Homeಮುಖಪುಟಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ

ಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ

- Advertisement -
- Advertisement -

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾಗಿದೆ. ಕೂಡಲೇ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದವರು ಅದನ್ನು ಸುರಕ್ಷಿತವಾಗಿ ಸ್ಫೋಟಿಸಿ ಆತಂಕ ಹೋಗಲಾಡಿಸಿದರು. ಬಾಂಬ್‌ ಇಟ್ಟಿದ್ದ ಆರೋಪಿ ಎನ್ನಲಾದ ಆದಿತ್ಯ ರಾವ್‌ ಕೂಡ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಆದರೆ ಆ ಸಂದರ್ಭದಲ್ಲಿ ಕನ್ನಡದ ಕೆಲ ಮಾಧ್ಯಮಗಳು ನಡೆದುಕೊಂಡ ರೀತಿ ಅಸಹ್ಯ ಹುಟ್ಟಿಸುವಂತದ್ದು. ಒಂದು ಪಕ್ಷಕ್ಕೆ, ಒಂದು ಸಿದ್ದಾಂತಕ್ಕೆ ತಮ್ಮನ್ನು ತಾವು ಮಾರಿಕೊಂಡತೆ ಅವು ನಡೆದುಕೊಂಡಿದ್ದು ಪತ್ರಿಕೋದ್ಯಮದ ಎಲ್ಲಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದಂತಿತ್ತು. ‘ಪೌರತ್ವಕ್ಕೆ ಪ್ರತಿಕಾರ’, ‘ಬಾಂಬ್‌ಗೂ ಪಿಎಫ್‌ಐ ಸಂಘಟನೆಗೂ ನಂಟು ಏಕಿರಬಾರದು’ ಎಂಬಂತಹ ವರದಿಗಳನ್ನು ಪ್ರಸಾರ ಮಾಡಿದ್ದವು.

ವಿಜಯ ಕರ್ನಾಟಕ ಪತ್ರಿಕೆಯಂತೂ ಪೌರತ್ವ ವಿರೋಧಿಸಿ ನಡೆದ ಗಲಭೆಯ ವೇಳೆ ಪೊಲೀಸ್ ಗೋಲಿಬಾರ್‌ಗೆ ಇಬ್ಬರು ಬಲಿಯಾದ ಬಳಿಕ ಮಂಗಳೂರಿನಲ್ಲಿ ದೊಡ್ಡಮಟ್ಟದ ದುಷ್ಕೃತ್ಯವೊಂದು ನಡೆಯುವ ಸಾಧ್ಯತೆಯಿತ್ತು. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದು ಈ ದುಷ್ಕೃತ್ಯದ ಭಾಗವಾಗಿರಬಹುದೆಂದು ಶಂಕಿಸಲಾಗಿದೆ ಎಂದು ಕಪೋಲಕಲ್ಪಿತ ವರದಿಯನ್ನು ತನ್ನ ಮುಖಪುಟದಲ್ಲಿ ಪ್ರಕಟಿಸಿತ್ತು. ಆಮೂಲಕ ಗೋಲಿಬಾರ್‌ಗೆ ಬಲಿಯಾದವರು ಮುಸ್ಲಿಮರಾದ್ದರಿಂದ ಬಾಂಬ್ ಇಟ್ಟಿರುವವರು ಮುಸ್ಲಿಮರೆ ಎಂದು ಸಾರುವ ಉದ್ದೇಶ ಅದರಲ್ಲಿತ್ತು.

