Homeಚಳವಳಿಮಂಗಳೂರು: ಪಿಎಫ್‌ಐ ಕಾರ್ಯಕರ್ತರ ಮೇಲಿನ ಲಾಠೀಚಾರ್ಜ್‌ಗೆ ತೀವ್ರ ಖಂಡನೆ- SP ಕಛೇರಿಗೆ ಮುತ್ತಿಗೆ

ಮಂಗಳೂರು: ಪಿಎಫ್‌ಐ ಕಾರ್ಯಕರ್ತರ ಮೇಲಿನ ಲಾಠೀಚಾರ್ಜ್‌ಗೆ ತೀವ್ರ ಖಂಡನೆ- SP ಕಛೇರಿಗೆ ಮುತ್ತಿಗೆ

ಇನ್ನೊಂದೆಡೆ ಇಂದು ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಉಪ್ಪಿನಂಗಡಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪಿಎಫ್‌ಐ ಕಾರ್ಯಕರ್ತರ ಮೇಲೆ ಕ್ರೂರ ಲಾಠೀಚಾರ್ಜ್‌ ಅನ್ನು ಹಲವಾರು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಅದೇ ರೀತಿ ದೌರ್ಜನ್ಯವೆಸಗಿದ ಪೊಲೀಸರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಇಂದು ಮಂಗಳೂರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.

ಅಕ್ರಮವಾಗಿ ಬಂಧಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ 14 ಡಿಸೆಂಬರ್ 2021ರ ರಾತ್ರಿ ಮಂಗಳೂರಿನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೊರಗೆ ಹಲವಾರು ಜನರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಅಮಾನವೀಯ ಲಾಠೀಚಾರ್ಜ್ ಮಾಡಿ, ಹಿಂಸಾಚಾರ ನಡೆಸಿರುವುದು ಕಾನೂನಿನ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಸಂಘಟನೆಗಳು ಕಿಡಿಕಾರಿವೆ.

