Homeಕರ್ನಾಟಕಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

- Advertisement -
- Advertisement -

ಕರಾವಳಿಯಲ್ಲಿ ಮತ್ತೊಂದು ಅನೈತಿಕ ಪೊಲೀಸ್‌ಗಿರಿ ಘಟನೆ ಶನಿವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕಡೆಗೆ ತೆರಳುತ್ತಿದ್ದ ಮುಸ್ಲಿಂ ವ್ಯಕ್ತಿಯ ಕಾರಿನಲ್ಲಿ ಹಿಂದೂ ಮಹಿಳೆಯರಿಬ್ಬರು ಪ್ರಯಾಣಿಸಿದ್ದರು. ಈ ಕಾರನ್ನು ಹಿಂಬಾಲಿಸಿಕೊಂಡು ಬಂದ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಕಾರ್ಯಕರ್ತರು ಕೆಸರುಗದ್ದೆ ಎಂಬಲ್ಲಿ ತಡೆದು, ಮುಸ್ಲಿಮರ ಕಾರಿನಲ್ಲಿ ಹಿಂದೂ ಮಹಿಳೆಯರು ಪ್ರಯಾಣಿಸಿದ್ದಕ್ಕೆ ಅವರನ್ನು ನಿಂದಿಸಿ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಮಿತ್ ರಾಜ್ ಮತ್ತು ಸಂದೀಪ್ ಪೂಜಾರಿ ಎಂಬವರನ್ನು ಬಂಧಿಸಲಾಗಿದೆ.

ಘಟನೆಯ ವಿವರ

ಉಡುಪಿ ಜಿಲ್ಲೆಯ ಕಾರ್ಕಳದವರಾದ ಗೀತಾ ಮತ್ತು ಅವರ ಸ್ನೇಹಿತೆ ಮಂಜುಳಾ ಎಂಬವರು ಶನಿವಾರದಂದು ಮೂಡುಬಿದಿರೆಯ ಹನುಮಾನ್ ದೇವಸ್ಥಾನಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ದಾರಿಯಲ್ಲಿ, ಅವರು ತಮ್ಮ ಸ್ನೇಹಿತೆ ಸೌಧ ಎಂಬವರನ್ನು ಭೇಟಿಯಾಗಿದ್ದರು. ಈ ವೇಳೆ ಅವರ ಸೌಧ ಅವರ ಪತಿ ಅಶ್ರಫ್ ಕೂಡಾ ಇದ್ದರು. ಅವರು ಕೂಡಾ ಮೂಡಬಿದಿರೆ ದಾರಿಯಲ್ಲಿ ಹೋಗುತ್ತಿರುವುದರಿಂದ ಗೀತಾ ಮತ್ತು ಮಂಜುಳಾ ತಮ್ಮ ದ್ವಿಚಕ್ರ ವಾಹನವನ್ನು ಅಲ್ಲಿಯೆ ನಿಲ್ಲಿಸಿ, ಸೌಧ ಮತ್ತು ಅಶ್ರಫ್ ಅವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಹತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

ಕಾರು ಕೆಸರುಗದ್ದೆ ಎಂಬಲ್ಲಿಗೆ ತಲುಪುತ್ತಿದ್ದಂತೆ, ಸುಮಾರು ಆರರಿಂದ ಎಂಟು ಜನ ಬಜರಂಗದಳದ ದುಷ್ಕರ್ಮಿಗಳು ಬೈಕ್‌ಗಳಲ್ಲಿ ಅವರನ್ನು ಹಿಂಬಾಲಿಸಿ ಬಂದು, ಕಾರನ್ನು ತಡೆದಿದ್ದಾರೆ. ನಂತರ ಗೀತಾ ಮತ್ತು ಮಂಜುಳಾ ಅವರನ್ನು ಕಾರಿನಿಂದ ಇಳಿಯಲು ಕೈಹಿಡಿದು ಹೊರಗೆ ಎಳೆದಿದ್ದಾರೆ. ಅಲ್ಲದೆ, ಮುಸ್ಲಿಮರ ಕಾರಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಮಹಿಳೆಯರು ದೂರಿದ್ದಾರೆ ಎಂದು ವಾರ್ತಾಭಾರತಿ ಪತ್ರಿಕೆ ವರದಿ ಮಾಡಿದೆ.