ಭಯೋತ್ಪಾದನ ಕೃತ್ಯಕ್ಕೆ ಜಯ ಸಿಗದು ಎಂಬ ಸಂಪಾದಕೀಯವನ್ನು ಬರೆದು ಈ ವಿಚಾರದ ಕುರಿತು ಪೂರ್ವನಿರ್ಧರಿತ ಅಭಿಪ್ರಾಯಕ್ಕೆ ಬಂದಿದ್ದನ್ನು ಸಾರಿತ್ತು. ಇನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಬಾಂಬ್ ಮಾತ್ರವಲ್ಲ ಅದನ್ನು ಇಟ್ಟ ಭಯೋತ್ಪಾದಕ ಶಕ್ತಿಗಳನ್ನು ಸಹ ಸಂಪೂರ್ಣವಾಗಿ ನಿಷ್ಕ್ರಿಯ ಮಾಡುತ್ತೇವೆ ಎಂದು ಘೋಷಿಸಿದ್ದರು.

ಬಾಂಬ್ ಎಂದ ಕೂಡಲೇ ಮುಸ್ಲಿಮರು ಎನ್ನುವಂತಹ ಮನೋಭಾವ ಮೂಡುವಂತೆ ಮಾಧ್ಯಮಗಳು ಮತ್ತು ಕೆಲ ಕೋಮುವಾದಿ ಪೊಲೀಸ್ ಅಧಿಕಾರಿಗಳು ದೀರ್ಘ ಅವಧಿಯಲ್ಲಿ ಬೆಳೆಸಿದ್ದಾರೆ. ಇದಕ್ಕಾಗಿಯೇ ಬಾಂಬ್ ಎಂದ ತಕ್ಷಣ ಬಹಳಷ್ಟು ಜನರು “ತನಿಖೆಯಲ್ಲಿ ಸಿಗುವ ಆರೋಪಿ ಮುಸ್ಲಿಮನಾಗಿದ್ದರೆ ಭಯೋತ್ಪಾದಕ ಎಂದು ಕರೆಸಿಕೊಳ್ಳುತ್ತಾನೆ, ಒಂದು ವೇಳೆ ಹಿಂದೂವಾಗಿದ್ದರೆ ಮಾನಸಿಕ ಅಸ್ವಸ್ಥನೆಂದು ಕರೆಸಿಕೊಳ್ಳುತ್ತಾನೆ” ಎಂದು ಟ್ರೋಲ್ ಮಾಡಿದ್ದರು.

ಆದರೆ ವಾಸ್ತವವೇನೆಂದರೆ ಸದ್ಯದ ಪೊಲೀಸ್ ತನಿಖೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಬಾಂಬ್ ಇಟ್ಟಿದ್ದ ಶಂಕಿತ ಆರೋಪಿ ಮಣಿಪಾಲದ ಮಣ್ಣಪಳ್ಳದ ಬಿ.ಕೃಷ್ಣಮೂರ್ತಿಯವರ ಮಗ ಆದಿತ್ಯ ರಾವ್ ಎಂದು ತಿಳಿದುಬಂದಿದ್ದಲ್ಲದೇ ಆತ ಪೊಲೀಸರೆದುರು ಶರಣಾಗಿದ್ದಾನೆ ಕೂಡ..

