HomeUncategorizedದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

ದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

- Advertisement -
- Advertisement -

| ಶುದ್ಧೋದನ |

ಹಿಂದೂತ್ವದ ಒಣ ನಖರಾದಲ್ಲೇ ಹತ್ತು ವರ್ಷದ ಎಂಪಿಗಿರಿ ವ್ಯರ್ಥವಾಗಿ ಕಳೆದ ನಳಿನ್‍ಕುಮಾರ್ ಕಟೀಲ್‍ಗೆ ಮತ ಕೇಳುವ ಮುಖವೂ ಇಲ್ಲವಾಗಿದೆ. ಆತ ಮೋದಿ ಮುಖವಾಡ ಹಾಕಿಕೊಂಡು ಓಡಾಡುತ್ತಿದ್ದಾನೆ. ಮಜಾನ ಎಂದರೆ, ಆರೆಸೆಸ್‍ನ ಕಟ್ಟಾಳುಗಳಿಗೂ ಮೋದಿ ಮಾನ ಪಣಕ್ಕಿಟ್ಟು ನಳಿನ್ ಗೆಲ್ಲಿಸಿಕೊಳ್ಳಬೇಕಾದ ಫಜೀತಿ! ಹಿಂದೂತ್ವದ ಪ್ರಯೋಗ ಶಾಲೆ ದಕ್ಷಿಣ ಕನ್ನಡವೆಂಬ ಒಂದೇ ಒಂದು “ಆಶಾಕಿರಣ” ಬಿಟ್ಟರೆ ಗೆಲ್ಲಲು ಬೇಕಾದ ಬೇರಾವ ಬಲವೂ ಬಿಜೆಪಿಗೆ ಇಲ್ಲವಾಗಿದೆ. ಕಾಂಗ್ರೆಸ್‍ನ ಮಿಥುನ್ ರೈ ಎಂಬ ಬಂಟರ ಖಾನ್‍ದನ್‍ನ ತುಂಟ ತನ್ನ ಭಜರಂಗಿ ಪಡೆಯೊಂದಿಗೆ ಯುದ್ಧ ಭೂಮಿಗೆ ನುಗ್ಗಿದ ಅಬ್ಬರಕ್ಕೇ ಬಿಜೆಪಿಯ ನಳಿನ್ ಥರಗುಟ್ಟಿ ಹೋಗಿದ್ದಾನೆ!!

ವಿಚಿತ್ರವಾದರೂ ಸತ್ಯವೆಂದರೆ, ಕಾಲೆಳೆದಾಟದ ಕಾಂಗ್ರೆಸ್‍ನಲ್ಲಿ ಅಪರೂಪದ ಒಕ್ಕಟ್ಟು ಈ ಬಾರಿ ಮೂಡಿದೆ! ರಮಾನಾಥ ರೈ, ಶಕುಂತಲಾ ಶೆಟ್ಟಿ, ಸೊರಕೆ, ವಸಂತ ಬಾಗೇರಾ, ಜನಾರ್ಧನ ಪೂಜಾರಿ, ಮೋಯ್ಲಿಯಂಥ ಹಿರಿತಲೆಗಳು ಒಂದಾಗಿ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಅಭ್ಯರ್ಥಿ ಮಿಥುನ್‍ನ ರಾಜಗುರು, ಡಿ.ಕೆ.ಶಿವಕುಮಾರ್ ಶಿಷ್ಯನ ಗೆಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಡಿಕೇಶಿಯಿಂದಾಗಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಕಡೆಯ ಅರೆಭಾಷೆಗೌಡರ ಮತ ಕಾಂಗ್ರೆಸ್ ಕಡೆ. ಮುಖ ಮಾಡುವ ಸಾಧ್ಯತೆಯಿದೆ. ಏಕ ಗಂಟಿಂದ ಬಿಜೆಪಿ ಪಾಲಾಗುತ್ತಿದ್ದ ಬಂಟರ ಮತದಲ್ಲಿ ಈ ಬಾರಿ ಕಾಂಗ್ರೆಸ್‍ಗೆ ಹೆಚ್ಚು ಬರುವುದು ಗ್ಯಾರಂಟಿ ಕಾಂಗ್ರೆಸ್ ಮತ್ತು ಬಿಜೆಪಿಯ ಹುರಿಯಾಳುಗಳು ಇಬ್ಬರೂ ಬಂಟರಾದರೂ ಬಂಟರಿಗೆ ಹೊಸ ಹುಡುಗ ಮಿಥುನ್ ಎಂದರೇ ಇಷ್ಟ.

