Homeಮುಖಪುಟಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ

ಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ

- Advertisement -
- Advertisement -

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾಗಿದೆ. ಕೂಡಲೇ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದವರು ಅದನ್ನು ಸುರಕ್ಷಿತವಾಗಿ ಸ್ಫೋಟಿಸಿ ಆತಂಕ ಹೋಗಲಾಡಿಸಿದರು. ಬಾಂಬ್‌ ಇಟ್ಟಿದ್ದ ಆರೋಪಿ ಎನ್ನಲಾದ ಆದಿತ್ಯ ರಾವ್‌ ಕೂಡ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಆದರೆ ಆ ಸಂದರ್ಭದಲ್ಲಿ ಕನ್ನಡದ ಕೆಲ ಮಾಧ್ಯಮಗಳು ನಡೆದುಕೊಂಡ ರೀತಿ ಅಸಹ್ಯ ಹುಟ್ಟಿಸುವಂತದ್ದು. ಒಂದು ಪಕ್ಷಕ್ಕೆ, ಒಂದು ಸಿದ್ದಾಂತಕ್ಕೆ ತಮ್ಮನ್ನು ತಾವು ಮಾರಿಕೊಂಡತೆ ಅವು ನಡೆದುಕೊಂಡಿದ್ದು ಪತ್ರಿಕೋದ್ಯಮದ ಎಲ್ಲಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದಂತಿತ್ತು. ‘ಪೌರತ್ವಕ್ಕೆ ಪ್ರತಿಕಾರ’, ‘ಬಾಂಬ್‌ಗೂ ಪಿಎಫ್‌ಐ ಸಂಘಟನೆಗೂ ನಂಟು ಏಕಿರಬಾರದು’ ಎಂಬಂತಹ ವರದಿಗಳನ್ನು ಪ್ರಸಾರ ಮಾಡಿದ್ದವು.

ವಿಜಯ ಕರ್ನಾಟಕ ಪತ್ರಿಕೆಯಂತೂ ಪೌರತ್ವ ವಿರೋಧಿಸಿ ನಡೆದ ಗಲಭೆಯ ವೇಳೆ ಪೊಲೀಸ್ ಗೋಲಿಬಾರ್‌ಗೆ ಇಬ್ಬರು ಬಲಿಯಾದ ಬಳಿಕ ಮಂಗಳೂರಿನಲ್ಲಿ ದೊಡ್ಡಮಟ್ಟದ ದುಷ್ಕೃತ್ಯವೊಂದು ನಡೆಯುವ ಸಾಧ್ಯತೆಯಿತ್ತು. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದು ಈ ದುಷ್ಕೃತ್ಯದ ಭಾಗವಾಗಿರಬಹುದೆಂದು ಶಂಕಿಸಲಾಗಿದೆ ಎಂದು ಕಪೋಲಕಲ್ಪಿತ ವರದಿಯನ್ನು ತನ್ನ ಮುಖಪುಟದಲ್ಲಿ ಪ್ರಕಟಿಸಿತ್ತು. ಆಮೂಲಕ ಗೋಲಿಬಾರ್‌ಗೆ ಬಲಿಯಾದವರು ಮುಸ್ಲಿಮರಾದ್ದರಿಂದ ಬಾಂಬ್ ಇಟ್ಟಿರುವವರು ಮುಸ್ಲಿಮರೆ ಎಂದು ಸಾರುವ ಉದ್ದೇಶ ಅದರಲ್ಲಿತ್ತು.

