Homeಮುಖಪುಟಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ

ಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ

- Advertisement -
- Advertisement -

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾಗಿದೆ. ಕೂಡಲೇ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದವರು ಅದನ್ನು ಸುರಕ್ಷಿತವಾಗಿ ಸ್ಫೋಟಿಸಿ ಆತಂಕ ಹೋಗಲಾಡಿಸಿದರು. ಬಾಂಬ್‌ ಇಟ್ಟಿದ್ದ ಆರೋಪಿ ಎನ್ನಲಾದ ಆದಿತ್ಯ ರಾವ್‌ ಕೂಡ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಆದರೆ ಆ ಸಂದರ್ಭದಲ್ಲಿ ಕನ್ನಡದ ಕೆಲ ಮಾಧ್ಯಮಗಳು ನಡೆದುಕೊಂಡ ರೀತಿ ಅಸಹ್ಯ ಹುಟ್ಟಿಸುವಂತದ್ದು. ಒಂದು ಪಕ್ಷಕ್ಕೆ, ಒಂದು ಸಿದ್ದಾಂತಕ್ಕೆ ತಮ್ಮನ್ನು ತಾವು ಮಾರಿಕೊಂಡತೆ ಅವು ನಡೆದುಕೊಂಡಿದ್ದು ಪತ್ರಿಕೋದ್ಯಮದ ಎಲ್ಲಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದಂತಿತ್ತು. ‘ಪೌರತ್ವಕ್ಕೆ ಪ್ರತಿಕಾರ’, ‘ಬಾಂಬ್‌ಗೂ ಪಿಎಫ್‌ಐ ಸಂಘಟನೆಗೂ ನಂಟು ಏಕಿರಬಾರದು’ ಎಂಬಂತಹ ವರದಿಗಳನ್ನು ಪ್ರಸಾರ ಮಾಡಿದ್ದವು.

ವಿಜಯ ಕರ್ನಾಟಕ ಪತ್ರಿಕೆಯಂತೂ ಪೌರತ್ವ ವಿರೋಧಿಸಿ ನಡೆದ ಗಲಭೆಯ ವೇಳೆ ಪೊಲೀಸ್ ಗೋಲಿಬಾರ್‌ಗೆ ಇಬ್ಬರು ಬಲಿಯಾದ ಬಳಿಕ ಮಂಗಳೂರಿನಲ್ಲಿ ದೊಡ್ಡಮಟ್ಟದ ದುಷ್ಕೃತ್ಯವೊಂದು ನಡೆಯುವ ಸಾಧ್ಯತೆಯಿತ್ತು. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದು ಈ ದುಷ್ಕೃತ್ಯದ ಭಾಗವಾಗಿರಬಹುದೆಂದು ಶಂಕಿಸಲಾಗಿದೆ ಎಂದು ಕಪೋಲಕಲ್ಪಿತ ವರದಿಯನ್ನು ತನ್ನ ಮುಖಪುಟದಲ್ಲಿ ಪ್ರಕಟಿಸಿತ್ತು. ಆಮೂಲಕ ಗೋಲಿಬಾರ್‌ಗೆ ಬಲಿಯಾದವರು ಮುಸ್ಲಿಮರಾದ್ದರಿಂದ ಬಾಂಬ್ ಇಟ್ಟಿರುವವರು ಮುಸ್ಲಿಮರೆ ಎಂದು ಸಾರುವ ಉದ್ದೇಶ ಅದರಲ್ಲಿತ್ತು.