ಮಿಥುನ್ ಹಿಂದೆ ದೊಡ್ಡದೆಂದು ಭಜರಂಗಿ ಪಡೆಯೋ ಇದೆ. ಆಟ ಹೋದಲ್ಲಿ-ಬಂದಲ್ಲಿ ಬಿಜೆಪಿಗಳ ಮಾಮೂಲಿ ಹಿಂದೂತ್ವದ ಗಿಮಿಕ್ ಮಾಲಕವೇ ಜನರನ್ನು ಸೆಳೆಯುತ್ತಿದ್ದಾನೆ. ಗೋ ಪೂಜೆ ಮಾಡುತ್ತಿದ್ದಾನೆ; ಹನುಮಾನ್ ಚಾಲೀಸ್ ಪಡಿಸುತ್ತಿದ್ದಾನೆ. ಇದು ಕಟ್ಟರ್ ಬಿಜೆಪಿಗಳಿಗೆ ನಡುಕ ಮೂಡಿಸಿದೆ. ಆರೆಸೆಸ್‍ನ ಕರಾವಳಿ ಡಾನ್ ಆಗಿದ್ದ ಕಲ್ಲಡ್ಕ ಭಟ್ಟರ ಬೆಂಬಲವೂ ಮಿಥುನ್ ತಂಡಕ್ಕೆ ಸಿಕ್ಕಿದೆ. ರೇಪಿಸ್ಟ್ ರಾಘುಸ್ವಾಮಿಯ ಬೆಂಬಲಿಸಿದ ಕಾರಣಕ್ಕೆ ಆರೆಸೆಸ್‍ನಲ್ಲಿ ಮೂಲೆ ಗುಂಪಾಗಿರುವ ಕಲ್ಲಡ್ಕ ಭಟ್ಟರ ಅಭಿಮಾನಿ ಬ್ರಾಹ್ಮಣರ ಒಂದು ಪಾಲುಮತ ಕಾಂಗ್ರೆಸ್‍ಗೆ ದಕ್ಕುವ ಸೂಚನೆ ಗೋಚರಿಸುತ್ತಿದೆ. ಡಿಸಿಪಿ ಬ್ಯಾಂಕ್ ಚುನಾವಣೆ ಹೊತ್ತಲ್ಲಿ ಸುಳ್ಯದ “ಸಹಕಾರ ಭಾರತಿ” ಎಂಬ ಚೆಡ್ಡಿ ತಂಡದಲ್ಲಾದ ವಿಪ್ಲವವೂ ಬಿಜೆಪಿಗೆ ಮಾರಕದಾಗಿದೆ. ಈ ಕಿತಾಪತಿ ಹಿಂದೆ ಕಲ್ಲಡ್ಕ ಭಟ್ಟದ ನೆರಳಿದೆ. ತನಗೆ ತಿರುಗಿ ನಿಂತಿರುವ ಶಿಷ್ಯ ನಳಿನ್ ಆಪೋಷನ ಪಡೆಯಲು ಭಟ್ರು ಹಠತೊಟ್ಟಿದ್ದಾರೆ.

ಹದಿನಾರು ಸಾವಿರ ಕೋಟಿ ಅನುದಾನ ತಂದಿರುವ ತಾನು ನಂಟರ್ ಒನ್ ಎಂಪಿಯೆಂದು ಭೋಂಗು ಬಿಡುತ್ತಿರುವ ನಳಿನ್ ಖೋಟಾ ಕಾಮಗಾರಿಯಿಂದ ಆಡಿ ಪರ್ಸೆಂಟೇಜ್ ಸಿಕ್ಕಿದೆಯೇ ಹೊರತು ಕ್ಷೇತ್ರ ಉದ್ಧರವಾಗಿಲ್ಲ. ಪಂಪ್‍ವೆಲ್, ಲೊಕ್ಕೊಟ್ಟು ಮೇಲ್ಸೇತುವೆ ಮಾಡಲಾದೇ ಜನರ ಗೋಳುಹೋಯ್ದುಕೊಂಡ ನಳಿನ್‍ನಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಸರಿಯಾಗಿ ಮಾಡಿಸಲಾಗಿಲ್ಲ. ಇದೆಲ್ಲಾ ಜನರ ತೊಂದರೆಗೆ ಸಿಲುಕಿಸಿ ನಳಿನ್ ಎಂದರೆ ಕ್ಯಾಕರಿಸಿ ಉಗಿವಂತೆ ಮೂಡಿದೆ. ಬಿಜೆಪಿಯ ಕಾರ್ಯಕರ್ತರು, ಗೋಮುಖದ, ಅನೈತಿಕ ಪೋಲೀಸ್‍ಗಿರಿ ಕಾದಾಟದಲ್ಲಿ ಸಿಕ್ಕಿಬಿದ್ದು ಜೈಲು, ಆಸ್ಪತ್ರೆ ಪಾಲಾದರೂ ನಳಿನ್ ಕಣ್ಣೆತ್ತಿಯೂ ನೋಡಲಿಲ್ಲ. ದಕ್ಷಿಣ ಕನ್ನಡ ಹೆಮ್ಮೆಯ ವಿಜಯಾ ಬ್ಯಾಂಕ್ ಗುಜರಾತಿಗಳ ಹಾನಿಕೋರ ಬರೋಡ ಬ್ಯಾಂಕ್‍ನಲ್ಲಿ ವಿಲೀನವಾದರೂ ಈ ಬಂಟರ ಕುಲ ಘಾತುಕನಿಂದ ಏನೂ ಮಾಡಲಾಗಲಿಲ್ಲ. ಮಂಗಳೂರಿನ ರಸ್ತೆಯೊಂದಕ್ಕೆ ಇದೇ ವಿಜಯಾ ಬ್ಯಾಂಕ್ ಸಂಸ್ಥಾಪಕ ಸುಂದರರಾಮ ಶೆಟ್ಟಿ ಹೆಸರಿಡಲು ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ಎಂದು ಬೊಬ್ಬೆ ಎಬ್ಬಿಸಿ ಕಳೆದ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಲಾಭ ಮಾಡಿಕೊಂಡಿದ್ದ ನಳಿನ್ ಗ್ಯಾಂಗ್‍ಗೆ ಈ ವಿಜಯಾ ಬ್ಯಾಂಕ್ ವಿಲೀನ ತಿರುಗು ಬಾಣವಾಗಿದೆ.

