Homeಕರ್ನಾಟಕಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ಆರೋಪಿಗಳನ್ನು ಬಂಧಿಸದ್ದಿದ್ದಲ್ಲಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಟ್ಲ ಬಂದ್ ಆಚರಿಸಲಾಗುವುದು ಎಂದು ಕರೆ ನೀಡಲಾಗಿತ್ತು.

- Advertisement -
- Advertisement -

ದಕ್ಷಿಣ ಕನ್ನಡದ ಮದುಮಗನನ್ನು ಟ್ರೋಲ್‌‌‌‌ ಮಾಡಬೇಕು ಎಂದು ಆತನ ಸ್ನೇಹಿತರು ಮಾಡಿರುವ ತಮಾಷೆಯ ಘಟನೆಯ ವಿಡಿಯೋ ವೈರಲ್ ಆದ ನಂತರ ಕೊರಗಜ್ಜನ ವೇಷ ಹಾಕಿ ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಅದು ಕೊರಗಜ್ಜನ ವೇಷವಲ್ಲ ಎಂದು ಪ್ರತಿಕ್ರಿಯಿಸಿದ್ದ ಮದುಮಗ ಕ್ಷಮೆ ಕೂಡ ಕೇಳಿದ್ದರು. ಆದರೂ ಪ್ರಕರಣ ಕೊನೆಗೊಂಡಿಲ್ಲ. ಜನವರಿ 10ರ ಸೋಮವಾರ ರಾತ್ರಿ ಮದುಮಗನ ಇಬ್ಬರು ಗೆಳೆಯರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲದ ಕಡಂಬು ನಿವಾಸಿ ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಚೇತನರವರ ದೂರಿನ ಮೇರೆಗೆ ವಿಟ್ಲ ಪೊಲೀಸರು ಮದುಮಗ ಉಮರುಲ್ ಭಾಷಿತ್ ಮತ್ತು ಇತರ ಹಲವರ ವಿರುದ್ಧ ಕಲಂ 153ಎ, 295 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರು ತನಿಖೆಗಾಗಿ ಠಾಣಾ ಎಸ್.ಐ.ಗಳಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಸಂಜೀವ ಪುರುಷರವರ ನೇತೃತ್ವದಲ್ಲಿ ಎರಡು ವಿಶೇಷ ತಂಡವನ್ನು ರಚಿಸಿ ತನಿಖೆ ಆರಂಬಿಸಿದ್ದರು. ಮಂಗಲ್ಪಡಿ ನಿವಾಸಿ, ಪುತ್ತೂರು ಫಾತಿಮಾ ಬಟ್ಟೆ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದಿನ್ ಮುನಿಶ್ (19) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಬಂಧಿಸದ್ದಿದ್ದಲ್ಲಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಟ್ಲ ಬಂದ್ ಆಚರಿಸಲಾಗುವುದು ಎಂದು ಕರೆ ನೀಡಲಾಗಿತ್ತು. ಅದಕ್ಕೂ ಮುನ್ನವೇ ಸೋಮವಾರ ರಾತ್ರಿಯೇ ಮದುಮಗನ ಇಬ್ಬರು ಸ್ನೇಹಿತರನ್ನು ಬಂಧಿಸಲಾಗಿದೆ. ಆದರೂ ಇಂದು ಕೆಲವು ಅಂಗಡಿಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ನೀಡಲಾಗಿದೆ ಎಂದು ವರದಿಯಾಗಿದೆ.

ಘಟನೆಯ ವಿವರ

ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೊಲ್ನಾಡು ಗ್ರಾಮದ ಸಾಲೆತ್ತೂರು ಬಳಿಯ ಯುವತಿಯ ಮದುವೆ ನೆರೆಯ ಕಾಸರಗೋಡು ಜಿಲ್ಲೆಯ ಉಪ್ಪಳದ ಯುವಕನೊಂದಿಗೆ ಬುಧವಾರ ನಡೆದಿತ್ತು. ಮದುವೆಯ ಮುಂದುವರೆದ ಕಾರ್ಯಕ್ರಮವಾಗಿ ಮದುವೆಯಂದೆ ರಾತ್ರಿ ಮದುಮಗನ ಸ್ನೇಹಿತರಿಗೆ ವಧುವಿನ ಕಡೆಯವರು ಔತಣಕೂಟ(ತಾಳ)ವನ್ನು ಏರ್ಪಡಿಸಿದ್ದರು. ಅದರಂತೆ ಅಂದೇ ರಾತ್ರಿ ಉಪ್ಪಳದಿಂದ ಮದುಮಗ ಮತ್ತು ಅವರ ಸ್ನೇಹಿತರು ಆಗಮಿಸಿದ್ದರು. ಈ ವೇಳೆ ಮದುಮಗನ ಸ್ನೇಹಿತರು ಮದುಮಗನನ್ನು ತಮಾಷೆ ಮಾಡುವ ಉದ್ದೇಶದಿಂದ, ಆತನಿಗೆ ಹರಿದ ಟಿಶರ್ಟ್ ಧರಿಸುವಂತೆ ಮಾಡಿ, ತಲೆಗೆ ಮಟ್ಟಳೆ ಹಾಕಿ, ಸೊಂಟದ ಸುತ್ತ ಒಂದಷ್ಟು ಸೊಪ್ಪುಗಳನ್ನು ಸುತ್ತಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಬಣ್ಣ ಎರಚಿ ಹಾಡು ಹಾಡಿ ಖುಷಿ ಪಟ್ಟಿದ್ದರು.

