HomeUncategorizedದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

ದಕ್ಷಿಣ ಕನ್ನಡ: ಕೈ ಭಜರಂಗಿ ಅಬ್ಬರಕ್ಕೆ ಕಮಲಿಗ ತತ್ತರ!!

- Advertisement -
- Advertisement -

| ಶುದ್ಧೋದನ |

ಹಿಂದೂತ್ವದ ಒಣ ನಖರಾದಲ್ಲೇ ಹತ್ತು ವರ್ಷದ ಎಂಪಿಗಿರಿ ವ್ಯರ್ಥವಾಗಿ ಕಳೆದ ನಳಿನ್‍ಕುಮಾರ್ ಕಟೀಲ್‍ಗೆ ಮತ ಕೇಳುವ ಮುಖವೂ ಇಲ್ಲವಾಗಿದೆ. ಆತ ಮೋದಿ ಮುಖವಾಡ ಹಾಕಿಕೊಂಡು ಓಡಾಡುತ್ತಿದ್ದಾನೆ. ಮಜಾನ ಎಂದರೆ, ಆರೆಸೆಸ್‍ನ ಕಟ್ಟಾಳುಗಳಿಗೂ ಮೋದಿ ಮಾನ ಪಣಕ್ಕಿಟ್ಟು ನಳಿನ್ ಗೆಲ್ಲಿಸಿಕೊಳ್ಳಬೇಕಾದ ಫಜೀತಿ! ಹಿಂದೂತ್ವದ ಪ್ರಯೋಗ ಶಾಲೆ ದಕ್ಷಿಣ ಕನ್ನಡವೆಂಬ ಒಂದೇ ಒಂದು “ಆಶಾಕಿರಣ” ಬಿಟ್ಟರೆ ಗೆಲ್ಲಲು ಬೇಕಾದ ಬೇರಾವ ಬಲವೂ ಬಿಜೆಪಿಗೆ ಇಲ್ಲವಾಗಿದೆ. ಕಾಂಗ್ರೆಸ್‍ನ ಮಿಥುನ್ ರೈ ಎಂಬ ಬಂಟರ ಖಾನ್‍ದನ್‍ನ ತುಂಟ ತನ್ನ ಭಜರಂಗಿ ಪಡೆಯೊಂದಿಗೆ ಯುದ್ಧ ಭೂಮಿಗೆ ನುಗ್ಗಿದ ಅಬ್ಬರಕ್ಕೇ ಬಿಜೆಪಿಯ ನಳಿನ್ ಥರಗುಟ್ಟಿ ಹೋಗಿದ್ದಾನೆ!!

ವಿಚಿತ್ರವಾದರೂ ಸತ್ಯವೆಂದರೆ, ಕಾಲೆಳೆದಾಟದ ಕಾಂಗ್ರೆಸ್‍ನಲ್ಲಿ ಅಪರೂಪದ ಒಕ್ಕಟ್ಟು ಈ ಬಾರಿ ಮೂಡಿದೆ! ರಮಾನಾಥ ರೈ, ಶಕುಂತಲಾ ಶೆಟ್ಟಿ, ಸೊರಕೆ, ವಸಂತ ಬಾಗೇರಾ, ಜನಾರ್ಧನ ಪೂಜಾರಿ, ಮೋಯ್ಲಿಯಂಥ ಹಿರಿತಲೆಗಳು ಒಂದಾಗಿ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಅಭ್ಯರ್ಥಿ ಮಿಥುನ್‍ನ ರಾಜಗುರು, ಡಿ.ಕೆ.ಶಿವಕುಮಾರ್ ಶಿಷ್ಯನ ಗೆಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಡಿಕೇಶಿಯಿಂದಾಗಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಕಡೆಯ ಅರೆಭಾಷೆಗೌಡರ ಮತ ಕಾಂಗ್ರೆಸ್ ಕಡೆ. ಮುಖ ಮಾಡುವ ಸಾಧ್ಯತೆಯಿದೆ. ಏಕ ಗಂಟಿಂದ ಬಿಜೆಪಿ ಪಾಲಾಗುತ್ತಿದ್ದ ಬಂಟರ ಮತದಲ್ಲಿ ಈ ಬಾರಿ ಕಾಂಗ್ರೆಸ್‍ಗೆ ಹೆಚ್ಚು ಬರುವುದು ಗ್ಯಾರಂಟಿ ಕಾಂಗ್ರೆಸ್ ಮತ್ತು ಬಿಜೆಪಿಯ ಹುರಿಯಾಳುಗಳು ಇಬ್ಬರೂ ಬಂಟರಾದರೂ ಬಂಟರಿಗೆ ಹೊಸ ಹುಡುಗ ಮಿಥುನ್ ಎಂದರೇ ಇಷ್ಟ.

