Homeಕರ್ನಾಟಕಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ಆರೋಪಿಗಳನ್ನು ಬಂಧಿಸದ್ದಿದ್ದಲ್ಲಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಟ್ಲ ಬಂದ್ ಆಚರಿಸಲಾಗುವುದು ಎಂದು ಕರೆ ನೀಡಲಾಗಿತ್ತು.

- Advertisement -
- Advertisement -

ದಕ್ಷಿಣ ಕನ್ನಡದ ಮದುಮಗನನ್ನು ಟ್ರೋಲ್‌‌‌‌ ಮಾಡಬೇಕು ಎಂದು ಆತನ ಸ್ನೇಹಿತರು ಮಾಡಿರುವ ತಮಾಷೆಯ ಘಟನೆಯ ವಿಡಿಯೋ ವೈರಲ್ ಆದ ನಂತರ ಕೊರಗಜ್ಜನ ವೇಷ ಹಾಕಿ ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಅದು ಕೊರಗಜ್ಜನ ವೇಷವಲ್ಲ ಎಂದು ಪ್ರತಿಕ್ರಿಯಿಸಿದ್ದ ಮದುಮಗ ಕ್ಷಮೆ ಕೂಡ ಕೇಳಿದ್ದರು. ಆದರೂ ಪ್ರಕರಣ ಕೊನೆಗೊಂಡಿಲ್ಲ. ಜನವರಿ 10ರ ಸೋಮವಾರ ರಾತ್ರಿ ಮದುಮಗನ ಇಬ್ಬರು ಗೆಳೆಯರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲದ ಕಡಂಬು ನಿವಾಸಿ ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಚೇತನರವರ ದೂರಿನ ಮೇರೆಗೆ ವಿಟ್ಲ ಪೊಲೀಸರು ಮದುಮಗ ಉಮರುಲ್ ಭಾಷಿತ್ ಮತ್ತು ಇತರ ಹಲವರ ವಿರುದ್ಧ ಕಲಂ 153ಎ, 295 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರು ತನಿಖೆಗಾಗಿ ಠಾಣಾ ಎಸ್.ಐ.ಗಳಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಸಂಜೀವ ಪುರುಷರವರ ನೇತೃತ್ವದಲ್ಲಿ ಎರಡು ವಿಶೇಷ ತಂಡವನ್ನು ರಚಿಸಿ ತನಿಖೆ ಆರಂಬಿಸಿದ್ದರು. ಮಂಗಲ್ಪಡಿ ನಿವಾಸಿ, ಪುತ್ತೂರು ಫಾತಿಮಾ ಬಟ್ಟೆ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದಿನ್ ಮುನಿಶ್ (19) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಬಂಧಿಸದ್ದಿದ್ದಲ್ಲಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಟ್ಲ ಬಂದ್ ಆಚರಿಸಲಾಗುವುದು ಎಂದು ಕರೆ ನೀಡಲಾಗಿತ್ತು. ಅದಕ್ಕೂ ಮುನ್ನವೇ ಸೋಮವಾರ ರಾತ್ರಿಯೇ ಮದುಮಗನ ಇಬ್ಬರು ಸ್ನೇಹಿತರನ್ನು ಬಂಧಿಸಲಾಗಿದೆ. ಆದರೂ ಇಂದು ಕೆಲವು ಅಂಗಡಿಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ನೀಡಲಾಗಿದೆ ಎಂದು ವರದಿಯಾಗಿದೆ.

ಘಟನೆಯ ವಿವರ

ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೊಲ್ನಾಡು ಗ್ರಾಮದ ಸಾಲೆತ್ತೂರು ಬಳಿಯ ಯುವತಿಯ ಮದುವೆ ನೆರೆಯ ಕಾಸರಗೋಡು ಜಿಲ್ಲೆಯ ಉಪ್ಪಳದ ಯುವಕನೊಂದಿಗೆ ಬುಧವಾರ ನಡೆದಿತ್ತು. ಮದುವೆಯ ಮುಂದುವರೆದ ಕಾರ್ಯಕ್ರಮವಾಗಿ ಮದುವೆಯಂದೆ ರಾತ್ರಿ ಮದುಮಗನ ಸ್ನೇಹಿತರಿಗೆ ವಧುವಿನ ಕಡೆಯವರು ಔತಣಕೂಟ(ತಾಳ)ವನ್ನು ಏರ್ಪಡಿಸಿದ್ದರು. ಅದರಂತೆ ಅಂದೇ ರಾತ್ರಿ ಉಪ್ಪಳದಿಂದ ಮದುಮಗ ಮತ್ತು ಅವರ ಸ್ನೇಹಿತರು ಆಗಮಿಸಿದ್ದರು. ಈ ವೇಳೆ ಮದುಮಗನ ಸ್ನೇಹಿತರು ಮದುಮಗನನ್ನು ತಮಾಷೆ ಮಾಡುವ ಉದ್ದೇಶದಿಂದ, ಆತನಿಗೆ ಹರಿದ ಟಿಶರ್ಟ್ ಧರಿಸುವಂತೆ ಮಾಡಿ, ತಲೆಗೆ ಮಟ್ಟಳೆ ಹಾಕಿ, ಸೊಂಟದ ಸುತ್ತ ಒಂದಷ್ಟು ಸೊಪ್ಪುಗಳನ್ನು ಸುತ್ತಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಬಣ್ಣ ಎರಚಿ ಹಾಡು ಹಾಡಿ ಖುಷಿ ಪಟ್ಟಿದ್ದರು.

