Homeಕರ್ನಾಟಕಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಮಂಗಳೂರಿನ ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್‌ ಮತ್ತು ಭಿತ್ತಿ ಪತ್ರಗಳನ್ನು ಹಾಕಿರುವ ಪ್ರಕರಣದಲ್ಲಿ 62 ವರ್ಷದ ದೇವದಾಸ ದೇಸಾಯಿ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯೂ ಮಂಗಳೂರಿನ ದೈವಸ್ಥಾನ, ದೇವಸ್ಥಾನ, ಮಸೀದಿ ಮತ್ತು ಸಿಖ್‌ ಗುರುದ್ವಾರ ಸೇರಿದಂತೆ ಒಟ್ಟು 18 ಕಾಣಿಕೆ ಡಬ್ಬಿಗಳಿಗೆ ಕಾಂಡೋಮ್ ಹಾಕಿರುವುದಾಗಿ ಒಪ್ಪಿಕೊಂಡಿದ್ದಾಗಿ ನಗರದ ಆಯುಕ್ತರಾದ ಶಶಿಕುಮಾರ್‌‌ ತಿಳಿಸಿದ್ದಾರೆ.

ಬಂಧಿತ ಆರೋಪಿಯು ಮಂಗಳೂರು ಹೊರವಲಯದ ಕೋಟೆಕಾರು ಕೊಂಡಾಣದಲ್ಲಿ ವಾಸಿಸುತ್ತಿದ್ದು, ಮೂಲತಃ ಹುಬ್ಬಳ್ಳಿ ನಿವಾಸಿಯಾಗಿದ್ದಾನೆ. ಆದರೆ ಕಳೆದ 24 ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ರಿಕ್ಷಾ ಡ್ರೈವರ್‌ ಆಗಿದ್ದ ಆರೋಪಿಯು ಪ್ರಸ್ತುತ ಪೇಪರ್‌ ಮತ್ತು ರಟ್ಟುಗಳನ್ನು ಸಂಗ್ರಹಿಸಿ ಅದನ್ನು ಮಾಡಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಮಂಗಳೂರಿನಲ್ಲಿ ಇತ್ತೀಚೆಗೆ ದೈವಸ್ಥಾನದ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಂ ಪತ್ತೆಯಾಗುತ್ತಿರುವ ಬಗ್ಗೆ ಸರಣಿಯಾಗಿ ವರದಿಯಾಗಿತ್ತು. ಜೊತೆಗೆ ಹಲವು ಪ್ರದೇಶಗಳಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು. ಅಲ್ಲದೆ, ಕೆಲವು ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿ, ಪ್ರಕರಣಕ್ಕೆ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು.

ಡಿಸೆಂಬರ್‌ 28 ರಂದು ಮಂಗಳೂರು ನಗರದ ನಂದಿಗುಡ್ಡೆಯಲ್ಲಿರುವ ಕೊರಗಜ್ಜ ದೈವಸ್ಥಾನದ ಕಟ್ಟೆಯ ಮೇಲೆ ಕಾಂಡೋಮ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈತನನ್ನು ಬಂಧಿಸಿದಾಗ, ಆರೋಪಿಯ ಉಳಿದ ಪ್ರಕರಣಗಳು ಕೂಡ ಬೆಳಕಿಗೆ ಬಂದಿದೆ.