ಮಿಥುನ್ ಹಿಂದೆ ದೊಡ್ಡದೆಂದು ಭಜರಂಗಿ ಪಡೆಯೋ ಇದೆ. ಆಟ ಹೋದಲ್ಲಿ-ಬಂದಲ್ಲಿ ಬಿಜೆಪಿಗಳ ಮಾಮೂಲಿ ಹಿಂದೂತ್ವದ ಗಿಮಿಕ್ ಮಾಲಕವೇ ಜನರನ್ನು ಸೆಳೆಯುತ್ತಿದ್ದಾನೆ. ಗೋ ಪೂಜೆ ಮಾಡುತ್ತಿದ್ದಾನೆ; ಹನುಮಾನ್ ಚಾಲೀಸ್ ಪಡಿಸುತ್ತಿದ್ದಾನೆ. ಇದು ಕಟ್ಟರ್ ಬಿಜೆಪಿಗಳಿಗೆ ನಡುಕ ಮೂಡಿಸಿದೆ. ಆರೆಸೆಸ್‍ನ ಕರಾವಳಿ ಡಾನ್ ಆಗಿದ್ದ ಕಲ್ಲಡ್ಕ ಭಟ್ಟರ ಬೆಂಬಲವೂ ಮಿಥುನ್ ತಂಡಕ್ಕೆ ಸಿಕ್ಕಿದೆ. ರೇಪಿಸ್ಟ್ ರಾಘುಸ್ವಾಮಿಯ ಬೆಂಬಲಿಸಿದ ಕಾರಣಕ್ಕೆ ಆರೆಸೆಸ್‍ನಲ್ಲಿ ಮೂಲೆ ಗುಂಪಾಗಿರುವ ಕಲ್ಲಡ್ಕ ಭಟ್ಟರ ಅಭಿಮಾನಿ ಬ್ರಾಹ್ಮಣರ ಒಂದು ಪಾಲುಮತ ಕಾಂಗ್ರೆಸ್‍ಗೆ ದಕ್ಕುವ ಸೂಚನೆ ಗೋಚರಿಸುತ್ತಿದೆ. ಡಿಸಿಪಿ ಬ್ಯಾಂಕ್ ಚುನಾವಣೆ ಹೊತ್ತಲ್ಲಿ ಸುಳ್ಯದ “ಸಹಕಾರ ಭಾರತಿ” ಎಂಬ ಚೆಡ್ಡಿ ತಂಡದಲ್ಲಾದ ವಿಪ್ಲವವೂ ಬಿಜೆಪಿಗೆ ಮಾರಕದಾಗಿದೆ. ಈ ಕಿತಾಪತಿ ಹಿಂದೆ ಕಲ್ಲಡ್ಕ ಭಟ್ಟದ ನೆರಳಿದೆ. ತನಗೆ ತಿರುಗಿ ನಿಂತಿರುವ ಶಿಷ್ಯ ನಳಿನ್ ಆಪೋಷನ ಪಡೆಯಲು ಭಟ್ರು ಹಠತೊಟ್ಟಿದ್ದಾರೆ.

ಹದಿನಾರು ಸಾವಿರ ಕೋಟಿ ಅನುದಾನ ತಂದಿರುವ ತಾನು ನಂಟರ್ ಒನ್ ಎಂಪಿಯೆಂದು ಭೋಂಗು ಬಿಡುತ್ತಿರುವ ನಳಿನ್ ಖೋಟಾ ಕಾಮಗಾರಿಯಿಂದ ಆಡಿ ಪರ್ಸೆಂಟೇಜ್ ಸಿಕ್ಕಿದೆಯೇ ಹೊರತು ಕ್ಷೇತ್ರ ಉದ್ಧರವಾಗಿಲ್ಲ. ಪಂಪ್‍ವೆಲ್, ಲೊಕ್ಕೊಟ್ಟು ಮೇಲ್ಸೇತುವೆ ಮಾಡಲಾದೇ ಜನರ ಗೋಳುಹೋಯ್ದುಕೊಂಡ ನಳಿನ್‍ನಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಸರಿಯಾಗಿ ಮಾಡಿಸಲಾಗಿಲ್ಲ. ಇದೆಲ್ಲಾ ಜನರ ತೊಂದರೆಗೆ ಸಿಲುಕಿಸಿ ನಳಿನ್ ಎಂದರೆ ಕ್ಯಾಕರಿಸಿ ಉಗಿವಂತೆ ಮೂಡಿದೆ. ಬಿಜೆಪಿಯ ಕಾರ್ಯಕರ್ತರು, ಗೋಮುಖದ, ಅನೈತಿಕ ಪೋಲೀಸ್‍ಗಿರಿ ಕಾದಾಟದಲ್ಲಿ ಸಿಕ್ಕಿಬಿದ್ದು ಜೈಲು, ಆಸ್ಪತ್ರೆ ಪಾಲಾದರೂ ನಳಿನ್ ಕಣ್ಣೆತ್ತಿಯೂ ನೋಡಲಿಲ್ಲ. ದಕ್ಷಿಣ ಕನ್ನಡ ಹೆಮ್ಮೆಯ ವಿಜಯಾ ಬ್ಯಾಂಕ್ ಗುಜರಾತಿಗಳ ಹಾನಿಕೋರ ಬರೋಡ ಬ್ಯಾಂಕ್‍ನಲ್ಲಿ ವಿಲೀನವಾದರೂ ಈ ಬಂಟರ ಕುಲ ಘಾತುಕನಿಂದ ಏನೂ ಮಾಡಲಾಗಲಿಲ್ಲ. ಮಂಗಳೂರಿನ ರಸ್ತೆಯೊಂದಕ್ಕೆ ಇದೇ ವಿಜಯಾ ಬ್ಯಾಂಕ್ ಸಂಸ್ಥಾಪಕ ಸುಂದರರಾಮ ಶೆಟ್ಟಿ ಹೆಸರಿಡಲು ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ಎಂದು ಬೊಬ್ಬೆ ಎಬ್ಬಿಸಿ ಕಳೆದ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಲಾಭ ಮಾಡಿಕೊಂಡಿದ್ದ ನಳಿನ್ ಗ್ಯಾಂಗ್‍ಗೆ ಈ ವಿಜಯಾ ಬ್ಯಾಂಕ್ ವಿಲೀನ ತಿರುಗು ಬಾಣವಾಗಿದೆ.

