Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂಗವಾಗಿ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು 50 ವರ್ಷಗಳ ಮಟ್ಟಿಗೆ ಅದಾನಿ ಸಮೂಹ ಸಂಸ್ಥೆಗೆ ಒಪ್ಪಿಸಲಾಗಿದೆ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ ಎನ್ನಲಾಗಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದೆ, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ ಎಂದು ತಿಳಿಸಲಾಗಿದೆ.

ಅಧಿಕೃತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗಿದೆ. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದ್ದ ಹೆಸರನ್ನು ಆದಾನಿ ಏರ್‌ಪೋರ್ಟ್ಸ್ ಎಂದು ಸೇರಿಸಿ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಫಲಕಗಳನ್ನು ಬದಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ.

ನೆಟ್ಟಿಗರು ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಹಲವು ಮಂದಿ ಸರ್ಕಾರದ ಕ್ರಮ ಮತ್ತು ನಾಡಿನ ಜನತೆಯನ್ನು ಟೀಕಿಸಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

PC: screenshot@Abdul Muneer

“ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ ಇಂದು ಅಧಿಕೃತವಾಗಿ ನರೇಂದ್ರ ಮೋದಿ ಆಪ್ತ, ಗುಜರಾತ್ ಉದ್ಯಮಿ ಅದಾನಿಗೆ ಹಸ್ತಾಂತರಗೊಂಡಿದೆ. ಹಸ್ತಾಂತರ ಪ್ರಕ್ರಿಯೆ ಸಂದರ್ಭ ಸಾಂಕೇತಿಕ ಚಾವಿ ವಿತರಣೆ ಕಾರ್ಯಕ್ರಮದಲ್ಲಿ ಎಲ್ಲರ ಮುಖದಲ್ಲೂ ಸಂಭ್ರಮ ಮನೆ ಮಾಡಿತ್ತು. ಇನ್ನು ಇದು “ಮಂಗಳೂರು ಅದಾನಿ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ”. ನೀವಿನ್ನು ಕೋಟಿ ಚೆನ್ನಯ್ಯ, ರಾಣಿ ಅಬ್ಬಕ್ಕ, ಕುದ್ಮಲ್ ರಂಗರಾವ್, ದೇಯಿ ಬೈದೆತಿ…. ಯಾರ ಹೆಸರಿಗಾಗಿ ಹೋರಾಟ ನಡೆಸಿದರೂ, ಯಾರ ಹೆಸರಿಟ್ಟರೂ ಅಷ್ಟೆ, ಅದಿನ್ನು ಮಾರ್ವಾಡಿ ಅದಾನಿಯ ಏರ್ ಪೋರ್ಟ್. ಅದೂ ಭರ್ತಿ ಐವತ್ತು ವರ್ಷ. ಇಂತಹ ಗುಲಾಮಿ ಸ್ಥಿತಿಯ ವಿರುದ್ದ ಧ್ವನಿ ಎತ್ತಲಾರದ ತುಳುನಾಡಿ ಜನತೆಗೆ ನಾಚಿಕೆಯಾಗಬೇಕು” ಎಂದು ಅಬ್ದುಲ್ ಮುನೀರ್ ಪೋಸ್ಟ್ ಮಾಡಿದ್ದಾರೆ‌.

ಇನ್ನೊಬ್ಬ ಫೇಸ್‌ಬುಕ್ ಬಳಕೆದಾರ ಜಗನ್ನಾಥ ರಾಮಸ್ವಾಮಿ, ತಮ್ಮ ಗೋಡೆಯ ಮೇಲೆ ’ಮಂಗಳೂರು ವಿಮಾನ ನಿಲ್ದಾಣವನ್ನು ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಆದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ’ ಎಂದು ವ್ಯಂಗ್ಯವಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

PC:screenshot@Jagannatha Ramaswamy

“ಮಂಗಳೂರಿನ ವಿಮಾನ ನಿಲ್ದಾಣವನ್ನು ಆದಾನಿ ಕೈಗೆ ಒಪ್ಪಿಸಿದ್ದು ಓಳ್ಳೆಯದು ಆಯಿತು, ಇಲ್ಲದೆ ಇದಿದ್ರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರು ಒಬ್ಬೊಬ್ಬರು ಒಂದೊಂದು ಏರೋಪ್ಲೇನ್ ತೆಗೆದುಕೊಂಡು ಬಿಡುವಷ್ಟು ಭ್ರಷ್ಟಾಚಾರ ಮಾಡಿ ಬಿಡ್ತಿದ್ದರು, ಸದ್ಯ ಕೇಂದ್ರ ಸರ್ಕಾರ ಆ ಭ್ರಷ್ಟ ನೌಕರರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ರಕ್ಷಿಸಿ ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಅದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ !!” ಎಂದಿದ್ದಾರೆ.

ಇನ್ನು ಹಲವು ಮಂದಿ ತಮ್ಮ ಟ್ವಿಟರ್‌, ಫೇಸ್‌ಬುಕ್‌ ಗೊಡೆಗಳಲ್ಲಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಹೊತೆಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ನಂತರ ಆದಾನಿ ಸಂಸ್ಥೆ ಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ. ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿದ್ದವು.

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...