Homeಕರ್ನಾಟಕಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಮಂಗಳೂರಿನ ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್‌ ಮತ್ತು ಭಿತ್ತಿ ಪತ್ರಗಳನ್ನು ಹಾಕಿರುವ ಪ್ರಕರಣದಲ್ಲಿ 62 ವರ್ಷದ ದೇವದಾಸ ದೇಸಾಯಿ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯೂ ಮಂಗಳೂರಿನ ದೈವಸ್ಥಾನ, ದೇವಸ್ಥಾನ, ಮಸೀದಿ ಮತ್ತು ಸಿಖ್‌ ಗುರುದ್ವಾರ ಸೇರಿದಂತೆ ಒಟ್ಟು 18 ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್ ಹಾಕಿರುವುದಾಗಿ ಒಪ್ಪಿಕೊಂಡಿದ್ದಾಗಿ ನಗರದ ಆಯುಕ್ತರಾದ ಶಶಿಕುಮಾರ್‌‌ ತಿಳಿಸಿದ್ದಾರೆ.

ಬಂಧಿತ ಆರೋಪಿಯು ಮಂಗಳೂರು ಹೊರವಲಯದ ಕೋಟೆಕಾರು ಕೊಂಡಾಣದಲ್ಲಿ ವಾಸಿಸುತ್ತಿದ್ದು, ಮೂಲತಃ ಹುಬ್ಬಳ್ಳಿ ನಿವಾಸಿಯಾಗಿದ್ದಾನೆ. ಆದರೆ ಕಳೆದ 24 ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ರಿಕ್ಷಾ ಡ್ರೈವರ್‌ ಆಗಿದ್ದ ಆರೋಪಿಯು ಪ್ರಸ್ತುತ ಪೇಪರ್‌ ಮತ್ತು ರಟ್ಟುಗಳನ್ನು ಸಂಗ್ರಹಿಸಿ ಅದನ್ನು ಮಾಡಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಂಗಳೂರಿನಲ್ಲಿ ಇತ್ತೀಚೆಗೆ ದೈವಸ್ಥಾನದ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಂ ಪತ್ತೆಯಾಗುತ್ತಿರುವ ಬಗ್ಗೆ ಸರಣಿಯಾಗಿ ವರದಿಯಾಗಿತ್ತು. ಜೊತೆಗೆ ಹಲವು ಪ್ರದೇಶಗಳಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು. ಅಲ್ಲದೆ, ಕೆಲವು ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿ, ಪ್ರಕರಣಕ್ಕೆ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು.

ಡಿಸೆಂಬರ್‌ 28 ರಂದು ಮಂಗಳೂರು ನಗರದ ನಂದಿಗುಡ್ಡೆಯಲ್ಲಿರುವ ಕೊರಗಜ್ಜ ದೈವಸ್ಥಾನದ ಕಟ್ಟೆಯ ಮೇಲೆ ಕಾಂಡೋಮ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈತನನ್ನು ಬಂಧಿಸಿದಾಗ, ಆರೋಪಿಯ ಉಳಿದ ಪ್ರಕರಣಗಳು ಕೂಡ ಬೆಳಕಿಗೆ ಬಂದಿದೆ.

ಆರೋಪಿಯು ಸುಮಾರು 20 ವರ್ಷಗಳ ಹಿಂದೆಯೆ ಕುಟುಂಬದೊಂದಿಗೆ ಸಂಪರ್ಕ ಕಡಿದು ಏಕಾಂಗಿಯಾಗಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದು, “ಅವನ ಹಿಂದೆ ಯಾವುದೇ ಜನ ಅಥವಾ ಗುಂಪಿನ ಕೈವಾಡ ಇಲ್ಲ, ಆತ ಏಕಾಂಗಿಯಾಗಿ ಈ ಕೃತ್ಯಗಳನ್ನು ಮಾಡುತ್ತಿದ್ದ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಕಟ್ಟೆ, ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ಸಮೀಪದ ಕಾಣಿಕೆ ಡಬ್ಬಿ, ಒಮೆಗಾ ಆಸ್ಪತ್ರೆ ಬಳಿಯ ಕಲ್ಲುರ್ಟಿ ದೈವಸ್ಥಾನ, ಪಂಪ್ ವೆಲ್ ಬಳಿಯಿರುವ ದೈವಸ್ಥಾನ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಪು ನಾಗನಕಟ್ಟೆ, ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ, ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ, ನಗರದ ಎ.ಬಿ.ಶೆಟ್ಟಿ ವೃತ್ತದ ಬಳಿಯ ಸೈದಾನಿ ಬೀಬಿ ದರ್ಗಾ, ಬಂಗ್ರ ಕೂಳೂರಿನಲ್ಲಿರುವ ಸಿಖ್ ಗುರುದ್ವಾರ, ಕೋಟ ಶ್ರೀ ಬಬ್ಬುಸ್ವಾಮಿ ದೈವಸ್ಥಾನ- ಮಂಕಿಸ್ಟ್ಯಾಂಡ್ ಹಾಗೂ ಜೆಪ್ಪು ಮಹಾಕಾಳಿಪಡ್ಪುವಿನಲ್ಲಿರುವ ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿಯ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ ಇತ್ಯಾದಿಗಳನ್ನು ಹಾಕಿದ್ದಾಗಿ ಆರೋಪಿಯು ಒಪ್ಪಿಕೊಂಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರು ತಪ್ಪಾಗಿ ಆರಾಧನೆ ಮಾಡುತ್ತಾ ದೇವರ ಅವಕೃಪೆಗೆ ಪಾತ್ರರಾಗುತ್ತಿದ್ದಾರೆ. ನೀವು ಆರಾಧಿಸುವ ದೇವರಿಗೆ ಕಾಣಿಕೆ ಡಬ್ಬಿಯನ್ನೇ ರಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬ ಸಂದೇಶವನ್ನು ಜನರಿಗೆ ನೀಡುವುದಕ್ಕಾಗಿ ಆರೋಪಿಯು ದಾರ್ಮಿಕ ಕೇಂದ್ರಗಳನ್ನು ಅಪವಿತ್ರ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾಗಿ ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆರೋಪಿ ದೇವದಾಸ್ ದೇಸಾಯಿ, ತಾನು ಮಾಡಿದ ಯಾವುದೆ ಕೃತ್ಯದ ಬಗ್ಗೆ ಪಶ್ಚಾತಾಪ ಇಲ್ಲ ಎಂದು ಹೇಳಿಕೊಂಡಿದ್ದಾನೆ. “ಹದಿನೈದು ವರ್ಷಗಳಿಂದ ಬೈಬಲನ್ನು ಆಳವಾಗಿ ಅಧ್ಯಯನ ಮಾಡುತ್ತಿದ್ದೇನೆ. ಭೂಮಿಗೆ ಅಂತ್ಯ ಬರುವ ಮೊದಲು ಏಸುಕ್ರಿಸ್ತನ ಹೆಸರಿನಲ್ಲಿ ರಕ್ಷಣೆ ಹೊಂದಿ ಎಂದು ಅದು ಹೇಳುತ್ತದೆ. ಆದರೆ ಜನರು ಇದನ್ನು ಪಾಲಿಸುತ್ತಿಲ್ಲ, ಹಾಗಾಗಿ ಅಪವಿತ್ರ ಜಾಗಗಳಿಗೆ ಅಪವಿತ್ರ ವಸ್ತುಗಳನ್ನು ಹಾಕುತ್ತಿದ್ದೆ” ಎಂದು ಹೇಳಿದ್ದಾನೆ.

ಇದನ್ನೂ ಓದಿ:ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...