HomeಅಂಕಣಗಳುKarnataka against SIRಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

- Advertisement -
- Advertisement -

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ ನಡೆಯಿತು. 

ಜಮಾತೆ‌ ಇಸ್ಲಾಂ ಹಿ ಇಂದ್ ಸಂಘಟನೆಯಿಂದ ಹಮ್ಮಿಕೊಂಡಿದ್ದ SIR ವಿರೋಧಿ ಜನಜಾಗೃತಿ ಜಾಥಾ ಸಭೆಯಲ್ಲಿ ರುಖಿಯ್ಯಾ ಜುಮಾ ಮಸೀದಿ ಅಧ್ಯಕ್ಷರಾದ ಶಕೀರ್, ಜಮಾತ್ ಇಸ್ಲಾಂ ಹಿ ಹಿಂದ್ ನ ಉಪಾಧ್ಯಕ್ಷರಾದ ಅಮಾನುಲ್ಲಾ, SIR ವಿರೋಧಿ ಕರ್ನಾಟಕದ ವಿ.ಎಸ್. ಶ್ರೀಧರ್ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮುಖಂಡರಾದ ಹೇಮಂತ್ ಅವರು ವೇದಿಕೆಯಲ್ಲಿದ್ದರು. 

ಜೂನ್ 13ರಂದು ಉಡುಪಿ ಪತ್ರಿಕಾ ಭವನದಲ್ಲಿ ಕರಪತ್ರ ಬಿಡುಗಡೆಗೊಳಿಸುವ ಮೂಲಕ 5ನೇ ಮಾರ್ಗದ ಜಾಥಕ್ಕೆ ಜಾಲನೆ ನೀಡಲಾಗಿತ್ತು.

ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌ಐಆರ್ ಜನಜಾಗೃತಿ ಜಾಥಾದ ಸಂಚಾಲಕರಾದ ಪ್ರೊ. ವಿ.ಎಸ್. ಶ್ರೀಧರ್, ಕರ್ನಾಟಕದಲ್ಲಿ ಇನ್ನೂ ಸಹ ತುಂಬಾ ಜನರಿಗೆ ಅದರಲ್ಲೂ ಜನ ಸಾಮಾನ್ಯರಿಗೆ ಎಸ್ಐಆರ್ ಕುರಿತು ತಿಳಿದಿಲ್ಲ ಹಾಗಾಗಿ ಜನರನ್ನು ಎಚ್ಚರಿಸುವುದು ಈ ಜಾಥಾದ ಮೊದಲ ಉದ್ದೇಶ, ಹಾಗೇ ಜನಸಾಮಾನ್ಯರಿಗೆ ಎಸ್ಐಆರ್ ನಿಂದ ಹೆಚ್ಚು ತೊಂದರೆಯಾಗದಂತೆ ತಡೆಯಲು ಸರ್ಕಾರಕ್ಕೆ ಮಾತ್ರ ಸಾಧ್ಯವಿದ್ದು, ರಾಜ್ಯ ಸರ್ಕಾರವನ್ನು ಇದಕ್ಕಾಗಿ ಒತ್ತಾಯಿಸುವುದು ಎರಡನೇ ಉದ್ದೇಶ ಎಂದು ಹೇಳಿದರು. 

ಮುಂದುವರೆದು ಮಾತನಾಡಿದ ಅವರು ‘ಇಲ್ಲಿಯವರೆಗೆ ಪ್ರಜಾಪ್ರಭುತ್ವದಲ್ಲಿ ಜನರು ತಮಗೆ ಬೇಕಾದ ಸರ್ಕಾರಗಳನ್ನು ಆಯ್ಕೆ ಮಾಡುತ್ತಿದ್ದರು, ಆದರೆ ಈಗ ಕೇಂದ್ರ ಸರ್ಕಾರ ಯಾರು ಮತ ಹಾಕಬೇಕು, ಯಾರು ಮತ ಹಾಕಬಾರದು ಎಂಬುದನ್ನು ನಿರ್ಧರಿಸುತ್ತಿದೆ. ಚುನಾವಣಾ ಆಯೋಗ ಇಂದು ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಆರೋಪಿಸಿದರು. 

“ಯಾರು ಮತ ಹಾಕಬೇಕು, ಯಾರು ಮತದಾನದ ಹಕ್ಕಿನಿಂದ ವಂಚಿತರಾಗಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ. ಆದರೂ ಅದು ತನ್ನ ವ್ಯಾಪ್ತಿಗೆ ಮೀರಿದ ಕೆಲಸ ಮಾಡುತ್ತಿದೆ. ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳನ್ನೇ ತಿರುಚುವ ಪ್ರಯತ್ನ ನಡೆಯುತ್ತಿದೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಅನೇಕ ಸಾಮಾಜಿಕ ಮತ್ತು ರಾಜಕೀಯ ತಲ್ಲಣಗಳು ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಜನರು ಇದನ್ನು ಗಂಭೀರವಾಗಿ ಪರಿಗಣಿಸಿ ವಿರೋಧಿಸಬೇಕು” ಎಂದು ಅವರು ಕರೆನೀಡಿದರು. 

