HomeUncategorizedದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

ದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

- Advertisement -
- Advertisement -

| ಶುದ್ಧೋದನ |

ಹಿಂದೂತ್ವದ ಒಣ ನಖರಾದಲ್ಲೇ ಹತ್ತು ವರ್ಷದ ಎಂಪಿಗಿರಿ ವ್ಯರ್ಥವಾಗಿ ಕಳೆದ ನಳಿನ್‍ಕುಮಾರ್ ಕಟೀಲ್‍ಗೆ ಮತ ಕೇಳುವ ಮುಖವೂ ಇಲ್ಲವಾಗಿದೆ. ಆತ ಮೋದಿ ಮುಖವಾಡ ಹಾಕಿಕೊಂಡು ಓಡಾಡುತ್ತಿದ್ದಾನೆ. ಮಜಾನ ಎಂದರೆ, ಆರೆಸೆಸ್‍ನ ಕಟ್ಟಾಳುಗಳಿಗೂ ಮೋದಿ ಮಾನ ಪಣಕ್ಕಿಟ್ಟು ನಳಿನ್ ಗೆಲ್ಲಿಸಿಕೊಳ್ಳಬೇಕಾದ ಫಜೀತಿ! ಹಿಂದೂತ್ವದ ಪ್ರಯೋಗ ಶಾಲೆ ದಕ್ಷಿಣ ಕನ್ನಡವೆಂಬ ಒಂದೇ ಒಂದು “ಆಶಾಕಿರಣ” ಬಿಟ್ಟರೆ ಗೆಲ್ಲಲು ಬೇಕಾದ ಬೇರಾವ ಬಲವೂ ಬಿಜೆಪಿಗೆ ಇಲ್ಲವಾಗಿದೆ. ಕಾಂಗ್ರೆಸ್‍ನ ಮಿಥುನ್ ರೈ ಎಂಬ ಬಂಟರ ಖಾನ್‍ದನ್‍ನ ತುಂಟ ತನ್ನ ಭಜರಂಗಿ ಪಡೆಯೊಂದಿಗೆ ಯುದ್ಧ ಭೂಮಿಗೆ ನುಗ್ಗಿದ ಅಬ್ಬರಕ್ಕೇ ಬಿಜೆಪಿಯ ನಳಿನ್ ಥರಗುಟ್ಟಿ ಹೋಗಿದ್ದಾನೆ!!

ವಿಚಿತ್ರವಾದರೂ ಸತ್ಯವೆಂದರೆ, ಕಾಲೆಳೆದಾಟದ ಕಾಂಗ್ರೆಸ್‍ನಲ್ಲಿ ಅಪರೂಪದ ಒಕ್ಕಟ್ಟು ಈ ಬಾರಿ ಮೂಡಿದೆ! ರಮಾನಾಥ ರೈ, ಶಕುಂತಲಾ ಶೆಟ್ಟಿ, ಸೊರಕೆ, ವಸಂತ ಬಾಗೇರಾ, ಜನಾರ್ಧನ ಪೂಜಾರಿ, ಮೋಯ್ಲಿಯಂಥ ಹಿರಿತಲೆಗಳು ಒಂದಾಗಿ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಅಭ್ಯರ್ಥಿ ಮಿಥುನ್‍ನ ರಾಜಗುರು, ಡಿ.ಕೆ.ಶಿವಕುಮಾರ್ ಶಿಷ್ಯನ ಗೆಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಡಿಕೇಶಿಯಿಂದಾಗಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಕಡೆಯ ಅರೆಭಾಷೆಗೌಡರ ಮತ ಕಾಂಗ್ರೆಸ್ ಕಡೆ. ಮುಖ ಮಾಡುವ ಸಾಧ್ಯತೆಯಿದೆ. ಏಕ ಗಂಟಿಂದ ಬಿಜೆಪಿ ಪಾಲಾಗುತ್ತಿದ್ದ ಬಂಟರ ಮತದಲ್ಲಿ ಈ ಬಾರಿ ಕಾಂಗ್ರೆಸ್‍ಗೆ ಹೆಚ್ಚು ಬರುವುದು ಗ್ಯಾರಂಟಿ ಕಾಂಗ್ರೆಸ್ ಮತ್ತು ಬಿಜೆಪಿಯ ಹುರಿಯಾಳುಗಳು ಇಬ್ಬರೂ ಬಂಟರಾದರೂ ಬಂಟರಿಗೆ ಹೊಸ ಹುಡುಗ ಮಿಥುನ್ ಎಂದರೇ ಇಷ್ಟ.