ಇಂಜಿನಿಯರಿಂಗ್ ಓದಿರುವ ಆದಿತ್ಯರಾವ್ ಬೆಂಗಳೂರಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗೆ ಪ್ರಯತ್ನಿಸಿ ವಿಫಲವಾಗಿದ್ದನಂತೆ. ಕೆಲಸ ಸಿಗದ ಬೇಸರದಲ್ಲಿ ಒಂದು ವರ್ಷದ ಹಿಂದೆಯೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿಬಾಂಬ್ ಕರೆ ಮಾಡಿ ಸಿಕ್ಕಿಬಿದ್ದಿದ್ದ. ಆ ಅಪರಾಧಕ್ಕಾಗಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಆತನಿಗೆ ವಿಮಾನ ನಿಲ್ದಾಣ ಸಿಬ್ಬಂದಿ ಮತ್ತು ಅಥಾರಿಟಿಯ ಮೇಲೆ ದ್ವೇಷವಿತ್ತು. ಆ ಕಾರಣಕ್ಕಾಗಿಯೇ ಆತ ಮಂಗಳೂರಿನಲ್ಲಿ ಬಾಂಬ್ ಇಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಮಣಿಪಾಲದ ಮಣ್ಣಪಳ್ಳದಲ್ಲಿ ವಾಸವಾಗಿದ್ದ ಈತನ ಕುಟುಂಬ ಒಂದು ವಾರದ ಕೆಳಗೆ ತಾನೇ ಮಂಗಳೂರಿನ ಲೇಡಿಹಿಲ್ ಅಪಾರ್ಟ್ಮೆಂಟ್‌ಗೆ ಶಿಫ್ಟ್ ಆಗಿದ್ದಾರೆ. ಆದರೆ ಆ ಒಂದು ವಾರದಿಂದ ಆತ ತನ್ನ ಮನೆಗೆ ಹೋಗದೆ ಕಾಣೆಯಾಗಿದ್ದಾನೆ ಎಂದು ಪೊಲೀಸರೆದುರು ಆತನ ತಂದೆ ತಿಳಿಸಿದ್ದಾರೆ. ಇನ್ನು ಬಾಂಬ್ ಇಟ್ಟಿದ್ದ ಘಟನೆ ಬೆಳಿಗ್ಗೆ 9 ಗಂಟೆಗೆ ನಡೆದರೆ ಮಧ್ಯಾಹ್ನ 2.50ಕ್ಕೆ ಟರ್ಮಿನಲ್ ಮ್ಯಾನೇಜರ್‌ಗೆ ಬಂದ ಕರೆಯೊಂದರಲ್ಲಿ ನನಗೆ ಕೊಟ್ಟ ತೊಂದರೆಗೆ ನಾನು ಸುಮ್ಮನೆ ಬಿಡುವುದಿಲ್ಲ ಎಂಬ ಧಮಕಿ ಹಾಕಲಾಗಿದೆಯಂತೆ. ಆದಿತ್ಯರಾವ್‌ನನ್ನು ಹೋಲುವ ವ್ಯಕ್ತಿಯು ಮಂಗಳೂರಿನ ವಿಮಾನ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಈ ವಿಷಯ ಹೊರಬರುತ್ತಿದ್ದಂತೆಯೇ ಕನ್ನಡದ ಬಹುತೇಕ ಮುದ್ರಣ ಮಾಧ್ಯಮಗಳು ಮತ್ತು ಟಿವಿ ಚಾನೆಲ್‌ಗಳು ತೀವ್ರ ನಿರಾಸೆಗೆ ಒಳಗಾಗಿದ್ದಾರೆ. ಆರೋಪಿ ಮುಸ್ಲಿಮನಾಗಿರುತ್ತಾನೆ ಎಂದು ಹಂಬಲಿಸುತ್ತಿದ್ದ ಅವರಿಗೆ ಈ ‘ರಾವ್’ ಎಂಬ ಹೆಸರು ಕೇಳಿದೊಡನೆಯೆ ಗರಬಡಿದವರಂತಾಗಿರುವುದು ಕಂಡುಬಂದಿದೆ. ಅಲ್ಲಿಯವರೆಗೂ ಏರುಧ್ವನಿಯ ಸುದ್ದಿ ಪ್ರಸಾರ ಮಾಡುತ್ತಿದ್ದ ಅವರು ಬಾಯಿಗೆ ಬೀಗ ಜಡಿದುಕೊಂಡಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಆದಿತ್ಯ ರಾವ್‌ಗೂ ಪೌರತ್ವ ವಿರೋಧಿ ಹೋರಾಟಕ್ಕೂ ಏನು ಸಂಬಂಧ? ಈತ ಬಾಂಬ್ ಇಟ್ಟಿರುವುದು ಪೌರತ್ವಕ್ಕೆ ಪ್ರತೀಕಾರ ಹೇಗಾಗುತ್ತದೆ? ಒಂದು ಸಮುದಾಯವನ್ನು, ಒಂದು ಭಿನ್ನಾಭಿಪ್ರಾಯವಿಟ್ಟುಕೊಂಡು ಹೋರಾಟ ಮಾಡುತ್ತಿರುವವರ ಮೇಲೆ ಯಾವುದೇ ಸಾಕ್ಷಿ ಇಲ್ಲದೇ ಗೂಬೆ ಕೂರಿಸಿದ ಮಾಧ್ಯಮಗಳು ನೀತಿ ಸಂಹಿತೆಯನ್ನು ಈ ರೀತಿ ಕೈಬಿಟ್ಟಿರುವುದು ಏತಕ್ಕಾಗಿ? ಈ ಮಾಧ್ಯಮಗಳು ತಮ್ಮ ತಪ್ಪಿನಿಂದ ಪಾಠ ಕಲಿತು ಕ್ಷಮಾಪಣೆಯನ್ನು ಪ್ರಕಟಿಸುತ್ತವೆಯೇ? ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲವೆಂದು ಸಂಕಲ್ಪ ಮಾಡುತ್ತದೆಯೆಂದು ನಾವು ನಿರೀಕ್ಷಿಸಬಹುದೇ?