ಮತದಾರರ ಪಟ್ಟಿಯ ಪರಿಷ್ಕರಣೆ ಸರ್ಕಾರದ ಕರ್ತವ್ಯವಾಗಿದ್ದು, ಚುನಾವಣಾ ಆಯೋಗದ ಕೆಲಸವಲ್ಲ ಎಂದು ಪ್ರತಿಪಾದಿಸಿದ ಅವರು, “ಎಸ್‌ಐಆರ್ ಎನ್ನುವುದು ಈ ಹಿಂದೆ ಜಾರಿಗೆ ತರಲು ಯತ್ನಿಸಲಾದ ಎನ್‌ಆರ್‌ಸಿ ಮತ್ತು ಸಿಎಎ ಪ್ರಕ್ರಿಯೆಗಳ ಮುಂದುವರಿದ ಭಾಗವಾಗಿದೆ. ಇದರ ಪರಿಣಾಮವಾಗಿ ದೇಶದ ಪ್ರಜಾಸತ್ತಾತ್ಮಕ ಸ್ವರೂಪದಲ್ಲಿ ಮೂಲಭೂತ ಬದಲಾವಣೆಗಳು ಸಂಭವಿಸುವ ಅಪಾಯವಿದೆ. ಇದು ಕೇವಲ ಮತದಾರರ ಪಟ್ಟಿ ಪರಿಷ್ಕರಣೆ ಮಾತ್ರವಲ್ಲ; ದೊಡ್ಡ ರಾಜಕೀಯ ಯೋಜನೆಯ ಭಾಗವಾಗಿಯೇ ಇದನ್ನು ಅರ್ಥಮಾಡಿಕೊಳ್ಳಬೇಕು” ಎಂದು ಎಚ್ಚರಿಸಿದರು.  

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಮತದಾರರಿಂದ ಪೌರತ್ವವನ್ನು ಸಾಬೀತುಪಡಿಸುವ ದಾಖಲೆಗಳನ್ನು ಕೇಳುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾದ ಕ್ರಮವಾಗಿದೆ ಎಂದು ಆರೋಪಿಸಿದ ಅವರು ಇದೇ ಕಾರಣಕ್ಕೆ ‘ಎಸ್ಐಆರ್ ಅನ್ನು ರಕ್ತಪಾತವಿಲ್ಲದ ಜನಾಂಗೀಯ ಹತ್ಯೆ’ ಎಂದು ಪರಕಾಲ ಪ್ರಭಾಕರ್ ಅವರು ಕರೆದಿರುವುದನ್ನು ನೆನಪಿಸಿಕೊಂಡರು.

ದೇಶದ ಜನರಿಗೆ ಅದರಲ್ಲೂ ತಳಸಮುದಾಯಗಳಿಗೆ ಮತದಾನದ ಹಕ್ಕನ್ನು ನೀಡಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಂದು ದಲಿತರಿಗೆ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿದ್ದರು ಆದರೆ ಇಂದು ಎಸ್ಐಆರ್ ಹೆಸರಿನಲ್ಲಿ ಆ ರಾಜಕೀಯ ಹಕ್ಕನ್ನು ಅವರಿಂದ ಕಿತ್ತುಕೊಳ್ಳಲಾಗುತ್ತಿದೆ. ತಳಸಮುದಾಯಗಳಿಗೆ ಸಮಾನವಾದ ಸಾಮಾಜಿಕ ಸ್ವಾತಂತ್ರ್ಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲಿಲ್ಲ, ಸಿಕ್ಕಿದ್ದ ರಾಜಕೀಯ ಸ್ವಾತಂತ್ರ್ಯಕ್ಕೂ ಧಕ್ಕೆ ಬಂದಿದೆ. ಅಂಬೇಡ್ಕರ್ ಹೇಳಿದ್ದ ಒಂದು ಮತ, ಒಂದು ಮೌಲ್ಯವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಯುರೋಪಿಯನ್ ಸೇರಿದಂತೆ ಬೇರೆ ದೇಶಗಳಲ್ಲಿ ಮಹಿಳಾ ಮತದಾನಕ್ಕಾಗಿ ನೂರಾರು ವರ್ಷಗಳ ಕಾಲ ಹೋರಾಟ ನಡೆಸಲಾಗಿತ್ತು. ಆದರೆ ಭಾರತದಲ್ಲಿ ಅಂಬೇಡ್ಕರ್ ಅವರು ಅಂತಹ ಹೋರಾಟವೇ ಇಲ್ಲದೇ ಮಹಿಳೆಯರಿಗೆ ಮತದಾನದ ಹಕ್ಕು ನೀಡುವಲ್ಲಿ ಶ್ರಮಿಸಿದ್ದರು, ಆದರೆ ಇಂದು ಎಸ್ಐಆರ್ ನೆಪದಲ್ಲಿ ಮಹಿಳೆಯರ ಆ ಹಕ್ಕನ್ನ ನಿರಾಕರಿಸಲಾಗುತ್ತಿದೆ. ಎಸ್ಐಆರ್ ನಿಂದ ಹೆಚ್ಚು ವಂಚಿತರಾಗುತ್ತಿರುವುದು ಮಹಿಳೆಯರೇ ಆಗಿದ್ದಾರೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಸಹಬಾಳ್ವೆ ಉಡುಪಿ ಜಿಲ್ಲಾ ಸಂಚಾಲಕ ಪ್ರೊ ಫಣಿರಾಜ್‌ ಮಾತನಾಡಿ ಇಂದು ಎಸ್ಐಆರ್ ನೇರ ಪ್ರಭಾವ ಬೀರುತ್ತಿರುವುದು, ದಲಿತ ಮತ್ತು ಅಲೆಮಾರಿ, ಆದಿವಾಸಿ ಸಮುದಾಯಗಳ ಹಕ್ಕಿನ ಮೇಲೆ, ದೇಶದ 70% ಇರುವ ಈ ಜನಸಮುದಾಯಗಳು ನೀಡಲಾಗದ 11-12ರೀತಿಯ ಪತ್ರಗಳನ್ನು ಕೇಳುತ್ತಿದ್ದಾರೆ, ತುಳಿತಕ್ಕೊಳಪಟ್ಟ, ಸಮಾಜದಿಂದ ಕಡೆಗಣಿಸ್ಪಟ್ಟ ಈ ವರ್ಗಗಳಿಗೆ ಈ ದಾಖಲೆಗಳನ್ನು ನೀಡಿ, ತಮ್ಮ ಪೌರತ್ವವನ್ನು ಸಾಭೀತು ಪಡಿಸಿಕೊಳ್ಳುವುದು ಸಾಧ್ಯವಿಲ್ಲ.  ಆದ್ದರಿಂದ ರಾಜ್ಯ ಸರ್ಕಾರ ಕಡೆಗಣಿಸಲ್ಪಟ್ಟ ಈ ಸಮುದಾಯಗಳಿಗೆ ಎಲ್ಲಾ ಮಾಹಿತಿ ಪತ್ರಗಳನ್ನು ನೀಡಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ ಎಂದರು.  

