Homeಕರ್ನಾಟಕಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಮಂಗಳೂರಿನ ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್‌ ಮತ್ತು ಭಿತ್ತಿ ಪತ್ರಗಳನ್ನು ಹಾಕಿರುವ ಪ್ರಕರಣದಲ್ಲಿ 62 ವರ್ಷದ ದೇವದಾಸ ದೇಸಾಯಿ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯೂ ಮಂಗಳೂರಿನ ದೈವಸ್ಥಾನ, ದೇವಸ್ಥಾನ, ಮಸೀದಿ ಮತ್ತು ಸಿಖ್‌ ಗುರುದ್ವಾರ ಸೇರಿದಂತೆ ಒಟ್ಟು 18 ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್ ಹಾಕಿರುವುದಾಗಿ ಒಪ್ಪಿಕೊಂಡಿದ್ದಾಗಿ ನಗರದ ಆಯುಕ್ತರಾದ ಶಶಿಕುಮಾರ್‌‌ ತಿಳಿಸಿದ್ದಾರೆ.

ಬಂಧಿತ ಆರೋಪಿಯು ಮಂಗಳೂರು ಹೊರವಲಯದ ಕೋಟೆಕಾರು ಕೊಂಡಾಣದಲ್ಲಿ ವಾಸಿಸುತ್ತಿದ್ದು, ಮೂಲತಃ ಹುಬ್ಬಳ್ಳಿ ನಿವಾಸಿಯಾಗಿದ್ದಾನೆ. ಆದರೆ ಕಳೆದ 24 ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ರಿಕ್ಷಾ ಡ್ರೈವರ್‌ ಆಗಿದ್ದ ಆರೋಪಿಯು ಪ್ರಸ್ತುತ ಪೇಪರ್‌ ಮತ್ತು ರಟ್ಟುಗಳನ್ನು ಸಂಗ್ರಹಿಸಿ ಅದನ್ನು ಮಾಡಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಂಗಳೂರಿನಲ್ಲಿ ಇತ್ತೀಚೆಗೆ ದೈವಸ್ಥಾನದ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಂ ಪತ್ತೆಯಾಗುತ್ತಿರುವ ಬಗ್ಗೆ ಸರಣಿಯಾಗಿ ವರದಿಯಾಗಿತ್ತು. ಜೊತೆಗೆ ಹಲವು ಪ್ರದೇಶಗಳಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು. ಅಲ್ಲದೆ, ಕೆಲವು ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿ, ಪ್ರಕರಣಕ್ಕೆ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು.

ಡಿಸೆಂಬರ್‌ 28 ರಂದು ಮಂಗಳೂರು ನಗರದ ನಂದಿಗುಡ್ಡೆಯಲ್ಲಿರುವ ಕೊರಗಜ್ಜ ದೈವಸ್ಥಾನದ ಕಟ್ಟೆಯ ಮೇಲೆ ಕಾಂಡೋಮ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈತನನ್ನು ಬಂಧಿಸಿದಾಗ, ಆರೋಪಿಯ ಉಳಿದ ಪ್ರಕರಣಗಳು ಕೂಡ ಬೆಳಕಿಗೆ ಬಂದಿದೆ.

ಆರೋಪಿಯು ಸುಮಾರು 20 ವರ್ಷಗಳ ಹಿಂದೆಯೆ ಕುಟುಂಬದೊಂದಿಗೆ ಸಂಪರ್ಕ ಕಡಿದು ಏಕಾಂಗಿಯಾಗಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದು, “ಅವನ ಹಿಂದೆ ಯಾವುದೇ ಜನ ಅಥವಾ ಗುಂಪಿನ ಕೈವಾಡ ಇಲ್ಲ, ಆತ ಏಕಾಂಗಿಯಾಗಿ ಈ ಕೃತ್ಯಗಳನ್ನು ಮಾಡುತ್ತಿದ್ದ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಕಟ್ಟೆ, ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ಸಮೀಪದ ಕಾಣಿಕೆ ಡಬ್ಬಿ, ಒಮೆಗಾ ಆಸ್ಪತ್ರೆ ಬಳಿಯ ಕಲ್ಲುರ್ಟಿ ದೈವಸ್ಥಾನ, ಪಂಪ್ ವೆಲ್ ಬಳಿಯಿರುವ ದೈವಸ್ಥಾನ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಪು ನಾಗನಕಟ್ಟೆ, ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ, ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ, ನಗರದ ಎ.ಬಿ.ಶೆಟ್ಟಿ ವೃತ್ತದ ಬಳಿಯ ಸೈದಾನಿ ಬೀಬಿ ದರ್ಗಾ, ಬಂಗ್ರ ಕೂಳೂರಿನಲ್ಲಿರುವ ಸಿಖ್ ಗುರುದ್ವಾರ, ಕೋಟ ಶ್ರೀ ಬಬ್ಬುಸ್ವಾಮಿ ದೈವಸ್ಥಾನ- ಮಂಕಿಸ್ಟ್ಯಾಂಡ್ ಹಾಗೂ ಜೆಪ್ಪು ಮಹಾಕಾಳಿಪಡ್ಪುವಿನಲ್ಲಿರುವ ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿಯ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ ಇತ್ಯಾದಿಗಳನ್ನು ಹಾಕಿದ್ದಾಗಿ ಆರೋಪಿಯು ಒಪ್ಪಿಕೊಂಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರು ತಪ್ಪಾಗಿ ಆರಾಧನೆ ಮಾಡುತ್ತಾ ದೇವರ ಅವಕೃಪೆಗೆ ಪಾತ್ರರಾಗುತ್ತಿದ್ದಾರೆ. ನೀವು ಆರಾಧಿಸುವ ದೇವರಿಗೆ ಕಾಣಿಕೆ ಡಬ್ಬಿಯನ್ನೇ ರಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬ ಸಂದೇಶವನ್ನು ಜನರಿಗೆ ನೀಡುವುದಕ್ಕಾಗಿ ಆರೋಪಿಯು ದಾರ್ಮಿಕ ಕೇಂದ್ರಗಳನ್ನು ಅಪವಿತ್ರ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾಗಿ ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆರೋಪಿ ದೇವದಾಸ್ ದೇಸಾಯಿ, ತಾನು ಮಾಡಿದ ಯಾವುದೆ ಕೃತ್ಯದ ಬಗ್ಗೆ ಪಶ್ಚಾತಾಪ ಇಲ್ಲ ಎಂದು ಹೇಳಿಕೊಂಡಿದ್ದಾನೆ. “ಹದಿನೈದು ವರ್ಷಗಳಿಂದ ಬೈಬಲನ್ನು ಆಳವಾಗಿ ಅಧ್ಯಯನ ಮಾಡುತ್ತಿದ್ದೇನೆ. ಭೂಮಿಗೆ ಅಂತ್ಯ ಬರುವ ಮೊದಲು ಏಸುಕ್ರಿಸ್ತನ ಹೆಸರಿನಲ್ಲಿ ರಕ್ಷಣೆ ಹೊಂದಿ ಎಂದು ಅದು ಹೇಳುತ್ತದೆ. ಆದರೆ ಜನರು ಇದನ್ನು ಪಾಲಿಸುತ್ತಿಲ್ಲ, ಹಾಗಾಗಿ ಅಪವಿತ್ರ ಜಾಗಗಳಿಗೆ ಅಪವಿತ್ರ ವಸ್ತುಗಳನ್ನು ಹಾಕುತ್ತಿದ್ದೆ” ಎಂದು ಹೇಳಿದ್ದಾನೆ.

ಇದನ್ನೂ ಓದಿ:ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...