ಮಿಥುನ್ ಹಿಂದೆ ದೊಡ್ಡದೆಂದು ಭಜರಂಗಿ ಪಡೆಯೋ ಇದೆ. ಆಟ ಹೋದಲ್ಲಿ-ಬಂದಲ್ಲಿ ಬಿಜೆಪಿಗಳ ಮಾಮೂಲಿ ಹಿಂದೂತ್ವದ ಗಿಮಿಕ್ ಮಾಲಕವೇ ಜನರನ್ನು ಸೆಳೆಯುತ್ತಿದ್ದಾನೆ. ಗೋ ಪೂಜೆ ಮಾಡುತ್ತಿದ್ದಾನೆ; ಹನುಮಾನ್ ಚಾಲೀಸ್ ಪಡಿಸುತ್ತಿದ್ದಾನೆ. ಇದು ಕಟ್ಟರ್ ಬಿಜೆಪಿಗಳಿಗೆ ನಡುಕ ಮೂಡಿಸಿದೆ. ಆರೆಸೆಸ್‍ನ ಕರಾವಳಿ ಡಾನ್ ಆಗಿದ್ದ ಕಲ್ಲಡ್ಕ ಭಟ್ಟರ ಬೆಂಬಲವೂ ಮಿಥುನ್ ತಂಡಕ್ಕೆ ಸಿಕ್ಕಿದೆ. ರೇಪಿಸ್ಟ್ ರಾಘುಸ್ವಾಮಿಯ ಬೆಂಬಲಿಸಿದ ಕಾರಣಕ್ಕೆ ಆರೆಸೆಸ್‍ನಲ್ಲಿ ಮೂಲೆ ಗುಂಪಾಗಿರುವ ಕಲ್ಲಡ್ಕ ಭಟ್ಟರ ಅಭಿಮಾನಿ ಬ್ರಾಹ್ಮಣರ ಒಂದು ಪಾಲುಮತ ಕಾಂಗ್ರೆಸ್‍ಗೆ ದಕ್ಕುವ ಸೂಚನೆ ಗೋಚರಿಸುತ್ತಿದೆ. ಡಿಸಿಪಿ ಬ್ಯಾಂಕ್ ಚುನಾವಣೆ ಹೊತ್ತಲ್ಲಿ ಸುಳ್ಯದ “ಸಹಕಾರ ಭಾರತಿ” ಎಂಬ ಚೆಡ್ಡಿ ತಂಡದಲ್ಲಾದ ವಿಪ್ಲವವೂ ಬಿಜೆಪಿಗೆ ಮಾರಕದಾಗಿದೆ. ಈ ಕಿತಾಪತಿ ಹಿಂದೆ ಕಲ್ಲಡ್ಕ ಭಟ್ಟದ ನೆರಳಿದೆ. ತನಗೆ ತಿರುಗಿ ನಿಂತಿರುವ ಶಿಷ್ಯ ನಳಿನ್ ಆಪೋಷನ ಪಡೆಯಲು ಭಟ್ರು ಹಠತೊಟ್ಟಿದ್ದಾರೆ.

ಹದಿನಾರು ಸಾವಿರ ಕೋಟಿ ಅನುದಾನ ತಂದಿರುವ ತಾನು ನಂಟರ್ ಒನ್ ಎಂಪಿಯೆಂದು ಭೋಂಗು ಬಿಡುತ್ತಿರುವ ನಳಿನ್ ಖೋಟಾ ಕಾಮಗಾರಿಯಿಂದ ಆಡಿ ಪರ್ಸೆಂಟೇಜ್ ಸಿಕ್ಕಿದೆಯೇ ಹೊರತು ಕ್ಷೇತ್ರ ಉದ್ಧರವಾಗಿಲ್ಲ. ಪಂಪ್‍ವೆಲ್, ಲೊಕ್ಕೊಟ್ಟು ಮೇಲ್ಸೇತುವೆ ಮಾಡಲಾದೇ ಜನರ ಗೋಳುಹೋಯ್ದುಕೊಂಡ ನಳಿನ್‍ನಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಸರಿಯಾಗಿ ಮಾಡಿಸಲಾಗಿಲ್ಲ. ಇದೆಲ್ಲಾ ಜನರ ತೊಂದರೆಗೆ ಸಿಲುಕಿಸಿ ನಳಿನ್ ಎಂದರೆ ಕ್ಯಾಕರಿಸಿ ಉಗಿವಂತೆ ಮೂಡಿದೆ. ಬಿಜೆಪಿಯ ಕಾರ್ಯಕರ್ತರು, ಗೋಮುಖದ, ಅನೈತಿಕ ಪೋಲೀಸ್‍ಗಿರಿ ಕಾದಾಟದಲ್ಲಿ ಸಿಕ್ಕಿಬಿದ್ದು ಜೈಲು, ಆಸ್ಪತ್ರೆ ಪಾಲಾದರೂ ನಳಿನ್ ಕಣ್ಣೆತ್ತಿಯೂ ನೋಡಲಿಲ್ಲ. ದಕ್ಷಿಣ ಕನ್ನಡ ಹೆಮ್ಮೆಯ ವಿಜಯಾ ಬ್ಯಾಂಕ್ ಗುಜರಾತಿಗಳ ಹಾನಿಕೋರ ಬರೋಡ ಬ್ಯಾಂಕ್‍ನಲ್ಲಿ ವಿಲೀನವಾದರೂ ಈ ಬಂಟರ ಕುಲ ಘಾತುಕನಿಂದ ಏನೂ ಮಾಡಲಾಗಲಿಲ್ಲ. ಮಂಗಳೂರಿನ ರಸ್ತೆಯೊಂದಕ್ಕೆ ಇದೇ ವಿಜಯಾ ಬ್ಯಾಂಕ್ ಸಂಸ್ಥಾಪಕ ಸುಂದರರಾಮ ಶೆಟ್ಟಿ ಹೆಸರಿಡಲು ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ಎಂದು ಬೊಬ್ಬೆ ಎಬ್ಬಿಸಿ ಕಳೆದ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಲಾಭ ಮಾಡಿಕೊಂಡಿದ್ದ ನಳಿನ್ ಗ್ಯಾಂಗ್‍ಗೆ ಈ ವಿಜಯಾ ಬ್ಯಾಂಕ್ ವಿಲೀನ ತಿರುಗು ಬಾಣವಾಗಿದೆ.

