Homeಮುಖಪುಟಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ

ಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ

- Advertisement -
- Advertisement -

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾಗಿದೆ. ಕೂಡಲೇ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದವರು ಅದನ್ನು ಸುರಕ್ಷಿತವಾಗಿ ಸ್ಫೋಟಿಸಿ ಆತಂಕ ಹೋಗಲಾಡಿಸಿದರು. ಬಾಂಬ್‌ ಇಟ್ಟಿದ್ದ ಆರೋಪಿ ಎನ್ನಲಾದ ಆದಿತ್ಯ ರಾವ್‌ ಕೂಡ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಆದರೆ ಆ ಸಂದರ್ಭದಲ್ಲಿ ಕನ್ನಡದ ಕೆಲ ಮಾಧ್ಯಮಗಳು ನಡೆದುಕೊಂಡ ರೀತಿ ಅಸಹ್ಯ ಹುಟ್ಟಿಸುವಂತದ್ದು. ಒಂದು ಪಕ್ಷಕ್ಕೆ, ಒಂದು ಸಿದ್ದಾಂತಕ್ಕೆ ತಮ್ಮನ್ನು ತಾವು ಮಾರಿಕೊಂಡತೆ ಅವು ನಡೆದುಕೊಂಡಿದ್ದು ಪತ್ರಿಕೋದ್ಯಮದ ಎಲ್ಲಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದಂತಿತ್ತು. ‘ಪೌರತ್ವಕ್ಕೆ ಪ್ರತಿಕಾರ’, ‘ಬಾಂಬ್‌ಗೂ ಪಿಎಫ್‌ಐ ಸಂಘಟನೆಗೂ ನಂಟು ಏಕಿರಬಾರದು’ ಎಂಬಂತಹ ವರದಿಗಳನ್ನು ಪ್ರಸಾರ ಮಾಡಿದ್ದವು.

ವಿಜಯ ಕರ್ನಾಟಕ ಪತ್ರಿಕೆಯಂತೂ ಪೌರತ್ವ ವಿರೋಧಿಸಿ ನಡೆದ ಗಲಭೆಯ ವೇಳೆ ಪೊಲೀಸ್ ಗೋಲಿಬಾರ್‌ಗೆ ಇಬ್ಬರು ಬಲಿಯಾದ ಬಳಿಕ ಮಂಗಳೂರಿನಲ್ಲಿ ದೊಡ್ಡಮಟ್ಟದ ದುಷ್ಕೃತ್ಯವೊಂದು ನಡೆಯುವ ಸಾಧ್ಯತೆಯಿತ್ತು. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದು ಈ ದುಷ್ಕೃತ್ಯದ ಭಾಗವಾಗಿರಬಹುದೆಂದು ಶಂಕಿಸಲಾಗಿದೆ ಎಂದು ಕಪೋಲಕಲ್ಪಿತ ವರದಿಯನ್ನು ತನ್ನ ಮುಖಪುಟದಲ್ಲಿ ಪ್ರಕಟಿಸಿತ್ತು. ಆಮೂಲಕ ಗೋಲಿಬಾರ್‌ಗೆ ಬಲಿಯಾದವರು ಮುಸ್ಲಿಮರಾದ್ದರಿಂದ ಬಾಂಬ್ ಇಟ್ಟಿರುವವರು ಮುಸ್ಲಿಮರೆ ಎಂದು ಸಾರುವ ಉದ್ದೇಶ ಅದರಲ್ಲಿತ್ತು.