ಭಯೋತ್ಪಾದನ ಕೃತ್ಯಕ್ಕೆ ಜಯ ಸಿಗದು ಎಂಬ ಸಂಪಾದಕೀಯವನ್ನು ಬರೆದು ಈ ವಿಚಾರದ ಕುರಿತು ಪೂರ್ವನಿರ್ಧರಿತ ಅಭಿಪ್ರಾಯಕ್ಕೆ ಬಂದಿದ್ದನ್ನು ಸಾರಿತ್ತು. ಇನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಬಾಂಬ್ ಮಾತ್ರವಲ್ಲ ಅದನ್ನು ಇಟ್ಟ ಭಯೋತ್ಪಾದಕ ಶಕ್ತಿಗಳನ್ನು ಸಹ ಸಂಪೂರ್ಣವಾಗಿ ನಿಷ್ಕ್ರಿಯ ಮಾಡುತ್ತೇವೆ ಎಂದು ಘೋಷಿಸಿದ್ದರು.

ಬಾಂಬ್ ಎಂದ ಕೂಡಲೇ ಮುಸ್ಲಿಮರು ಎನ್ನುವಂತಹ ಮನೋಭಾವ ಮೂಡುವಂತೆ ಮಾಧ್ಯಮಗಳು ಮತ್ತು ಕೆಲ ಕೋಮುವಾದಿ ಪೊಲೀಸ್ ಅಧಿಕಾರಿಗಳು ದೀರ್ಘ ಅವಧಿಯಲ್ಲಿ ಬೆಳೆಸಿದ್ದಾರೆ. ಇದಕ್ಕಾಗಿಯೇ ಬಾಂಬ್ ಎಂದ ತಕ್ಷಣ ಬಹಳಷ್ಟು ಜನರು “ತನಿಖೆಯಲ್ಲಿ ಸಿಗುವ ಆರೋಪಿ ಮುಸ್ಲಿಮನಾಗಿದ್ದರೆ ಭಯೋತ್ಪಾದಕ ಎಂದು ಕರೆಸಿಕೊಳ್ಳುತ್ತಾನೆ, ಒಂದು ವೇಳೆ ಹಿಂದೂವಾಗಿದ್ದರೆ ಮಾನಸಿಕ ಅಸ್ವಸ್ಥನೆಂದು ಕರೆಸಿಕೊಳ್ಳುತ್ತಾನೆ” ಎಂದು ಟ್ರೋಲ್ ಮಾಡಿದ್ದರು.

ಆದರೆ ವಾಸ್ತವವೇನೆಂದರೆ ಸದ್ಯದ ಪೊಲೀಸ್ ತನಿಖೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಬಾಂಬ್ ಇಟ್ಟಿದ್ದ ಶಂಕಿತ ಆರೋಪಿ ಮಣಿಪಾಲದ ಮಣ್ಣಪಳ್ಳದ ಬಿ.ಕೃಷ್ಣಮೂರ್ತಿಯವರ ಮಗ ಆದಿತ್ಯ ರಾವ್ ಎಂದು ತಿಳಿದುಬಂದಿದ್ದಲ್ಲದೇ ಆತ ಪೊಲೀಸರೆದುರು ಶರಣಾಗಿದ್ದಾನೆ ಕೂಡ..