ಭಯೋತ್ಪಾದನ ಕೃತ್ಯಕ್ಕೆ ಜಯ ಸಿಗದು ಎಂಬ ಸಂಪಾದಕೀಯವನ್ನು ಬರೆದು ಈ ವಿಚಾರದ ಕುರಿತು ಪೂರ್ವನಿರ್ಧರಿತ ಅಭಿಪ್ರಾಯಕ್ಕೆ ಬಂದಿದ್ದನ್ನು ಸಾರಿತ್ತು. ಇನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಬಾಂಬ್ ಮಾತ್ರವಲ್ಲ ಅದನ್ನು ಇಟ್ಟ ಭಯೋತ್ಪಾದಕ ಶಕ್ತಿಗಳನ್ನು ಸಹ ಸಂಪೂರ್ಣವಾಗಿ ನಿಷ್ಕ್ರಿಯ ಮಾಡುತ್ತೇವೆ ಎಂದು ಘೋಷಿಸಿದ್ದರು.

ಬಾಂಬ್ ಎಂದ ಕೂಡಲೇ ಮುಸ್ಲಿಮರು ಎನ್ನುವಂತಹ ಮನೋಭಾವ ಮೂಡುವಂತೆ ಮಾಧ್ಯಮಗಳು ಮತ್ತು ಕೆಲ ಕೋಮುವಾದಿ ಪೊಲೀಸ್ ಅಧಿಕಾರಿಗಳು ದೀರ್ಘ ಅವಧಿಯಲ್ಲಿ ಬೆಳೆಸಿದ್ದಾರೆ. ಇದಕ್ಕಾಗಿಯೇ ಬಾಂಬ್ ಎಂದ ತಕ್ಷಣ ಬಹಳಷ್ಟು ಜನರು “ತನಿಖೆಯಲ್ಲಿ ಸಿಗುವ ಆರೋಪಿ ಮುಸ್ಲಿಮನಾಗಿದ್ದರೆ ಭಯೋತ್ಪಾದಕ ಎಂದು ಕರೆಸಿಕೊಳ್ಳುತ್ತಾನೆ, ಒಂದು ವೇಳೆ ಹಿಂದೂವಾಗಿದ್ದರೆ ಮಾನಸಿಕ ಅಸ್ವಸ್ಥನೆಂದು ಕರೆಸಿಕೊಳ್ಳುತ್ತಾನೆ” ಎಂದು ಟ್ರೋಲ್ ಮಾಡಿದ್ದರು.

ಆದರೆ ವಾಸ್ತವವೇನೆಂದರೆ ಸದ್ಯದ ಪೊಲೀಸ್ ತನಿಖೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಬಾಂಬ್ ಇಟ್ಟಿದ್ದ ಶಂಕಿತ ಆರೋಪಿ ಮಣಿಪಾಲದ ಮಣ್ಣಪಳ್ಳದ ಬಿ.ಕೃಷ್ಣಮೂರ್ತಿಯವರ ಮಗ ಆದಿತ್ಯ ರಾವ್ ಎಂದು ತಿಳಿದುಬಂದಿದ್ದಲ್ಲದೇ ಆತ ಪೊಲೀಸರೆದುರು ಶರಣಾಗಿದ್ದಾನೆ ಕೂಡ..

