Homeಕರ್ನಾಟಕಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಮಂಗಳೂರಿನ ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್‌ ಮತ್ತು ಭಿತ್ತಿ ಪತ್ರಗಳನ್ನು ಹಾಕಿರುವ ಪ್ರಕರಣದಲ್ಲಿ 62 ವರ್ಷದ ದೇವದಾಸ ದೇಸಾಯಿ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯೂ ಮಂಗಳೂರಿನ ದೈವಸ್ಥಾನ, ದೇವಸ್ಥಾನ, ಮಸೀದಿ ಮತ್ತು ಸಿಖ್‌ ಗುರುದ್ವಾರ ಸೇರಿದಂತೆ ಒಟ್ಟು 18 ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್ ಹಾಕಿರುವುದಾಗಿ ಒಪ್ಪಿಕೊಂಡಿದ್ದಾಗಿ ನಗರದ ಆಯುಕ್ತರಾದ ಶಶಿಕುಮಾರ್‌‌ ತಿಳಿಸಿದ್ದಾರೆ.

ಬಂಧಿತ ಆರೋಪಿಯು ಮಂಗಳೂರು ಹೊರವಲಯದ ಕೋಟೆಕಾರು ಕೊಂಡಾಣದಲ್ಲಿ ವಾಸಿಸುತ್ತಿದ್ದು, ಮೂಲತಃ ಹುಬ್ಬಳ್ಳಿ ನಿವಾಸಿಯಾಗಿದ್ದಾನೆ. ಆದರೆ ಕಳೆದ 24 ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ರಿಕ್ಷಾ ಡ್ರೈವರ್‌ ಆಗಿದ್ದ ಆರೋಪಿಯು ಪ್ರಸ್ತುತ ಪೇಪರ್‌ ಮತ್ತು ರಟ್ಟುಗಳನ್ನು ಸಂಗ್ರಹಿಸಿ ಅದನ್ನು ಮಾಡಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಂಗಳೂರಿನಲ್ಲಿ ಇತ್ತೀಚೆಗೆ ದೈವಸ್ಥಾನದ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಂ ಪತ್ತೆಯಾಗುತ್ತಿರುವ ಬಗ್ಗೆ ಸರಣಿಯಾಗಿ ವರದಿಯಾಗಿತ್ತು. ಜೊತೆಗೆ ಹಲವು ಪ್ರದೇಶಗಳಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು. ಅಲ್ಲದೆ, ಕೆಲವು ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿ, ಪ್ರಕರಣಕ್ಕೆ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು.

ಡಿಸೆಂಬರ್‌ 28 ರಂದು ಮಂಗಳೂರು ನಗರದ ನಂದಿಗುಡ್ಡೆಯಲ್ಲಿರುವ ಕೊರಗಜ್ಜ ದೈವಸ್ಥಾನದ ಕಟ್ಟೆಯ ಮೇಲೆ ಕಾಂಡೋಮ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈತನನ್ನು ಬಂಧಿಸಿದಾಗ, ಆರೋಪಿಯ ಉಳಿದ ಪ್ರಕರಣಗಳು ಕೂಡ ಬೆಳಕಿಗೆ ಬಂದಿದೆ.

ಆರೋಪಿಯು ಸುಮಾರು 20 ವರ್ಷಗಳ ಹಿಂದೆಯೆ ಕುಟುಂಬದೊಂದಿಗೆ ಸಂಪರ್ಕ ಕಡಿದು ಏಕಾಂಗಿಯಾಗಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದು, “ಅವನ ಹಿಂದೆ ಯಾವುದೇ ಜನ ಅಥವಾ ಗುಂಪಿನ ಕೈವಾಡ ಇಲ್ಲ, ಆತ ಏಕಾಂಗಿಯಾಗಿ ಈ ಕೃತ್ಯಗಳನ್ನು ಮಾಡುತ್ತಿದ್ದ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಕಟ್ಟೆ, ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ಸಮೀಪದ ಕಾಣಿಕೆ ಡಬ್ಬಿ, ಒಮೆಗಾ ಆಸ್ಪತ್ರೆ ಬಳಿಯ ಕಲ್ಲುರ್ಟಿ ದೈವಸ್ಥಾನ, ಪಂಪ್ ವೆಲ್ ಬಳಿಯಿರುವ ದೈವಸ್ಥಾನ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಪು ನಾಗನಕಟ್ಟೆ, ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ, ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ, ನಗರದ ಎ.ಬಿ.ಶೆಟ್ಟಿ ವೃತ್ತದ ಬಳಿಯ ಸೈದಾನಿ ಬೀಬಿ ದರ್ಗಾ, ಬಂಗ್ರ ಕೂಳೂರಿನಲ್ಲಿರುವ ಸಿಖ್ ಗುರುದ್ವಾರ, ಕೋಟ ಶ್ರೀ ಬಬ್ಬುಸ್ವಾಮಿ ದೈವಸ್ಥಾನ- ಮಂಕಿಸ್ಟ್ಯಾಂಡ್ ಹಾಗೂ ಜೆಪ್ಪು ಮಹಾಕಾಳಿಪಡ್ಪುವಿನಲ್ಲಿರುವ ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿಯ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ ಇತ್ಯಾದಿಗಳನ್ನು ಹಾಕಿದ್ದಾಗಿ ಆರೋಪಿಯು ಒಪ್ಪಿಕೊಂಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರು ತಪ್ಪಾಗಿ ಆರಾಧನೆ ಮಾಡುತ್ತಾ ದೇವರ ಅವಕೃಪೆಗೆ ಪಾತ್ರರಾಗುತ್ತಿದ್ದಾರೆ. ನೀವು ಆರಾಧಿಸುವ ದೇವರಿಗೆ ಕಾಣಿಕೆ ಡಬ್ಬಿಯನ್ನೇ ರಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬ ಸಂದೇಶವನ್ನು ಜನರಿಗೆ ನೀಡುವುದಕ್ಕಾಗಿ ಆರೋಪಿಯು ದಾರ್ಮಿಕ ಕೇಂದ್ರಗಳನ್ನು ಅಪವಿತ್ರ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾಗಿ ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆರೋಪಿ ದೇವದಾಸ್ ದೇಸಾಯಿ, ತಾನು ಮಾಡಿದ ಯಾವುದೆ ಕೃತ್ಯದ ಬಗ್ಗೆ ಪಶ್ಚಾತಾಪ ಇಲ್ಲ ಎಂದು ಹೇಳಿಕೊಂಡಿದ್ದಾನೆ. “ಹದಿನೈದು ವರ್ಷಗಳಿಂದ ಬೈಬಲನ್ನು ಆಳವಾಗಿ ಅಧ್ಯಯನ ಮಾಡುತ್ತಿದ್ದೇನೆ. ಭೂಮಿಗೆ ಅಂತ್ಯ ಬರುವ ಮೊದಲು ಏಸುಕ್ರಿಸ್ತನ ಹೆಸರಿನಲ್ಲಿ ರಕ್ಷಣೆ ಹೊಂದಿ ಎಂದು ಅದು ಹೇಳುತ್ತದೆ. ಆದರೆ ಜನರು ಇದನ್ನು ಪಾಲಿಸುತ್ತಿಲ್ಲ, ಹಾಗಾಗಿ ಅಪವಿತ್ರ ಜಾಗಗಳಿಗೆ ಅಪವಿತ್ರ ವಸ್ತುಗಳನ್ನು ಹಾಕುತ್ತಿದ್ದೆ” ಎಂದು ಹೇಳಿದ್ದಾನೆ.

ಇದನ್ನೂ ಓದಿ:ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...