ಇಂಜಿನಿಯರಿಂಗ್ ಓದಿರುವ ಆದಿತ್ಯರಾವ್ ಬೆಂಗಳೂರಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗೆ ಪ್ರಯತ್ನಿಸಿ ವಿಫಲವಾಗಿದ್ದನಂತೆ. ಕೆಲಸ ಸಿಗದ ಬೇಸರದಲ್ಲಿ ಒಂದು ವರ್ಷದ ಹಿಂದೆಯೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿಬಾಂಬ್ ಕರೆ ಮಾಡಿ ಸಿಕ್ಕಿಬಿದ್ದಿದ್ದ. ಆ ಅಪರಾಧಕ್ಕಾಗಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಆತನಿಗೆ ವಿಮಾನ ನಿಲ್ದಾಣ ಸಿಬ್ಬಂದಿ ಮತ್ತು ಅಥಾರಿಟಿಯ ಮೇಲೆ ದ್ವೇಷವಿತ್ತು. ಆ ಕಾರಣಕ್ಕಾಗಿಯೇ ಆತ ಮಂಗಳೂರಿನಲ್ಲಿ ಬಾಂಬ್ ಇಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಮಣಿಪಾಲದ ಮಣ್ಣಪಳ್ಳದಲ್ಲಿ ವಾಸವಾಗಿದ್ದ ಈತನ ಕುಟುಂಬ ಒಂದು ವಾರದ ಕೆಳಗೆ ತಾನೇ ಮಂಗಳೂರಿನ ಲೇಡಿಹಿಲ್ ಅಪಾರ್ಟ್ಮೆಂಟ್‌ಗೆ ಶಿಫ್ಟ್ ಆಗಿದ್ದಾರೆ. ಆದರೆ ಆ ಒಂದು ವಾರದಿಂದ ಆತ ತನ್ನ ಮನೆಗೆ ಹೋಗದೆ ಕಾಣೆಯಾಗಿದ್ದಾನೆ ಎಂದು ಪೊಲೀಸರೆದುರು ಆತನ ತಂದೆ ತಿಳಿಸಿದ್ದಾರೆ. ಇನ್ನು ಬಾಂಬ್ ಇಟ್ಟಿದ್ದ ಘಟನೆ ಬೆಳಿಗ್ಗೆ 9 ಗಂಟೆಗೆ ನಡೆದರೆ ಮಧ್ಯಾಹ್ನ 2.50ಕ್ಕೆ ಟರ್ಮಿನಲ್ ಮ್ಯಾನೇಜರ್‌ಗೆ ಬಂದ ಕರೆಯೊಂದರಲ್ಲಿ ನನಗೆ ಕೊಟ್ಟ ತೊಂದರೆಗೆ ನಾನು ಸುಮ್ಮನೆ ಬಿಡುವುದಿಲ್ಲ ಎಂಬ ಧಮಕಿ ಹಾಕಲಾಗಿದೆಯಂತೆ. ಆದಿತ್ಯರಾವ್‌ನನ್ನು ಹೋಲುವ ವ್ಯಕ್ತಿಯು ಮಂಗಳೂರಿನ ವಿಮಾನ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಈ ವಿಷಯ ಹೊರಬರುತ್ತಿದ್ದಂತೆಯೇ ಕನ್ನಡದ ಬಹುತೇಕ ಮುದ್ರಣ ಮಾಧ್ಯಮಗಳು ಮತ್ತು ಟಿವಿ ಚಾನೆಲ್‌ಗಳು ತೀವ್ರ ನಿರಾಸೆಗೆ ಒಳಗಾಗಿದ್ದಾರೆ. ಆರೋಪಿ ಮುಸ್ಲಿಮನಾಗಿರುತ್ತಾನೆ ಎಂದು ಹಂಬಲಿಸುತ್ತಿದ್ದ ಅವರಿಗೆ ಈ ‘ರಾವ್’ ಎಂಬ ಹೆಸರು ಕೇಳಿದೊಡನೆಯೆ ಗರಬಡಿದವರಂತಾಗಿರುವುದು ಕಂಡುಬಂದಿದೆ. ಅಲ್ಲಿಯವರೆಗೂ ಏರುಧ್ವನಿಯ ಸುದ್ದಿ ಪ್ರಸಾರ ಮಾಡುತ್ತಿದ್ದ ಅವರು ಬಾಯಿಗೆ ಬೀಗ ಜಡಿದುಕೊಂಡಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಆದಿತ್ಯ ರಾವ್‌ಗೂ ಪೌರತ್ವ ವಿರೋಧಿ ಹೋರಾಟಕ್ಕೂ ಏನು ಸಂಬಂಧ? ಈತ ಬಾಂಬ್ ಇಟ್ಟಿರುವುದು ಪೌರತ್ವಕ್ಕೆ ಪ್ರತೀಕಾರ ಹೇಗಾಗುತ್ತದೆ? ಒಂದು ಸಮುದಾಯವನ್ನು, ಒಂದು ಭಿನ್ನಾಭಿಪ್ರಾಯವಿಟ್ಟುಕೊಂಡು ಹೋರಾಟ ಮಾಡುತ್ತಿರುವವರ ಮೇಲೆ ಯಾವುದೇ ಸಾಕ್ಷಿ ಇಲ್ಲದೇ ಗೂಬೆ ಕೂರಿಸಿದ ಮಾಧ್ಯಮಗಳು ನೀತಿ ಸಂಹಿತೆಯನ್ನು ಈ ರೀತಿ ಕೈಬಿಟ್ಟಿರುವುದು ಏತಕ್ಕಾಗಿ? ಈ ಮಾಧ್ಯಮಗಳು ತಮ್ಮ ತಪ್ಪಿನಿಂದ ಪಾಠ ಕಲಿತು ಕ್ಷಮಾಪಣೆಯನ್ನು ಪ್ರಕಟಿಸುತ್ತವೆಯೇ? ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲವೆಂದು ಸಂಕಲ್ಪ ಮಾಡುತ್ತದೆಯೆಂದು ನಾವು ನಿರೀಕ್ಷಿಸಬಹುದೇ?