ಜಾತಿ ಲೆಕ್ಕಚಾರದಲ್ಲಿ ಬಹುಸಂಖ್ಯಾತ ಬಿಲ್ಲವರೇ ನಿರ್ಣಾಯಕರು ಈ ಸಮುದಾಯದ 40 ವರ್ಷದೊಳಗಿನ ಯುವ ಮತದಾರರು ಹಿಂದೂತ್ವದ ಕರಿನೀಂದ ತಲೆ ತೊಳಸಿಕೊಂಡವರು. ಹಾಗಾಗಿ 40 ವರ್ಷ ಮೇಲ್ಪಟ್ಟ ಬಿಲ್ಲವರ ಪರಿವರ್ತನೆಯಲ್ಲ ಮಿಥುನ್, ರಮಾನಾಥರೈ, ಇವಾನ್, ಬಂಗೇರಾ ಬಳಗ ಯಶಸ್ವಿಯಾದರೆ ನಳಿನ್‍ಗೆ ಟಕ್ಕರ್ ಖಂಡಿತ! ಬಿಲ್ಲವರ ಪ್ರಶ್ನಾತೀತ ಹಿರಿಯ ನಾಯಕ ಜನಾರ್ಧನ ಪೂಜಾರಿ “ಮಿಥುನ್ ಗೆಲ್ಲದಿದ್ರೆ ನನ್ನ ಆರಾಧ್ಯ ದೈವ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಕಾಲಿಡಲಾರೆ” ಎಂದು ಶಪಥ ಮಾಡಿರುವುದು ಬಿಲ್ಲವರಲ್ಲಿ ಪರಿಣಾಮ ಬೀರುವ ಲಕ್ಷಣ ಕಾಣಿಸುತ್ತಿದೆ. ಬಿಲ್ಲವರ ಹಿರಿಯರಿಗೂ ಬಿಜೆಪಿ ತಮ್ಮ ಕುಲದ ಹುಂಬ ಹುಡುಗರ ರಕ್ತಪಾತಕ್ಕೆ ಬಳಸಿ ಬಲಿಹಾಕಿದ “ವಾಸ್ತವ” ಅರಿವಾದಂತೆದೆ. ಇದೆಲ್ಲ ಒಳ ಜಗಳದಿಂದ ತತ್ತರಿಸುತ್ತಿರುವ ಬಿಜೆಪಿಗೆ ಮೈನಸ್!!

ಎಸ್‍ಡಿಪಿಐ ಅಸ್ತಿತ್ವ ತೋರಿಸಲು ಗವಣಿಸುತ್ತಿದೆ. ಕಳೆದ ಬಾರಿ ಇಪ್ಪತ್ತೇಳು ಸಾವಿರ ಬಿಲ್ಲವರ ಮತ ಪಡೆದ ಎಸ್‍ಡಿಪಿಐ ಈ ಬಾರಿಯೂ ಕಾಂಗ್ರೆಸ್‍ನ ಹಣೆಬರಹ ನಿರ್ಧರಿಸುವ ಪಾತ್ರವಾಡಲಿದೆ. ಎಸ್‍ಡಿಪಿಐ ಮತ ಕಸಿದಂತೆ ಕಾಂಗ್ರೆಸ್ ಬಡವಾಗುತ್ತದೆ. ದಕ್ಷಿಣ ಕನ್ನಡದ ನಟ್ಟ ನಡುವೆ ನಿಂತು ಸುತ್ತಲೂ ಕಣ್ಣು ಹಾಯಿಸಿದರೆ ಬಿಜೆಪಿಯ ಭದ್ರ ಕೋಟೆಗೆ ಕಾಂಗ್ರೆಸ್ ಲಗ್ಗೆ ಹಾಕಿರುವುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್‍ನ ಮಿಥುನ್ ಮತ್ತು ಬಿಜೆಪಿಯ ನಳಿನ್ ಪೈಕಿ ಯಾರೂ ಬೇಕಿದ್ದರೂ ಸಣ್ಣ ಅಂತರದಲ್ಲಿ ಗೆಲ್ಲಬಹುದೆಂಬ ಜಿದ್ದಾಜಿದ್ದಿ ನಡೆಯುತ್ತಿದೆ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...