Homeಕರ್ನಾಟಕಮಂಗಳೂರು: ಮತ್ತೊಂದು ಮತೀಯ ಗೂಂಡಾಗಿರಿ ಪ್ರಕರಣ; ವಿಡಿಯೊ ವೈರಲ್‌

ಮಂಗಳೂರು: ಮತ್ತೊಂದು ಮತೀಯ ಗೂಂಡಾಗಿರಿ ಪ್ರಕರಣ; ವಿಡಿಯೊ ವೈರಲ್‌

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮತ್ತೊಂದು ಪ್ರಕರಣ ಶುಕ್ರವಾರ ನಡೆದಿದೆ.

ಮಂಗಳೂರು ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಮತೀಯ ಗೂಂಡಾಗಿರಿ ನಡೆಸಿದ್ದು, ವಿಡಿಯೊ ವೈರಲ್‌ ಆಗಿದೆ.

ಶುಕ್ರವಾರ ಬೆಳಿಗ್ಗೆ ನಗರ ಸರ್ವಿಸ್ ಬಸ್ ನಿಲ್ಯಾಣದಲ್ಲಿದ್ದ ಬಸ್ಸಿನಿಂದ ಇಬ್ಬರು ವಿದ್ಯಾರ್ಥಿಗಳನ್ನು ಕೆಳಗಿಳಿಸಿ ಗೂಂಡಾಗಿರಿ ನಡೆಸಿರುವ ಆರೋಪ ಕೇಳಿ ಬಂದಿದೆ.

ಮಂಗಳೂರು ನಗರದ ಸ್ಟೇಟ್ ಬ್ಯಾಂಕ್‌ ಸಮೀಪದ ಖಾಸಗಿ ಬಸ್ ನಿಲ್ದಾಣದಲ್ಲಿ ಮಂಗಳೂರಿನಿಂದ ಉಡುಪಿಗೆ ತೆರಳಲು ಇಬ್ಬರು ಬಸ್ಸಿನಲ್ಲಿ ಕುಳಿತಿದ್ದರು. ಶಿವಮೊಗ್ಗ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಉಡುಪಿ ಮೂಲದವರು ಎಂದು ವರದಿಗಳಾಗಿವೆ.

ನಗರ ಹೊರವಲಯದ ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಇವರು ಉಡುಪಿಗೆ ತೆರಳುವ ಬಸ್ಸಿನಲ್ಲಿ ಕುಳಿತಿದ್ದುದನ್ನು ಕಂಡ ಸಂಘ ಪರಿವಾರದ ಕಾರ್ಯಕರ್ತರು ಬಸ್ಸಿನೊಳಗೆ ನುಗ್ಗಿ ವಿದ್ಯಾರ್ಥಿಗಳನ್ನು ಹೆದರಿಸಿ ಬಲವಂತವಾಗಿ ಕೆಳಗಿಳಿಸಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಯ ಗುರುತಿನ ಚೀಟಿ ಮತ್ತು ವಿಳಾಸವನ್ನು ಕೇಳಿ ಬೆದರಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್, ‘ಪ್ರಕರಣದ ಬಗ್ಗೆ ಮತ್ತು ವಿದ್ಯಾರ್ಥಿಗಳು ಎಲ್ಲಿಯವರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ದಕ್ಷಿಣ ಕನ್ನಡದ ಹೆಚ್ಚುತ್ತಿದೆ ಕೋಮುದ್ವೇಷ

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ (ಪಿಯುಸಿಎಲ್‌-ಕ) ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌ (ಎಐಎಲ್‌ಎಜೆ), ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ (ಎಐಪಿಎಫ್‌) ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ (gaurilankeshnews.com) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರವರು ಮತೀಯ ಗೂಂಡಾಗಿರಿಯನ್ನು ಬಹಿರಂಗವಾಗಿ ಸಮರ್ಥಿಸಿ ಹೇಳಿಕೆ ನೀಡಿದ್ದನ್ನು, ಸಾಮಾಜಿಕ ಸಂಘಟನೆಗಳು, ನಾಗರಿಕರು, ವಿದ್ಯಾರ್ಥಿಗಳು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರುಗಳು ತೀವ್ರವಾಗಿ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಎಂತಹ ಗಂಭೀರ ಪರಿಸ್ಥಿತಿಯಲ್ಲಿ ನಾವು ಇದ್ದೇವೆ ಎನ್ನುವುದನ್ನು ಈ ವರದಿಯು ಉಲ್ಲೇಖಿಸುತ್ತದೆ.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ


ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್‌ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿಕ ಘಟನೆಗಳನ್ನು ವಿಶ್ಲೇಷಿಸಿದೆ. ಜೊತೆಗೆ ಆರು ವಿಭಿನ್ನ ಮಾದರಿಯ ಘಟನೆಗಳನ್ನು ಗುರುತಿಸುತ್ತದೆ. ಅವುಗಳೆಂದರೆ, 1. ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು 2. ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು. 3. ಆರ್ಥಿಕ ಸಾಮಾಜಿಕ ಬಹಿಷ್ಕಾರ. 4. ಗೋವಿನ ಹೆಸರಲ್ಲಿ ದಾಳಿಗಳು. 5. ಧಾರ್ಮಿಕ ಸ್ವಾತಂತ್ರ್ಯವನ್ನು ನಿಗ್ರಹಿಸುವುದು. 6. ದ್ವೇಷ ಹರಡುವ ಭಾಷಣಗಳನ್ನು ಮಾಡುವುದು.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.


ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...