Homeಕರ್ನಾಟಕಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಗಂಜಿಮಠ ಬಳಿಯ ಮಳಲಿ ಪೇಟೆ ಎಂಬಲ್ಲಿ ಸುಮಾರು 900 ವರ್ಷಗಳಷ್ಟು ಇತಿಹಾಸವಿರುವ ಪ್ರಾಚೀನ ಮಸೀದಿಯ ನವೀಕರಣಕ್ಕಾಗಿ ಸಿದ್ದತೆ ನಡೆಸುತ್ತಿರುವಾಗ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಕಾರ್ಯತರ್ಕರು ಅದಕ್ಕೆ ಅಡ್ಡಿಪಡಿಸಿದ ಘಟನೆ ಗುರುವಾರ ನಡೆದಿದೆ. ಮಸೀದಿಯನ್ನು ಕೇರಳ ಮಾದರಿಯ ಇಂಡೋ-ಇಸ್ಲಾಮಿಕ್‌‌‌ ವಾಸ್ತು ಶೈಲಿಯಲ್ಲಿ ಕಟ್ಟಲಾಗಿದ್ದು, ಆಕರ್ಷಕವಾಗಿ ಕಾಣುತ್ತದೆ. ಆದರೆ ಇದು ದೇವಸ್ಥಾನವಾಗಿತ್ತು ಎಂದು ಯಾವುದೇ ಆಧಾರವಿಲ್ಲದೆ ಆರೋಪಿಸಿರುವ ಬಜರಂಗದಳ, ಮಸೀದಿ ನವೀಕರಣವನ್ನು ತಡೆಹಿಡಿಯುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ಈ ಮಧ್ಯೆ ಕನ್ನಡದ ಸುದ್ದಿ ಮಾಧ್ಯಮಗಳಾದ ಟಿವಿ9 ಕನ್ನಡ, ಉದಯವಾಣಿ, ನ್ಯೂಸ್‌18 ಕನ್ನಡ, ಏಷ್ಯಾನೆಟ್‌ ಸುವರ್ಣನ್ಯೂಸ್‌, ಪಬ್ಲಿಕ್ ಟಿವಿ, ಹೊಸ ದಿಗಂತ, ಒನ್‌ ಇಂಡಿಯಾ ಕನ್ನಡ ಮತ್ತು ಬಿಟಿವಿ ಸೇರಿದಂತೆ ಹಲವಾರು ಕನ್ನಡ ಮಾಧ್ಯಮಗಳು, “ದರ್ಗಾ ಕಟ್ಟಡ ಒಡೆದಾಗ ದೇವಸ್ಥಾನ ಪತ್ತೆಯಾಗಿದೆ” ಎಂದು ಬಜರಂಗದಳ ಹಬ್ಬಿಸಿರುವ ಸುಳ್ಳನ್ನೇ ವಾಸ್ತವ ಎಂಬಂತೆ ಸುದ್ದಿ ಮಾಡಿ ಕೋಮುದ್ವೇಷ ಹರಡಿವೆ. ಜೊತೆಗೆ ತಲತಲಾಂತರಗಳಿಂದಲೂ ನಮಾಜ್‌‌ ಸೇರಿದಂತೆ ಇಸ್ಲಾಮಿ ಆಚರಣೆ ಮಾಡುತ್ತಾ ಬರುತ್ತಿದ್ದ ಮಸೀದಿಯನ್ನು, “ಜೈನ ಬಸದಿ ಅಥವಾ ದೇವಸ್ಥಾನ” ಎಂದು ಪ್ರತಿಪಾದಿಸಿ ಜನರಲ್ಲಿ ಗೊಂದಲ ಮೂಡುವಂತೆ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯರ ಪ್ರಕಾರ ಮಳಲಿ ಮಸೀದಿ ಸುಮಾರು 900 ನೂರು ವರ್ಷಗಳಷ್ಟು ಹಳೆಯದು. ಊರು ಬೆಳೆದಂತೆ ಈ ಮಸೀದಿಯಲ್ಲಿ ಜನರಿಗೆ ಜಾಗ ಸಾಕಾಗದ ಕಾರಣಕ್ಕೆ ಅದರ ಹೊರ ಭಾಗದಲ್ಲಿ ಕೂಡಾ ಮಸೀದಿಯನ್ನು ವಿಸ್ತರಿಸಲಾಗಿತ್ತು. ಇದೀಗ ಪ್ರಾಚೀನ ಮಸೀದಿಯ ರಚನೆಯನ್ನು ಹಾಗೆ ಬಿಟ್ಟು, ನಂತರ ವಿಸ್ತರಿಸಿರುವ ಕಟ್ಟಡವನ್ನು ಕೆಡವಿ ನವೀಕರಣಕ್ಕೆ ಊರಿನ ಜನರು ಸಿದ್ದತೆ ನಡೆಸಿದ್ದರು. ಈ ವೇಳೆ ಪ್ರಾಚೀನ ಮಸೀದಿಯ ಶೈಲಿಯ ಕಾರಣಕ್ಕೆ ಅದನ್ನು ವಿವಾದ ಮಾಡಲಾಗುತ್ತಿದೆ.