ಈಗ ಪೊಲೀಸರ ವಿಷಯಕ್ಕೆ ಬರೋಣ.

ಬೆಂಗಳೂರಿನಲ್ಲಿ ಪೌರತ್ವ ಕಾಯ್ದೆಯ ಪರ ಪ್ರತಿಭಟನೆಯಲ್ಲಿ ಹಿಂದೂ ಮುಖಂಡರ ಕೊಲೆಗೆ ಸ್ಕೆಚ್ ಹಾಕಿದ್ದರು, ಅವರು ಎಸ್‌ಡಿಪಿಐ ಸಂಘಟನೆಗೆ ಸೇರಿದವರು, ಅವರಿಗೆ ಹಣ ಬರುತ್ತದೆ ಎಂದು ಬೆಂಗಳೂರು ನಗರ ಕಮಿಷನರ್ ಪತ್ರಿಕಾಗೋಷ್ಟಿಯಲ್ಲಿ ಘೋಷಿಸಿದ್ದರು. ಆದರೆ ಎಫ್‌ಐಆರ್‌ನಲ್ಲಿಯಾಗಲಿ, ಆರೋಪಿತರ ಹೇಳಿಕೆಗಳಲ್ಲಾಗಲೀ ಅವರ ಟಾರ್ಗೆಟ್ ಆಗಿ ಯಾವುದೇ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಿಲ್ಲ. ಇಂಥವರೇ ಟಾರ್ಗೆಟ್ ಆಗಿದ್ದರು ಎಂದು ಹೇಳಲಾದ ವ್ಯಕ್ತಿಗಳು ಆಗಲೇ ಹುತಾತ್ಮರಂತೆ ಹೇಳಿಕೆಯನ್ನು ಕೊಟ್ಟೂ ಆಗಿತ್ತು. ಇದನ್ನೇ ಮುಂದುವರೆಸಿ ಪಿಎಫ್‌ಐ ನಿಷೇಧ ಎಂಬ ಟೈಟಲ್ ಸಹಾ ಬಂದಾಗಿತ್ತು. ವಾಸ್ತವದಲ್ಲಿ ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ಅದಕ್ಕೆ ತೀರ್ಮಾನವಾಗಿತ್ತು ಎಂಬುದನ್ನು ಬಿಟ್ಟರೆ ಅದಿನ್ನೂ ಫೈಲ್ ಸಮೇತ ಕೇಂದ್ರ ಸರ್ಕಾರಕ್ಕೆ ಹೋಗಿ, ಕೇಂದ್ರವು ಅಂತಹ ನಿಷೇಧ ಮಾಡಬೇಕಷ್ಟೇ.

