Homeಕರ್ನಾಟಕಮಂಗಳೂರು: ಬಜರಂಗದಳ ಮುಖಂಡ, ತಂಡದಿಂದ ಗೂಂಡಾಗಿರಿ; ನಾಲ್ವರ ಮೇಲೆ ಹಲ್ಲೆ

ಮಂಗಳೂರು: ಬಜರಂಗದಳ ಮುಖಂಡ, ತಂಡದಿಂದ ಗೂಂಡಾಗಿರಿ; ನಾಲ್ವರ ಮೇಲೆ ಹಲ್ಲೆ

- Advertisement -
- Advertisement -

ಜಾಗದ ವಿಚಾರವಾಗಿ ಬಜರಂಗದಳ ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಜಿನ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ.

ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ನಾಲ್ವರ ಮೇಲೆ ಹಲ್ಲೆಗೈದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಜರಂಗದಳ ಮುಖಂಡ, ರೌಡಿಶೀಟರ್ ಭರತ್ ಕುಮ್ಡೇಲು, ಬಜರಂಗದಳದ ಜಗಜೀವನ್ ರೈ, ಭವಿಷ್, ಸಂದೀಪ್ ಎಂಬವರು ಅಂಗಡಿಗೆ ನುಗ್ಗಿ ಹರೀಶ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ ಎಂಬವರನ್ನು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಂಗಡಿಯ ಒಳಗಿದ್ದವರನ್ನು ಹೊರಗೆಳೆದು ನಡುರಸ್ತೆಯಲ್ಲಿ ಹಲ್ಲೆಗೈದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವವರ ಮೇಲಿನ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಭರತ್ ಕುಮ್ಡೇಲು ಕಲ್ಲಡ್ಕದ ಬಜರಂಗದಳ ಮುಖಂಡನಾಗಿದ್ದು ಆತನ ವಿರುದ್ಧ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. 2017ರಲ್ಲಿ ನಡೆದ ಎಸ್.ಡಿ.ಪಿ.ಐ. ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: ಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...