Homeಕರ್ನಾಟಕಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

- Advertisement -
- Advertisement -

ಕರಾವಳಿಯಲ್ಲಿ ಮತ್ತೊಂದು ಅನೈತಿಕ ಪೊಲೀಸ್‌ಗಿರಿ ಘಟನೆ ಶನಿವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕಡೆಗೆ ತೆರಳುತ್ತಿದ್ದ ಮುಸ್ಲಿಂ ವ್ಯಕ್ತಿಯ ಕಾರಿನಲ್ಲಿ ಹಿಂದೂ ಮಹಿಳೆಯರಿಬ್ಬರು ಪ್ರಯಾಣಿಸಿದ್ದರು. ಈ ಕಾರನ್ನು ಹಿಂಬಾಲಿಸಿಕೊಂಡು ಬಂದ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಕಾರ್ಯಕರ್ತರು ಕೆಸರುಗದ್ದೆ ಎಂಬಲ್ಲಿ ತಡೆದು, ಮುಸ್ಲಿಮರ ಕಾರಿನಲ್ಲಿ ಹಿಂದೂ ಮಹಿಳೆಯರು ಪ್ರಯಾಣಿಸಿದ್ದಕ್ಕೆ ಅವರನ್ನು ನಿಂದಿಸಿ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಮಿತ್ ರಾಜ್ ಮತ್ತು ಸಂದೀಪ್ ಪೂಜಾರಿ ಎಂಬವರನ್ನು ಬಂಧಿಸಲಾಗಿದೆ.

ಘಟನೆಯ ವಿವರ

ಉಡುಪಿ ಜಿಲ್ಲೆಯ ಕಾರ್ಕಳದವರಾದ ಗೀತಾ ಮತ್ತು ಅವರ ಸ್ನೇಹಿತೆ ಮಂಜುಳಾ ಎಂಬವರು ಶನಿವಾರದಂದು ಮೂಡುಬಿದಿರೆಯ ಹನುಮಾನ್ ದೇವಸ್ಥಾನಕ್ಕೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ದಾರಿಯಲ್ಲಿ, ಅವರು ತಮ್ಮ ಸ್ನೇಹಿತೆ ಸೌಧ ಎಂಬವರನ್ನು ಭೇಟಿಯಾಗಿದ್ದರು. ಈ ವೇಳೆ ಅವರ ಸೌಧ ಅವರ ಪತಿ ಅಶ್ರಫ್ ಕೂಡಾ ಇದ್ದರು. ಅವರು ಕೂಡಾ ಮೂಡಬಿದಿರೆ ದಾರಿಯಲ್ಲಿ ಹೋಗುತ್ತಿರುವುದರಿಂದ ಗೀತಾ ಮತ್ತು ಮಂಜುಳಾ ತಮ್ಮ ದ್ವಿಚಕ್ರ ವಾಹನವನ್ನು ಅಲ್ಲಿಯೆ ನಿಲ್ಲಿಸಿ, ಸೌಧ ಮತ್ತು ಅಶ್ರಫ್ ಅವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಹತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

ಕಾರು ಕೆಸರುಗದ್ದೆ ಎಂಬಲ್ಲಿಗೆ ತಲುಪುತ್ತಿದ್ದಂತೆ, ಸುಮಾರು ಆರರಿಂದ ಎಂಟು ಜನ ಬಜರಂಗದಳದ ದುಷ್ಕರ್ಮಿಗಳು ಬೈಕ್‌ಗಳಲ್ಲಿ ಅವರನ್ನು ಹಿಂಬಾಲಿಸಿ ಬಂದು, ಕಾರನ್ನು ತಡೆದಿದ್ದಾರೆ. ನಂತರ ಗೀತಾ ಮತ್ತು ಮಂಜುಳಾ ಅವರನ್ನು ಕಾರಿನಿಂದ ಇಳಿಯಲು ಕೈಹಿಡಿದು ಹೊರಗೆ ಎಳೆದಿದ್ದಾರೆ. ಅಲ್ಲದೆ, ಮುಸ್ಲಿಮರ ಕಾರಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಮಹಿಳೆಯರು ದೂರಿದ್ದಾರೆ ಎಂದು ವಾರ್ತಾಭಾರತಿ ಪತ್ರಿಕೆ ವರದಿ ಮಾಡಿದೆ.

