Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂಗವಾಗಿ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು 50 ವರ್ಷಗಳ ಮಟ್ಟಿಗೆ ಅದಾನಿ ಸಮೂಹ ಸಂಸ್ಥೆಗೆ ಒಪ್ಪಿಸಲಾಗಿದೆ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ ಎನ್ನಲಾಗಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದೆ, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ ಎಂದು ತಿಳಿಸಲಾಗಿದೆ.

ಅಧಿಕೃತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗಿದೆ. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದ್ದ ಹೆಸರನ್ನು ಆದಾನಿ ಏರ್‌ಪೋರ್ಟ್ಸ್ ಎಂದು ಸೇರಿಸಿ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಫಲಕಗಳನ್ನು ಬದಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ.

ನೆಟ್ಟಿಗರು ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಹಲವು ಮಂದಿ ಸರ್ಕಾರದ ಕ್ರಮ ಮತ್ತು ನಾಡಿನ ಜನತೆಯನ್ನು ಟೀಕಿಸಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

PC: screenshot@Abdul Muneer

“ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ ಇಂದು ಅಧಿಕೃತವಾಗಿ ನರೇಂದ್ರ ಮೋದಿ ಆಪ್ತ, ಗುಜರಾತ್ ಉದ್ಯಮಿ ಅದಾನಿಗೆ ಹಸ್ತಾಂತರಗೊಂಡಿದೆ. ಹಸ್ತಾಂತರ ಪ್ರಕ್ರಿಯೆ ಸಂದರ್ಭ ಸಾಂಕೇತಿಕ ಚಾವಿ ವಿತರಣೆ ಕಾರ್ಯಕ್ರಮದಲ್ಲಿ ಎಲ್ಲರ ಮುಖದಲ್ಲೂ ಸಂಭ್ರಮ ಮನೆ ಮಾಡಿತ್ತು. ಇನ್ನು ಇದು “ಮಂಗಳೂರು ಅದಾನಿ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ”. ನೀವಿನ್ನು ಕೋಟಿ ಚೆನ್ನಯ್ಯ, ರಾಣಿ ಅಬ್ಬಕ್ಕ, ಕುದ್ಮಲ್ ರಂಗರಾವ್, ದೇಯಿ ಬೈದೆತಿ…. ಯಾರ ಹೆಸರಿಗಾಗಿ ಹೋರಾಟ ನಡೆಸಿದರೂ, ಯಾರ ಹೆಸರಿಟ್ಟರೂ ಅಷ್ಟೆ, ಅದಿನ್ನು ಮಾರ್ವಾಡಿ ಅದಾನಿಯ ಏರ್ ಪೋರ್ಟ್. ಅದೂ ಭರ್ತಿ ಐವತ್ತು ವರ್ಷ. ಇಂತಹ ಗುಲಾಮಿ ಸ್ಥಿತಿಯ ವಿರುದ್ದ ಧ್ವನಿ ಎತ್ತಲಾರದ ತುಳುನಾಡಿ ಜನತೆಗೆ ನಾಚಿಕೆಯಾಗಬೇಕು” ಎಂದು ಅಬ್ದುಲ್ ಮುನೀರ್ ಪೋಸ್ಟ್ ಮಾಡಿದ್ದಾರೆ‌.

ಇನ್ನೊಬ್ಬ ಫೇಸ್‌ಬುಕ್ ಬಳಕೆದಾರ ಜಗನ್ನಾಥ ರಾಮಸ್ವಾಮಿ, ತಮ್ಮ ಗೋಡೆಯ ಮೇಲೆ ’ಮಂಗಳೂರು ವಿಮಾನ ನಿಲ್ದಾಣವನ್ನು ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಆದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ’ ಎಂದು ವ್ಯಂಗ್ಯವಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

PC:screenshot@Jagannatha Ramaswamy

“ಮಂಗಳೂರಿನ ವಿಮಾನ ನಿಲ್ದಾಣವನ್ನು ಆದಾನಿ ಕೈಗೆ ಒಪ್ಪಿಸಿದ್ದು ಓಳ್ಳೆಯದು ಆಯಿತು, ಇಲ್ಲದೆ ಇದಿದ್ರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರು ಒಬ್ಬೊಬ್ಬರು ಒಂದೊಂದು ಏರೋಪ್ಲೇನ್ ತೆಗೆದುಕೊಂಡು ಬಿಡುವಷ್ಟು ಭ್ರಷ್ಟಾಚಾರ ಮಾಡಿ ಬಿಡ್ತಿದ್ದರು, ಸದ್ಯ ಕೇಂದ್ರ ಸರ್ಕಾರ ಆ ಭ್ರಷ್ಟ ನೌಕರರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ರಕ್ಷಿಸಿ ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಅದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ !!” ಎಂದಿದ್ದಾರೆ.

ಇನ್ನು ಹಲವು ಮಂದಿ ತಮ್ಮ ಟ್ವಿಟರ್‌, ಫೇಸ್‌ಬುಕ್‌ ಗೊಡೆಗಳಲ್ಲಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಹೊತೆಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ನಂತರ ಆದಾನಿ ಸಂಸ್ಥೆ ಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ. ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿದ್ದವು.

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...