ಇಂಜಿನಿಯರಿಂಗ್ ಓದಿರುವ ಆದಿತ್ಯರಾವ್ ಬೆಂಗಳೂರಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗೆ ಪ್ರಯತ್ನಿಸಿ ವಿಫಲವಾಗಿದ್ದನಂತೆ. ಕೆಲಸ ಸಿಗದ ಬೇಸರದಲ್ಲಿ ಒಂದು ವರ್ಷದ ಹಿಂದೆಯೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿಬಾಂಬ್ ಕರೆ ಮಾಡಿ ಸಿಕ್ಕಿಬಿದ್ದಿದ್ದ. ಆ ಅಪರಾಧಕ್ಕಾಗಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಆತನಿಗೆ ವಿಮಾನ ನಿಲ್ದಾಣ ಸಿಬ್ಬಂದಿ ಮತ್ತು ಅಥಾರಿಟಿಯ ಮೇಲೆ ದ್ವೇಷವಿತ್ತು. ಆ ಕಾರಣಕ್ಕಾಗಿಯೇ ಆತ ಮಂಗಳೂರಿನಲ್ಲಿ ಬಾಂಬ್ ಇಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಮಣಿಪಾಲದ ಮಣ್ಣಪಳ್ಳದಲ್ಲಿ ವಾಸವಾಗಿದ್ದ ಈತನ ಕುಟುಂಬ ಒಂದು ವಾರದ ಕೆಳಗೆ ತಾನೇ ಮಂಗಳೂರಿನ ಲೇಡಿಹಿಲ್ ಅಪಾರ್ಟ್ಮೆಂಟ್‌ಗೆ ಶಿಫ್ಟ್ ಆಗಿದ್ದಾರೆ. ಆದರೆ ಆ ಒಂದು ವಾರದಿಂದ ಆತ ತನ್ನ ಮನೆಗೆ ಹೋಗದೆ ಕಾಣೆಯಾಗಿದ್ದಾನೆ ಎಂದು ಪೊಲೀಸರೆದುರು ಆತನ ತಂದೆ ತಿಳಿಸಿದ್ದಾರೆ. ಇನ್ನು ಬಾಂಬ್ ಇಟ್ಟಿದ್ದ ಘಟನೆ ಬೆಳಿಗ್ಗೆ 9 ಗಂಟೆಗೆ ನಡೆದರೆ ಮಧ್ಯಾಹ್ನ 2.50ಕ್ಕೆ ಟರ್ಮಿನಲ್ ಮ್ಯಾನೇಜರ್‌ಗೆ ಬಂದ ಕರೆಯೊಂದರಲ್ಲಿ ನನಗೆ ಕೊಟ್ಟ ತೊಂದರೆಗೆ ನಾನು ಸುಮ್ಮನೆ ಬಿಡುವುದಿಲ್ಲ ಎಂಬ ಧಮಕಿ ಹಾಕಲಾಗಿದೆಯಂತೆ. ಆದಿತ್ಯರಾವ್‌ನನ್ನು ಹೋಲುವ ವ್ಯಕ್ತಿಯು ಮಂಗಳೂರಿನ ವಿಮಾನ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಈ ವಿಷಯ ಹೊರಬರುತ್ತಿದ್ದಂತೆಯೇ ಕನ್ನಡದ ಬಹುತೇಕ ಮುದ್ರಣ ಮಾಧ್ಯಮಗಳು ಮತ್ತು ಟಿವಿ ಚಾನೆಲ್‌ಗಳು ತೀವ್ರ ನಿರಾಸೆಗೆ ಒಳಗಾಗಿದ್ದಾರೆ. ಆರೋಪಿ ಮುಸ್ಲಿಮನಾಗಿರುತ್ತಾನೆ ಎಂದು ಹಂಬಲಿಸುತ್ತಿದ್ದ ಅವರಿಗೆ ಈ ‘ರಾವ್’ ಎಂಬ ಹೆಸರು ಕೇಳಿದೊಡನೆಯೆ ಗರಬಡಿದವರಂತಾಗಿರುವುದು ಕಂಡುಬಂದಿದೆ. ಅಲ್ಲಿಯವರೆಗೂ ಏರುಧ್ವನಿಯ ಸುದ್ದಿ ಪ್ರಸಾರ ಮಾಡುತ್ತಿದ್ದ ಅವರು ಬಾಯಿಗೆ ಬೀಗ ಜಡಿದುಕೊಂಡಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಆದಿತ್ಯ ರಾವ್‌ಗೂ ಪೌರತ್ವ ವಿರೋಧಿ ಹೋರಾಟಕ್ಕೂ ಏನು ಸಂಬಂಧ? ಈತ ಬಾಂಬ್ ಇಟ್ಟಿರುವುದು ಪೌರತ್ವಕ್ಕೆ ಪ್ರತೀಕಾರ ಹೇಗಾಗುತ್ತದೆ? ಒಂದು ಸಮುದಾಯವನ್ನು, ಒಂದು ಭಿನ್ನಾಭಿಪ್ರಾಯವಿಟ್ಟುಕೊಂಡು ಹೋರಾಟ ಮಾಡುತ್ತಿರುವವರ ಮೇಲೆ ಯಾವುದೇ ಸಾಕ್ಷಿ ಇಲ್ಲದೇ ಗೂಬೆ ಕೂರಿಸಿದ ಮಾಧ್ಯಮಗಳು ನೀತಿ ಸಂಹಿತೆಯನ್ನು ಈ ರೀತಿ ಕೈಬಿಟ್ಟಿರುವುದು ಏತಕ್ಕಾಗಿ? ಈ ಮಾಧ್ಯಮಗಳು ತಮ್ಮ ತಪ್ಪಿನಿಂದ ಪಾಠ ಕಲಿತು ಕ್ಷಮಾಪಣೆಯನ್ನು ಪ್ರಕಟಿಸುತ್ತವೆಯೇ? ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲವೆಂದು ಸಂಕಲ್ಪ ಮಾಡುತ್ತದೆಯೆಂದು ನಾವು ನಿರೀಕ್ಷಿಸಬಹುದೇ?