ಜೊತೆಗೆ ಅಶ್ರಫ್ ಮತ್ತು ಸೌಧ ಅವರಿಗೂ ದುಷ್ಕರ್ಮಿಗಳು ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ಘಟನೆಯ ಬಗ್ಗೆ ಮೂಡುಬಿದ್ರಿ ಪೊಲೀಸರು ಐಪಿಸಿ ಸೆಕ್ಷನ್ 354, 153 (ಎ), 504 ಮತ್ತು 506 ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಇಬ್ಬರನ್ನು ಬಂಧಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, “ಪ್ರಕರಣದಲ್ಲಿ ಪ್ರಮುಖ ಆರೋಪಿ ಸಹಿತ ಒಟ್ಟು ಇಬ್ಬರನ್ನು ಬಂಧಿಸಿದ್ದೇವೆ. ಇತರ ಆರೋಪಿಗಳ ಪತ್ತೆಗಾಗಿ ಕ್ರಮಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

ಕರಾವಳಿಯಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಇತ್ತೀಚೆಗೆ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚುತ್ತಿದೆ.

“ಇದನ್ನು ಬಿಜೆಪಿಯೇ ನಡೆಸುತ್ತಿದ್ದು, ಮುಂಬರುವ ತಾಲೂಕು ಪಂಚಾಯತ್‌ ಚುನಾವಣೆಗಾಗಿ ಇದು ನಡೆಯುತ್ತಿದೆ. ಜನರು ಬೆಲೆ ಏರಿಕೆ ಮತ್ತು ದೇಶದಲ್ಲಿ ನಡೆಯುತ್ತಿರವ ಆರ್ಥಿಕ ಹಿನ್ನಡೆಯನ್ನು ಪ್ರಶ್ನೆ ಮಾಡುಲು ಶುರುಮಾಡಿದ್ದಾರೆ” ಎಂದು ಮಂಗಳೂರಿನ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ.

ಹೀಗಾಗಿ ಅದರಿಂದ ಜನರ ಗಮನವನ್ನು ಬೇರೆ ಕಡೆಗೆ ಸೆಳೆಯಲು ಈ ರೀತಿಯ ಘಟನೆಯನ್ನು ಸೃಷ್ಟಿಸುತ್ತಿದ್ದಾರೆ. ಆದರೆ ನಾವು ಜನರಿಗೆ ಬಿಜೆಪಿಯ ದುರಾಡಳಿತವನ್ನು ನಾವು ಇನ್ನೂ ಹೆಚ್ಚು ಹೆಚ್ಚು ತಿಳಿಸಿ ಜನರನ್ನು ಜಾಗೃತಗೊಳಿಸಬೇಕು” ಎಂದು ಅವರು ಹೇಳಿದ್ದಾರೆ.

ಸುರತ್ಕಲ್‌ನಲ್ಲಿ ಇತ್ತೀಚೆಗೆ, ಕಾರಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದರು. ಘಟನೆ ವಿರೋಧಿಸಿ ರಾಷ್ಟ್ರಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಐವರನ್ನು ಬಂಧಿಸಲಾಗಿತ್ತು. ಆದರೆ ಅವರಿಗೆ ಠಾಣೆಯಲ್ಲೇ ಜಾಮೀನು ನೀಡಿ ಬಿಡುಗಡೆ ಮಾಡಲಾಗಿತ್ತು.

ಇದಕ್ಕಿಂತ ಮುಂಚೆ, ಸಹೋದ್ಯೋಗಿ ಹಾಗೂ ಇನ್ನೊಬ್ಬ ಮುಸ್ಲಿಂ ಗೆಳೆಯನೊಂದಿಗೆ ಹೋಟೆಲೊಂದರಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ, ಬಜರಂಗದಳದ ಸುಮಾರು ಐದು ಜನರ ತಂಡವೊಂದು ಕಿರುಕುಳ ನೀಡಿತ್ತು. ಈ ಸಂಬಂಧ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಭಜರಂಗದಳದ ಸದಸ್ಯರನ್ನು ಬಂಧಿಸಿದ್ದರು.

ಬಂಟ್ವಾಳದಲ್ಲಿ ಕಾರಿಂಜ ದೇವಸ್ಥಾನಕ್ಕೆ ತೆರಳಿದ್ದ ಆರು ವಿದ್ಯಾರ್ಥಿಗಳನ್ನು ತಡೆದು ಹಲವು ಗಂಟೆಗಳ ಕಾಲ ಪ್ರಶ್ನಿಸಿದ್ದ ತಂಡದ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಇದಕ್ಕಿಂಲೂ ಮುಂಚೆ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ವಿಭಿನ್ನಕೋಮಿನ ಯುವಕ ಯುವತಿಯರು ಒಟ್ಟಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಆರೋಪಿಸಿ ಬಸ್ಸನ್ನು ತಡೆದಿದ್ದು ವರದಿಯಾಗಿತ್ತು.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...