Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂಗವಾಗಿ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು 50 ವರ್ಷಗಳ ಮಟ್ಟಿಗೆ ಅದಾನಿ ಸಮೂಹ ಸಂಸ್ಥೆಗೆ ಒಪ್ಪಿಸಲಾಗಿದೆ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ ಎನ್ನಲಾಗಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದೆ, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ ಎಂದು ತಿಳಿಸಲಾಗಿದೆ.

ಅಧಿಕೃತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗಿದೆ. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದ್ದ ಹೆಸರನ್ನು ಆದಾನಿ ಏರ್‌ಪೋರ್ಟ್ಸ್ ಎಂದು ಸೇರಿಸಿ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಫಲಕಗಳನ್ನು ಬದಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ.

ನೆಟ್ಟಿಗರು ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಹಲವು ಮಂದಿ ಸರ್ಕಾರದ ಕ್ರಮ ಮತ್ತು ನಾಡಿನ ಜನತೆಯನ್ನು ಟೀಕಿಸಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

PC: screenshot@Abdul Muneer

“ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ ಇಂದು ಅಧಿಕೃತವಾಗಿ ನರೇಂದ್ರ ಮೋದಿ ಆಪ್ತ, ಗುಜರಾತ್ ಉದ್ಯಮಿ ಅದಾನಿಗೆ ಹಸ್ತಾಂತರಗೊಂಡಿದೆ. ಹಸ್ತಾಂತರ ಪ್ರಕ್ರಿಯೆ ಸಂದರ್ಭ ಸಾಂಕೇತಿಕ ಚಾವಿ ವಿತರಣೆ ಕಾರ್ಯಕ್ರಮದಲ್ಲಿ ಎಲ್ಲರ ಮುಖದಲ್ಲೂ ಸಂಭ್ರಮ ಮನೆ ಮಾಡಿತ್ತು. ಇನ್ನು ಇದು “ಮಂಗಳೂರು ಅದಾನಿ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ”. ನೀವಿನ್ನು ಕೋಟಿ ಚೆನ್ನಯ್ಯ, ರಾಣಿ ಅಬ್ಬಕ್ಕ, ಕುದ್ಮಲ್ ರಂಗರಾವ್, ದೇಯಿ ಬೈದೆತಿ…. ಯಾರ ಹೆಸರಿಗಾಗಿ ಹೋರಾಟ ನಡೆಸಿದರೂ, ಯಾರ ಹೆಸರಿಟ್ಟರೂ ಅಷ್ಟೆ, ಅದಿನ್ನು ಮಾರ್ವಾಡಿ ಅದಾನಿಯ ಏರ್ ಪೋರ್ಟ್. ಅದೂ ಭರ್ತಿ ಐವತ್ತು ವರ್ಷ. ಇಂತಹ ಗುಲಾಮಿ ಸ್ಥಿತಿಯ ವಿರುದ್ದ ಧ್ವನಿ ಎತ್ತಲಾರದ ತುಳುನಾಡಿ ಜನತೆಗೆ ನಾಚಿಕೆಯಾಗಬೇಕು” ಎಂದು ಅಬ್ದುಲ್ ಮುನೀರ್ ಪೋಸ್ಟ್ ಮಾಡಿದ್ದಾರೆ‌.

ಇನ್ನೊಬ್ಬ ಫೇಸ್‌ಬುಕ್ ಬಳಕೆದಾರ ಜಗನ್ನಾಥ ರಾಮಸ್ವಾಮಿ, ತಮ್ಮ ಗೋಡೆಯ ಮೇಲೆ ’ಮಂಗಳೂರು ವಿಮಾನ ನಿಲ್ದಾಣವನ್ನು ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಆದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ’ ಎಂದು ವ್ಯಂಗ್ಯವಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

PC:screenshot@Jagannatha Ramaswamy

“ಮಂಗಳೂರಿನ ವಿಮಾನ ನಿಲ್ದಾಣವನ್ನು ಆದಾನಿ ಕೈಗೆ ಒಪ್ಪಿಸಿದ್ದು ಓಳ್ಳೆಯದು ಆಯಿತು, ಇಲ್ಲದೆ ಇದಿದ್ರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರು ಒಬ್ಬೊಬ್ಬರು ಒಂದೊಂದು ಏರೋಪ್ಲೇನ್ ತೆಗೆದುಕೊಂಡು ಬಿಡುವಷ್ಟು ಭ್ರಷ್ಟಾಚಾರ ಮಾಡಿ ಬಿಡ್ತಿದ್ದರು, ಸದ್ಯ ಕೇಂದ್ರ ಸರ್ಕಾರ ಆ ಭ್ರಷ್ಟ ನೌಕರರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ರಕ್ಷಿಸಿ ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಅದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ !!” ಎಂದಿದ್ದಾರೆ.

ಇನ್ನು ಹಲವು ಮಂದಿ ತಮ್ಮ ಟ್ವಿಟರ್‌, ಫೇಸ್‌ಬುಕ್‌ ಗೊಡೆಗಳಲ್ಲಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಹೊತೆಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ನಂತರ ಆದಾನಿ ಸಂಸ್ಥೆ ಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ. ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿದ್ದವು.

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...