Homeಕರ್ನಾಟಕಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಗಂಜಿಮಠ ಬಳಿಯ ಮಳಲಿ ಪೇಟೆ ಎಂಬಲ್ಲಿ ಸುಮಾರು 900 ವರ್ಷಗಳಷ್ಟು ಇತಿಹಾಸವಿರುವ ಪ್ರಾಚೀನ ಮಸೀದಿಯ ನವೀಕರಣಕ್ಕಾಗಿ ಸಿದ್ದತೆ ನಡೆಸುತ್ತಿರುವಾಗ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಕಾರ್ಯತರ್ಕರು ಅದಕ್ಕೆ ಅಡ್ಡಿಪಡಿಸಿದ ಘಟನೆ ಗುರುವಾರ ನಡೆದಿದೆ. ಮಸೀದಿಯನ್ನು ಕೇರಳ ಮಾದರಿಯ ಇಂಡೋ-ಇಸ್ಲಾಮಿಕ್‌‌‌ ವಾಸ್ತು ಶೈಲಿಯಲ್ಲಿ ಕಟ್ಟಲಾಗಿದ್ದು, ಆಕರ್ಷಕವಾಗಿ ಕಾಣುತ್ತದೆ. ಆದರೆ ಇದು ದೇವಸ್ಥಾನವಾಗಿತ್ತು ಎಂದು ಯಾವುದೇ ಆಧಾರವಿಲ್ಲದೆ ಆರೋಪಿಸಿರುವ ಬಜರಂಗದಳ, ಮಸೀದಿ ನವೀಕರಣವನ್ನು ತಡೆಹಿಡಿಯುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ಈ ಮಧ್ಯೆ ಕನ್ನಡದ ಸುದ್ದಿ ಮಾಧ್ಯಮಗಳಾದ ಟಿವಿ9 ಕನ್ನಡ, ಉದಯವಾಣಿ, ನ್ಯೂಸ್‌18 ಕನ್ನಡ, ಏಷ್ಯಾನೆಟ್‌ ಸುವರ್ಣನ್ಯೂಸ್‌, ಪಬ್ಲಿಕ್ ಟಿವಿ, ಹೊಸ ದಿಗಂತ, ಒನ್‌ ಇಂಡಿಯಾ ಕನ್ನಡ ಮತ್ತು ಬಿಟಿವಿ ಸೇರಿದಂತೆ ಹಲವಾರು ಕನ್ನಡ ಮಾಧ್ಯಮಗಳು, “ದರ್ಗಾ ಕಟ್ಟಡ ಒಡೆದಾಗ ದೇವಸ್ಥಾನ ಪತ್ತೆಯಾಗಿದೆ” ಎಂದು ಬಜರಂಗದಳ ಹಬ್ಬಿಸಿರುವ ಸುಳ್ಳನ್ನೇ ವಾಸ್ತವ ಎಂಬಂತೆ ಸುದ್ದಿ ಮಾಡಿ ಕೋಮುದ್ವೇಷ ಹರಡಿವೆ. ಜೊತೆಗೆ ತಲತಲಾಂತರಗಳಿಂದಲೂ ನಮಾಜ್‌‌ ಸೇರಿದಂತೆ ಇಸ್ಲಾಮಿ ಆಚರಣೆ ಮಾಡುತ್ತಾ ಬರುತ್ತಿದ್ದ ಮಸೀದಿಯನ್ನು, “ಜೈನ ಬಸದಿ ಅಥವಾ ದೇವಸ್ಥಾನ” ಎಂದು ಪ್ರತಿಪಾದಿಸಿ ಜನರಲ್ಲಿ ಗೊಂದಲ ಮೂಡುವಂತೆ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯರ ಪ್ರಕಾರ ಮಳಲಿ ಮಸೀದಿ ಸುಮಾರು 900 ನೂರು ವರ್ಷಗಳಷ್ಟು ಹಳೆಯದು. ಊರು ಬೆಳೆದಂತೆ ಈ ಮಸೀದಿಯಲ್ಲಿ ಜನರಿಗೆ ಜಾಗ ಸಾಕಾಗದ ಕಾರಣಕ್ಕೆ ಅದರ ಹೊರ ಭಾಗದಲ್ಲಿ ಕೂಡಾ ಮಸೀದಿಯನ್ನು ವಿಸ್ತರಿಸಲಾಗಿತ್ತು. ಇದೀಗ ಪ್ರಾಚೀನ ಮಸೀದಿಯ ರಚನೆಯನ್ನು ಹಾಗೆ ಬಿಟ್ಟು, ನಂತರ ವಿಸ್ತರಿಸಿರುವ ಕಟ್ಟಡವನ್ನು ಕೆಡವಿ ನವೀಕರಣಕ್ಕೆ ಊರಿನ ಜನರು ಸಿದ್ದತೆ ನಡೆಸಿದ್ದರು. ಈ ವೇಳೆ ಪ್ರಾಚೀನ ಮಸೀದಿಯ ಶೈಲಿಯ ಕಾರಣಕ್ಕೆ ಅದನ್ನು ವಿವಾದ ಮಾಡಲಾಗುತ್ತಿದೆ.

