Homeಕರ್ನಾಟಕಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ಆರೋಪಿಗಳನ್ನು ಬಂಧಿಸದ್ದಿದ್ದಲ್ಲಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಟ್ಲ ಬಂದ್ ಆಚರಿಸಲಾಗುವುದು ಎಂದು ಕರೆ ನೀಡಲಾಗಿತ್ತು.

- Advertisement -
- Advertisement -

ದಕ್ಷಿಣ ಕನ್ನಡದ ಮದುಮಗನನ್ನು ಟ್ರೋಲ್‌‌‌‌ ಮಾಡಬೇಕು ಎಂದು ಆತನ ಸ್ನೇಹಿತರು ಮಾಡಿರುವ ತಮಾಷೆಯ ಘಟನೆಯ ವಿಡಿಯೋ ವೈರಲ್ ಆದ ನಂತರ ಕೊರಗಜ್ಜನ ವೇಷ ಹಾಕಿ ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಅದು ಕೊರಗಜ್ಜನ ವೇಷವಲ್ಲ ಎಂದು ಪ್ರತಿಕ್ರಿಯಿಸಿದ್ದ ಮದುಮಗ ಕ್ಷಮೆ ಕೂಡ ಕೇಳಿದ್ದರು. ಆದರೂ ಪ್ರಕರಣ ಕೊನೆಗೊಂಡಿಲ್ಲ. ಜನವರಿ 10ರ ಸೋಮವಾರ ರಾತ್ರಿ ಮದುಮಗನ ಇಬ್ಬರು ಗೆಳೆಯರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲದ ಕಡಂಬು ನಿವಾಸಿ ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಚೇತನರವರ ದೂರಿನ ಮೇರೆಗೆ ವಿಟ್ಲ ಪೊಲೀಸರು ಮದುಮಗ ಉಮರುಲ್ ಭಾಷಿತ್ ಮತ್ತು ಇತರ ಹಲವರ ವಿರುದ್ಧ ಕಲಂ 153ಎ, 295 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರು ತನಿಖೆಗಾಗಿ ಠಾಣಾ ಎಸ್.ಐ.ಗಳಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಸಂಜೀವ ಪುರುಷರವರ ನೇತೃತ್ವದಲ್ಲಿ ಎರಡು ವಿಶೇಷ ತಂಡವನ್ನು ರಚಿಸಿ ತನಿಖೆ ಆರಂಬಿಸಿದ್ದರು. ಮಂಗಲ್ಪಡಿ ನಿವಾಸಿ, ಪುತ್ತೂರು ಫಾತಿಮಾ ಬಟ್ಟೆ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದಿನ್ ಮುನಿಶ್ (19) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಬಂಧಿಸದ್ದಿದ್ದಲ್ಲಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಟ್ಲ ಬಂದ್ ಆಚರಿಸಲಾಗುವುದು ಎಂದು ಕರೆ ನೀಡಲಾಗಿತ್ತು. ಅದಕ್ಕೂ ಮುನ್ನವೇ ಸೋಮವಾರ ರಾತ್ರಿಯೇ ಮದುಮಗನ ಇಬ್ಬರು ಸ್ನೇಹಿತರನ್ನು ಬಂಧಿಸಲಾಗಿದೆ. ಆದರೂ ಇಂದು ಕೆಲವು ಅಂಗಡಿಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ನೀಡಲಾಗಿದೆ ಎಂದು ವರದಿಯಾಗಿದೆ.

ಘಟನೆಯ ವಿವರ

ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೊಲ್ನಾಡು ಗ್ರಾಮದ ಸಾಲೆತ್ತೂರು ಬಳಿಯ ಯುವತಿಯ ಮದುವೆ ನೆರೆಯ ಕಾಸರಗೋಡು ಜಿಲ್ಲೆಯ ಉಪ್ಪಳದ ಯುವಕನೊಂದಿಗೆ ಬುಧವಾರ ನಡೆದಿತ್ತು. ಮದುವೆಯ ಮುಂದುವರೆದ ಕಾರ್ಯಕ್ರಮವಾಗಿ ಮದುವೆಯಂದೆ ರಾತ್ರಿ ಮದುಮಗನ ಸ್ನೇಹಿತರಿಗೆ ವಧುವಿನ ಕಡೆಯವರು ಔತಣಕೂಟ(ತಾಳ)ವನ್ನು ಏರ್ಪಡಿಸಿದ್ದರು. ಅದರಂತೆ ಅಂದೇ ರಾತ್ರಿ ಉಪ್ಪಳದಿಂದ ಮದುಮಗ ಮತ್ತು ಅವರ ಸ್ನೇಹಿತರು ಆಗಮಿಸಿದ್ದರು. ಈ ವೇಳೆ ಮದುಮಗನ ಸ್ನೇಹಿತರು ಮದುಮಗನನ್ನು ತಮಾಷೆ ಮಾಡುವ ಉದ್ದೇಶದಿಂದ, ಆತನಿಗೆ ಹರಿದ ಟಿಶರ್ಟ್ ಧರಿಸುವಂತೆ ಮಾಡಿ, ತಲೆಗೆ ಮಟ್ಟಳೆ ಹಾಕಿ, ಸೊಂಟದ ಸುತ್ತ ಒಂದಷ್ಟು ಸೊಪ್ಪುಗಳನ್ನು ಸುತ್ತಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಬಣ್ಣ ಎರಚಿ ಹಾಡು ಹಾಡಿ ಖುಷಿ ಪಟ್ಟಿದ್ದರು.