ಇದನ್ನೂ ಓದಿ: ದಹಿಸುತ್ತಿರುವ ಕೋಮು ವಿಷಮತೆಗೆ ಮಠಾಧೀಶರುಗಳ ತುಪ್ಪ..

ಕನ್ನಡ ಮಾಧ್ಯಮಗಳು ಸುದ್ದಿ ಹರಡಿರುವಂತೆ ಅದು ಹೊಸದಾಗಿ ಪತ್ತೆಯಾದ ಕಟ್ಟಡ ಅಲ್ಲ. ಜೊತೆಗೆ ಅದು ದರ್ಗಾವನ್ನು ಕಡೆವಿದಾಗ ಧುತ್ತನೆ ಪ್ರತ್ಯಕ್ಷವಾದ ಕಟ್ಟಡವೂ ಅಲ್ಲ. “ನಾವು ಅಲ್ಲಿಯೆ ತಲತಲಾಂತರದಿಂದ ನಮಾಜ್‌ ಮಾಡುತ್ತಲೇ ಬಂದಿದ್ದೇವೆ” ಎಂದು ಸ್ಥಳೀಯ ನಾಗರೀಕ ಝಾಕಿರ್‌ ನಾನುಗೌರಿ.ಕಾಂಗೆ ಹೇಳಿದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮಳಲಿ ಪೇಟಿ ಜುಮ್ಮಾ ಮಸೀದಿ ಅಧ್ಯಕ್ಷರಾದ ಮೊಹಮ್ಮದ್‌ ಮಾಮು ಅವರು,“ಕನ್ನಡ ಮಾಧ್ಯಮಗಳು ಸುಳ್ಳು ಹೇಳುತ್ತಿವೆ. ಇದು ಸುಮಾರು 900 ವರ್ಷಗಳಷ್ಟು ಹಳೆಯ ಮಸೀದಿಯಾಗಿದೆ. ಇದೇನೂ ಹೊಸದಾಗಿ ಏನೂ ಪತ್ತೆಯಾಗಿದ್ದಲ್ಲ, ನಾವು ತಲೆಮಾರುಗಳಿಂದಲೂ ಪ್ರಾರ್ಥನೆ ಮಾಡುತ್ತಲೆ ಬಂದಿರುವ ಮಸೀದಿಯಾಗಿದೆ. ಹೊರಗಿನ ಕಟ್ಟಡಗಳನ್ನು ಕೆಡವಿದಾಗ ಅದರ ಆಕರ್ಷಕ ಶೈಲಿಯ ರಚನೆಗಳು ಹೊರಗೆ ಕಂಡಿದೆ. ಈ ರೀತಿಯ ಮಸೀದಿಯನ್ನು ಕಂಡಿರದ ಹಾಗೂ ಈಗಾಗಲೆ ಬಿಜೆಪಿ ಹರಡಿರುವ ಸುಳ್ಳುಗಳಿಂದ ಪ್ರೇರೇಪಿತರಾಗಿರುವ ಮಾಧ್ಯಮಗಳು ಮಸೀದಿಯನ್ನು ದೇವಸ್ಥಾನ ಎಂದು ಯಾವುದೆ ಆಧಾರ ಇಲ್ಲದೆ ಪ್ರತಿಪಾದಿಸುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

“ಇದೇ ಮಾದರಿಯ ವಾಸ್ತುಶೈಲಿಯ ಪ್ರಾಚೀನ ಮಸೀದಿಗಳು ಕರಾವಳಿಯಲ್ಲಿ ಹಲವಾರು ಇದೆ. ಮಸೀದಿಯ ವಾಸ್ತು ಶೈಲಿ ಹಾಗೆ ಇದ್ದ ಕೂಡಲೇ ಅದು ದೇವಸ್ಥಾನಗಳು ಆಗುತ್ತದೆಯೆ?. ಈ ರೀತಿಯ ವಾಸ್ತುಶೈಲಿ ಮಸೀದಿಗೆ ಇರಬಾರದು ಎಂದರೆ ಯಾವ ನ್ಯಾಯ?. ಸುಳ್ಳು ಹರಡುತ್ತಿರುವ ಮಾಧ್ಯಮಗಳ ವಿರುದ್ಧ ದೂರು ನೀಡಲಿದ್ದೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಸ್ಲಿಮರ ವಿರುದ್ಧ ಶತಮಾನದ ಕೋಮು ದಾಳಿಗಳು