ಆರೋಪಿಯು ಸುಮಾರು 20 ವರ್ಷಗಳ ಹಿಂದೆಯೆ ಕುಟುಂಬದೊಂದಿಗೆ ಸಂಪರ್ಕ ಕಡಿದು ಏಕಾಂಗಿಯಾಗಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದು, “ಅವನ ಹಿಂದೆ ಯಾವುದೇ ಜನ ಅಥವಾ ಗುಂಪಿನ ಕೈವಾಡ ಇಲ್ಲ, ಆತ ಏಕಾಂಗಿಯಾಗಿ ಈ ಕೃತ್ಯಗಳನ್ನು ಮಾಡುತ್ತಿದ್ದ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಕಟ್ಟೆ, ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ಸಮೀಪದ ಕಾಣಿಕೆ ಡಬ್ಬಿ, ಒಮೆಗಾ ಆಸ್ಪತ್ರೆ ಬಳಿಯ ಕಲ್ಲುರ್ಟಿ ದೈವಸ್ಥಾನ, ಪಂಪ್ ವೆಲ್ ಬಳಿಯಿರುವ ದೈವಸ್ಥಾನ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಪು ನಾಗನಕಟ್ಟೆ, ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ, ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ, ನಗರದ ಎ.ಬಿ.ಶೆಟ್ಟಿ ವೃತ್ತದ ಬಳಿಯ ಸೈದಾನಿ ಬೀಬಿ ದರ್ಗಾ, ಬಂಗ್ರ ಕೂಳೂರಿನಲ್ಲಿರುವ ಸಿಖ್ ಗುರುದ್ವಾರ, ಕೋಟ ಶ್ರೀ ಬಬ್ಬುಸ್ವಾಮಿ ದೈವಸ್ಥಾನ- ಮಂಕಿಸ್ಟ್ಯಾಂಡ್ ಹಾಗೂ ಜೆಪ್ಪು ಮಹಾಕಾಳಿಪಡ್ಪುವಿನಲ್ಲಿರುವ ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿಯ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ ಇತ್ಯಾದಿಗಳನ್ನು ಹಾಕಿದ್ದಾಗಿ ಆರೋಪಿಯು ಒಪ್ಪಿಕೊಂಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರು ತಪ್ಪಾಗಿ ಆರಾಧನೆ ಮಾಡುತ್ತಾ ದೇವರ ಅವಕೃಪೆಗೆ ಪಾತ್ರರಾಗುತ್ತಿದ್ದಾರೆ. ನೀವು ಆರಾಧಿಸುವ ದೇವರಿಗೆ ಕಾಣಿಕೆ ಡಬ್ಬಿಯನ್ನೇ ರಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬ ಸಂದೇಶವನ್ನು ಜನರಿಗೆ ನೀಡುವುದಕ್ಕಾಗಿ ಆರೋಪಿಯು ದಾರ್ಮಿಕ ಕೇಂದ್ರಗಳನ್ನು ಅಪವಿತ್ರ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾಗಿ ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆರೋಪಿ ದೇವದಾಸ್ ದೇಸಾಯಿ, ತಾನು ಮಾಡಿದ ಯಾವುದೆ ಕೃತ್ಯದ ಬಗ್ಗೆ ಪಶ್ಚಾತಾಪ ಇಲ್ಲ ಎಂದು ಹೇಳಿಕೊಂಡಿದ್ದಾನೆ. “ಹದಿನೈದು ವರ್ಷಗಳಿಂದ ಬೈಬಲನ್ನು ಆಳವಾಗಿ ಅಧ್ಯಯನ ಮಾಡುತ್ತಿದ್ದೇನೆ. ಭೂಮಿಗೆ ಅಂತ್ಯ ಬರುವ ಮೊದಲು ಏಸುಕ್ರಿಸ್ತನ ಹೆಸರಿನಲ್ಲಿ ರಕ್ಷಣೆ ಹೊಂದಿ ಎಂದು ಅದು ಹೇಳುತ್ತದೆ. ಆದರೆ ಜನರು ಇದನ್ನು ಪಾಲಿಸುತ್ತಿಲ್ಲ, ಹಾಗಾಗಿ ಅಪವಿತ್ರ ಜಾಗಗಳಿಗೆ ಅಪವಿತ್ರ ವಸ್ತುಗಳನ್ನು ಹಾಕುತ್ತಿದ್ದೆ” ಎಂದು ಹೇಳಿದ್ದಾನೆ.

ಇದನ್ನೂ ಓದಿ:ಜಿಹಾದಿ ಎಂದು ಶಿರಡಿ ಸಾಯಿಬಾಬಾ ಮೂರ್ತಿ ಧ್ವಂಸಗೈದ ಸಂಘಪರಿವಾರದ ಕಾರ್ಯಕರ್ತರು- ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...