Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂಗವಾಗಿ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು 50 ವರ್ಷಗಳ ಮಟ್ಟಿಗೆ ಅದಾನಿ ಸಮೂಹ ಸಂಸ್ಥೆಗೆ ಒಪ್ಪಿಸಲಾಗಿದೆ.

ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ ಎನ್ನಲಾಗಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದೆ, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ ಎಂದು ತಿಳಿಸಲಾಗಿದೆ.

ಅಧಿಕೃತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡಲಾಗಿದೆ. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದ್ದ ಹೆಸರನ್ನು ಆದಾನಿ ಏರ್‌ಪೋರ್ಟ್ಸ್ ಎಂದು ಸೇರಿಸಿ ನಂತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಫಲಕಗಳನ್ನು ಬದಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಆಕ್ರೋಶ ವ್ಯಕ್ತವಾಗಿದೆ.

ನೆಟ್ಟಿಗರು ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಹಲವು ಮಂದಿ ಸರ್ಕಾರದ ಕ್ರಮ ಮತ್ತು ನಾಡಿನ ಜನತೆಯನ್ನು ಟೀಕಿಸಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿಗೆ ವಿಮಾನ ನಿಲ್ದಾಣ ನಿರ್ವಹಣೆ ವಿರುದ್ದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

PC: screenshot@Abdul Muneer

“ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ ಇಂದು ಅಧಿಕೃತವಾಗಿ ನರೇಂದ್ರ ಮೋದಿ ಆಪ್ತ, ಗುಜರಾತ್ ಉದ್ಯಮಿ ಅದಾನಿಗೆ ಹಸ್ತಾಂತರಗೊಂಡಿದೆ. ಹಸ್ತಾಂತರ ಪ್ರಕ್ರಿಯೆ ಸಂದರ್ಭ ಸಾಂಕೇತಿಕ ಚಾವಿ ವಿತರಣೆ ಕಾರ್ಯಕ್ರಮದಲ್ಲಿ ಎಲ್ಲರ ಮುಖದಲ್ಲೂ ಸಂಭ್ರಮ ಮನೆ ಮಾಡಿತ್ತು. ಇನ್ನು ಇದು “ಮಂಗಳೂರು ಅದಾನಿ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣ”. ನೀವಿನ್ನು ಕೋಟಿ ಚೆನ್ನಯ್ಯ, ರಾಣಿ ಅಬ್ಬಕ್ಕ, ಕುದ್ಮಲ್ ರಂಗರಾವ್, ದೇಯಿ ಬೈದೆತಿ…. ಯಾರ ಹೆಸರಿಗಾಗಿ ಹೋರಾಟ ನಡೆಸಿದರೂ, ಯಾರ ಹೆಸರಿಟ್ಟರೂ ಅಷ್ಟೆ, ಅದಿನ್ನು ಮಾರ್ವಾಡಿ ಅದಾನಿಯ ಏರ್ ಪೋರ್ಟ್. ಅದೂ ಭರ್ತಿ ಐವತ್ತು ವರ್ಷ. ಇಂತಹ ಗುಲಾಮಿ ಸ್ಥಿತಿಯ ವಿರುದ್ದ ಧ್ವನಿ ಎತ್ತಲಾರದ ತುಳುನಾಡಿ ಜನತೆಗೆ ನಾಚಿಕೆಯಾಗಬೇಕು” ಎಂದು ಅಬ್ದುಲ್ ಮುನೀರ್ ಪೋಸ್ಟ್ ಮಾಡಿದ್ದಾರೆ‌.

ಇನ್ನೊಬ್ಬ ಫೇಸ್‌ಬುಕ್ ಬಳಕೆದಾರ ಜಗನ್ನಾಥ ರಾಮಸ್ವಾಮಿ, ತಮ್ಮ ಗೋಡೆಯ ಮೇಲೆ ’ಮಂಗಳೂರು ವಿಮಾನ ನಿಲ್ದಾಣವನ್ನು ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಆದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ’ ಎಂದು ವ್ಯಂಗ್ಯವಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

PC:screenshot@Jagannatha Ramaswamy

“ಮಂಗಳೂರಿನ ವಿಮಾನ ನಿಲ್ದಾಣವನ್ನು ಆದಾನಿ ಕೈಗೆ ಒಪ್ಪಿಸಿದ್ದು ಓಳ್ಳೆಯದು ಆಯಿತು, ಇಲ್ಲದೆ ಇದಿದ್ರೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರು ಒಬ್ಬೊಬ್ಬರು ಒಂದೊಂದು ಏರೋಪ್ಲೇನ್ ತೆಗೆದುಕೊಂಡು ಬಿಡುವಷ್ಟು ಭ್ರಷ್ಟಾಚಾರ ಮಾಡಿ ಬಿಡ್ತಿದ್ದರು, ಸದ್ಯ ಕೇಂದ್ರ ಸರ್ಕಾರ ಆ ಭ್ರಷ್ಟ ನೌಕರರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ರಕ್ಷಿಸಿ ಬಡವರ ಬಂಧು, ಅನಾಥ ರಕ್ಷಕ, ಶುಭ್ರ, ಸ್ವಚ್ಛ ವ್ಯಕ್ತಿತ್ವದ ಅದಾನಿ ಅಂತಹ ವ್ಯಕ್ತಿ ಕೈಗೆ ನಿಲ್ದಾಣವನ್ನು ಒಪ್ಪಿಸಿದ್ದು ನಿಜಕ್ಕೂ ಅಭಿನಂದನಾರ್ಹ !!” ಎಂದಿದ್ದಾರೆ.

ಇನ್ನು ಹಲವು ಮಂದಿ ತಮ್ಮ ಟ್ವಿಟರ್‌, ಫೇಸ್‌ಬುಕ್‌ ಗೊಡೆಗಳಲ್ಲಿ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಸಂಸ್ಥೆ ಜಹೊತೆಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ನಂತರ ಆದಾನಿ ಸಂಸ್ಥೆ ಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ. ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿದ್ದವು.

ಅದಾನಿ ಗ್ರೂಪ್ ನವೆಂಬರ್ 2 ರಂದು ಲಕ್ನೋ ವಿಮಾನ ನಿಲ್ದಾಣ ಮತ್ತು ನವೆಂಬರ್ 7 ರಂದು ಅಹಮದಾಬಾದ್ ವಿಮಾನ ನಿಲ್ದಾಣವನ್ನು ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಿಮಾನ ನಿಲ್ದಾಣಗಳ ನಿರ್ವಹಣೆ ಗುತ್ತಿಗೆ ಅದಾನಿಗೆ: ಖಂಡಿಸಿ ಮೋದಿಗೆ ಪತ್ರ ಬರೆದ ಪಿಣರಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...