ಮಂಗಳೂರು ಅಭಿವೃದ್ಧಿಗಾಗಿ ನಾಗರಿಕರ ವೇದಿಕೆ, ನಾವು ಮಹಿಳೆಯರು ಮಂಗಳೂರು, ಬಹುತ್ವ ಕರ್ನಾಟಕ, Hate Speech ಬೇಡ, ಡಿಫೆಂಡ್ ಡೆಮಾಕ್ರಸಿ ಕರ್ನಾಟಕ, ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘ, ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (AISA) ಫಾರ್ವರ್ಡ್ ಟ್ರಸ್ಟ್, Health for ALL ಮತ್ತು ಲೇಖಕಿ ಪುಷ್ಪಾ ಅಕಾ ರಿತಾಶ್ ರವರು ಈ ಕುರಿತು ನೀಡಲಾದ ಜಂಟಿ ಪತ್ರಿಕೆ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪೊಲೀಸರು ನಡೆಸಿದ ಲಾರಿ ಚಾರ್ಜ್ ಕ್ರೂರವಾಗಿತ್ತು ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂಬ ಸಂಗತಿಯು ವೀಡಿಯೊಗಳಿಂದ ತಿಳಿದು ಬರುತ್ತದೆ. ಹಲವಾರು ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಮತ್ತು ಇಬ್ಬರಿಗೆ ಐಸಿಯು ನಲ್ಲಿ ದಾಖಲಾಗುವ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ವರದಿಯಾಗಿದೆ. ಆಂಬುಲೆನ್ಸ್ ನಲ್ಲಿದ್ದ ಜನರನ್ನು ಸಹ ಬಿಡದೆ ಅಟ್ಟಾಡಿಸಿಕೊಂಡು ಹೊಡೆಯಲು ಪೊಲೀಸರು ಪ್ರಯತ್ನ ಪಟ್ಟಿದ್ದಾರೆ ಎಂಬ ಸಂಗತಿಯು ವಿಡಿಯೋಗಳ ಮೂಲಕ ತಿಳಿದು ಬರುತ್ತದೆ. ಇದು ಅಧಿಕಾರದ ದುರಪಯೋಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಪ್ರತಿಭಟನಾಕಾರರನ್ನು ಚದುರಿಸಲು ಯಾವುದೇ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಯೋಜನೆಯನ್ನು ಸಿದ್ಧಪಡಿಸಿಕೊಳ್ಳದೆ ಪೊಲೀಸರು ಹಿಂಸಾಚಾರದ ಮಾರ್ಗವನ್ನು ಅನುಸರಿಸಿದ್ದಾರೆ ಎಂಬುವುದು ಗಮನಿಸಬೇಕಾದ ಸಂಗತಿ. ಅನಿತಾ ಠಾಕೂರ್ ವಿರುದ್ಧ ಸ್ಟೇಟ್ ಆಫ್ ಜೆ & ಕೆ ((2016) 15 ಎನ್‌ಸಿಪಿ 525) ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ಜನರ ಗುಂಪನ್ನು ಚದುರಿಸಲು ಪೊಲೀಸರು ಅತಿಯಾದ ಬಲಪ್ರಯೋಗ ಮಾಡುವುದು ವ್ಯಕ್ತಿಗಳ ಘನತೆಯ ಮೇಲಿನ ಆಕ್ರಮಣವೆಂದು ಹೇಳಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಲಾಠಿ ಚಾರ್ಜ್ ನಂತಹ ಅತಿಯಾದ ಬಲಪ್ರಯೋಗಕ್ಕೆ ಪೊಲೀಸರನ್ನು ತಕ್ಷಣವೇ ಹೊಣೆಗಾರರನ್ನಾಗಿ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ಪ್ರತಿಭಟನಾಕಾರರ ವಿರುದ್ಧ ಹಿಂಸಾಚಾರದ ಬಳಕೆಯ ಬಗ್ಗೆ ನ್ಯಾಯಾಂಗ ತನಿಖೆಗೆ ನಾವು ಒತ್ತಾಯಿಸುತ್ತೇವೆ. ಎಫ್‌ಐಆರ್ ದಾಖಲಿಸಬೇಕು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಪರಿಹಾರ ಯೋಜನೆಯ ಮೂಲಕ ಗಾಯಗೊಂಡ ಪ್ರತಿಭಟನಾಕಾರರ ಚಿಕಿತ್ಸೆಗೆ ಆರ್ಥಿಕ ನೆರವನ್ನು ನೀಡಬೇಕೆಂದು ಮತ್ತು ಆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಕೋಮುವಾದ ಪ್ರಚೋದಿತ ಗಲಭೆಗಳನ್ನು ಗಂಭೀರವಾಗಿ ಗಮನಿಸಬೇಕಾಗಿದೆ ಮತ್ತು ಆ ಘಟನೆಗಳಲ್ಲಿ ಪೊಲೀಸರ ಸಹಭಾಗಿತ್ವದ ಪಾತ್ರವನ್ನು ನಿರ್ಲಕ್ಷಿಸಬಾರದು. ಈ ಜಿಲ್ಲೆಯಲ್ಲಿ ಪೊಲೀಸರು ಪ್ರದರ್ಶಿಸುತ್ತಿರುವ ಅತಿರೇಕಗಳನ್ನು ತಡೆಯುವುದಕ್ಕಾಗಿ ಸಾಂವಿಧಾನಿಕ ಮತ್ತು ಕರ್ನಾಟಕದ ಬಹುತ್ವದ ಮೌಲ್ಯಗಳನ್ನು ಪುನಶ್ಚತನಗೊಳಿಸಲು ರಾಜ್ಯ ಸರ್ಕಾರವು ದಕ್ಷಿಣ ಕನ್ನಡ ಪೊಲೀಸರಿಗೆ ತರಬೇತಿಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಲಾಗಿದೆ.

ಇನ್ನೊಂದೆಡೆ ಇಂದು ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. You change title as Red langoti Gauri, twisting news, Police done correct at Uppinangady against goondas hence peace is not disturbed in Mangalore. There they used only lathi here only fire if they have gone out of path

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...