ಜಾತಿ ಲೆಕ್ಕಚಾರದಲ್ಲಿ ಬಹುಸಂಖ್ಯಾತ ಬಿಲ್ಲವರೇ ನಿರ್ಣಾಯಕರು ಈ ಸಮುದಾಯದ 40 ವರ್ಷದೊಳಗಿನ ಯುವ ಮತದಾರರು ಹಿಂದೂತ್ವದ ಕರಿನೀಂದ ತಲೆ ತೊಳಸಿಕೊಂಡವರು. ಹಾಗಾಗಿ 40 ವರ್ಷ ಮೇಲ್ಪಟ್ಟ ಬಿಲ್ಲವರ ಪರಿವರ್ತನೆಯಲ್ಲ ಮಿಥುನ್, ರಮಾನಾಥರೈ, ಇವಾನ್, ಬಂಗೇರಾ ಬಳಗ ಯಶಸ್ವಿಯಾದರೆ ನಳಿನ್‍ಗೆ ಟಕ್ಕರ್ ಖಂಡಿತ! ಬಿಲ್ಲವರ ಪ್ರಶ್ನಾತೀತ ಹಿರಿಯ ನಾಯಕ ಜನಾರ್ಧನ ಪೂಜಾರಿ “ಮಿಥುನ್ ಗೆಲ್ಲದಿದ್ರೆ ನನ್ನ ಆರಾಧ್ಯ ದೈವ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಕಾಲಿಡಲಾರೆ” ಎಂದು ಶಪಥ ಮಾಡಿರುವುದು ಬಿಲ್ಲವರಲ್ಲಿ ಪರಿಣಾಮ ಬೀರುವ ಲಕ್ಷಣ ಕಾಣಿಸುತ್ತಿದೆ. ಬಿಲ್ಲವರ ಹಿರಿಯರಿಗೂ ಬಿಜೆಪಿ ತಮ್ಮ ಕುಲದ ಹುಂಬ ಹುಡುಗರ ರಕ್ತಪಾತಕ್ಕೆ ಬಳಸಿ ಬಲಿಹಾಕಿದ “ವಾಸ್ತವ” ಅರಿವಾದಂತೆದೆ. ಇದೆಲ್ಲ ಒಳ ಜಗಳದಿಂದ ತತ್ತರಿಸುತ್ತಿರುವ ಬಿಜೆಪಿಗೆ ಮೈನಸ್!!

ಎಸ್‍ಡಿಪಿಐ ಅಸ್ತಿತ್ವ ತೋರಿಸಲು ಗವಣಿಸುತ್ತಿದೆ. ಕಳೆದ ಬಾರಿ ಇಪ್ಪತ್ತೇಳು ಸಾವಿರ ಬಿಲ್ಲವರ ಮತ ಪಡೆದ ಎಸ್‍ಡಿಪಿಐ ಈ ಬಾರಿಯೂ ಕಾಂಗ್ರೆಸ್‍ನ ಹಣೆಬರಹ ನಿರ್ಧರಿಸುವ ಪಾತ್ರವಾಡಲಿದೆ. ಎಸ್‍ಡಿಪಿಐ ಮತ ಕಸಿದಂತೆ ಕಾಂಗ್ರೆಸ್ ಬಡವಾಗುತ್ತದೆ. ದಕ್ಷಿಣ ಕನ್ನಡದ ನಟ್ಟ ನಡುವೆ ನಿಂತು ಸುತ್ತಲೂ ಕಣ್ಣು ಹಾಯಿಸಿದರೆ ಬಿಜೆಪಿಯ ಭದ್ರ ಕೋಟೆಗೆ ಕಾಂಗ್ರೆಸ್ ಲಗ್ಗೆ ಹಾಕಿರುವುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್‍ನ ಮಿಥುನ್ ಮತ್ತು ಬಿಜೆಪಿಯ ನಳಿನ್ ಪೈಕಿ ಯಾರೂ ಬೇಕಿದ್ದರೂ ಸಣ್ಣ ಅಂತರದಲ್ಲಿ ಗೆಲ್ಲಬಹುದೆಂಬ ಜಿದ್ದಾಜಿದ್ದಿ ನಡೆಯುತ್ತಿದೆ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...