ಇದನ್ನೂ ಓದಿ: ದಹಿಸುತ್ತಿರುವ ಕೋಮು ವಿಷಮತೆಗೆ ಮಠಾಧೀಶರುಗಳ ತುಪ್ಪ..

ಕನ್ನಡ ಮಾಧ್ಯಮಗಳು ಸುದ್ದಿ ಹರಡಿರುವಂತೆ ಅದು ಹೊಸದಾಗಿ ಪತ್ತೆಯಾದ ಕಟ್ಟಡ ಅಲ್ಲ. ಜೊತೆಗೆ ಅದು ದರ್ಗಾವನ್ನು ಕಡೆವಿದಾಗ ಧುತ್ತನೆ ಪ್ರತ್ಯಕ್ಷವಾದ ಕಟ್ಟಡವೂ ಅಲ್ಲ. “ನಾವು ಅಲ್ಲಿಯೆ ತಲತಲಾಂತರದಿಂದ ನಮಾಜ್‌ ಮಾಡುತ್ತಲೇ ಬಂದಿದ್ದೇವೆ” ಎಂದು ಸ್ಥಳೀಯ ನಾಗರೀಕ ಝಾಕಿರ್‌ ನಾನುಗೌರಿ.ಕಾಂಗೆ ಹೇಳಿದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮಳಲಿ ಪೇಟಿ ಜುಮ್ಮಾ ಮಸೀದಿ ಅಧ್ಯಕ್ಷರಾದ ಮೊಹಮ್ಮದ್‌ ಮಾಮು ಅವರು,“ಕನ್ನಡ ಮಾಧ್ಯಮಗಳು ಸುಳ್ಳು ಹೇಳುತ್ತಿವೆ. ಇದು ಸುಮಾರು 900 ವರ್ಷಗಳಷ್ಟು ಹಳೆಯ ಮಸೀದಿಯಾಗಿದೆ. ಇದೇನೂ ಹೊಸದಾಗಿ ಏನೂ ಪತ್ತೆಯಾಗಿದ್ದಲ್ಲ, ನಾವು ತಲೆಮಾರುಗಳಿಂದಲೂ ಪ್ರಾರ್ಥನೆ ಮಾಡುತ್ತಲೆ ಬಂದಿರುವ ಮಸೀದಿಯಾಗಿದೆ. ಹೊರಗಿನ ಕಟ್ಟಡಗಳನ್ನು ಕೆಡವಿದಾಗ ಅದರ ಆಕರ್ಷಕ ಶೈಲಿಯ ರಚನೆಗಳು ಹೊರಗೆ ಕಂಡಿದೆ. ಈ ರೀತಿಯ ಮಸೀದಿಯನ್ನು ಕಂಡಿರದ ಹಾಗೂ ಈಗಾಗಲೆ ಬಿಜೆಪಿ ಹರಡಿರುವ ಸುಳ್ಳುಗಳಿಂದ ಪ್ರೇರೇಪಿತರಾಗಿರುವ ಮಾಧ್ಯಮಗಳು ಮಸೀದಿಯನ್ನು ದೇವಸ್ಥಾನ ಎಂದು ಯಾವುದೆ ಆಧಾರ ಇಲ್ಲದೆ ಪ್ರತಿಪಾದಿಸುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

“ಇದೇ ಮಾದರಿಯ ವಾಸ್ತುಶೈಲಿಯ ಪ್ರಾಚೀನ ಮಸೀದಿಗಳು ಕರಾವಳಿಯಲ್ಲಿ ಹಲವಾರು ಇದೆ. ಮಸೀದಿಯ ವಾಸ್ತು ಶೈಲಿ ಹಾಗೆ ಇದ್ದ ಕೂಡಲೇ ಅದು ದೇವಸ್ಥಾನಗಳು ಆಗುತ್ತದೆಯೆ?. ಈ ರೀತಿಯ ವಾಸ್ತುಶೈಲಿ ಮಸೀದಿಗೆ ಇರಬಾರದು ಎಂದರೆ ಯಾವ ನ್ಯಾಯ?. ಸುಳ್ಳು ಹರಡುತ್ತಿರುವ ಮಾಧ್ಯಮಗಳ ವಿರುದ್ಧ ದೂರು ನೀಡಲಿದ್ದೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಸ್ಲಿಮರ ವಿರುದ್ಧ ಶತಮಾನದ ಕೋಮು ದಾಳಿಗಳು