ಇದರ ನಂತರ, ವಧುವಿನ ಕಡೆಯವರ ಔತಣಕೂಟದಲ್ಲಿ ಭಾಗವಹಿಸಿ, ಆಹಾರವನ್ನು ಸ್ವೀಕರಿಸಿ ಅವರು ತೆರಳಿದ್ದರು. ಆದರೆ, ಮದುಮಗನನ್ನು ತಮಾಷೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಈ ವಿಡಿಯೊವನ್ನು ತುಳುನಾಡಿನಲ್ಲಿ ಆರಾಧಿಸುವ ‘ಕೊರಗಜ್ಜ’ ಎಂಬ ದೈವಕ್ಕೆ ಅವಮಾನ ಮಾಡಲಾಗಿದೆ ಎಂದು ಬಲಪಂಥೀಯರು ವೈರಲ್ ಮಾಡಿದ್ದರು.


ಇದನ್ನೂ ಓದಿ: ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?


ಕೊರಗಜ್ಜನಿಗೆ ಅವಮಾನ ಮಾಡಿಲ್ಲ

ಕೊರಗ ಸಮುದಾಯದ ಮುಖಂಡ ಮತ್ತಾಡಿ ಅವರು ಮಾತನಾಡಿ, “ಘಟನೆಯ ಬಗೆಗಿನ ವಿವಾದಾತ್ಮಕ ವಿಡಿಯೊದಲ್ಲಿ ಮದುಮಗನ ವೇಷವನ್ನು ನೋಡಿದೆ. ಅದು ಕೊರಗಜ್ಜನ ವೇಷ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲಿ ಮದುಮಗನ ತಲೆಗೆ ಮುಟ್ಟಾಳೆ (ಅಡಿಕೆ ಗರಿಯಿಂದ ಮಾಡಿರುವ ತಲೆಗೆ ಧರಿಸುವ ವಸ್ತು) ಹಾಕಿದ್ದರು, ಟೀಶರ್ಟ್ ಧರಿಸಿದ್ದರು ಮತ್ತು ಮುಖಕ್ಕೆ ಕಪ್ಪು ಬಣ್ಣ ಬಳಿದಿದ್ದರು. ಕಪ್ಪು ಬಣ್ಣ ಹಾಕಿದ ಕೂಡಲೇ ಅದು ಕೊರಗರನ್ನು ಅವಮಾನಿಸಿದ ಹಾಗೆ ಹಾಗಲ್ಲ. ಕಪ್ಪು ಬಣ್ಣದವರು ಕೊರಗರು ಮಾತ್ರ ಅಲ್ಲ, ಎಲ್ಲಾ ಸಮುದಾಯದಲ್ಲೂ ಇದ್ದಾರೆ” ಎಂದು ಹೇಳಿದ್ದಾರೆ.

ಕೊರಗ ಅಭಿವೃದ್ದಿ ಸಂಘದ ಮಾಜಿ ಅಧ್ಯಕ್ಷೆಯಾಗಿರುವ ಸುಶೀಲಾ ನಾಡಾರವರು ಮಾತನಾಡಿ “ಕೊರಗ ವೇಷವನ್ನು ಹಾಕುವುದು ಮತ್ತು ಈ ವೇಷ ಹಾಕಿ ಸಮುದಾಯವನ್ನು ಕೀಳು ಮಟ್ಟದಲ್ಲಿ ಬಿಂಬಿಸುವುದು ಕಾನೂನಾತ್ಮಕವಾಗಿ ಅಪರಾಧವಾಗಿದೆ. ಆದರೆ, ಈ ರೀತಿಯ ಕಾನೂನು ಇದ್ದು ಕೂಡಾ ಕೊರಗ ವೇಷ ಹಾಕುವುದು ಮುಂದುವರೆಯುತ್ತಲೇ ಇದೆ. ನಿಜವಾಗಿಯೂ ಕೊರಗರ ಬಗ್ಗೆ ಕಾಳಜಿ ಇರುವವರಾದರೆ, ಮೊನ್ನೆ ಕೋಟದಲ್ಲಿ ಕೊರಗರ ಮೇಲೆ ನಡೆದ ದಾಳಿಯ ಬಗ್ಗೆ ಧ್ವನಿ ಎತ್ತುತ್ತಿದ್ದರು. ಆದರೆ ಇಂದು ಕೊರಗಜ್ಜನಿಗೆ ಅವಮಾನ ಆಗಿದೆ ಎಂದು ಗಲಾಟೆ ಮಾಡುತ್ತಿರುವವರು ಯಾರೂ ಅಂದು ಮಾತಾಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...