ಈಗ ಪೊಲೀಸರ ವಿಷಯಕ್ಕೆ ಬರೋಣ.

ಬೆಂಗಳೂರಿನಲ್ಲಿ ಪೌರತ್ವ ಕಾಯ್ದೆಯ ಪರ ಪ್ರತಿಭಟನೆಯಲ್ಲಿ ಹಿಂದೂ ಮುಖಂಡರ ಕೊಲೆಗೆ ಸ್ಕೆಚ್ ಹಾಕಿದ್ದರು, ಅವರು ಎಸ್‌ಡಿಪಿಐ ಸಂಘಟನೆಗೆ ಸೇರಿದವರು, ಅವರಿಗೆ ಹಣ ಬರುತ್ತದೆ ಎಂದು ಬೆಂಗಳೂರು ನಗರ ಕಮಿಷನರ್ ಪತ್ರಿಕಾಗೋಷ್ಟಿಯಲ್ಲಿ ಘೋಷಿಸಿದ್ದರು. ಆದರೆ ಎಫ್‌ಐಆರ್‌ನಲ್ಲಿಯಾಗಲಿ, ಆರೋಪಿತರ ಹೇಳಿಕೆಗಳಲ್ಲಾಗಲೀ ಅವರ ಟಾರ್ಗೆಟ್ ಆಗಿ ಯಾವುದೇ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಿಲ್ಲ. ಇಂಥವರೇ ಟಾರ್ಗೆಟ್ ಆಗಿದ್ದರು ಎಂದು ಹೇಳಲಾದ ವ್ಯಕ್ತಿಗಳು ಆಗಲೇ ಹುತಾತ್ಮರಂತೆ ಹೇಳಿಕೆಯನ್ನು ಕೊಟ್ಟೂ ಆಗಿತ್ತು. ಇದನ್ನೇ ಮುಂದುವರೆಸಿ ಪಿಎಫ್‌ಐ ನಿಷೇಧ ಎಂಬ ಟೈಟಲ್ ಸಹಾ ಬಂದಾಗಿತ್ತು. ವಾಸ್ತವದಲ್ಲಿ ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ಅದಕ್ಕೆ ತೀರ್ಮಾನವಾಗಿತ್ತು ಎಂಬುದನ್ನು ಬಿಟ್ಟರೆ ಅದಿನ್ನೂ ಫೈಲ್ ಸಮೇತ ಕೇಂದ್ರ ಸರ್ಕಾರಕ್ಕೆ ಹೋಗಿ, ಕೇಂದ್ರವು ಅಂತಹ ನಿಷೇಧ ಮಾಡಬೇಕಷ್ಟೇ.

