವಷ್ಟು ಭ್ರಷ್ಟಾಚಾರ ಮಾಡಿ ಬಿಡ್ತಿದ್ದರು, ಸದ್ಯ ಕೇಂದ್ರ ಸರ್ಕಾರ ಆ ಭ್ರಷ್ಟ ನೌಕರರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ರಕ್ಷಿಸಿ ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಅದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ !!” ಎಂದಿದ್ದಾರೆ.

ಇನ್ನು ಹಲವು ಮಂದಿ ತಮ್ಮ ಟ್ವಿಟರ್‌, ಫೇಸ್‌ಬುಕ್‌ ಗೊಡೆಗಳಲ್ಲಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಹೊತೆಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ನಂತರ ಆದಾನಿ ಸಂಸ್ಥೆ ಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ. ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿದ್ದವು.

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...