Homeಕರ್ನಾಟಕಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ಫೆ.8ರಂದು ಅರ್ಜಿ ವಿಚಾರಣೆ

ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ಫೆ.8ರಂದು ಅರ್ಜಿ ವಿಚಾರಣೆ

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಂತೆ ಮಂಗಳೂರಿನ ಮಳಲಿಪೇಟೆ ಜುಮ್ಮಾ ಮಸೀದಿಯಲ್ಲಿ ಸಮೀಕ್ಷೆ ನಡೆಸುವಂತೆ ಕೋರಿ ಹಿಂದೂ ಪಕ್ಷಕಾರರು ಸಲ್ಲಿಸಿರುವ ಅರ್ಜಿಯನ್ನು ಫೆ. 8ರಂದು (ಗುರುವಾರ) ವಿಚಾರಣೆ ನಡೆಸುವುದಾಗಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಇಂದು(ಫೆ.6) ತಿಳಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಇಂದು ಬೆಳಗ್ಗೆ ವಿಚಾರಣೆಗೆ ಬಂದಾಗ ನ್ಯಾಯಾಧೀಶೆ ನಿಖಿತಾ ಅಕ್ಕಿ ಅವರು ಗುರುವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಮಳಲಿಪೇಟೆ ಜುಮ್ಮಾ ಮಸೀದಿಯನ್ನು ಪ್ರತಿವಾದಿಯಾಗಿಸಿರುವ ಅರ್ಜಿದಾರರಾದ ಧನಂಜಯ್‌ ಹಾಗೂ ಇನ್ನಿತರರು “ಮಸೀದಿ ಸಮೀಕ್ಷೆ ನಡೆಸುವ ಸಂಬಂಧ ನ್ಯಾಯಾಲಯ ಅಡ್ವೊಕೇಟ್‌ ಕಮಿಷನರ್‌ ಅವರನ್ನು ನೇಮಿಸಬೇಕು. ಅವರಿಗೆ ತಜ್ಞರು, ಇಲ್ಲವೇ ಪುರಾತತ್ವ ಇಲಾಖೆಯ ಅಧಿಕಾರಿಗಳು ನೆರವು ಒದಗಿಸಲು ನಿರ್ದೇಶನ ನೀಡಬೇಕು”ಎಂದು ಕೋರಿದ್ದಾರೆ. ನ್ಯಾಯವಾದಿ ಚಿದಾನಂದ ಎಂ ಕೆದಿಲಾಯ ಮೂಲಕ ಅರ್ಜಿ ಸಲ್ಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಮಳಲಿ ಮಸೀದಿಯ ಹಳೆಯ ಕಟ್ಟಡ ಪುರಾತನ ದೇವಾಲಯವಾಗಿದೆ. ಅದು ದೇವಾಲಯದ ಗರ್ಭಗುಡಿಯಾಗಿದೆ. ಅಲ್ಲಿನ ವಾಸ್ತುಶಿಲ್ಪದ ಚಿತ್ರಗಳು, ಗೋಡೆ, ಕೆತ್ತನೆಗಳು ಮತ್ತು ಐತಿಹಾಸಿಕ ಸ್ವರೂಪವನ್ನು ಆಧರಿಸಿ ಅಡ್ವೊಕೇಟ್‌ ಕಮಿಷನರ್‌ ವರದಿ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಸ್ಥಳವನ್ನು ಅಗೆದು ಮತ್ತು ಉತ್ಖನನ ನಡೆಸಿ ಅಲ್ಲಿ ಚಾರಿತ್ರಿಕ ಕುರುಹುಗಳಿವೆಯೇ ಪ್ರತಿಮೆಗಳಿವೆಯೇ ಎಂದು ಪರಿಶೀಲಿಸಬೇಕು. ಸ್ಥಳದಲ್ಲಿರುವ ಕಟ್ಟಡ ಮತ್ತು ಸ್ಮಾರಕಗಳ ಕಾಲಮಾನದ ಕುರಿತು ವರದಿ ಮಾಡಬೇಕು. ಇಡೀ ಕಟ್ಟಡದ ಅಥವಾ ಅಲ್ಲಿ ನೆಲೆಗೊಂಡಿರಬಹುದಾದ ಮತ್ತಾವುದೇ ಸ್ಮಾರಕಗಳ ಒಟ್ಟಾರೆ ಸ್ವರೂಪದ ಬಗ್ಗೆ ವೈಜ್ಞಾನಿಕ ವರದಿ ನೀಡಬೇಕು ಎಂದು ಕೂಡ ಅರ್ಜಿಯಲ್ಲಿ ವಿನಂತಿಸಲಾಗಿದೆ.

ಪ್ರಕರಣದ ಹಿನ್ನೆಲೆ :

ಮಳಲಿ ಮಸೀದಿಯ ಹಳೆಯ ಕಟ್ಟಡ ಕೆಡವಿ ಹೊಸದಾಗಿ ನಿರ್ಮಿಸಲು 2022ರಲ್ಲಿ ಮಸೀದಿ ಸಮಿತಿ ಮುಂದಾಗಿತ್ತು. ದ್ರಾವಿಡ ಶೈಲಿಯ ಹಳೆಯ ಕಡ್ಡದ ಸುತ್ತಲು ಕಡೆವಿ ಮಧ್ಯದ ಭಾಗ ಹಾಗೆಯೇ ಬಿಟ್ಟಿತ್ತು. ಮಸೀದಿಯ ಮೇಲ್ಚಾವಣಿ ದೇಗುಲ ಶೈಲಿಯಲ್ಲಿರುವುದನ್ನು ಕಂಡ ಹಿಂದುತ್ವ ಸಂಘಟನೆ ಮುಖಂಡರು ಮಸೀದಿಯ ಒಳಗೆ ಶಿವನ ಸನ್ನಿಧಾನ ಇರುವುದರಿಂದ ದುರಸ್ತಿ ಕಾಮಗಾರಿ ಸ್ಥಗಿತಗೊಳಿಸಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಆದರೆ, ಮಳಲಿ ಮಸೀದಿ ವಕ್ಫ್‌ ಮಂಡಳಿಗೆ ಸೇರಿದ ಆಸ್ತಿಯಾಗಿದೆ ಎಂದು ಮಸೀದಿ ಸಮಿತಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ವಾದ ಆಲಿಸಿದ್ದ ಹೈಕೋರ್ಟ್‌, ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಜ. 31ರಂದು ಸೂಚಿಸಿತ್ತು.

ಕಳೆದ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್‌ ಸಲಹಾ ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್‌ ನಾಸಿರ್‌ ಲಕ್ಕಿಸ್ಟಾರ್‌ ಅವರು “ವಿವಾದಕ್ಕೆ ಸಂಬಂಧಿಸಿದ ಕಾನೂನು ಹೋರಾಟದಿಂದ ದೂರ ಉಳಿದಿದ್ದ ವಕ್ಫ್‌ ಮಂಡಳಿ ಇನ್ನು ತನ್ನನ್ನೂ ಪ್ರಕರಣದ ಕಕ್ಷಿದಾರನನ್ನಾಗಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಲಿದೆ. ಈ ಕುರಿತ ಕಾನೂನು ಹೋರಾಟದಲ್ಲಿ ತೊಡಗಿಸಿಕೊಳ್ಳಲಿದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ : ಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...