ಈಗ ಪೊಲೀಸರ ವಿಷಯಕ್ಕೆ ಬರೋಣ.

ಬೆಂಗಳೂರಿನಲ್ಲಿ ಪೌರತ್ವ ಕಾಯ್ದೆಯ ಪರ ಪ್ರತಿಭಟನೆಯಲ್ಲಿ ಹಿಂದೂ ಮುಖಂಡರ ಕೊಲೆಗೆ ಸ್ಕೆಚ್ ಹಾಕಿದ್ದರು, ಅವರು ಎಸ್‌ಡಿಪಿಐ ಸಂಘಟನೆಗೆ ಸೇರಿದವರು, ಅವರಿಗೆ ಹಣ ಬರುತ್ತದೆ ಎಂದು ಬೆಂಗಳೂರು ನಗರ ಕಮಿಷನರ್ ಪತ್ರಿಕಾಗೋಷ್ಟಿಯಲ್ಲಿ ಘೋಷಿಸಿದ್ದರು. ಆದರೆ ಎಫ್‌ಐಆರ್‌ನಲ್ಲಿಯಾಗಲಿ, ಆರೋಪಿತರ ಹೇಳಿಕೆಗಳಲ್ಲಾಗಲೀ ಅವರ ಟಾರ್ಗೆಟ್ ಆಗಿ ಯಾವುದೇ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಿಲ್ಲ. ಇಂಥವರೇ ಟಾರ್ಗೆಟ್ ಆಗಿದ್ದರು ಎಂದು ಹೇಳಲಾದ ವ್ಯಕ್ತಿಗಳು ಆಗಲೇ ಹುತಾತ್ಮರಂತೆ ಹೇಳಿಕೆಯನ್ನು ಕೊಟ್ಟೂ ಆಗಿತ್ತು. ಇದನ್ನೇ ಮುಂದುವರೆಸಿ ಪಿಎಫ್‌ಐ ನಿಷೇಧ ಎಂಬ ಟೈಟಲ್ ಸಹಾ ಬಂದಾಗಿತ್ತು. ವಾಸ್ತವದಲ್ಲಿ ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ಅದಕ್ಕೆ ತೀರ್ಮಾನವಾಗಿತ್ತು ಎಂಬುದನ್ನು ಬಿಟ್ಟರೆ ಅದಿನ್ನೂ ಫೈಲ್ ಸಮೇತ ಕೇಂದ್ರ ಸರ್ಕಾರಕ್ಕೆ ಹೋಗಿ, ಕೇಂದ್ರವು ಅಂತಹ ನಿಷೇಧ ಮಾಡಬೇಕಷ್ಟೇ.