ಭಯೋತ್ಪಾದನ ಕೃತ್ಯಕ್ಕೆ ಜಯ ಸಿಗದು ಎಂಬ ಸಂಪಾದಕೀಯವನ್ನು ಬರೆದು ಈ ವಿಚಾರದ ಕುರಿತು ಪೂರ್ವನಿರ್ಧರಿತ ಅಭಿಪ್ರಾಯಕ್ಕೆ ಬಂದಿದ್ದನ್ನು ಸಾರಿತ್ತು. ಇನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಬಾಂಬ್ ಮಾತ್ರವಲ್ಲ ಅದನ್ನು ಇಟ್ಟ ಭಯೋತ್ಪಾದಕ ಶಕ್ತಿಗಳನ್ನು ಸಹ ಸಂಪೂರ್ಣವಾಗಿ ನಿಷ್ಕ್ರಿಯ ಮಾಡುತ್ತೇವೆ ಎಂದು ಘೋಷಿಸಿದ್ದರು.

ಬಾಂಬ್ ಎಂದ ಕೂಡಲೇ ಮುಸ್ಲಿಮರು ಎನ್ನುವಂತಹ ಮನೋಭಾವ ಮೂಡುವಂತೆ ಮಾಧ್ಯಮಗಳು ಮತ್ತು ಕೆಲ ಕೋಮುವಾದಿ ಪೊಲೀಸ್ ಅಧಿಕಾರಿಗಳು ದೀರ್ಘ ಅವಧಿಯಲ್ಲಿ ಬೆಳೆಸಿದ್ದಾರೆ. ಇದಕ್ಕಾಗಿಯೇ ಬಾಂಬ್ ಎಂದ ತಕ್ಷಣ ಬಹಳಷ್ಟು ಜನರು “ತನಿಖೆಯಲ್ಲಿ ಸಿಗುವ ಆರೋಪಿ ಮುಸ್ಲಿಮನಾಗಿದ್ದರೆ ಭಯೋತ್ಪಾದಕ ಎಂದು ಕರೆಸಿಕೊಳ್ಳುತ್ತಾನೆ, ಒಂದು ವೇಳೆ ಹಿಂದೂವಾಗಿದ್ದರೆ ಮಾನಸಿಕ ಅಸ್ವಸ್ಥನೆಂದು ಕರೆಸಿಕೊಳ್ಳುತ್ತಾನೆ” ಎಂದು ಟ್ರೋಲ್ ಮಾಡಿದ್ದರು.

ಆದರೆ ವಾಸ್ತವವೇನೆಂದರೆ ಸದ್ಯದ ಪೊಲೀಸ್ ತನಿಖೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಬಾಂಬ್ ಇಟ್ಟಿದ್ದ ಶಂಕಿತ ಆರೋಪಿ ಮಣಿಪಾಲದ ಮಣ್ಣಪಳ್ಳದ ಬಿ.ಕೃಷ್ಣಮೂರ್ತಿಯವರ ಮಗ ಆದಿತ್ಯ ರಾವ್ ಎಂದು ತಿಳಿದುಬಂದಿದ್ದಲ್ಲದೇ ಆತ ಪೊಲೀಸರೆದುರು ಶರಣಾಗಿದ್ದಾನೆ ಕೂಡ..