ಜಾತಿ ಲೆಕ್ಕಚಾರದಲ್ಲಿ ಬಹುಸಂಖ್ಯಾತ ಬಿಲ್ಲವರೇ ನಿರ್ಣಾಯಕರು ಈ ಸಮುದಾಯದ 40 ವರ್ಷದೊಳಗಿನ ಯುವ ಮತದಾರರು ಹಿಂದೂತ್ವದ ಕರಿನೀಂದ ತಲೆ ತೊಳಸಿಕೊಂಡವರು. ಹಾಗಾಗಿ 40 ವರ್ಷ ಮೇಲ್ಪಟ್ಟ ಬಿಲ್ಲವರ ಪರಿವರ್ತನೆಯಲ್ಲ ಮಿಥುನ್, ರಮಾನಾಥರೈ, ಇವಾನ್, ಬಂಗೇರಾ ಬಳಗ ಯಶಸ್ವಿಯಾದರೆ ನಳಿನ್‍ಗೆ ಟಕ್ಕರ್ ಖಂಡಿತ! ಬಿಲ್ಲವರ ಪ್ರಶ್ನಾತೀತ ಹಿರಿಯ ನಾಯಕ ಜನಾರ್ಧನ ಪೂಜಾರಿ “ಮಿಥುನ್ ಗೆಲ್ಲದಿದ್ರೆ ನನ್ನ ಆರಾಧ್ಯ ದೈವ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಕಾಲಿಡಲಾರೆ” ಎಂದು ಶಪಥ ಮಾಡಿರುವುದು ಬಿಲ್ಲವರಲ್ಲಿ ಪರಿಣಾಮ ಬೀರುವ ಲಕ್ಷಣ ಕಾಣಿಸುತ್ತಿದೆ. ಬಿಲ್ಲವರ ಹಿರಿಯರಿಗೂ ಬಿಜೆಪಿ ತಮ್ಮ ಕುಲದ ಹುಂಬ ಹುಡುಗರ ರಕ್ತಪಾತಕ್ಕೆ ಬಳಸಿ ಬಲಿಹಾಕಿದ “ವಾಸ್ತವ” ಅರಿವಾದಂತೆದೆ. ಇದೆಲ್ಲ ಒಳ ಜಗಳದಿಂದ ತತ್ತರಿಸುತ್ತಿರುವ ಬಿಜೆಪಿಗೆ ಮೈನಸ್!!

ಎಸ್‍ಡಿಪಿಐ ಅಸ್ತಿತ್ವ ತೋರಿಸಲು ಗವಣಿಸುತ್ತಿದೆ. ಕಳೆದ ಬಾರಿ ಇಪ್ಪತ್ತೇಳು ಸಾವಿರ ಬಿಲ್ಲವರ ಮತ ಪಡೆದ ಎಸ್‍ಡಿಪಿಐ ಈ ಬಾರಿಯೂ ಕಾಂಗ್ರೆಸ್‍ನ ಹಣೆಬರಹ ನಿರ್ಧರಿಸುವ ಪಾತ್ರವಾಡಲಿದೆ. ಎಸ್‍ಡಿಪಿಐ ಮತ ಕಸಿದಂತೆ ಕಾಂಗ್ರೆಸ್ ಬಡವಾಗುತ್ತದೆ. ದಕ್ಷಿಣ ಕನ್ನಡದ ನಟ್ಟ ನಡುವೆ ನಿಂತು ಸುತ್ತಲೂ ಕಣ್ಣು ಹಾಯಿಸಿದರೆ ಬಿಜೆಪಿಯ ಭದ್ರ ಕೋಟೆಗೆ ಕಾಂಗ್ರೆಸ್ ಲಗ್ಗೆ ಹಾಕಿರುವುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್‍ನ ಮಿಥುನ್ ಮತ್ತು ಬಿಜೆಪಿಯ ನಳಿನ್ ಪೈಕಿ ಯಾರೂ ಬೇಕಿದ್ದರೂ ಸಣ್ಣ ಅಂತರದಲ್ಲಿ ಗೆಲ್ಲಬಹುದೆಂಬ ಜಿದ್ದಾಜಿದ್ದಿ ನಡೆಯುತ್ತಿದೆ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...