ಬೆಂಗಳೂರಿನಲ್ಲಿನ ಸ್ಲಂಗಳಲ್ಲಿ ಬಾಂಗ್ಲಾದವರಿದ್ದಾರೆ ಎಂದು ಬಿಜೆಪಿ ಸಂಸದರ ಮಾಲೀಕತ್ವದ ಚಾನೆಲ್ ನಕಲಿ ಸ್ಟಿಂಗ್ ಒಂದನ್ನು ನಡೆಸಿತು. ಕೂಡಲೇ ಹಿಂದು ಮುಂದು ನೋಡದೇ ಉತ್ತರ ಕರ್ನಾಟಕದ ಮತ್ತು ಪೂರ್ವ ಭಾರತದ ಕೂಲಿ ಜನರು ವಾಸವಿದ್ದ ಗುಡಿಸಲುಗಳನ್ನು ನೆಲಸಮ ಮಾಡಿದ್ದ ಪೊಲೀಸ್ ಇಲಾಖೆಯ ಕಮಿಷನರ್ ಭಾಸ್ಕರ್‌ರಾವ್‌ರನ್ನು ಯಾರಾದರೂ ಬಿಜೆಪಿ ಪಕ್ಷದ ವಕ್ತಾರರಾ ಎಂದು ಕೇಳಿದರೆ ಏನು ಹೇಳುತ್ತಾರೆ?

ಬಾಂಬ್ ಇಟ್ಟವರು ಯಾರಾದರೂ ಸರಿಯೇ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ, ಭದ್ರತೆಯನ್ನು ಹೆಚ್ಚಿಸಿ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂಬ ಮಾತುಗಳನ್ನು ಆಡುವುದು ಸಮಂಜಸ. ಅದನ್ನು ದಾಟಿ ಕೋಮುಗಳಿಗೆ ಸಂಬಂಧ ಕಲ್ಪಿಸಿ ಹೇಳಿಕೆಗಳನ್ನು ನೀಡಲಾಗುತ್ತದೆ.

ಮಂಗಳೂರಿನಲ್ಲಿ ಪೌರತ್ವ ಕಾಯ್ದೆಯ ವಿರುದ್ಧ ಹೋರಾಟದಲ್ಲಿ ಇಬ್ಬರು ಮುಸ್ಲಿಮರನ್ನು ಗುಂಡಿಟ್ಟು ಹತ್ಯೆ ಮಾಡಿದ ಪೊಲೀಸರು ಅದಕ್ಕೆ ಕಾರಣವಾದ ಘಟನಾವಳಿಯ ಕುರಿತೂ ಸಮರ್ಪಕ ಪುರಾವೆಗಳನ್ನು ಒದಗಿಸಲು ವಿಫಲವಾಗಿದ್ದಾರೆ. ಆದರೆ ಬಾಂಬ್ ಎಂದ ಕೂಡಲೇ ಒಂದು ಕಡೆ ಕೈ ತೋರಿಸುತ್ತಾರೆ.. ವಾಸ್ತವ ಗೊತ್ತಾದಾಗ ಪೆಚ್ಚುಮೋರೆ ಹಾಕಿ ಕೂರುತ್ತಾರೆ ಅಷ್ಟೇ.

ಪ್ರತಿಭಟಿಸುತ್ತಿರುವವರ ಬಟ್ಟೆ ನೋಡಿದರೆ ಸಾಕು ಅವರು ಯಾರು ಎಂಬುದು ಗೊತ್ತಾಗುತ್ತದೆ ಎಂದು ಹೇಳುವ ಪ್ರಧಾನಿ ಇರುವ ರಾಷ್ಟ್ರವಿದು. ಮಾಧ್ಯಮಗಳು ಅಂತಹ ಪ್ರಧಾನಿಗೆ ಪ್ರಶ್ನೆ ಹಾಕುವ ಬದಲು ಪ್ರಧಾನಿಯ ವಿರುದ್ಧ ಮಾತಾಡುವವರ ಮೇಲೆ ದಾಳಿ ನಡೆಸಲು ಕಥೆಗಳನ್ನು ಹೊಸೆಯುತ್ತಿರುತ್ತವೆ. ಹೀಗಿರುವಾಗ ನಾವು ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...