ಇಂಜಿನಿಯರಿಂಗ್ ಓದಿರುವ ಆದಿತ್ಯರಾವ್ ಬೆಂಗಳೂರಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗೆ ಪ್ರಯತ್ನಿಸಿ ವಿಫಲವಾಗಿದ್ದನಂತೆ. ಕೆಲಸ ಸಿಗದ ಬೇಸರದಲ್ಲಿ ಒಂದು ವರ್ಷದ ಹಿಂದೆಯೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿಬಾಂಬ್ ಕರೆ ಮಾಡಿ ಸಿಕ್ಕಿಬಿದ್ದಿದ್ದ. ಆ ಅಪರಾಧಕ್ಕಾಗಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಆತನಿಗೆ ವಿಮಾನ ನಿಲ್ದಾಣ ಸಿಬ್ಬಂದಿ ಮತ್ತು ಅಥಾರಿಟಿಯ ಮೇಲೆ ದ್ವೇಷವಿತ್ತು. ಆ ಕಾರಣಕ್ಕಾಗಿಯೇ ಆತ ಮಂಗಳೂರಿನಲ್ಲಿ ಬಾಂಬ್ ಇಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಮಣಿಪಾಲದ ಮಣ್ಣಪಳ್ಳದಲ್ಲಿ ವಾಸವಾಗಿದ್ದ ಈತನ ಕುಟುಂಬ ಒಂದು ವಾರದ ಕೆಳಗೆ ತಾನೇ ಮಂಗಳೂರಿನ ಲೇಡಿಹಿಲ್ ಅಪಾರ್ಟ್ಮೆಂಟ್‌ಗೆ ಶಿಫ್ಟ್ ಆಗಿದ್ದಾರೆ. ಆದರೆ ಆ ಒಂದು ವಾರದಿಂದ ಆತ ತನ್ನ ಮನೆಗೆ ಹೋಗದೆ ಕಾಣೆಯಾಗಿದ್ದಾನೆ ಎಂದು ಪೊಲೀಸರೆದುರು ಆತನ ತಂದೆ ತಿಳಿಸಿದ್ದಾರೆ. ಇನ್ನು ಬಾಂಬ್ ಇಟ್ಟಿದ್ದ ಘಟನೆ ಬೆಳಿಗ್ಗೆ 9 ಗಂಟೆಗೆ ನಡೆದರೆ ಮಧ್ಯಾಹ್ನ 2.50ಕ್ಕೆ ಟರ್ಮಿನಲ್ ಮ್ಯಾನೇಜರ್‌ಗೆ ಬಂದ ಕರೆಯೊಂದರಲ್ಲಿ ನನಗೆ ಕೊಟ್ಟ ತೊಂದರೆಗೆ ನಾನು ಸುಮ್ಮನೆ ಬಿಡುವುದಿಲ್ಲ ಎಂಬ ಧಮಕಿ ಹಾಕಲಾಗಿದೆಯಂತೆ. ಆದಿತ್ಯರಾವ್‌ನನ್ನು ಹೋಲುವ ವ್ಯಕ್ತಿಯು ಮಂಗಳೂರಿನ ವಿಮಾನ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಈ ವಿಷಯ ಹೊರಬರುತ್ತಿದ್ದಂತೆಯೇ ಕನ್ನಡದ ಬಹುತೇಕ ಮುದ್ರಣ ಮಾಧ್ಯಮಗಳು ಮತ್ತು ಟಿವಿ ಚಾನೆಲ್‌ಗಳು ತೀವ್ರ ನಿರಾಸೆಗೆ ಒಳಗಾಗಿದ್ದಾರೆ. ಆರೋಪಿ ಮುಸ್ಲಿಮನಾಗಿರುತ್ತಾನೆ ಎಂದು ಹಂಬಲಿಸುತ್ತಿದ್ದ ಅವರಿಗೆ ಈ ‘ರಾವ್’ ಎಂಬ ಹೆಸರು ಕೇಳಿದೊಡನೆಯೆ ಗರಬಡಿದವರಂತಾಗಿರುವುದು ಕಂಡುಬಂದಿದೆ. ಅಲ್ಲಿಯವರೆಗೂ ಏರುಧ್ವನಿಯ ಸುದ್ದಿ ಪ್ರಸಾರ ಮಾಡುತ್ತಿದ್ದ ಅವರು ಬಾಯಿಗೆ ಬೀಗ ಜಡಿದುಕೊಂಡಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಆದಿತ್ಯ ರಾವ್‌ಗೂ ಪೌರತ್ವ ವಿರೋಧಿ ಹೋರಾಟಕ್ಕೂ ಏನು ಸಂಬಂಧ? ಈತ ಬಾಂಬ್ ಇಟ್ಟಿರುವುದು ಪೌರತ್ವಕ್ಕೆ ಪ್ರತೀಕಾರ ಹೇಗಾಗುತ್ತದೆ? ಒಂದು ಸಮುದಾಯವನ್ನು, ಒಂದು ಭಿನ್ನಾಭಿಪ್ರಾಯವಿಟ್ಟುಕೊಂಡು ಹೋರಾಟ ಮಾಡುತ್ತಿರುವವರ ಮೇಲೆ ಯಾವುದೇ ಸಾಕ್ಷಿ ಇಲ್ಲದೇ ಗೂಬೆ ಕೂರಿಸಿದ ಮಾಧ್ಯಮಗಳು ನೀತಿ ಸಂಹಿತೆಯನ್ನು ಈ ರೀತಿ ಕೈಬಿಟ್ಟಿರುವುದು ಏತಕ್ಕಾಗಿ? ಈ ಮಾಧ್ಯಮಗಳು ತಮ್ಮ ತಪ್ಪಿನಿಂದ ಪಾಠ ಕಲಿತು ಕ್ಷಮಾಪಣೆಯನ್ನು ಪ್ರಕಟಿಸುತ್ತವೆಯೇ? ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲವೆಂದು ಸಂಕಲ್ಪ ಮಾಡುತ್ತದೆಯೆಂದು ನಾವು ನಿರೀಕ್ಷಿಸಬಹುದೇ?