ಮಳಲಿ ಮಸೀದಿಯ ವಾಸ್ತುಶೈಲಿಯನ್ನು ಅಭ್ಯಾಸ ಮಾಡಿದ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್‌, ಸಂಶೋಧಕ ಡಾ. ಪುರುಷೋತ್ತಮ ಬಿಳಿಮಲೆ, “ವಿಡಿಯೊದಲ್ಲಿ ಇರುವ ಮಸೀದಿಯು ದ್ರಾವಿಡ ಶೈಲಿಯ ಒಂದು ಪ್ರಬೇಧವಾದ ಕೇರಳ ವಾಸ್ತುವನ್ನು ಬಳಸಿಕೊಂಡಿದೆ. ಇದು ಹೆಚ್ಚು ಮಳೆಬೀಳುವ ಪ್ರದೇಶವಾದ್ದರಿಂದ, ಇಳಿಜಾರಾದ ಮಾಡು ಬಹಳ ಅಗತ್ಯ.‌ ಮಾಡನ್ನು ಮುಳಿ ಹುಲ್ಲು ಅಥವಾ ಹಂಚು ಬಳಸಿ ಕಟ್ಟಲಾಗಿದೆ. ಒಳಗಿನ ಕಂಬವು ವಿಜಯನಗರ ಕಾಲದ್ದು.‌ ಹೀಗಾಗಿ ಇದು ಸುಮಾರು 15-16ನೇ ಶತಮಾನದ್ದೆಂದು ಹೇಳಬಹುದು. ಹಿಂದೂ ಮುಸ್ಲಿಂ ಮೈತ್ರಿಯನ್ನು ಸಾರುವ ಇಂಥ ಕಟ್ಟಡಗಳು ಕೇರಳ ಮತ್ತು ಕರ್ನಾಟಕ ಕರಾವಳಿಯಲ್ಲಿ ಹೇರಳವಾಗಿ ಕಂಡು ಬರುತ್ತವೆ” ಎಂದು ಹೇಳಿದರು.

“ವಿಜಯನಗರ ಮತ್ತು ವಿಜಯನಗರೋತ್ತರ ಕಾಲದಲ್ಲಿ ಇಂಡೋ ಸಾರ್ಸೆನಿಕ್ (ಇಂಡೋ-ಇಸ್ಲಾಮಿಕ್) ಶೈಲಿಯ ಅನೇಕ ಧಾರ್ಮಿಕ ಕಟ್ಟಡಗಳು ಬೆಳೆದಿವೆ. ಇವು ಎರಡೂ ಸಂಸ್ಕೃತಿಗಳ ಅತ್ಯುತ್ತಮ ಅಂಶಗಳನ್ನು ಒಟ್ಟಿಗೆ ತರುವ ಪ್ರಯತ್ನ.‌ ಹಂಪಿಯ ಕಮಲ ಮಹಲ್ ಇದಕ್ಕೆ ಒಳ್ಳೆಯ ಉದಾಹರಣೆ” ಎಂದು ಡಾ. ಬಿಳಿಮಲೆ ಅವರು ತಿಳಿಸಿದರು.

ಮಸೀದಿಯ ಒಳಭಾಗದ ದೃಶ್ಯವನ್ನು ಕೆಳಗಿನ ವಿಡಿಯೊದಲ್ಲಿ ನೋಡಿ

ಕರ್ನಾಟಕದ ಕರಾವಳಿಯಲ್ಲಿ ಹಾಗೂ ನೆರೆಯ ಕೇರಳದಲ್ಲೂ ಇದೇ ರೀತಿಯ ಹಲವಾರು ಮಸೀದಿಗಳು ಇವೆ. ಉದಾಹರಣೆಗೆ ಕಾಸರಗೋಡಿನ ಮಾಲಿಕು ದಿನಾರ್‌‌ ಮಸೀದಿಯನ್ನು ಓದುಗರು ಗಮನಿಸಬಹುದು.

