Homeಕರ್ನಾಟಕಜೂನ್ 1ರಿಂದ ನವೆಂಬರ್‌ 1ರ ವರೆಗೆ ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು

ಜೂನ್ 1ರಿಂದ ನವೆಂಬರ್‌ 1ರ ವರೆಗೆ ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು

- Advertisement -
- Advertisement -

ಜೂನ್ 1ರಿಂದ ನವೆಂಬರ್‌ 1ರ ವರೆಗೆ ಸಕಲೇಶಪುರದಿಂದ ಸುಬ್ರಹ್ಮಣ್ಯವರೆಗಿನ ರೈಲು ಮಾರ್ಗದಲ್ಲಿ ವಿವಿಧ ಕಾಮಗಾರಿ ನಡೆಯುವುದರಿಂದ ಬೆಂಗಳೂರು – ಮಂಗಳೂರು ರೈಲು ಪ್ರಯಾಣ 5 ತಿಂಗಳ ಕಾಲ ಸ್ಥಗಿತಗೊಳ್ಳಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಸಕಲೇಶಪುರ ಹಾಸನ ಜಿಲ್ಲೆಯಲ್ಲಿದ್ದು, ಸುಬ್ರಹ್ಮಣ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ. ಜೂನ್ 1ರಿಂದ ನವೆಂಬರ್‌

ಈ ಬಗ್ಗೆ ಪ್ರಕರಣೆ ಹೊರಡಿಸಿರುವ ರೈಲ್ವೇ ಇಲಾಖೆ, “ಜೂನ್‌ 1ರಿಂದ ನವೆಂಬರ್ 1ರವರೆಗೆ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ರೈಲ್ವೇ ವಿದ್ಯುದ್ಧೀಕರಣ, ಸುರಕ್ಷತೆ ಸೇರಿದಂತೆ ಕೆಲವು ಪ್ರಮುಖ ಕಾಮಗಾರಿಗಳು ನಡೆಯಲಿವೆ. ಈ ಅವಧಿಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಬಹುತೇಕ ಎಲ್ಲ ರೈಲುಗಳ ಸಂಚಾರ ರದ್ದಾಗಲಿದೆ” ಎಂದು ಹೇಳಿದೆ.

ಸಂಚಾರ ಸ್ಥಗಿತಗೊಂಡ ರೈಲುಗಳ ವಿವರ ಕೆಳಗಿನಂತಿವೆ

  • ಯಶವಂತಪುರ-ಮಂಗಳೂರು ಜಂಕ್ಷನ್‌ ಸಾಪ್ರಾಹಿಕ ಎಕ್ಸ್‌ಪ್ರೆಸ್ (16540): ಪ್ರತಿ ಶನಿವಾರ ಯಶವಂತಪುರದಿಂದ ಮಂಗಳೂರಿಗೆ ತೆರಳುವ ಈ ರೈಲು ಸಂಚಾರವು ಮೇ 31ರಿಂದ ನವೆಂಬರ್ 1ರವರೆಗೆ ರದ್ದಾಗಲಿದೆ.
  • ಮಂಗಳೂರು ಜಂಕ್ಷನ್ – ಯಶವಂತಪುರ ಸಾಪ್ರಾಹಿಕ ಎಕ್ಸ್‌ಪ್ರೆಸ್ (16539): ಪ್ರತಿ ಭಾನುವಾರ ಮಂಗಳೂರು ಜಂಕ್ಷನ್‌ನಿಂದ ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರಯಾಣಿಸುತ್ತಿದ್ದ ಈ ರೈಲು ಜೂನ್ 1ರಿಂದ ನವೆಂಬರ್ 2ರವರೆಗೆ ರದ್ದಾಗಲಿದೆ.
  • ಯಶವಂತಪುರ – ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16575): ಪ್ರತಿ ಮಂಗಳವಾರ, ಗುರುವಾರ ಮತ್ತು ಭಾನುವಾರ ಯಶವಂತಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲು ಜೂನ್ 1 ರಿಂದ ಅಕ್ಟೋಬರ್ 30ರವರೆಗೆ ರದ್ದಾಗಲಿದೆ.
  • ಮಂಗಳೂರು – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576): ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಂಗಳೂರಿನಿಂದ ಯಶವಂತಪುರಕ್ಕೆ ಪ್ರಯಾಣಿಸುತ್ತಿದ್ದ ರೈಲು ಜೂನ್ 2ರಿಂದ ಅಕ್ಟೋಬರ್ 31ರವರೆಗೆದಂದು ಸ್ಥಗಿತಗೊಳ್ಳಲಿದೆ.
  • ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16515): ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಕ್ಕೆ ತೆಳುತ್ತಿದ್ದ ರೈಲು ಸಂಚಾರವು ಜೂನ್ 2 ರಿಂದ ಅಕ್ಟೋಬರ್ 31ರವರೆಗೆ ರದ್ದಾಗಲಿದೆ.
  • ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16516): ಪ್ರತಿ ಮಂಗಳವಾರ, ಗುರುವಾರ ಮತ್ತು ಶನಿವಾರ ಕಾರವಾರದಿಂದ ಯಶವಂತಪುಕ್ಕೆ ಪ್ರಯಾಣಿಸುತ್ತಿದ್ದ ರೈಲು ಜೂನ್ 3ರಿಂದ ನವೆಂಬರ್ 1ರವರೆಗೆ ತನ್ನ ಸಂಚಾರವನ್ನು ಸ್ಥಗಿತಗೊಳಿಸಿದೆ. ಜೂನ್ 1ರಿಂದ ನವೆಂಬರ್‌

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅತಿಥಿ ಶಿಕ್ಷಕರಿಗೆ ಸಿಇಟಿ ಪರೀಕ್ಷೆ ಕಡ್ಡಾಯ ಮಾಡಿದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ; ತೀವ್ರ ಟೀಕೆ

ಅತಿಥಿ ಶಿಕ್ಷಕರಿಗೆ ಸಿಇಟಿ ಪರೀಕ್ಷೆ ಕಡ್ಡಾಯ ಮಾಡಿದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ; ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...