ಈಗ ಪೊಲೀಸರ ವಿಷಯಕ್ಕೆ ಬರೋಣ.

ಬೆಂಗಳೂರಿನಲ್ಲಿ ಪೌರತ್ವ ಕಾಯ್ದೆಯ ಪರ ಪ್ರತಿಭಟನೆಯಲ್ಲಿ ಹಿಂದೂ ಮುಖಂಡರ ಕೊಲೆಗೆ ಸ್ಕೆಚ್ ಹಾಕಿದ್ದರು, ಅವರು ಎಸ್‌ಡಿಪಿಐ ಸಂಘಟನೆಗೆ ಸೇರಿದವರು, ಅವರಿಗೆ ಹಣ ಬರುತ್ತದೆ ಎಂದು ಬೆಂಗಳೂರು ನಗರ ಕಮಿಷನರ್ ಪತ್ರಿಕಾಗೋಷ್ಟಿಯಲ್ಲಿ ಘೋಷಿಸಿದ್ದರು. ಆದರೆ ಎಫ್‌ಐಆರ್‌ನಲ್ಲಿಯಾಗಲಿ, ಆರೋಪಿತರ ಹೇಳಿಕೆಗಳಲ್ಲಾಗಲೀ ಅವರ ಟಾರ್ಗೆಟ್ ಆಗಿ ಯಾವುದೇ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಿಲ್ಲ. ಇಂಥವರೇ ಟಾರ್ಗೆಟ್ ಆಗಿದ್ದರು ಎಂದು ಹೇಳಲಾದ ವ್ಯಕ್ತಿಗಳು ಆಗಲೇ ಹುತಾತ್ಮರಂತೆ ಹೇಳಿಕೆಯನ್ನು ಕೊಟ್ಟೂ ಆಗಿತ್ತು. ಇದನ್ನೇ ಮುಂದುವರೆಸಿ ಪಿಎಫ್‌ಐ ನಿಷೇಧ ಎಂಬ ಟೈಟಲ್ ಸಹಾ ಬಂದಾಗಿತ್ತು. ವಾಸ್ತವದಲ್ಲಿ ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ಅದಕ್ಕೆ ತೀರ್ಮಾನವಾಗಿತ್ತು ಎಂಬುದನ್ನು ಬಿಟ್ಟರೆ ಅದಿನ್ನೂ ಫೈಲ್ ಸಮೇತ ಕೇಂದ್ರ ಸರ್ಕಾರಕ್ಕೆ ಹೋಗಿ, ಕೇಂದ್ರವು ಅಂತಹ ನಿಷೇಧ ಮಾಡಬೇಕಷ್ಟೇ.