ಜೊತೆಗೆ ಅಶ್ರಫ್ ಮತ್ತು ಸೌಧ ಅವರಿಗೂ ದುಷ್ಕರ್ಮಿಗಳು ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ಘಟನೆಯ ಬಗ್ಗೆ ಮೂಡುಬಿದ್ರಿ ಪೊಲೀಸರು ಐಪಿಸಿ ಸೆಕ್ಷನ್ 354, 153 (ಎ), 504 ಮತ್ತು 506 ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಇಬ್ಬರನ್ನು ಬಂಧಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, “ಪ್ರಕರಣದಲ್ಲಿ ಪ್ರಮುಖ ಆರೋಪಿ ಸಹಿತ ಒಟ್ಟು ಇಬ್ಬರನ್ನು ಬಂಧಿಸಿದ್ದೇವೆ. ಇತರ ಆರೋಪಿಗಳ ಪತ್ತೆಗಾಗಿ ಕ್ರಮಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಬಜರಂಗದಳದ ಕಾರ್ಯಕರ್ತರಿಬ್ಬರ ಬಂಧನ

ಕರಾವಳಿಯಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಇತ್ತೀಚೆಗೆ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚುತ್ತಿದೆ.

“ಇದನ್ನು ಬಿಜೆಪಿಯೇ ನಡೆಸುತ್ತಿದ್ದು, ಮುಂಬರುವ ತಾಲೂಕು ಪಂಚಾಯತ್‌ ಚುನಾವಣೆಗಾಗಿ ಇದು ನಡೆಯುತ್ತಿದೆ. ಜನರು ಬೆಲೆ ಏರಿಕೆ ಮತ್ತು ದೇಶದಲ್ಲಿ ನಡೆಯುತ್ತಿರವ ಆರ್ಥಿಕ ಹಿನ್ನಡೆಯನ್ನು ಪ್ರಶ್ನೆ ಮಾಡುಲು ಶುರುಮಾಡಿದ್ದಾರೆ” ಎಂದು ಮಂಗಳೂರಿನ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ.

ಹೀಗಾಗಿ ಅದರಿಂದ ಜನರ ಗಮನವನ್ನು ಬೇರೆ ಕಡೆಗೆ ಸೆಳೆಯಲು ಈ ರೀತಿಯ ಘಟನೆಯನ್ನು ಸೃಷ್ಟಿಸುತ್ತಿದ್ದಾರೆ. ಆದರೆ ನಾವು ಜನರಿಗೆ ಬಿಜೆಪಿಯ ದುರಾಡಳಿತವನ್ನು ನಾವು ಇನ್ನೂ ಹೆಚ್ಚು ಹೆಚ್ಚು ತಿಳಿಸಿ ಜನರನ್ನು ಜಾಗೃತಗೊಳಿಸಬೇಕು” ಎಂದು ಅವರು ಹೇಳಿದ್ದಾರೆ.

ಸುರತ್ಕಲ್‌ನಲ್ಲಿ ಇತ್ತೀಚೆಗೆ, ಕಾರಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದರು. ಘಟನೆ ವಿರೋಧಿಸಿ ರಾಷ್ಟ್ರಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಐವರನ್ನು ಬಂಧಿಸಲಾಗಿತ್ತು. ಆದರೆ ಅವರಿಗೆ ಠಾಣೆಯಲ್ಲೇ ಜಾಮೀನು ನೀಡಿ ಬಿಡುಗಡೆ ಮಾಡಲಾಗಿತ್ತು.

ಇದಕ್ಕಿಂತ ಮುಂಚೆ, ಸಹೋದ್ಯೋಗಿ ಹಾಗೂ ಇನ್ನೊಬ್ಬ ಮುಸ್ಲಿಂ ಗೆಳೆಯನೊಂದಿಗೆ ಹೋಟೆಲೊಂದರಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ, ಬಜರಂಗದಳದ ಸುಮಾರು ಐದು ಜನರ ತಂಡವೊಂದು ಕಿರುಕುಳ ನೀಡಿತ್ತು. ಈ ಸಂಬಂಧ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಭಜರಂಗದಳದ ಸದಸ್ಯರನ್ನು ಬಂಧಿಸಿದ್ದರು.

ಬಂಟ್ವಾಳದಲ್ಲಿ ಕಾರಿಂಜ ದೇವಸ್ಥಾನಕ್ಕೆ ತೆರಳಿದ್ದ ಆರು ವಿದ್ಯಾರ್ಥಿಗಳನ್ನು ತಡೆದು ಹಲವು ಗಂಟೆಗಳ ಕಾಲ ಪ್ರಶ್ನಿಸಿದ್ದ ತಂಡದ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಇದಕ್ಕಿಂಲೂ ಮುಂಚೆ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ವಿಭಿನ್ನಕೋಮಿನ ಯುವಕ ಯುವತಿಯರು ಒಟ್ಟಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಆರೋಪಿಸಿ ಬಸ್ಸನ್ನು ತಡೆದಿದ್ದು ವರದಿಯಾಗಿತ್ತು.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...