ಮಳಲಿ ಮಸೀದಿಯ ವಾಸ್ತುಶೈಲಿಯನ್ನು ಅಭ್ಯಾಸ ಮಾಡಿದ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್‌, ಸಂಶೋಧಕ ಡಾ. ಪುರುಷೋತ್ತಮ ಬಿಳಿಮಲೆ, “ವಿಡಿಯೊದಲ್ಲಿ ಇರುವ ಮಸೀದಿಯು ದ್ರಾವಿಡ ಶೈಲಿಯ ಒಂದು ಪ್ರಬೇಧವಾದ ಕೇರಳ ವಾಸ್ತುವನ್ನು ಬಳಸಿಕೊಂಡಿದೆ. ಇದು ಹೆಚ್ಚು ಮಳೆಬೀಳುವ ಪ್ರದೇಶವಾದ್ದರಿಂದ, ಇಳಿಜಾರಾದ ಮಾಡು ಬಹಳ ಅಗತ್ಯ.‌ ಮಾಡನ್ನು ಮುಳಿ ಹುಲ್ಲು ಅಥವಾ ಹಂಚು ಬಳಸಿ ಕಟ್ಟಲಾಗಿದೆ. ಒಳಗಿನ ಕಂಬವು ವಿಜಯನಗರ ಕಾಲದ್ದು.‌ ಹೀಗಾಗಿ ಇದು ಸುಮಾರು 15-16ನೇ ಶತಮಾನದ್ದೆಂದು ಹೇಳಬಹುದು. ಹಿಂದೂ ಮುಸ್ಲಿಂ ಮೈತ್ರಿಯನ್ನು ಸಾರುವ ಇಂಥ ಕಟ್ಟಡಗಳು ಕೇರಳ ಮತ್ತು ಕರ್ನಾಟಕ ಕರಾವಳಿಯಲ್ಲಿ ಹೇರಳವಾಗಿ ಕಂಡು ಬರುತ್ತವೆ” ಎಂದು ಹೇಳಿದರು.

“ವಿಜಯನಗರ ಮತ್ತು ವಿಜಯನಗರೋತ್ತರ ಕಾಲದಲ್ಲಿ ಇಂಡೋ ಸಾರ್ಸೆನಿಕ್ (ಇಂಡೋ-ಇಸ್ಲಾಮಿಕ್) ಶೈಲಿಯ ಅನೇಕ ಧಾರ್ಮಿಕ ಕಟ್ಟಡಗಳು ಬೆಳೆದಿವೆ. ಇವು ಎರಡೂ ಸಂಸ್ಕೃತಿಗಳ ಅತ್ಯುತ್ತಮ ಅಂಶಗಳನ್ನು ಒಟ್ಟಿಗೆ ತರುವ ಪ್ರಯತ್ನ.‌ ಹಂಪಿಯ ಕಮಲ ಮಹಲ್ ಇದಕ್ಕೆ ಒಳ್ಳೆಯ ಉದಾಹರಣೆ” ಎಂದು ಡಾ. ಬಿಳಿಮಲೆ ಅವರು ತಿಳಿಸಿದರು.

ಮಸೀದಿಯ ಒಳಭಾಗದ ದೃಶ್ಯವನ್ನು ಕೆಳಗಿನ ವಿಡಿಯೊದಲ್ಲಿ ನೋಡಿ

ಕರ್ನಾಟಕದ ಕರಾವಳಿಯಲ್ಲಿ ಹಾಗೂ ನೆರೆಯ ಕೇರಳದಲ್ಲೂ ಇದೇ ರೀತಿಯ ಹಲವಾರು ಮಸೀದಿಗಳು ಇವೆ. ಉದಾಹರಣೆಗೆ ಕಾಸರಗೋಡಿನ ಮಾಲಿಕು ದಿನಾರ್‌‌ ಮಸೀದಿಯನ್ನು ಓದುಗರು ಗಮನಿಸಬಹುದು.