ಬೆಂಗಳೂರಿನಲ್ಲಿನ ಸ್ಲಂಗಳಲ್ಲಿ ಬಾಂಗ್ಲಾದವರಿದ್ದಾರೆ ಎಂದು ಬಿಜೆಪಿ ಸಂಸದರ ಮಾಲೀಕತ್ವದ ಚಾನೆಲ್ ನಕಲಿ ಸ್ಟಿಂಗ್ ಒಂದನ್ನು ನಡೆಸಿತು. ಕೂಡಲೇ ಹಿಂದು ಮುಂದು ನೋಡದೇ ಉತ್ತರ ಕರ್ನಾಟಕದ ಮತ್ತು ಪೂರ್ವ ಭಾರತದ ಕೂಲಿ ಜನರು ವಾಸವಿದ್ದ ಗುಡಿಸಲುಗಳನ್ನು ನೆಲಸಮ ಮಾಡಿದ್ದ ಪೊಲೀಸ್ ಇಲಾಖೆಯ ಕಮಿಷನರ್ ಭಾಸ್ಕರ್‌ರಾವ್‌ರನ್ನು ಯಾರಾದರೂ ಬಿಜೆಪಿ ಪಕ್ಷದ ವಕ್ತಾರರಾ ಎಂದು ಕೇಳಿದರೆ ಏನು ಹೇಳುತ್ತಾರೆ?

ಬಾಂಬ್ ಇಟ್ಟವರು ಯಾರಾದರೂ ಸರಿಯೇ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ, ಭದ್ರತೆಯನ್ನು ಹೆಚ್ಚಿಸಿ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂಬ ಮಾತುಗಳನ್ನು ಆಡುವುದು ಸಮಂಜಸ. ಅದನ್ನು ದಾಟಿ ಕೋಮುಗಳಿಗೆ ಸಂಬಂಧ ಕಲ್ಪಿಸಿ ಹೇಳಿಕೆಗಳನ್ನು ನೀಡಲಾಗುತ್ತದೆ.

ಮಂಗಳೂರಿನಲ್ಲಿ ಪೌರತ್ವ ಕಾಯ್ದೆಯ ವಿರುದ್ಧ ಹೋರಾಟದಲ್ಲಿ ಇಬ್ಬರು ಮುಸ್ಲಿಮರನ್ನು ಗುಂಡಿಟ್ಟು ಹತ್ಯೆ ಮಾಡಿದ ಪೊಲೀಸರು ಅದಕ್ಕೆ ಕಾರಣವಾದ ಘಟನಾವಳಿಯ ಕುರಿತೂ ಸಮರ್ಪಕ ಪುರಾವೆಗಳನ್ನು ಒದಗಿಸಲು ವಿಫಲವಾಗಿದ್ದಾರೆ. ಆದರೆ ಬಾಂಬ್ ಎಂದ ಕೂಡಲೇ ಒಂದು ಕಡೆ ಕೈ ತೋರಿಸುತ್ತಾರೆ.. ವಾಸ್ತವ ಗೊತ್ತಾದಾಗ ಪೆಚ್ಚುಮೋರೆ ಹಾಕಿ ಕೂರುತ್ತಾರೆ ಅಷ್ಟೇ.

ಪ್ರತಿಭಟಿಸುತ್ತಿರುವವರ ಬಟ್ಟೆ ನೋಡಿದರೆ ಸಾಕು ಅವರು ಯಾರು ಎಂಬುದು ಗೊತ್ತಾಗುತ್ತದೆ ಎಂದು ಹೇಳುವ ಪ್ರಧಾನಿ ಇರುವ ರಾಷ್ಟ್ರವಿದು. ಮಾಧ್ಯಮಗಳು ಅಂತಹ ಪ್ರಧಾನಿಗೆ ಪ್ರಶ್ನೆ ಹಾಕುವ ಬದಲು ಪ್ರಧಾನಿಯ ವಿರುದ್ಧ ಮಾತಾಡುವವರ ಮೇಲೆ ದಾಳಿ ನಡೆಸಲು ಕಥೆಗಳನ್ನು ಹೊಸೆಯುತ್ತಿರುತ್ತವೆ. ಹೀಗಿರುವಾಗ ನಾವು ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...