ಬೆಂಗಳೂರಿನಲ್ಲಿನ ಸ್ಲಂಗಳಲ್ಲಿ ಬಾಂಗ್ಲಾದವರಿದ್ದಾರೆ ಎಂದು ಬಿಜೆಪಿ ಸಂಸದರ ಮಾಲೀಕತ್ವದ ಚಾನೆಲ್ ನಕಲಿ ಸ್ಟಿಂಗ್ ಒಂದನ್ನು ನಡೆಸಿತು. ಕೂಡಲೇ ಹಿಂದು ಮುಂದು ನೋಡದೇ ಉತ್ತರ ಕರ್ನಾಟಕದ ಮತ್ತು ಪೂರ್ವ ಭಾರತದ ಕೂಲಿ ಜನರು ವಾಸವಿದ್ದ ಗುಡಿಸಲುಗಳನ್ನು ನೆಲಸಮ ಮಾಡಿದ್ದ ಪೊಲೀಸ್ ಇಲಾಖೆಯ ಕಮಿಷನರ್ ಭಾಸ್ಕರ್‌ರಾವ್‌ರನ್ನು ಯಾರಾದರೂ ಬಿಜೆಪಿ ಪಕ್ಷದ ವಕ್ತಾರರಾ ಎಂದು ಕೇಳಿದರೆ ಏನು ಹೇಳುತ್ತಾರೆ?

ಬಾಂಬ್ ಇಟ್ಟವರು ಯಾರಾದರೂ ಸರಿಯೇ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ, ಭದ್ರತೆಯನ್ನು ಹೆಚ್ಚಿಸಿ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂಬ ಮಾತುಗಳನ್ನು ಆಡುವುದು ಸಮಂಜಸ. ಅದನ್ನು ದಾಟಿ ಕೋಮುಗಳಿಗೆ ಸಂಬಂಧ ಕಲ್ಪಿಸಿ ಹೇಳಿಕೆಗಳನ್ನು ನೀಡಲಾಗುತ್ತದೆ.

ಮಂಗಳೂರಿನಲ್ಲಿ ಪೌರತ್ವ ಕಾಯ್ದೆಯ ವಿರುದ್ಧ ಹೋರಾಟದಲ್ಲಿ ಇಬ್ಬರು ಮುಸ್ಲಿಮರನ್ನು ಗುಂಡಿಟ್ಟು ಹತ್ಯೆ ಮಾಡಿದ ಪೊಲೀಸರು ಅದಕ್ಕೆ ಕಾರಣವಾದ ಘಟನಾವಳಿಯ ಕುರಿತೂ ಸಮರ್ಪಕ ಪುರಾವೆಗಳನ್ನು ಒದಗಿಸಲು ವಿಫಲವಾಗಿದ್ದಾರೆ. ಆದರೆ ಬಾಂಬ್ ಎಂದ ಕೂಡಲೇ ಒಂದು ಕಡೆ ಕೈ ತೋರಿಸುತ್ತಾರೆ.. ವಾಸ್ತವ ಗೊತ್ತಾದಾಗ ಪೆಚ್ಚುಮೋರೆ ಹಾಕಿ ಕೂರುತ್ತಾರೆ ಅಷ್ಟೇ.

ಪ್ರತಿಭಟಿಸುತ್ತಿರುವವರ ಬಟ್ಟೆ ನೋಡಿದರೆ ಸಾಕು ಅವರು ಯಾರು ಎಂಬುದು ಗೊತ್ತಾಗುತ್ತದೆ ಎಂದು ಹೇಳುವ ಪ್ರಧಾನಿ ಇರುವ ರಾಷ್ಟ್ರವಿದು. ಮಾಧ್ಯಮಗಳು ಅಂತಹ ಪ್ರಧಾನಿಗೆ ಪ್ರಶ್ನೆ ಹಾಕುವ ಬದಲು ಪ್ರಧಾನಿಯ ವಿರುದ್ಧ ಮಾತಾಡುವವರ ಮೇಲೆ ದಾಳಿ ನಡೆಸಲು ಕಥೆಗಳನ್ನು ಹೊಸೆಯುತ್ತಿರುತ್ತವೆ. ಹೀಗಿರುವಾಗ ನಾವು ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...