ಈ ಸಂದರ್ಭದಲ್ಲಿ ಸಹಬಾಳ್ವೆ ಉಡುಪಿ ಜಿಲ್ಲಾ ಸಂಚಾಲಕ ಪ್ರೊ ಫಣಿರಾಜ್‌, ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಕ್ರೈಸ್ತ ಒಕ್ಕೂಟದ ಪ್ರಶಾಂತ್ ಜತ್ತನ್ನ, ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಕಟಪಾಡಿ, ಪ್ರಮುಖರಾದ ಶ್ಯಾಮ್‌ರಾಜ್ ಬಿರ್ತಿ, ಇದ್ರೀಸ್ ಹೂಡೆ, ಶಶಿಧರ್ ಗೊಲ್ಲ, ಅಬ್ದುಲ್ ಅಝೀಝ್ ಉದ್ಯಾವರ ಉಪಸ್ಥಿತರಿದ್ದರು.

ರಾಜ್ಯದ ವಿವಿಧ ಜಿಲ್ಲೆಗಳನ್ನು ಒಳಗೊಂಡಂತೆ ಐದು ಮಾರ್ಗಗಳಲ್ಲಿ ಜನಜಾಗೃತಿ ಅಭಿಯಾನ ನಡೆಯಲಿದೆ. ಜೂನ್ 13ರಿಂದ 18ರವರೆಗೆ ರಾಜ್ಯಾದ್ಯಂತ ನಡೆಯಲಿರುವ ಈ ಜನಜಾಗೃತಿ ಜಾಥಾ ಮತದಾರರಲ್ಲಿ ಎಸ್‌ಐಆರ್ (ವಿಶೇಷ ಸಮಗ್ರ ಪರಿಷ್ಕರಣೆ) ಪ್ರಕ್ರಿಯೆ ಕುರಿತು ಅರಿವು ಮೂಡಿಸುವ ಉದ್ದೇಶ ಹೊಂದಿದೆ. ರಾಜ್ಯದ ವಿವಿಧ ಜಿಲ್ಲೆಗಳನ್ನು ಒಳಗೊಂಡಂತೆ ಐದು ಮಾರ್ಗಗಳಲ್ಲಿ ಜಾಥಾವನ್ನು ಆಯೋಜಿಸಲಾಗಿದ್ದು, ಈ ನಿಟ್ಟಿನಲ್ಲಿ ಮಾರ್ಗ-5ರಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಜಾಥಾ ಸಂಚರಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲಿದೆ.

ಮಾರ್ಗ-1ರಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳು,
ಮಾರ್ಗ-2ರಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳು ಒಳಗೊಂಡಿವೆ.
ಮಾರ್ಗ-3ರಲ್ಲಿ ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳು,
ಮಾರ್ಗ-4ರಲ್ಲಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳು ಸೇರಿವೆ.
ಮಾರ್ಗ-5ರಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಜಾಥಾ ಸಂಚರಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...