ಇದರ ನಂತರ, ವಧುವಿನ ಕಡೆಯವರ ಔತಣಕೂಟದಲ್ಲಿ ಭಾಗವಹಿಸಿ, ಆಹಾರವನ್ನು ಸ್ವೀಕರಿಸಿ ಅವರು ತೆರಳಿದ್ದರು. ಆದರೆ, ಮದುಮಗನನ್ನು ತಮಾಷೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಈ ವಿಡಿಯೊವನ್ನು ತುಳುನಾಡಿನಲ್ಲಿ ಆರಾಧಿಸುವ ‘ಕೊರಗಜ್ಜ’ ಎಂಬ ದೈವಕ್ಕೆ ಅವಮಾನ ಮಾಡಲಾಗಿದೆ ಎಂದು ಬಲಪಂಥೀಯರು ವೈರಲ್ ಮಾಡಿದ್ದರು.


ಇದನ್ನೂ ಓದಿ: ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?


ಕೊರಗಜ್ಜನಿಗೆ ಅವಮಾನ ಮಾಡಿಲ್ಲ

ಕೊರಗ ಸಮುದಾಯದ ಮುಖಂಡ ಮತ್ತಾಡಿ ಅವರು ಮಾತನಾಡಿ, “ಘಟನೆಯ ಬಗೆಗಿನ ವಿವಾದಾತ್ಮಕ ವಿಡಿಯೊದಲ್ಲಿ ಮದುಮಗನ ವೇಷವನ್ನು ನೋಡಿದೆ. ಅದು ಕೊರಗಜ್ಜನ ವೇಷ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲಿ ಮದುಮಗನ ತಲೆಗೆ ಮುಟ್ಟಾಳೆ (ಅಡಿಕೆ ಗರಿಯಿಂದ ಮಾಡಿರುವ ತಲೆಗೆ ಧರಿಸುವ ವಸ್ತು) ಹಾಕಿದ್ದರು, ಟೀಶರ್ಟ್ ಧರಿಸಿದ್ದರು ಮತ್ತು ಮುಖಕ್ಕೆ ಕಪ್ಪು ಬಣ್ಣ ಬಳಿದಿದ್ದರು. ಕಪ್ಪು ಬಣ್ಣ ಹಾಕಿದ ಕೂಡಲೇ ಅದು ಕೊರಗರನ್ನು ಅವಮಾನಿಸಿದ ಹಾಗೆ ಹಾಗಲ್ಲ. ಕಪ್ಪು ಬಣ್ಣದವರು ಕೊರಗರು ಮಾತ್ರ ಅಲ್ಲ, ಎಲ್ಲಾ ಸಮುದಾಯದಲ್ಲೂ ಇದ್ದಾರೆ” ಎಂದು ಹೇಳಿದ್ದಾರೆ.

ಕೊರಗ ಅಭಿವೃದ್ದಿ ಸಂಘದ ಮಾಜಿ ಅಧ್ಯಕ್ಷೆಯಾಗಿರುವ ಸುಶೀಲಾ ನಾಡಾರವರು ಮಾತನಾಡಿ “ಕೊರಗ ವೇಷವನ್ನು ಹಾಕುವುದು ಮತ್ತು ಈ ವೇಷ ಹಾಕಿ ಸಮುದಾಯವನ್ನು ಕೀಳು ಮಟ್ಟದಲ್ಲಿ ಬಿಂಬಿಸುವುದು ಕಾನೂನಾತ್ಮಕವಾಗಿ ಅಪರಾಧವಾಗಿದೆ. ಆದರೆ, ಈ ರೀತಿಯ ಕಾನೂನು ಇದ್ದು ಕೂಡಾ ಕೊರಗ ವೇಷ ಹಾಕುವುದು ಮುಂದುವರೆಯುತ್ತಲೇ ಇದೆ. ನಿಜವಾಗಿಯೂ ಕೊರಗರ ಬಗ್ಗೆ ಕಾಳಜಿ ಇರುವವರಾದರೆ, ಮೊನ್ನೆ ಕೋಟದಲ್ಲಿ ಕೊರಗರ ಮೇಲೆ ನಡೆದ ದಾಳಿಯ ಬಗ್ಗೆ ಧ್ವನಿ ಎತ್ತುತ್ತಿದ್ದರು. ಆದರೆ ಇಂದು ಕೊರಗಜ್ಜನಿಗೆ ಅವಮಾನ ಆಗಿದೆ ಎಂದು ಗಲಾಟೆ ಮಾಡುತ್ತಿರುವವರು ಯಾರೂ ಅಂದು ಮಾತಾಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...