ಬೆಂಗಳೂರಿನಲ್ಲಿನ ಸ್ಲಂಗಳಲ್ಲಿ ಬಾಂಗ್ಲಾದವರಿದ್ದಾರೆ ಎಂದು ಬಿಜೆಪಿ ಸಂಸದರ ಮಾಲೀಕತ್ವದ ಚಾನೆಲ್ ನಕಲಿ ಸ್ಟಿಂಗ್ ಒಂದನ್ನು ನಡೆಸಿತು. ಕೂಡಲೇ ಹಿಂದು ಮುಂದು ನೋಡದೇ ಉತ್ತರ ಕರ್ನಾಟಕದ ಮತ್ತು ಪೂರ್ವ ಭಾರತದ ಕೂಲಿ ಜನರು ವಾಸವಿದ್ದ ಗುಡಿಸಲುಗಳನ್ನು ನೆಲಸಮ ಮಾಡಿದ್ದ ಪೊಲೀಸ್ ಇಲಾಖೆಯ ಕಮಿಷನರ್ ಭಾಸ್ಕರ್‌ರಾವ್‌ರನ್ನು ಯಾರಾದರೂ ಬಿಜೆಪಿ ಪಕ್ಷದ ವಕ್ತಾರರಾ ಎಂದು ಕೇಳಿದರೆ ಏನು ಹೇಳುತ್ತಾರೆ?

ಬಾಂಬ್ ಇಟ್ಟವರು ಯಾರಾದರೂ ಸರಿಯೇ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ, ಭದ್ರತೆಯನ್ನು ಹೆಚ್ಚಿಸಿ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂಬ ಮಾತುಗಳನ್ನು ಆಡುವುದು ಸಮಂಜಸ. ಅದನ್ನು ದಾಟಿ ಕೋಮುಗಳಿಗೆ ಸಂಬಂಧ ಕಲ್ಪಿಸಿ ಹೇಳಿಕೆಗಳನ್ನು ನೀಡಲಾಗುತ್ತದೆ.

ಮಂಗಳೂರಿನಲ್ಲಿ ಪೌರತ್ವ ಕಾಯ್ದೆಯ ವಿರುದ್ಧ ಹೋರಾಟದಲ್ಲಿ ಇಬ್ಬರು ಮುಸ್ಲಿಮರನ್ನು ಗುಂಡಿಟ್ಟು ಹತ್ಯೆ ಮಾಡಿದ ಪೊಲೀಸರು ಅದಕ್ಕೆ ಕಾರಣವಾದ ಘಟನಾವಳಿಯ ಕುರಿತೂ ಸಮರ್ಪಕ ಪುರಾವೆಗಳನ್ನು ಒದಗಿಸಲು ವಿಫಲವಾಗಿದ್ದಾರೆ. ಆದರೆ ಬಾಂಬ್ ಎಂದ ಕೂಡಲೇ ಒಂದು ಕಡೆ ಕೈ ತೋರಿಸುತ್ತಾರೆ.. ವಾಸ್ತವ ಗೊತ್ತಾದಾಗ ಪೆಚ್ಚುಮೋರೆ ಹಾಕಿ ಕೂರುತ್ತಾರೆ ಅಷ್ಟೇ.

ಪ್ರತಿಭಟಿಸುತ್ತಿರುವವರ ಬಟ್ಟೆ ನೋಡಿದರೆ ಸಾಕು ಅವರು ಯಾರು ಎಂಬುದು ಗೊತ್ತಾಗುತ್ತದೆ ಎಂದು ಹೇಳುವ ಪ್ರಧಾನಿ ಇರುವ ರಾಷ್ಟ್ರವಿದು. ಮಾಧ್ಯಮಗಳು ಅಂತಹ ಪ್ರಧಾನಿಗೆ ಪ್ರಶ್ನೆ ಹಾಕುವ ಬದಲು ಪ್ರಧಾನಿಯ ವಿರುದ್ಧ ಮಾತಾಡುವವರ ಮೇಲೆ ದಾಳಿ ನಡೆಸಲು ಕಥೆಗಳನ್ನು ಹೊಸೆಯುತ್ತಿರುತ್ತವೆ. ಹೀಗಿರುವಾಗ ನಾವು ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...