ಕರಾವಳಿಯ ಪ್ರಾಚೀನ ಮಸೀದಿಯ ಬಗ್ಗೆ ಹಲವಾರು ಡಾಕ್ಯುಮಂಟ್‌ ಮಾಡುತ್ತಿರುವ ಲೇಖಕ, ಇಸ್ಮತ್‌ ಪಜೀರ್‌, “ಮಸೀದಿಗೆ ಸುಮಾರು 900 ವರ್ಷಗಳ ಇತಿಹಾಸವಿದೆ. 900 ವರ್ಷಗಳ ಹಿಂದೆಯೆ ಪ್ರಸ್ತುತ ಕಾಣುತ್ತಿರುವಂತೆ ವೈಭವಯುತವಾಗಿ ಕಟ್ಟಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಕಾಲಕಾಲಕ್ಕೆ ಅದನ್ನು ನವೀಕರಣ ಮಾಡುತ್ತಲೇ ಬಂದಿದ್ದಾರೆ. ಈ ರೀತಿಯ ಹಲವಾರು ಮಸೀದಿಗಳು ಕರಾವಳಿಯಲ್ಲಿ ಇವೆ. ಉದಾಹರಣೆಗೆ ಹಳೆ ಬಂದರ್‌ನಲ್ಲಿ ಇರುವ 1400 ವರ್ಷಗಳ ಹಿಂದಿನ ಝೀನತ್‌ ಬಖ್ಷ್‌ ಮಸೀದಿ. ದ್ರಾವಿಡ ವಾಸ್ತುಶೈಲಿ ಇದ್ದಕೂಡಲೇ ಅದು ದೇವಸ್ಥಾನ ಆಗುವುದಿಲ್ಲ. ಇಲ್ಲಿನ ಮುಸ್ಲಿಮರು ಕೂಡಾ ಸ್ಥಳೀಯ ದ್ರಾವಿಡ ಸಂಸ್ಕೃತಿಯವರೇ ಆಗಿರುವುದರಿಂದ ಅವರು ಕಟ್ಟಿದ ಮಸೀದಿ ಸ್ಥಳೀಯ ಶೈಲಿಯಲ್ಲೇ ಇರುತ್ತದೆ. ಅದರಲ್ಲಿ ವಿಶೇಷ ಏನೂ ಇಲ್ಲ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: 2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

ಸುಳ್ಯ, ಬೆಳ್ತಂಗಡಿ, ಪುತ್ತೂರು, ಬಂಟ್ವಳ, ಉಳ್ಳಾಲ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಮೂವತ್ತು ಪುರಾತನ ಮಸೀದಿಗಳಿವೆ ಎಂದು ಇಸ್ಮತ್‌ ಪಜೀರ್‌ ಹೇಳುತ್ತಾರೆ. ಅದರಲ್ಲೂ ಜಿಲ್ಲೆಯ ವಲವೂರು, ಅಕ್ಕರಂಗಡಿ, ಅಜಿಲಮೊಗರು, ವಿಟ್ಲ ಪರ್ತಿಪ್ಪಾಡಿ, ಅಮ್ಮುಂಜೆ ಸೇರಿದಂತೆ ಆರರಿಂದ ಏಳು ಮಸೀದಿಗಳು ಮಳಲಿ ಪೇಟೆಯಲ್ಲಿರುವ ಮಸೀದಿಯ ವಾಸ್ತು ಶೈಲಿಯಲ್ಲೇ ಕಟ್ಟಲ್ಪಟ್ಟಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪೊಲೀಸರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಮಂಗಳೂರು ತಹಶೀಲ್ದಾರ್ ಭೇಟಿ ನೀಡಿ ಮಸೀದಿಯ ಸ್ಥಳ ಹಾಗೂ ಮಸೀದಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ಸಂಘಪರಿವಾರದ ಮುಖಂಡರ ಸಮ್ಮುಖದಲ್ಲಿ ಪರಿಶೀಲಿಸಿದ್ದಾರೆ ಎಂದು ವಾರ್ತಾಭಾರತಿ ವರಿದ ಮಾಡಿದೆ. ಬಳಿಕ ಮಸೀದಿಯ ದಾಖಲೆ ಪತ್ರಗಳನ್ನು ಜಿಲ್ಲಾಧಿಕಾರಿ ವಶಕ್ಕೆ ಪಡೆದಿದ್ದು, ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ಪತ್ರಿಕೆ ಹೇಳೀದೆ. ಈ ಬಗ್ಗೆ ಎಂಡೋಮೆಂಟ್ ಮತ್ತು ವಕ್ಫ್ ಬೋರ್ಡ್‌ನಿಂದ ವರದಿ ಪಡೆದು ವಾರದೊಳಗೆ ಸಮಸ್ಯೆ ಪರಿಹರಿಸುವುದಾಗಿ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ ಎಂದು ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...