ಇದರ ನಂತರ, ವಧುವಿನ ಕಡೆಯವರ ಔತಣಕೂಟದಲ್ಲಿ ಭಾಗವಹಿಸಿ, ಆಹಾರವನ್ನು ಸ್ವೀಕರಿಸಿ ಅವರು ತೆರಳಿದ್ದರು. ಆದರೆ, ಮದುಮಗನನ್ನು ತಮಾಷೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಈ ವಿಡಿಯೊವನ್ನು ತುಳುನಾಡಿನಲ್ಲಿ ಆರಾಧಿಸುವ ‘ಕೊರಗಜ್ಜ’ ಎಂಬ ದೈವಕ್ಕೆ ಅವಮಾನ ಮಾಡಲಾಗಿದೆ ಎಂದು ಬಲಪಂಥೀಯರು ವೈರಲ್ ಮಾಡಿದ್ದರು.


ಇದನ್ನೂ ಓದಿ: ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?


ಕೊರಗಜ್ಜನಿಗೆ ಅವಮಾನ ಮಾಡಿಲ್ಲ

ಕೊರಗ ಸಮುದಾಯದ ಮುಖಂಡ ಮತ್ತಾಡಿ ಅವರು ಮಾತನಾಡಿ, “ಘಟನೆಯ ಬಗೆಗಿನ ವಿವಾದಾತ್ಮಕ ವಿಡಿಯೊದಲ್ಲಿ ಮದುಮಗನ ವೇಷವನ್ನು ನೋಡಿದೆ. ಅದು ಕೊರಗಜ್ಜನ ವೇಷ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲಿ ಮದುಮಗನ ತಲೆಗೆ ಮುಟ್ಟಾಳೆ (ಅಡಿಕೆ ಗರಿಯಿಂದ ಮಾಡಿರುವ ತಲೆಗೆ ಧರಿಸುವ ವಸ್ತು) ಹಾಕಿದ್ದರು, ಟೀಶರ್ಟ್ ಧರಿಸಿದ್ದರು ಮತ್ತು ಮುಖಕ್ಕೆ ಕಪ್ಪು ಬಣ್ಣ ಬಳಿದಿದ್ದರು. ಕಪ್ಪು ಬಣ್ಣ ಹಾಕಿದ ಕೂಡಲೇ ಅದು ಕೊರಗರನ್ನು ಅವಮಾನಿಸಿದ ಹಾಗೆ ಹಾಗಲ್ಲ. ಕಪ್ಪು ಬಣ್ಣದವರು ಕೊರಗರು ಮಾತ್ರ ಅಲ್ಲ, ಎಲ್ಲಾ ಸಮುದಾಯದಲ್ಲೂ ಇದ್ದಾರೆ” ಎಂದು ಹೇಳಿದ್ದಾರೆ.

ಕೊರಗ ಅಭಿವೃದ್ದಿ ಸಂಘದ ಮಾಜಿ ಅಧ್ಯಕ್ಷೆಯಾಗಿರುವ ಸುಶೀಲಾ ನಾಡಾರವರು ಮಾತನಾಡಿ “ಕೊರಗ ವೇಷವನ್ನು ಹಾಕುವುದು ಮತ್ತು ಈ ವೇಷ ಹಾಕಿ ಸಮುದಾಯವನ್ನು ಕೀಳು ಮಟ್ಟದಲ್ಲಿ ಬಿಂಬಿಸುವುದು ಕಾನೂನಾತ್ಮಕವಾಗಿ ಅಪರಾಧವಾಗಿದೆ. ಆದರೆ, ಈ ರೀತಿಯ ಕಾನೂನು ಇದ್ದು ಕೂಡಾ ಕೊರಗ ವೇಷ ಹಾಕುವುದು ಮುಂದುವರೆಯುತ್ತಲೇ ಇದೆ. ನಿಜವಾಗಿಯೂ ಕೊರಗರ ಬಗ್ಗೆ ಕಾಳಜಿ ಇರುವವರಾದರೆ, ಮೊನ್ನೆ ಕೋಟದಲ್ಲಿ ಕೊರಗರ ಮೇಲೆ ನಡೆದ ದಾಳಿಯ ಬಗ್ಗೆ ಧ್ವನಿ ಎತ್ತುತ್ತಿದ್ದರು. ಆದರೆ ಇಂದು ಕೊರಗಜ್ಜನಿಗೆ ಅವಮಾನ ಆಗಿದೆ ಎಂದು ಗಲಾಟೆ ಮಾಡುತ್ತಿರುವವರು ಯಾರೂ ಅಂದು ಮಾತಾಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...