ಕರಾವಳಿಯ ಪ್ರಾಚೀನ ಮಸೀದಿಯ ಬಗ್ಗೆ ಹಲವಾರು ಡಾಕ್ಯುಮಂಟ್‌ ಮಾಡುತ್ತಿರುವ ಲೇಖಕ, ಇಸ್ಮತ್‌ ಪಜೀರ್‌, “ಮಸೀದಿಗೆ ಸುಮಾರು 900 ವರ್ಷಗಳ ಇತಿಹಾಸವಿದೆ. 900 ವರ್ಷಗಳ ಹಿಂದೆಯೆ ಪ್ರಸ್ತುತ ಕಾಣುತ್ತಿರುವಂತೆ ವೈಭವಯುತವಾಗಿ ಕಟ್ಟಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಕಾಲಕಾಲಕ್ಕೆ ಅದನ್ನು ನವೀಕರಣ ಮಾಡುತ್ತಲೇ ಬಂದಿದ್ದಾರೆ. ಈ ರೀತಿಯ ಹಲವಾರು ಮಸೀದಿಗಳು ಕರಾವಳಿಯಲ್ಲಿ ಇವೆ. ಉದಾಹರಣೆಗೆ ಹಳೆ ಬಂದರ್‌ನಲ್ಲಿ ಇರುವ 1400 ವರ್ಷಗಳ ಹಿಂದಿನ ಝೀನತ್‌ ಬಖ್ಷ್‌ ಮಸೀದಿ. ದ್ರಾವಿಡ ವಾಸ್ತುಶೈಲಿ ಇದ್ದಕೂಡಲೇ ಅದು ದೇವಸ್ಥಾನ ಆಗುವುದಿಲ್ಲ. ಇಲ್ಲಿನ ಮುಸ್ಲಿಮರು ಕೂಡಾ ಸ್ಥಳೀಯ ದ್ರಾವಿಡ ಸಂಸ್ಕೃತಿಯವರೇ ಆಗಿರುವುದರಿಂದ ಅವರು ಕಟ್ಟಿದ ಮಸೀದಿ ಸ್ಥಳೀಯ ಶೈಲಿಯಲ್ಲೇ ಇರುತ್ತದೆ. ಅದರಲ್ಲಿ ವಿಶೇಷ ಏನೂ ಇಲ್ಲ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: 2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

ಸುಳ್ಯ, ಬೆಳ್ತಂಗಡಿ, ಪುತ್ತೂರು, ಬಂಟ್ವಳ, ಉಳ್ಳಾಲ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಮೂವತ್ತು ಪುರಾತನ ಮಸೀದಿಗಳಿವೆ ಎಂದು ಇಸ್ಮತ್‌ ಪಜೀರ್‌ ಹೇಳುತ್ತಾರೆ. ಅದರಲ್ಲೂ ಜಿಲ್ಲೆಯ ವಲವೂರು, ಅಕ್ಕರಂಗಡಿ, ಅಜಿಲಮೊಗರು, ವಿಟ್ಲ ಪರ್ತಿಪ್ಪಾಡಿ, ಅಮ್ಮುಂಜೆ ಸೇರಿದಂತೆ ಆರರಿಂದ ಏಳು ಮಸೀದಿಗಳು ಮಳಲಿ ಪೇಟೆಯಲ್ಲಿರುವ ಮಸೀದಿಯ ವಾಸ್ತು ಶೈಲಿಯಲ್ಲೇ ಕಟ್ಟಲ್ಪಟ್ಟಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪೊಲೀಸರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಮಂಗಳೂರು ತಹಶೀಲ್ದಾರ್ ಭೇಟಿ ನೀಡಿ ಮಸೀದಿಯ ಸ್ಥಳ ಹಾಗೂ ಮಸೀದಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ಸಂಘಪರಿವಾರದ ಮುಖಂಡರ ಸಮ್ಮುಖದಲ್ಲಿ ಪರಿಶೀಲಿಸಿದ್ದಾರೆ ಎಂದು ವಾರ್ತಾಭಾರತಿ ವರಿದ ಮಾಡಿದೆ. ಬಳಿಕ ಮಸೀದಿಯ ದಾಖಲೆ ಪತ್ರಗಳನ್ನು ಜಿಲ್ಲಾಧಿಕಾರಿ ವಶಕ್ಕೆ ಪಡೆದಿದ್ದು, ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ಪತ್ರಿಕೆ ಹೇಳೀದೆ. ಈ ಬಗ್ಗೆ ಎಂಡೋಮೆಂಟ್ ಮತ್ತು ವಕ್ಫ್ ಬೋರ್ಡ್‌ನಿಂದ ವರದಿ ಪಡೆದು ವಾರದೊಳಗೆ ಸಮಸ್ಯೆ ಪರಿಹರಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ ಎಂದು ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...